Homeಕರೋನಾ ತಲ್ಲಣಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರ ಉಚಿತ ಶಿಕ್ಷಣ ನೀಡಬೇಕು: ಸೋನು ಸೂದ್ ಆಗ್ರಹ

ಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರ ಉಚಿತ ಶಿಕ್ಷಣ ನೀಡಬೇಕು: ಸೋನು ಸೂದ್ ಆಗ್ರಹ

ಮನೆಯ ಏಕೈಕ ದುಡಿಯುವ ವ್ಯಕ್ತಿಗಳನ್ನು ಕಳೆದುಕೊಂಡ ಕುಟುಂಬಗಳು ಹೇಗೆ ಬದುಕಬೇಕು? ಹಾಗಾಗಿ ಇಂತಹ ಕುಟುಂಬಗಳಿಗೆ ಸಾಮಾಜಿಕ ಸಂಘಟನೆಗಳು, ವ್ಯಕ್ತಿಗಳು ಸಹಾಯ ಮಾಡಬೇಕು.

- Advertisement -
- Advertisement -

ಕೋವಿಡ್ ಸಾಂಕ್ರಾಮಿಕದ ಕಾರಣಕ್ಕೆ ಹೇರಲಾಗಿದ್ದ ಲಾಕ್‌ಡೌನ್‌ ಸಮಯದಲ್ಲಿ ಸಾವಿರಾರು ವಲಸೆ ಕಾರ್ಮಿಕರ ಪಾಲಿಗೆ ದೇವರಂತೆ ಬಂದು ಸಹಾಯ ಮಾಡಿ ಶ್ಲಾಘನೆಗೊಳಗಾದವರು ಬಾಲಿವುಡ್ ನಟ ಸೋನು ಸೂದ್. ಅವರು ‘ಈಗ ಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರ ಉಚಿತ ಶಿಕ್ಷಣ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ವಿಡಿಯೋ ಮೂಲಕ ಮನವಿ ಮಾಡಿರುವ ಅವರು, “ಕೋವಿಡ್ ಎರಡನೇ ಅಲೆಯಿಂದಾಗಿ ಬಹುತೇಕ ಜನರು ಮೃತಪಟ್ಟಿದ್ದಾರೆ. ಅದರಲ್ಲಿ ಕೆಲವು ಮಕ್ಕಳಂತೂ ತಮ್ಮ ಪೋಷಕರನ್ನು, ತಂದೆ-ತಾಯಿಗಳನ್ನು ಕಳೆದುಕೊಂಡಿದ್ದಾರೆ. ಹಾಗಾದರೆ ಅವರ ಮುಂದಿನ ಶಿಕ್ಷಣದ ಕಥೆ ಏನು? ವಿಶೇಷವಾಗಿ 8-10-12 ವರ್ಷದ ಮಕ್ಕಳ ತಂದೆ ತಾಯಿಗಳು ನಿಧನರಾಗಿದ್ದರೆ ಅವರ ಭವಿಷ್ಯ ಏನಾಗುತ್ತದೆ? ಹಾಗಾಗಿ ಇಂತಹ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಸರ್ಕಾರ ನಿಯಮ ರೂಪಿಸಬೇಕೆಂದು” ಅವರು ಒತ್ತಾಯಿಸಿದ್ದಾರೆ.

ಆ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿರಲಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿರಲಿ. ಅವರು ಎಲ್ಲಿವರೆಗೂ ಓದಲು ಬಯಸುತ್ತಾರೋ (ಪದವಿ, ಇಂಜಿನಿಯರಿಂಗ್, ಮೆಡಿಕಲ್) ಅಲ್ಲಿಯವರೆಗೂ ಅವರಿಗೆ ಉಚಿತ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು. ಅದಕ್ಕಾಗಿ ವಿಶೇಷ ನಿಯಮ ರೂಪಿಸಬೇಕು. ಸಾರ್ವಜನಿಕರು ಇದರಲ್ಲಿ ನೆರವಾಗಬಹುದು ಎಂದು ಅವರು ಸಲಹೆ ನೀಡಿದ್ದು ತಮ್ಮ ವಿಡಿಯೋವನ್ನು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ಟ್ಯಾಗ್ ಮಾಡಿದ್ದಾರೆ.

ಅಲ್ಲದೇ ನೂರಾರು ಕುಟುಂಬಗಳಲ್ಲಿ ಮನೆಯ ಆಧಾರಸ್ಥಂಭವಾಗಿದ್ದ ವ್ಯಕ್ತಿಗಳೇ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. ಮನೆಯ ಏಕೈಕ ದುಡಿಯುವ ವ್ಯಕ್ತಿಗಳನ್ನು ಕಳೆದುಕೊಂಡ ಕುಟುಂಬಗಳು ಹೇಗೆ ಬದುಕಬೇಕು? ಹಾಗಾಗಿ ಇಂತಹ ಕುಟುಂಬಗಳಿಗೆ ಸಾಮಾಜಿಕ ಸಂಘಟನೆಗಳು, ವ್ಯಕ್ತಿಗಳು ಸಹಾಯ ಮಾಡಬೇಕು. ಸರ್ಕಾರವು ಇತ್ತ ಗಮನ ಹರಿಸಬೇಕು ಎಂದು ಸೋನು ಸೂದ್ ಮನವಿ ಮಾಡಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಅಕ್ಷರಶಃ ಲಕ್ಷಾಂತರ ಜನರಿಗೆ ಸೋನು ಸೂದ್ ತಮ್ಮ ಫೌಂಡೇಶನ್ ವತಿಯಿಂದ ಸಹಾಯ ಮಾಡಿದ್ದಾರೆ. ಈ ಬಾರಿಯೂ ಆಕ್ಸಿಜನ್, ಔಷಧಿ, ಬೆಡ್‌ಗಾಗಿ ಪ್ರಯತ್ನಿಸಿ ಸಹಾಯ ಮಾಡಿದ್ದಾರೆ. ಅಂತವರು ಸರ್ಕಾರಕ್ಕೆ ಮೊದಲ ಬಾರಿ ಸಾಮಾಜಿಕ ಕಾಳಜಿಯ ಕುರಿತು ಒತ್ತಾಯ ಮಾಡಿದ್ದಾರೆ. ಇದನ್ನು ಸರ್ಕಾರ ನೆರವೇರಿಸುತ್ತದೆಯೇ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ರೈತರು ನಡುಕ ಹುಟ್ಟಿಸುವ ಚಳಿಯಲ್ಲಿ ಕುಳಿತಿದ್ದಾರೆ; ಇನ್ನೆಷ್ಟು ದಿನ ಇದನ್ನು ನೋಡುತ್ತಿರಬೇಕು: ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...