Homeಕರ್ನಾಟಕಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ನಮ್ಮ ನೆಲ, ಜಲ, ಗಾಳಿ, ಸೌಕರ್ಯ ಬಳಸಿಕೊಂಡು ನಡೆಯುತ್ತಿರುವ ಸಂಸ್ಥೆಗಳೂ ನಮ್ಮವರ ವಿಷಯದಲ್ಲಿ ಇಷ್ಟು ಕ್ರೂರವಾಗಿರುವುದು ಸರಿಯಲ್ಲ. ಸಂಸ್ಥೆ ಮುಖ್ಯಸ್ಥರು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯವಾಗಿ ವರ್ತಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

- Advertisement -
- Advertisement -

ಬಿಡದಿ ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆಯಾದರೂ, ಪರಿಹಾರ ಕಾಣಿಸುತ್ತಿಲ್ಲ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವಿನ ವ್ಯವಸ್ಥಾಪಕರ ಭಿನ್ನಾಭಿಪ್ರಾಯಗಳು, ಪ್ರತಿಷ್ಠೆ, ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿರಬಹುದು. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಈಗಿನ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಟೊಯೊಟಾ ಕಿರ್ಲೋಸ್ಕರ್‌‌ ಕಂಪೆನಿಯ ಆಡಳಿತ ಮಂಡಳಿಯ ದುರ್ವರ್ತನೆ ವಿರುದ್ದ ಕಾರ್ಮಿಕರು ನಡೆಸುತ್ತಿರುವ ಹೋರಾಟ ಇಂದಿಗೆ 42 ನೇ ದಿನಕ್ಕೆ ಕಾಲಿಟ್ಟಿದೆ. ಶುಕ್ರವಾರದಂದು ಕಾರ್ಮಿಕ ಸಂಘಟನೆಗಳು ರೈತ-ದಲಿತ-ಕನ್ನಡಪರ ಸಂಘಟನೆಗಳ ಬೆಂಬಲದಲ್ಲಿ ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದರು.

ಇದನ್ನೂ ಓದಿ: ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ಜಿಲ್ಲಾಧಿಕಾರಿ,toyota

ಬಿಡದಿಯಲ್ಲಿ ನಡೆಯುತ್ತಿರುವ ಕಾರ್ಮಿಕರ ಹೋರಾಟದ ಬಗ್ಗೆ ಇಂದು ಸರಣಿ ಟ್ವೇಟ್ ಮಾಡಿರುವ ಕುಮಾರಸ್ವಾಮಿ, ” ವ್ಯವಸ್ಥಾಪಕರ ಮಾತು ಕೇಳಿಯೋ, ಕಾರ್ಮಿಕರ ಮೇಲಿನ ಕ್ಷುಲ್ಲಕ ಆರೋಪಗಳಿಗೋ ಸಂಸ್ಥೆ 3000 ಕಾರ್ಮಿಕರನ್ನು ಬೀದಿಗೆ ತಳ್ಳಿದೆ. ನಮ್ಮ ನೆಲ, ಜಲ, ಗಾಳಿ, ಸೌಕರ್ಯ ಬಳಸಿಕೊಂಡು ನಡೆಯುತ್ತಿರುವ ಸಂಸ್ಥೆಗಳೂ ನಮ್ಮವರ ವಿಷಯದಲ್ಲಿ ಇಷ್ಟು ಕ್ರೂರವಾಗಿರುವುದು ಸರಿಯಲ್ಲ. ಸಂಸ್ಥೆ ಮುಖ್ಯಸ್ಥರು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯವಾಗಿ ವರ್ತಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಕಾರ್ಮಿಕರ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಸ್ವತಃ ನಾನೇ ಹಲವು ಸಭೆಗಳನ್ನು ನಡೆಸಿದ್ದೇನೆ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವೆ ಇರುವ ವ್ಯವಸ್ಥಾಪಕ ವರ್ಗ ಗೊಂದಲ ಸೃಷ್ಟಿ ಮಾಡುತ್ತಿರುವುದು ನನಗೆ ಮೇಲ್ನೋಟಕ್ಕೆ ಗೊತ್ತಾಗಿದೆ. ಈ ವ್ಯವಸ್ಥಾಪಕ ವರ್ಗ ಸಾಮಾನ್ಯವಾಗಿ ಈ ಪ್ರದೇಶ, ಪ್ರಾಂತ್ಯದವರಾಗಲಿ, ರಾಜ್ಯದವರಾಗಲಿ ಅಲ್ಲ ಎಂಬುದು ಗಮನಾರ್ಹ” ಎಂದುಅವರು ಹೇಳಿದ್ದಾರೆ.

“ಕೋಲಾರದ ‘ವಿಸ್ಟ್ರಾನ್‌’ ಘಟನೆಗೆ ಸಂಸ್ಥೆಯ ವ್ಯವಸ್ಥಾಪನೆಯಲ್ಲಿ ಆಗಿದ್ದ ಲೋಪವೇ ಕಾರಣ ಎಂದೂ, ಕಾರ್ಮಿಕರು, ನೌಕರರನ್ನು ಘನತೆಯಿಂದ ಕಾಣುವುದಾಗಿಯೂ ಆಪಲ್‌ ಸಂಸ್ಥೆ ಹೇಳಿದೆ. ವಿಸ್ಟ್ರಾನ್‌ ಕಂಪನಿಯೂ ತನ್ನ ಉಪಾಧ್ಯಕ್ಷನನ್ನು ಇದೇ ಉದ್ದೇಶಕ್ಕೆ ಕಿತ್ತು ಹಾಕಿದೆ. ಟೊಯೋಟಾ ಕೂಡ ತನ್ನ ಆಂತರಿಕ ವಿಚಾರಗಳ ಬಗ್ಗೆ ಒಮ್ಮೆ ಪಾರಾಮರ್ಶೆ ಮಾಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದರ್ಪ ಮುಂದುವರೆಸಿದ ಟೊಯೋಟಾ ಕಿರ್ಲೋಸ್ಕರ್; ಮತ್ತೇ 20 ಕಾರ್ಮಿಕರ ಅಮಾನತು

“ಸಮಸ್ಯೆಯನ್ನು ಸರ್ಕಾರವೂ ಆದ್ಯತೆ ಮೇಲೆ ಬಗೆಹರಿಸಲು ಮುಂದಾಗಬೇಕು. ಅದರಿಂದ ರಾಜ್ಯಕ್ಕೂ ಲಾಭವಿದೆ ಎಂಬುದನ್ನು ಸರ್ಕಾರ ಗಮನಿಸಬೇಕು. ಕಾರ್ಮಿಕರ ಪ್ರತಿಭಟನೆ, ದಾಂಧಲೆ, ಮುಷ್ಕರಗಳಂಥ ಘಟನೆಗಳು ಹೂಡಿಕೆದಾರರಲ್ಲಿ ಅಪನಂಬಿಕೆ ಹುಟ್ಟು ಹಾಕಲು ಕಾರಣವಾಗುತ್ತದೆ. ರಾಜ್ಯದಲ್ಲಿ ಸುಲಲಿತ ಉದ್ದಿಮೆ ನಡೆಸಲು ಅವಕಾಶಗಳಿಲ್ಲ ಎಂಬ ಭಾವನೆ ಮೂಡಿಸುತ್ತವೆ” ಎಂದಿದ್ದಾರೆ.

“ಈ ಎಲ್ಲ ಕಾರಣಗಳಿಂದಾಗಿ ಸರ್ಕಾರವೂ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ನಾನು ಒತ್ತಾಯಿಸುತ್ತೇನೆ. ಸಂಸ್ಥೆಯ ಪ್ರತಿಭಟನಾ ನಿರತ ಕಾರ್ಮಿಕರು, ಸಂಸ್ಥೆಯ ಮುಖ್ಯಸ್ಥರನ್ನು ನೇರಾನೇರವಾಗಿ ಸಂಧಾನಕ್ಕೆ ಕೂರಿಸಬೇಕು. ಈ ವಿಚಾರದಲ್ಲಿ ಸರ್ಕಾರ ಸಂಪರ್ಕ ಸೇತುವಾಗಿ ನಡೆದುಕೊಳ್ಳಬೇಕು. ರಾಜ್ಯದ ಔದ್ಯಮಿಕ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಕೂಡ” ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...