Homeಮುಖಪುಟವಾಂಗ್‌ಚುಕ್ ಬಂಧನ ಕಾನೂನುಬಾಹಿರ; ಹಾಗಾಗಿ ಸರ್ಕಾರ ವಿಚಾರಣೆ ಮುಂದೂಡುವಂತೆ ಮಾಡುತ್ತಿದೆ: ಪತ್ನಿ ಗೀತಾಂಜಲಿ ಆಂಗ್ಮೋ ಆರೋಪ

ವಾಂಗ್‌ಚುಕ್ ಬಂಧನ ಕಾನೂನುಬಾಹಿರ; ಹಾಗಾಗಿ ಸರ್ಕಾರ ವಿಚಾರಣೆ ಮುಂದೂಡುವಂತೆ ಮಾಡುತ್ತಿದೆ: ಪತ್ನಿ ಗೀತಾಂಜಲಿ ಆಂಗ್ಮೋ ಆರೋಪ

- Advertisement -
- Advertisement -

“ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಬಂಧನವು ಕಾನೂನುಬಾಹಿರವಾಗಿ ನಡೆದಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುವುದು ಈಗಾಗಲೇ ಸರ್ಕಾರದ (ಸಾಲಿಸಿಟರ್ ಜನರಲ್) ಗಮನಕ್ಕೆ ಬಂದಿದೆ. ಆದ್ದರಿಂದ ಪ್ರತಿ ಸಲ ಹೊಸ ದಿನಾಂಕ ಕೋರಿ ವಿಚಾರಣೆ ಮುಂದೂಡುವಂತೆ ಮಾಡುತ್ತಿದ್ದಾರೆ” ಎಂದು ಸೋನಮ್ ವಾಂಗ್‌ಚುಕ್ ಪತ್ನಿ ಗೀತಾಂಜಲಿ ಆಂಗ್ಮೋ ಹೇಳಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಮಾತನಾಡಿದ ಅವರು, “ಸೋನಮ್ ವಾಂಗ್‌ಚುಕ್ ಅವರ ಬಂಧನವು ದೇಶದಲ್ಲಿ ಪ್ರಜಾಪ್ರಭುತ್ವ ಯಾವ ಹಂತದಲ್ಲಿದೆ ಎಂಬುವುದನ್ನು ಪ್ರತಿಬಿಂಬಿಸುತ್ತದೆ. ಅಧಿಕಾರಿಗಳ ಕಾರ್ಯವಿಧಾನದ ಲೋಪಗಳಿಂದಾಗಿ ಸೋನಮ್ ಜೈಲಿನಲ್ಲಿದ್ದಾರೆ. ಇಲ್ಲವಾದಲ್ಲಿ ಈಗಾಗಲೇ ಜೈಲಿನಿಂದ ಹೊರಬರಬೇಕಾಗಿತ್ತು” ಎಂದಿದ್ದಾರೆ.

ದಂಪತಿ ಜೊತೆಯಾಗಿ ಸ್ಥಾಪಿಸಿರುವ ಲಡಾಖ್‌ನ ಹಿಮಾಲಯನ್ ಇನ್ಸಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) ವಿರುದ್ಧ ಇರುವ ವಿದೇಶಿ ದೇಣಿಗೆ ಪಡೆದ ಆರೋಪದ ಬಗ್ಗೆಯೂ ಗೀತಾಂಜಲಿ ಪ್ರತಿಕ್ರಿಯಿಸಿದ್ದು, “ಇದು ಸಂಪೂರ್ಣವಾಗಿ ಓಪನ್ ಅಂಡ್ ಶಟ್ ಕೇಸ್” ಎಂದು ಹೇಳಿದ್ದಾರೆ.

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು, ಲಡಾಖ್‌ ಅನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಹಲವು ವರ್ಷಗಳಿಂದ ನಡೆಸುತ್ತಿದ್ದ ಪ್ರತಿಭಟನೆ, 2025ರ ಸೆಪ್ಟೆಂಬರ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಪೊಲೀಸರ ಗುಂಡೇಟಿಗೆ ನಾಲ್ವರು ಬಲಿಯಾದರೆ, 90ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಈ ಘಟನೆಯ ಬಳಿಕ ಹೋರಾಟ ನಿರತ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಪರಿಸರವಾದಿ, ಶಿಕ್ಷಣತಜ್ಞ ಸೋನಮ್ ವಾಂಗ್‌ಚುಕ್ ಅವರನ್ನು ಸೆಪ್ಟೆಂಬರ್ 26ರಂದು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ. ಸದ್ಯ ವಾಂಗ್‌ಚುಕ್ ಜೋಧ್‌ಪುರ ಜೈಲಿನಲ್ಲಿದ್ದಾರೆ. ವಾಂಗ್‌ಚುಕ್ ಬಂಧನಕ್ಕೆ ಹಲವು ಸಾಮಾಜಿಕ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರ ತನ್ನ ವಿರುದ್ಧ ಹೋರಾಡುವವರನ್ನು ಹತ್ತಿಕ್ಕಲು ಎನ್‌ಎಸ್‌ಎ ಕಾಯ್ದೆಯ ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ತನ್ನ ಪತಿಯ ಪರ ವಾಂಗ್‌ಚುಕ್ ಪತ್ನಿ ಗೀತಾಂಜಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.

ಈ ದೇಶದಲ್ಲಿ, ದೇಶಕ್ಕಾಗಿ ಕೆಲಸ ಮಾಡುತ್ತಿರುವವರನ್ನು ಅಕ್ರಮವಾಗಿ ಬಂಧಿಸಲು ಅಧಿಕಾರವನ್ನು ದುರುಪಯೋಗ ಮಾಡಲಾಗುತ್ತಿದೆ. ದೇಶಕ್ಕಾಗಿ ಇಷ್ಟೊಂದು ಕೊಡುಗೆ ನೀಡಿದ ಸೋನಮ್‌ಗೆ ಹೀಗೆ ಆಗುವುದಾದರೆ, ಬೇರೆಯವರಿಗೆ ಯಾವ ರೀತಿಯ ಅನ್ಯಾಯವಾಗಬಹುದು? ಎಂದು ಗೀತಾಂಜಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಸೋನಮ್ ವಾಂಗ್‌ಚುಕ್ ಬಂಧನ ಬಗ್ಗೆ ನಿರೀಕ್ಷಿತ ವಿರೋಧ ವ್ಯಕ್ತವಾಗದಿರುವುದು ನನಗೆ ಸ್ವಲ್ಪ ನಿರಾಶೆಯಾಗಿದೆ. ಆದರೆ, ನಾವು ಮೌನವಾಗಿರಲು ಸಾಧ್ಯವಿಲ್ಲ. ನಾವು ಹೆಚ್ಚು ಸಂಯಮದಿಂದ ಮತ್ತು ಜೋರಾದ ಧ್ವನಿಯಲ್ಲಿ ಮಾತನಾಡಬೇಕಾಗಿದೆ, ವಿರೋಧಿಸಬೇಕಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದು ಗೀತಾಂಜಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...