Homeಕರ್ನಾಟಕಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ನಮ್ಮ ನೆಲ, ಜಲ, ಗಾಳಿ, ಸೌಕರ್ಯ ಬಳಸಿಕೊಂಡು ನಡೆಯುತ್ತಿರುವ ಸಂಸ್ಥೆಗಳೂ ನಮ್ಮವರ ವಿಷಯದಲ್ಲಿ ಇಷ್ಟು ಕ್ರೂರವಾಗಿರುವುದು ಸರಿಯಲ್ಲ. ಸಂಸ್ಥೆ ಮುಖ್ಯಸ್ಥರು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯವಾಗಿ ವರ್ತಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

- Advertisement -
- Advertisement -

ಬಿಡದಿ ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆಯಾದರೂ, ಪರಿಹಾರ ಕಾಣಿಸುತ್ತಿಲ್ಲ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವಿನ ವ್ಯವಸ್ಥಾಪಕರ ಭಿನ್ನಾಭಿಪ್ರಾಯಗಳು, ಪ್ರತಿಷ್ಠೆ, ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿರಬಹುದು. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಈಗಿನ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಟೊಯೊಟಾ ಕಿರ್ಲೋಸ್ಕರ್‌‌ ಕಂಪೆನಿಯ ಆಡಳಿತ ಮಂಡಳಿಯ ದುರ್ವರ್ತನೆ ವಿರುದ್ದ ಕಾರ್ಮಿಕರು ನಡೆಸುತ್ತಿರುವ ಹೋರಾಟ ಇಂದಿಗೆ 42 ನೇ ದಿನಕ್ಕೆ ಕಾಲಿಟ್ಟಿದೆ. ಶುಕ್ರವಾರದಂದು ಕಾರ್ಮಿಕ ಸಂಘಟನೆಗಳು ರೈತ-ದಲಿತ-ಕನ್ನಡಪರ ಸಂಘಟನೆಗಳ ಬೆಂಬಲದಲ್ಲಿ ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದರು.

ಇದನ್ನೂ ಓದಿ: ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ಜಿಲ್ಲಾಧಿಕಾರಿ,toyota

ಬಿಡದಿಯಲ್ಲಿ ನಡೆಯುತ್ತಿರುವ ಕಾರ್ಮಿಕರ ಹೋರಾಟದ ಬಗ್ಗೆ ಇಂದು ಸರಣಿ ಟ್ವೇಟ್ ಮಾಡಿರುವ ಕುಮಾರಸ್ವಾಮಿ, ” ವ್ಯವಸ್ಥಾಪಕರ ಮಾತು ಕೇಳಿಯೋ, ಕಾರ್ಮಿಕರ ಮೇಲಿನ ಕ್ಷುಲ್ಲಕ ಆರೋಪಗಳಿಗೋ ಸಂಸ್ಥೆ 3000 ಕಾರ್ಮಿಕರನ್ನು ಬೀದಿಗೆ ತಳ್ಳಿದೆ. ನಮ್ಮ ನೆಲ, ಜಲ, ಗಾಳಿ, ಸೌಕರ್ಯ ಬಳಸಿಕೊಂಡು ನಡೆಯುತ್ತಿರುವ ಸಂಸ್ಥೆಗಳೂ ನಮ್ಮವರ ವಿಷಯದಲ್ಲಿ ಇಷ್ಟು ಕ್ರೂರವಾಗಿರುವುದು ಸರಿಯಲ್ಲ. ಸಂಸ್ಥೆ ಮುಖ್ಯಸ್ಥರು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯವಾಗಿ ವರ್ತಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಕಾರ್ಮಿಕರ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಸ್ವತಃ ನಾನೇ ಹಲವು ಸಭೆಗಳನ್ನು ನಡೆಸಿದ್ದೇನೆ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವೆ ಇರುವ ವ್ಯವಸ್ಥಾಪಕ ವರ್ಗ ಗೊಂದಲ ಸೃಷ್ಟಿ ಮಾಡುತ್ತಿರುವುದು ನನಗೆ ಮೇಲ್ನೋಟಕ್ಕೆ ಗೊತ್ತಾಗಿದೆ. ಈ ವ್ಯವಸ್ಥಾಪಕ ವರ್ಗ ಸಾಮಾನ್ಯವಾಗಿ ಈ ಪ್ರದೇಶ, ಪ್ರಾಂತ್ಯದವರಾಗಲಿ, ರಾಜ್ಯದವರಾಗಲಿ ಅಲ್ಲ ಎಂಬುದು ಗಮನಾರ್ಹ” ಎಂದುಅವರು ಹೇಳಿದ್ದಾರೆ.

“ಕೋಲಾರದ ‘ವಿಸ್ಟ್ರಾನ್‌’ ಘಟನೆಗೆ ಸಂಸ್ಥೆಯ ವ್ಯವಸ್ಥಾಪನೆಯಲ್ಲಿ ಆಗಿದ್ದ ಲೋಪವೇ ಕಾರಣ ಎಂದೂ, ಕಾರ್ಮಿಕರು, ನೌಕರರನ್ನು ಘನತೆಯಿಂದ ಕಾಣುವುದಾಗಿಯೂ ಆಪಲ್‌ ಸಂಸ್ಥೆ ಹೇಳಿದೆ. ವಿಸ್ಟ್ರಾನ್‌ ಕಂಪನಿಯೂ ತನ್ನ ಉಪಾಧ್ಯಕ್ಷನನ್ನು ಇದೇ ಉದ್ದೇಶಕ್ಕೆ ಕಿತ್ತು ಹಾಕಿದೆ. ಟೊಯೋಟಾ ಕೂಡ ತನ್ನ ಆಂತರಿಕ ವಿಚಾರಗಳ ಬಗ್ಗೆ ಒಮ್ಮೆ ಪಾರಾಮರ್ಶೆ ಮಾಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದರ್ಪ ಮುಂದುವರೆಸಿದ ಟೊಯೋಟಾ ಕಿರ್ಲೋಸ್ಕರ್; ಮತ್ತೇ 20 ಕಾರ್ಮಿಕರ ಅಮಾನತು

“ಸಮಸ್ಯೆಯನ್ನು ಸರ್ಕಾರವೂ ಆದ್ಯತೆ ಮೇಲೆ ಬಗೆಹರಿಸಲು ಮುಂದಾಗಬೇಕು. ಅದರಿಂದ ರಾಜ್ಯಕ್ಕೂ ಲಾಭವಿದೆ ಎಂಬುದನ್ನು ಸರ್ಕಾರ ಗಮನಿಸಬೇಕು. ಕಾರ್ಮಿಕರ ಪ್ರತಿಭಟನೆ, ದಾಂಧಲೆ, ಮುಷ್ಕರಗಳಂಥ ಘಟನೆಗಳು ಹೂಡಿಕೆದಾರರಲ್ಲಿ ಅಪನಂಬಿಕೆ ಹುಟ್ಟು ಹಾಕಲು ಕಾರಣವಾಗುತ್ತದೆ. ರಾಜ್ಯದಲ್ಲಿ ಸುಲಲಿತ ಉದ್ದಿಮೆ ನಡೆಸಲು ಅವಕಾಶಗಳಿಲ್ಲ ಎಂಬ ಭಾವನೆ ಮೂಡಿಸುತ್ತವೆ” ಎಂದಿದ್ದಾರೆ.

“ಈ ಎಲ್ಲ ಕಾರಣಗಳಿಂದಾಗಿ ಸರ್ಕಾರವೂ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ನಾನು ಒತ್ತಾಯಿಸುತ್ತೇನೆ. ಸಂಸ್ಥೆಯ ಪ್ರತಿಭಟನಾ ನಿರತ ಕಾರ್ಮಿಕರು, ಸಂಸ್ಥೆಯ ಮುಖ್ಯಸ್ಥರನ್ನು ನೇರಾನೇರವಾಗಿ ಸಂಧಾನಕ್ಕೆ ಕೂರಿಸಬೇಕು. ಈ ವಿಚಾರದಲ್ಲಿ ಸರ್ಕಾರ ಸಂಪರ್ಕ ಸೇತುವಾಗಿ ನಡೆದುಕೊಳ್ಳಬೇಕು. ರಾಜ್ಯದ ಔದ್ಯಮಿಕ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಕೂಡ” ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...