Homeಮುಖಪುಟಭಾರತದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅಮೆರಿಕದ ನಿಧಿ ಆರೋಪ : ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ

ಭಾರತದಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅಮೆರಿಕದ ನಿಧಿ ಆರೋಪ : ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ

- Advertisement -
- Advertisement -

ಭಾರತದಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಅಮೆರಿಕದಿಂದ ಹಣಕಾಸಿನ ನೆರವು ಪಡೆಯಲಾಗಿದೆ ಎಂಬ ಆರೋಪ ಸಂಬಂಧ, ಭಾರತದ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ ನೀಡಲಾಗಿರುವ ಯುಎಸ್‌ ನಿಧಿಯ ನೆರವಿನ ವಿವರಗಳನ್ನು ಒಳಗೊಂಡ ಶ್ವೇತಪತ್ರ ಹೊರಡಿಸಬೇಕು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

“ಭಾರತದ ಚುನಾವಣೆಯಲ್ಲಿ ಬೇರೆ ಯಾರನ್ನೋ ಆಯ್ಕೆ ಮಾಡಲು 21 ಮಿಲಿಯ ಡಾಲರ್ ನೆರವನ್ನು ಉಪಯೋಗಿಸಿರುವ ಸಾಧ್ಯತೆ ಇದೆ” ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಆರೋಪವನ್ನು ‘ಅಸಂಬದ್ಧ’ ಎಂದು ಕಾಂಗ್ರೆಸ್ ಹೇಳಿದೆ.

“ಭಾರತದ ಮತದಾನಕ್ಕಾಗಿ ನಾವೇಕೆ 21 ಮಿಲಿಯನ್ ಡಾಲರ್ ಹಣ ಖರ್ಚು ಮಾಡಬೇಕಾಗಿತ್ತು? ಅವರು ಬೇರೆ ಯಾರನ್ನೋ ಆಯ್ಕೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ನಾನು ಭಾವಿಸುತ್ತೇನೆ” ಎಂಬುವುದಾಗಿ ಟ್ರಂಪ್ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ “ಇದೀಗ ಯುಎಸ್‌ ನಿಧಿ (USAID) ಭಾರೀ ಸುದ್ದಿಯಲ್ಲಿದೆ. ಅದನ್ನು 1961 ನವೆಂಬರ್ 3ರಂದು ಸ್ಥಾಪಿಸಲಾಯಿತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡುತ್ತಿರುವ ಹೇಳಿಕೆಗಳು ‘ಅತ್ಯಂತ ಅಸಂಬದ್ಧ’ ಎಂದಷ್ಟೇ ಹೇಳಬಹುದಾಗಿದೆ. ಹಾಗಿದ್ದರೂ, ಭಾರತದ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ ದಶಕಗಳಿಂದ ನೀಡಲಾಗಿರುವ ಯುಎಸ್‌ನಿಧಿ ನೆರವಿನ ವಿವರಗಳನ್ನು ಒಳಗೊಂಡ ಶ್ವೇತಪತ್ರವೊಂದನ್ನು ಭಾರತ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಬೇಗ ಹೊರಡಿಸಬೇಕು” ಎಂದಿದ್ದಾರೆ.

ಫೆಬ್ರವರಿ 16 ರಂದು, ಬಿಲಿಯನೇರ್ ಸ್ಪೇಸ್‌ಎಕ್ಸ್ ಸಿಇಒ ಎಲಾನ್ ಮಸ್ಕ್ ನೇತೃತ್ವದ ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆ (ಡಿಒಜಿಇ), ಯುಎಸ್ ತೆರಿಗೆದಾರರ ಹಣವನ್ನು ಯಾವುದಕ್ಕೆಲ್ಲ ಖರ್ಚು ಮಾಡಲಾಗುತ್ತಿದೆ ಎಂದು ಪಟ್ಟಿ ಮಾಡಿದೆ. ಆ ಪಟ್ಟಿಯಲ್ಲಿ ಭಾರತದ ಮತದಾನಕ್ಕಾಗಿ 21 ಮಿಲಿಯನ್ ಯುಎಸ್ ಡಾಲರ್ ಖರ್ಚು ಮಾಡಿರುವುದೂ ಸೇರಿದೆ.

ಡಿಒಜಿಇ ಮಾಡಿರುವ ಪಟ್ಟಿಯಲ್ಲಿ ಬಾಂಗ್ಲಾದೇಶದ ರಾಜಕೀಯ ಬಲಪಡಿಸಲು 29 ಮಿಲಿಯನ್ ಡಾಲರ್, ಹಣಕಾಸು ಒಕ್ಕೂಟಕ್ಕೆ 20 ಮಿಲಿಯನ್ ಡಾಲರ್, ನೇಪಾಳದಲ್ಲಿ ಜೀವವೈವಿಧ್ಯ ಸಂರಕ್ಷಣೆಗಾಗಿ 19 ಮಿಲಿಯನ್ ಡಾಲರ್ ಹಾಗೂ ಏಷ್ಯಾದಲ್ಲಿ ಕಲಿಕಾ ಫಲಿತಾಂಶಗಳನ್ನು ಸುಧಾರಿಸಲು 47 ಮಿಲಿಯನ್ ಡಾಲರ್ ನೀಡುತ್ತಿರುವುದು ಸೇರಿದೆ.

ಡಿಒಜಿಇ ಈ ಎಲ್ಲಾ ನೆರವುಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ.

ಕಳೆದ ಮಂಗಳವಾರ ಮಾರ್-ಎ-ಲಾಗೊದಲ್ಲಿ ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿ ಮಾತನಾಡಿದ ಟ್ರಂಪ್, “ಭಾರತದ ಚುನಾವಣೆಗೆ ನಾವೇಕೆ 21 ಮಿಲಿಯನ್ ಡಾಲರ್ ಖರ್ಚು ಮಾಡಬೇಕು. ನಮಗೆ ಗೊತ್ತಿರುವಂತೆ ಭಾರತ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ರಾಷ್ಟ್ರಗಳಲ್ಲಿ ಒಂದು. ಅವರು ಹಲವು ರೀತಿಯ ಸುಂಕಗಳನ್ನು ವಿಧಿಸುತ್ತಿದ್ದಾರೆ. ಹಾಗಾಗಿ, ನಾವು ಹಣ ನೀಡುವುದು ಸರಿಯಲ್ಲ” ಎಂದಿದ್ದಾರೆ.

ಚುನಾವಣಾ ಆಯೋಗ ನಿಲುವು ಸ್ಪಷ್ಟಪಡಿಸಬೇಕು : ಉಮರ್ ಅಬ್ದುಲ್ಲಾ

ಭಾರತದಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಅಮೆರಿಕ 21 ಮಿಲಿಯನ್ ಡಾಲರ್ ವೆಚ್ಚ ಮಾಡಿದೆ ಎಂಬ ವರದಿ ಕುರಿತು ಚುನಾವಣಾ ಆಯೋಗ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಅವರು ಗುರುವಾರ (ಫೆ.29) ಆಗ್ರಹಿಸಿದ್ದಾರೆ.

ಇದು (ವಿದೇಶಿ ಹಸ್ತಕ್ಷೇಪ) ಸಂಭವಿಸಬಾರದು. ಇದುವರೆಗೆ ವಿದೇಶಿ ಹಸ್ತಕ್ಷೇಪದ ಕುರಿತು ಯಾವುದೇ ಪುರಾವೆ ಇಲ್ಲ. ನಮ್ಮ ಚುನಾವಣೆಯಲ್ಲಿ ವಿದೇಶಿ ಹಸ್ತಕ್ಷೇಪ ನಡೆದಿದೆಯೇ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಬೇಕು. ಯಾಕೆಂದರೆ, ಇಂದಿನವರೆಗೆ ನಾವು ನಮ್ಮ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಯುತ ರೀತಿಯಲ್ಲಿ ನಡೆಸಲಾಗಿದೆ ಎಂದು ನಂಬಿದ್ದೇವೆ’’ ಎಂದು ಅಬ್ದುಲ್ಲಾ ಹೇಳಿದ್ದಾರೆ.

‘ಈ ವ್ಯವಸ್ಥೆಯಿಂದ ನೀವು ನಲುಗಿ ಹೋಗಿದ್ದೀರಿ’ : ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...