Homeಕರ್ನಾಟಕದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

- Advertisement -
- Advertisement -

ಮೇ 16ರ ಸೋಮವಾರದಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳು ಪ್ರಾರಂಭಗೊಂಡಿದೆ. ಶಿಕ್ಷಕರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಆದರೆ, ಈ ಮಧ್ಯೆ ದಕ್ಷಿಣ ಕನ್ನಡದ ಕೆಲವೆಡೆ ಶಾಲೆಗಳಲ್ಲಿ ‘ಗಣಹೋಮ’ ನಡೆಸುವ ಮೂಲಕ ಶಾಲೆ ಪ್ರಾರಂಭ ಮಾಡಿದ್ದು, ಕಾರ್ಯಕ್ರಮದ ಫೋಟೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಫೆಬ್ರವರಿ ಮತ್ತು ಮಾರ್ಚ್‌ ತಿಂಗಳಲ್ಲಿ ದಕ್ಷಿಣ ಕನ್ನಡದಲ್ಲಿ ಸೃಷ್ಟಿಯಾದ ಹಿಜಾಬ್‌ ಸಂಬಂಧಿ ವಿವಾದ ಇಡೀ ರಾಜ್ಯವನ್ನು ಆವರಿಸಿಕೊಂಡು ಜಗತ್ತಿನ ಗಮನವನ್ನೇ ಸೆಳೆದಿತ್ತು. ಧಾರ್ಮಿಕ ಸಂಕೇತವಾದ ಹಿಜಾಬ್‌ ತೊಡುವುದರ ವಿರುದ್ಧ ಬಿಜೆಪಿ ಪರ ಸಂಘಟನೆಗಳು ವಿರೋಧಿಸಿದ್ದವು. ಹೈಕೋರ್ಟ್‌ ಮೆಟ್ಟಿಲೇರಿದ್ದ ಈ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್‌ 15ರಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ನೀಡಿತ್ತು. ಈ ವೇಳೆ, ‘ಧಾರ್ಮಿಕ ಸಂಕೇತ ಸೂಚಿಸುವ ಉಡುಪು ಧರಿಸುವುದನ್ನು ಕೈಬಿಡುವಂತೆ’ ಆದೇಶಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಮೇ 16ರ ಸೋಮವಾರ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಡಿಬಾಗಿಲು, ಸುಳ್ಯ ತಾಲೂಕಿನ ಹರಿಹರಪಳ್ಳತ್ತಡ್ಕ ಮತ್ತು ಪೂಂಜಾಲಕಟ್ಟೆಯಲ್ಲಿ ‘ಗಣಹೋಮ’ ಪೂಜಾವಿಧಿಯೊಂದಿಗೆ ಶಾಲಾ ಪ್ರಾರಂಭೋತ್ಸವ ನಡೆದಿದ್ದು, ಹಿಂದೂ ಧರ್ಮದ ಸಂಪ್ರದಾಯವಾದ ಹೋಮ, ಪೂಜೆಗಳನ್ನು ನಡೆಸಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನೂ ಓದಿ: ಸಂವಿಧಾನಕ್ಕೆ ಅಗೌರವ ತೋರುವ ಧಾರ್ಮಿಕ ಸ್ವಾತಂತ್ರ ಹಕ್ಕು ಸಂರಕ್ಷಣಾ ವಿಧೇಯಕ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ ಎಂ.ಪಿ, “ಸಂಬಂಧಪಟ್ಟವರಲ್ಲಿ ಉತ್ತರ ಕೇಳಿ ನೋಟಿಸ್ ನೀಡಲಾಗುವುದು. ಅವರ ಉತ್ತರದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾಗಿ ಈದಿನ.ಕಾಮ್ ವರದಿ ಮಾಡಿದೆ.

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ ಅವರು, “ಇಲಾಖೆ ನಿರ್ದೇಶನದಂತೆ ಶಾಲಾ ಪ್ರಾರಂಭೋತ್ಸವ ನಡೆಯಬೇಕಿತ್ತು. ಉಲ್ಲಂಘನೆ ಮಾಡಿದ್ದರೆ ಅದು ತಪ್ಪು. ಈ ಬಗ್ಗೆ ವಿಚಾರಿಸಲಾಗುವುದು” ಎಂದು ತಿಳಿಸಿದ್ದಾರೆ.

ಹಿಜಾಬ್‌ ಪ್ರಕರಣದಲ್ಲಿ ಮುನ್ನೆಲೆಯಲ್ಲಿದ್ದ ಬಿಜೆಪಿ ಶಾಸಕ, ರಘುಪತಿ ಭಟ್ ಅವರನ್ನು ಈ ದಿನ. ಕಾಮ್ ಸಂಪರ್ಕಿಸಿದಾಗ, “ನಾನು ಸದ್ಯ ದೆಹಲಿಯಲ್ಲಿದ್ದು, ನಾಳೆ ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದ್ದಾರೆ.

ಫೋಟೋಗಳು ವೈರಲ್‌ ಆದ ಹಿನ್ನೆಲೆಯಲ್ಲಿ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, “ಹಿಜಾಬನ್ನು ಹಿಡಿದು ಈ ನೆಲದ ಕಾನೂನು ಅದು ಇದು ಎಂದು ಹೇಳಿರುವುದು ಕೇವಲ ಮುಸ್ಲಿಂ ದ್ವೇಷದ ರಾಜಕಾರಣದ ಭಾಗವಷ್ಟೇ. ಈ ಹಿಂದಿನಿಂದಲೂ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಒಂದು ಧರ್ಮವನ್ನು ಪ್ರತಿನಿಧಿಸುವ ಆಚರಣೆ ಮಾಡುವುದಕ್ಕೆ ಕಾನೂನಿನ ಬೆಂಬಲವಿಲ್ಲ. ಆದರೂ ಪೊಲೀಸ್ ಠಾಣೆ ಸೇರಿದಂತೆ ಹಲವೆಡೆ ಆಯುಧ ಪೂಜೆ, ಗಣೇಶ ಚೌತಿಯನ್ನು ಆಚರಿಸಲಾಗುತ್ತದೆ. ಆದರೆ ಅದನ್ನು ಯಾರೂ ಪ್ರಶ್ನಿಸಿಲ್ಲ. ಯಾಕೆಂದರೆ ದೊಡ್ಡ ಸಮಸ್ಯೆ ಎಂದು ಅನಿಸಿಲ್ಲ. ಆದರೆ ಹಿಜಾಬ್ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡಲಾಯಿತು. ಈ ಉದ್ದೇಶಿತ ದ್ವಂದ್ವ ನಿಲುವನ್ನು ಜನರು ಅರ್ಥ ಮಾಡಿಕೊಳ್ಳಬೇಕು” ಎಂದು ಈದಿನ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ‘ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ’: ಯುಎಸ್ ಸಂಸ್ಥೆ ಟೀಕೆ

“ಸರ್ಕಾರದ ಯಾವುದೇ ಸಂಸ್ಥೆಯಲ್ಲೂ ಒಂದು ಧರ್ಮವನ್ನು ಮಾತ್ರ ಪ್ರತಿನಿಧಿಸುವಂತಿಲ್ಲ. ಯಾಕೆಂದರೆ ಸರ್ಕಾರ ಅದನ್ನು ತೆರಿಗೆ ಹಣದಿಂದ ನಡೆಸುತ್ತದೆ. ತೆರಿಗೆಯನ್ನು ಈ ದೇಶದ ಪ್ರತಿಯೊಬ್ಬ ನಾಗರಿಕ ನೀಡಿರುವಂಥದ್ದು. ನಿರ್ದಿಷ್ಟವಾದ ಒಂದು ಧರ್ಮದ ಆಚರಣೆ ತಪ್ಪು. ಈವರೆಗೆ ಹಲವಾರು ಆಚರಣೆಗಳು ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಲೇ ಬಂದಿದೆ. ಅದು ಇತರ ಯಾವುದೇ ಧರ್ಮದವರು ವಿರೋಧಿಸಿ ಪ್ರತಿಭಟಿಸಿಲ್ಲ. ಅವೆಲ್ಲದಕ್ಕೂ ಹೊಂದಿಕೊಂಡು ಬಂದಿದ್ದಾರೆ”

“ಆದರೆ, ಉಡುಪಿಯ ಬೆರಳೆಣಿಕೆಯ ಮುಸ್ಲಿಂ ವಿದ್ಯಾರ್ಥಿನಿಯರು ಕೇಳಿದ್ದ ಹಿಜಾಬ್ ಬೇಡಿಕೆಯನ್ನು ಬಹಳ ದೊಡ್ಡ ಸಮಸ್ಯೆ ಎಂಬಂತೆ ಬಿಂಬಿಸಿ ವಿವಾದವಾಗಿಸಲಾಯಿತು. ಹಿಜಾಬ್‌ ಧರಿಸುವುದರಿಂದ ಯಾವುದೇ ಧರ್ಮದವನಿಗೆ ಎಳ್ಳಷ್ಟೂ ಸಮಸ್ಯೆಯಾಗಲ್ಲ. ಆದರೆ ಹಿಜಾಬನ್ನು ಬಳಸಿಕೊಂಡು ಧಾರ್ಮಿಕ ವಿಭಜನೆ ಮಾಡಲಾಯಿತು. ಹೈಕೋರ್ಟ್‌ ತೀರ್ಪಿನ ಬಳಿಕದ ‘ಗಣಹೋಮ’ದ ಬೆಳವಣಿಗೆಯು ದ್ವೇಷ ಹರಡಿದವರಿಗೆ ಪಾಠ” ಎಂದು ಉಡುಪಿ ಜಿಲ್ಲೆ ಸಹಬಾಳ್ವೆ ವೇದಿಕೆಯ ಅಮೃತ್ ಶೆಣೈ ತಿಳಿಸಿದ್ದಾರೆ.

“ನಮ್ಮ ಭಾರತ ಬಹು ಸಂಸ್ಕೃತಿಯ ರಾಷ್ಟ್ರ. ಇದು ನಡೆದಿರುವುದರಲ್ಲಿ ನಮಗೆ ಸಮಸ್ಯೆ ಎನಿಸಿಲ್ಲ. ನಮ್ಮ ಸಂಸ್ಕೃತಿ ಆಚಾರ ವಿಚಾರ ತಿಳಿಯುವುದರಲ್ಲಿ ತಪ್ಪಿಲ್ಲ. ಆದರೆ ಹಿಜಾಬ್ ಅನ್ನು ದೊಡ್ಡ ಸಮಸ್ಯೆ ಎಂದು ಬಿಂಬಿಸಿದವರಿಗೆ ಇದು ಯಾಕೆ ಅರ್ಥವಾಗುವುದಿಲ್ಲ. ಸ್ಕಾರ್ಫ್ ಧಾರ್ಮಿಕ ಸಂಕೇತ ಎನ್ನುವವರು ಈಗೆಲ್ಲಿದ್ದಾರೆ? ಒಂದು ತುಂಡು ಬಟ್ಟೆಗಾಗಿ ರಂಪ ಸೃಷ್ಟಿಸಿದವರು ಈಗ ಯಾಕೆ ಸುಮ್ಮನಿದ್ದಾರೆ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಯಾಕೆ?” ಎಂದು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯನ್ನು ಧಾರ್ಮಿಕತೆಯಿಂದ ಹೊರಗಿಡಲು ಸಾಧ್ಯವೇ?

“ಹಿಜಾಬ್ ಧರಿಸುವುದು ಧಾರ್ಮಿಕ ಸಂಕೇತವಾದರೆ ಈ ಫೋಟೋಗಳು ಏನು ಸೂಚಿಸುತ್ತವೆ? ಸರಕಾರಿ ಶಾಲಾ ಕಾಲೇಜುಗಳಲ್ಲಿ ಸಮಾನತೆ ಬೇಕು. ಯಾವುದೇ ಧಾರ್ಮಿಕ ವಸ್ತ್ರ ಮಾತ್ರ ಧರಿಸಬಾರದು!. ಪೂಜೆ ಪುನಸ್ಕಾರಗಳೆಲ್ಲ ನಡೆಯಬೇಕು! ಇದು ಏನು?” ಎಂಬ ಪ್ರಶ್ನೆಯನ್ನು ಸಾಮಾಜಿಕ ಮಾಧ್ಯಮಗಲ್ಲಿ ಕೇಳಲಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shale galalli Ganahomada badalu Nemothsava, Kola bali, kuda maadbahudalva…?

    India kke yenu grahachaara bantho…? Yee shanigrahachaaradinda naavella yaavaaga paaraaguvudo yeno..?

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...