Homeಕರ್ನಾಟಕಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ನಮ್ಮ ನೆಲ, ಜಲ, ಗಾಳಿ, ಸೌಕರ್ಯ ಬಳಸಿಕೊಂಡು ನಡೆಯುತ್ತಿರುವ ಸಂಸ್ಥೆಗಳೂ ನಮ್ಮವರ ವಿಷಯದಲ್ಲಿ ಇಷ್ಟು ಕ್ರೂರವಾಗಿರುವುದು ಸರಿಯಲ್ಲ. ಸಂಸ್ಥೆ ಮುಖ್ಯಸ್ಥರು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯವಾಗಿ ವರ್ತಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

- Advertisement -
- Advertisement -

ಬಿಡದಿ ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆಯಾದರೂ, ಪರಿಹಾರ ಕಾಣಿಸುತ್ತಿಲ್ಲ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವಿನ ವ್ಯವಸ್ಥಾಪಕರ ಭಿನ್ನಾಭಿಪ್ರಾಯಗಳು, ಪ್ರತಿಷ್ಠೆ, ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿರಬಹುದು. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಈಗಿನ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಟೊಯೊಟಾ ಕಿರ್ಲೋಸ್ಕರ್‌‌ ಕಂಪೆನಿಯ ಆಡಳಿತ ಮಂಡಳಿಯ ದುರ್ವರ್ತನೆ ವಿರುದ್ದ ಕಾರ್ಮಿಕರು ನಡೆಸುತ್ತಿರುವ ಹೋರಾಟ ಇಂದಿಗೆ 42 ನೇ ದಿನಕ್ಕೆ ಕಾಲಿಟ್ಟಿದೆ. ಶುಕ್ರವಾರದಂದು ಕಾರ್ಮಿಕ ಸಂಘಟನೆಗಳು ರೈತ-ದಲಿತ-ಕನ್ನಡಪರ ಸಂಘಟನೆಗಳ ಬೆಂಬಲದಲ್ಲಿ ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದರು.

ಇದನ್ನೂ ಓದಿ: ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ಜಿಲ್ಲಾಧಿಕಾರಿ,toyota

ಬಿಡದಿಯಲ್ಲಿ ನಡೆಯುತ್ತಿರುವ ಕಾರ್ಮಿಕರ ಹೋರಾಟದ ಬಗ್ಗೆ ಇಂದು ಸರಣಿ ಟ್ವೇಟ್ ಮಾಡಿರುವ ಕುಮಾರಸ್ವಾಮಿ, ” ವ್ಯವಸ್ಥಾಪಕರ ಮಾತು ಕೇಳಿಯೋ, ಕಾರ್ಮಿಕರ ಮೇಲಿನ ಕ್ಷುಲ್ಲಕ ಆರೋಪಗಳಿಗೋ ಸಂಸ್ಥೆ 3000 ಕಾರ್ಮಿಕರನ್ನು ಬೀದಿಗೆ ತಳ್ಳಿದೆ. ನಮ್ಮ ನೆಲ, ಜಲ, ಗಾಳಿ, ಸೌಕರ್ಯ ಬಳಸಿಕೊಂಡು ನಡೆಯುತ್ತಿರುವ ಸಂಸ್ಥೆಗಳೂ ನಮ್ಮವರ ವಿಷಯದಲ್ಲಿ ಇಷ್ಟು ಕ್ರೂರವಾಗಿರುವುದು ಸರಿಯಲ್ಲ. ಸಂಸ್ಥೆ ಮುಖ್ಯಸ್ಥರು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯವಾಗಿ ವರ್ತಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಕಾರ್ಮಿಕರ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಸ್ವತಃ ನಾನೇ ಹಲವು ಸಭೆಗಳನ್ನು ನಡೆಸಿದ್ದೇನೆ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವೆ ಇರುವ ವ್ಯವಸ್ಥಾಪಕ ವರ್ಗ ಗೊಂದಲ ಸೃಷ್ಟಿ ಮಾಡುತ್ತಿರುವುದು ನನಗೆ ಮೇಲ್ನೋಟಕ್ಕೆ ಗೊತ್ತಾಗಿದೆ. ಈ ವ್ಯವಸ್ಥಾಪಕ ವರ್ಗ ಸಾಮಾನ್ಯವಾಗಿ ಈ ಪ್ರದೇಶ, ಪ್ರಾಂತ್ಯದವರಾಗಲಿ, ರಾಜ್ಯದವರಾಗಲಿ ಅಲ್ಲ ಎಂಬುದು ಗಮನಾರ್ಹ” ಎಂದುಅವರು ಹೇಳಿದ್ದಾರೆ.

“ಕೋಲಾರದ ‘ವಿಸ್ಟ್ರಾನ್‌’ ಘಟನೆಗೆ ಸಂಸ್ಥೆಯ ವ್ಯವಸ್ಥಾಪನೆಯಲ್ಲಿ ಆಗಿದ್ದ ಲೋಪವೇ ಕಾರಣ ಎಂದೂ, ಕಾರ್ಮಿಕರು, ನೌಕರರನ್ನು ಘನತೆಯಿಂದ ಕಾಣುವುದಾಗಿಯೂ ಆಪಲ್‌ ಸಂಸ್ಥೆ ಹೇಳಿದೆ. ವಿಸ್ಟ್ರಾನ್‌ ಕಂಪನಿಯೂ ತನ್ನ ಉಪಾಧ್ಯಕ್ಷನನ್ನು ಇದೇ ಉದ್ದೇಶಕ್ಕೆ ಕಿತ್ತು ಹಾಕಿದೆ. ಟೊಯೋಟಾ ಕೂಡ ತನ್ನ ಆಂತರಿಕ ವಿಚಾರಗಳ ಬಗ್ಗೆ ಒಮ್ಮೆ ಪಾರಾಮರ್ಶೆ ಮಾಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದರ್ಪ ಮುಂದುವರೆಸಿದ ಟೊಯೋಟಾ ಕಿರ್ಲೋಸ್ಕರ್; ಮತ್ತೇ 20 ಕಾರ್ಮಿಕರ ಅಮಾನತು

“ಸಮಸ್ಯೆಯನ್ನು ಸರ್ಕಾರವೂ ಆದ್ಯತೆ ಮೇಲೆ ಬಗೆಹರಿಸಲು ಮುಂದಾಗಬೇಕು. ಅದರಿಂದ ರಾಜ್ಯಕ್ಕೂ ಲಾಭವಿದೆ ಎಂಬುದನ್ನು ಸರ್ಕಾರ ಗಮನಿಸಬೇಕು. ಕಾರ್ಮಿಕರ ಪ್ರತಿಭಟನೆ, ದಾಂಧಲೆ, ಮುಷ್ಕರಗಳಂಥ ಘಟನೆಗಳು ಹೂಡಿಕೆದಾರರಲ್ಲಿ ಅಪನಂಬಿಕೆ ಹುಟ್ಟು ಹಾಕಲು ಕಾರಣವಾಗುತ್ತದೆ. ರಾಜ್ಯದಲ್ಲಿ ಸುಲಲಿತ ಉದ್ದಿಮೆ ನಡೆಸಲು ಅವಕಾಶಗಳಿಲ್ಲ ಎಂಬ ಭಾವನೆ ಮೂಡಿಸುತ್ತವೆ” ಎಂದಿದ್ದಾರೆ.

“ಈ ಎಲ್ಲ ಕಾರಣಗಳಿಂದಾಗಿ ಸರ್ಕಾರವೂ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ನಾನು ಒತ್ತಾಯಿಸುತ್ತೇನೆ. ಸಂಸ್ಥೆಯ ಪ್ರತಿಭಟನಾ ನಿರತ ಕಾರ್ಮಿಕರು, ಸಂಸ್ಥೆಯ ಮುಖ್ಯಸ್ಥರನ್ನು ನೇರಾನೇರವಾಗಿ ಸಂಧಾನಕ್ಕೆ ಕೂರಿಸಬೇಕು. ಈ ವಿಚಾರದಲ್ಲಿ ಸರ್ಕಾರ ಸಂಪರ್ಕ ಸೇತುವಾಗಿ ನಡೆದುಕೊಳ್ಳಬೇಕು. ರಾಜ್ಯದ ಔದ್ಯಮಿಕ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಕೂಡ” ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...