Homeಕರ್ನಾಟಕದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

- Advertisement -
- Advertisement -

ಮೇ 16ರ ಸೋಮವಾರದಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳು ಪ್ರಾರಂಭಗೊಂಡಿದೆ. ಶಿಕ್ಷಕರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಆದರೆ, ಈ ಮಧ್ಯೆ ದಕ್ಷಿಣ ಕನ್ನಡದ ಕೆಲವೆಡೆ ಶಾಲೆಗಳಲ್ಲಿ ‘ಗಣಹೋಮ’ ನಡೆಸುವ ಮೂಲಕ ಶಾಲೆ ಪ್ರಾರಂಭ ಮಾಡಿದ್ದು, ಕಾರ್ಯಕ್ರಮದ ಫೋಟೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಫೆಬ್ರವರಿ ಮತ್ತು ಮಾರ್ಚ್‌ ತಿಂಗಳಲ್ಲಿ ದಕ್ಷಿಣ ಕನ್ನಡದಲ್ಲಿ ಸೃಷ್ಟಿಯಾದ ಹಿಜಾಬ್‌ ಸಂಬಂಧಿ ವಿವಾದ ಇಡೀ ರಾಜ್ಯವನ್ನು ಆವರಿಸಿಕೊಂಡು ಜಗತ್ತಿನ ಗಮನವನ್ನೇ ಸೆಳೆದಿತ್ತು. ಧಾರ್ಮಿಕ ಸಂಕೇತವಾದ ಹಿಜಾಬ್‌ ತೊಡುವುದರ ವಿರುದ್ಧ ಬಿಜೆಪಿ ಪರ ಸಂಘಟನೆಗಳು ವಿರೋಧಿಸಿದ್ದವು. ಹೈಕೋರ್ಟ್‌ ಮೆಟ್ಟಿಲೇರಿದ್ದ ಈ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್‌ 15ರಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ನೀಡಿತ್ತು. ಈ ವೇಳೆ, ‘ಧಾರ್ಮಿಕ ಸಂಕೇತ ಸೂಚಿಸುವ ಉಡುಪು ಧರಿಸುವುದನ್ನು ಕೈಬಿಡುವಂತೆ’ ಆದೇಶಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಮೇ 16ರ ಸೋಮವಾರ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಡಿಬಾಗಿಲು, ಸುಳ್ಯ ತಾಲೂಕಿನ ಹರಿಹರಪಳ್ಳತ್ತಡ್ಕ ಮತ್ತು ಪೂಂಜಾಲಕಟ್ಟೆಯಲ್ಲಿ ‘ಗಣಹೋಮ’ ಪೂಜಾವಿಧಿಯೊಂದಿಗೆ ಶಾಲಾ ಪ್ರಾರಂಭೋತ್ಸವ ನಡೆದಿದ್ದು, ಹಿಂದೂ ಧರ್ಮದ ಸಂಪ್ರದಾಯವಾದ ಹೋಮ, ಪೂಜೆಗಳನ್ನು ನಡೆಸಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನೂ ಓದಿ: ಸಂವಿಧಾನಕ್ಕೆ ಅಗೌರವ ತೋರುವ ಧಾರ್ಮಿಕ ಸ್ವಾತಂತ್ರ ಹಕ್ಕು ಸಂರಕ್ಷಣಾ ವಿಧೇಯಕ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ ಎಂ.ಪಿ, “ಸಂಬಂಧಪಟ್ಟವರಲ್ಲಿ ಉತ್ತರ ಕೇಳಿ ನೋಟಿಸ್ ನೀಡಲಾಗುವುದು. ಅವರ ಉತ್ತರದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾಗಿ ಈದಿನ.ಕಾಮ್ ವರದಿ ಮಾಡಿದೆ.

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ ಅವರು, “ಇಲಾಖೆ ನಿರ್ದೇಶನದಂತೆ ಶಾಲಾ ಪ್ರಾರಂಭೋತ್ಸವ ನಡೆಯಬೇಕಿತ್ತು. ಉಲ್ಲಂಘನೆ ಮಾಡಿದ್ದರೆ ಅದು ತಪ್ಪು. ಈ ಬಗ್ಗೆ ವಿಚಾರಿಸಲಾಗುವುದು” ಎಂದು ತಿಳಿಸಿದ್ದಾರೆ.

ಹಿಜಾಬ್‌ ಪ್ರಕರಣದಲ್ಲಿ ಮುನ್ನೆಲೆಯಲ್ಲಿದ್ದ ಬಿಜೆಪಿ ಶಾಸಕ, ರಘುಪತಿ ಭಟ್ ಅವರನ್ನು ಈ ದಿನ. ಕಾಮ್ ಸಂಪರ್ಕಿಸಿದಾಗ, “ನಾನು ಸದ್ಯ ದೆಹಲಿಯಲ್ಲಿದ್ದು, ನಾಳೆ ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದ್ದಾರೆ.

ಫೋಟೋಗಳು ವೈರಲ್‌ ಆದ ಹಿನ್ನೆಲೆಯಲ್ಲಿ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, “ಹಿಜಾಬನ್ನು ಹಿಡಿದು ಈ ನೆಲದ ಕಾನೂನು ಅದು ಇದು ಎಂದು ಹೇಳಿರುವುದು ಕೇವಲ ಮುಸ್ಲಿಂ ದ್ವೇಷದ ರಾಜಕಾರಣದ ಭಾಗವಷ್ಟೇ. ಈ ಹಿಂದಿನಿಂದಲೂ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಒಂದು ಧರ್ಮವನ್ನು ಪ್ರತಿನಿಧಿಸುವ ಆಚರಣೆ ಮಾಡುವುದಕ್ಕೆ ಕಾನೂನಿನ ಬೆಂಬಲವಿಲ್ಲ. ಆದರೂ ಪೊಲೀಸ್ ಠಾಣೆ ಸೇರಿದಂತೆ ಹಲವೆಡೆ ಆಯುಧ ಪೂಜೆ, ಗಣೇಶ ಚೌತಿಯನ್ನು ಆಚರಿಸಲಾಗುತ್ತದೆ. ಆದರೆ ಅದನ್ನು ಯಾರೂ ಪ್ರಶ್ನಿಸಿಲ್ಲ. ಯಾಕೆಂದರೆ ದೊಡ್ಡ ಸಮಸ್ಯೆ ಎಂದು ಅನಿಸಿಲ್ಲ. ಆದರೆ ಹಿಜಾಬ್ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡಲಾಯಿತು. ಈ ಉದ್ದೇಶಿತ ದ್ವಂದ್ವ ನಿಲುವನ್ನು ಜನರು ಅರ್ಥ ಮಾಡಿಕೊಳ್ಳಬೇಕು” ಎಂದು ಈದಿನ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ‘ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ’: ಯುಎಸ್ ಸಂಸ್ಥೆ ಟೀಕೆ

“ಸರ್ಕಾರದ ಯಾವುದೇ ಸಂಸ್ಥೆಯಲ್ಲೂ ಒಂದು ಧರ್ಮವನ್ನು ಮಾತ್ರ ಪ್ರತಿನಿಧಿಸುವಂತಿಲ್ಲ. ಯಾಕೆಂದರೆ ಸರ್ಕಾರ ಅದನ್ನು ತೆರಿಗೆ ಹಣದಿಂದ ನಡೆಸುತ್ತದೆ. ತೆರಿಗೆಯನ್ನು ಈ ದೇಶದ ಪ್ರತಿಯೊಬ್ಬ ನಾಗರಿಕ ನೀಡಿರುವಂಥದ್ದು. ನಿರ್ದಿಷ್ಟವಾದ ಒಂದು ಧರ್ಮದ ಆಚರಣೆ ತಪ್ಪು. ಈವರೆಗೆ ಹಲವಾರು ಆಚರಣೆಗಳು ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಲೇ ಬಂದಿದೆ. ಅದು ಇತರ ಯಾವುದೇ ಧರ್ಮದವರು ವಿರೋಧಿಸಿ ಪ್ರತಿಭಟಿಸಿಲ್ಲ. ಅವೆಲ್ಲದಕ್ಕೂ ಹೊಂದಿಕೊಂಡು ಬಂದಿದ್ದಾರೆ”

“ಆದರೆ, ಉಡುಪಿಯ ಬೆರಳೆಣಿಕೆಯ ಮುಸ್ಲಿಂ ವಿದ್ಯಾರ್ಥಿನಿಯರು ಕೇಳಿದ್ದ ಹಿಜಾಬ್ ಬೇಡಿಕೆಯನ್ನು ಬಹಳ ದೊಡ್ಡ ಸಮಸ್ಯೆ ಎಂಬಂತೆ ಬಿಂಬಿಸಿ ವಿವಾದವಾಗಿಸಲಾಯಿತು. ಹಿಜಾಬ್‌ ಧರಿಸುವುದರಿಂದ ಯಾವುದೇ ಧರ್ಮದವನಿಗೆ ಎಳ್ಳಷ್ಟೂ ಸಮಸ್ಯೆಯಾಗಲ್ಲ. ಆದರೆ ಹಿಜಾಬನ್ನು ಬಳಸಿಕೊಂಡು ಧಾರ್ಮಿಕ ವಿಭಜನೆ ಮಾಡಲಾಯಿತು. ಹೈಕೋರ್ಟ್‌ ತೀರ್ಪಿನ ಬಳಿಕದ ‘ಗಣಹೋಮ’ದ ಬೆಳವಣಿಗೆಯು ದ್ವೇಷ ಹರಡಿದವರಿಗೆ ಪಾಠ” ಎಂದು ಉಡುಪಿ ಜಿಲ್ಲೆ ಸಹಬಾಳ್ವೆ ವೇದಿಕೆಯ ಅಮೃತ್ ಶೆಣೈ ತಿಳಿಸಿದ್ದಾರೆ.

“ನಮ್ಮ ಭಾರತ ಬಹು ಸಂಸ್ಕೃತಿಯ ರಾಷ್ಟ್ರ. ಇದು ನಡೆದಿರುವುದರಲ್ಲಿ ನಮಗೆ ಸಮಸ್ಯೆ ಎನಿಸಿಲ್ಲ. ನಮ್ಮ ಸಂಸ್ಕೃತಿ ಆಚಾರ ವಿಚಾರ ತಿಳಿಯುವುದರಲ್ಲಿ ತಪ್ಪಿಲ್ಲ. ಆದರೆ ಹಿಜಾಬ್ ಅನ್ನು ದೊಡ್ಡ ಸಮಸ್ಯೆ ಎಂದು ಬಿಂಬಿಸಿದವರಿಗೆ ಇದು ಯಾಕೆ ಅರ್ಥವಾಗುವುದಿಲ್ಲ. ಸ್ಕಾರ್ಫ್ ಧಾರ್ಮಿಕ ಸಂಕೇತ ಎನ್ನುವವರು ಈಗೆಲ್ಲಿದ್ದಾರೆ? ಒಂದು ತುಂಡು ಬಟ್ಟೆಗಾಗಿ ರಂಪ ಸೃಷ್ಟಿಸಿದವರು ಈಗ ಯಾಕೆ ಸುಮ್ಮನಿದ್ದಾರೆ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಯಾಕೆ?” ಎಂದು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯನ್ನು ಧಾರ್ಮಿಕತೆಯಿಂದ ಹೊರಗಿಡಲು ಸಾಧ್ಯವೇ?

“ಹಿಜಾಬ್ ಧರಿಸುವುದು ಧಾರ್ಮಿಕ ಸಂಕೇತವಾದರೆ ಈ ಫೋಟೋಗಳು ಏನು ಸೂಚಿಸುತ್ತವೆ? ಸರಕಾರಿ ಶಾಲಾ ಕಾಲೇಜುಗಳಲ್ಲಿ ಸಮಾನತೆ ಬೇಕು. ಯಾವುದೇ ಧಾರ್ಮಿಕ ವಸ್ತ್ರ ಮಾತ್ರ ಧರಿಸಬಾರದು!. ಪೂಜೆ ಪುನಸ್ಕಾರಗಳೆಲ್ಲ ನಡೆಯಬೇಕು! ಇದು ಏನು?” ಎಂಬ ಪ್ರಶ್ನೆಯನ್ನು ಸಾಮಾಜಿಕ ಮಾಧ್ಯಮಗಲ್ಲಿ ಕೇಳಲಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shale galalli Ganahomada badalu Nemothsava, Kola bali, kuda maadbahudalva…?

    India kke yenu grahachaara bantho…? Yee shanigrahachaaradinda naavella yaavaaga paaraaguvudo yeno..?

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...