Homeಕರ್ನಾಟಕಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ನಮ್ಮ ನೆಲ, ಜಲ, ಗಾಳಿ, ಸೌಕರ್ಯ ಬಳಸಿಕೊಂಡು ನಡೆಯುತ್ತಿರುವ ಸಂಸ್ಥೆಗಳೂ ನಮ್ಮವರ ವಿಷಯದಲ್ಲಿ ಇಷ್ಟು ಕ್ರೂರವಾಗಿರುವುದು ಸರಿಯಲ್ಲ. ಸಂಸ್ಥೆ ಮುಖ್ಯಸ್ಥರು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯವಾಗಿ ವರ್ತಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

- Advertisement -
- Advertisement -

ಬಿಡದಿ ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆಯಾದರೂ, ಪರಿಹಾರ ಕಾಣಿಸುತ್ತಿಲ್ಲ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವಿನ ವ್ಯವಸ್ಥಾಪಕರ ಭಿನ್ನಾಭಿಪ್ರಾಯಗಳು, ಪ್ರತಿಷ್ಠೆ, ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿರಬಹುದು. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಈಗಿನ ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಟೊಯೊಟಾ ಕಿರ್ಲೋಸ್ಕರ್‌‌ ಕಂಪೆನಿಯ ಆಡಳಿತ ಮಂಡಳಿಯ ದುರ್ವರ್ತನೆ ವಿರುದ್ದ ಕಾರ್ಮಿಕರು ನಡೆಸುತ್ತಿರುವ ಹೋರಾಟ ಇಂದಿಗೆ 42 ನೇ ದಿನಕ್ಕೆ ಕಾಲಿಟ್ಟಿದೆ. ಶುಕ್ರವಾರದಂದು ಕಾರ್ಮಿಕ ಸಂಘಟನೆಗಳು ರೈತ-ದಲಿತ-ಕನ್ನಡಪರ ಸಂಘಟನೆಗಳ ಬೆಂಬಲದಲ್ಲಿ ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದರು.

ಇದನ್ನೂ ಓದಿ: ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ಜಿಲ್ಲಾಧಿಕಾರಿ,toyota

ಬಿಡದಿಯಲ್ಲಿ ನಡೆಯುತ್ತಿರುವ ಕಾರ್ಮಿಕರ ಹೋರಾಟದ ಬಗ್ಗೆ ಇಂದು ಸರಣಿ ಟ್ವೇಟ್ ಮಾಡಿರುವ ಕುಮಾರಸ್ವಾಮಿ, ” ವ್ಯವಸ್ಥಾಪಕರ ಮಾತು ಕೇಳಿಯೋ, ಕಾರ್ಮಿಕರ ಮೇಲಿನ ಕ್ಷುಲ್ಲಕ ಆರೋಪಗಳಿಗೋ ಸಂಸ್ಥೆ 3000 ಕಾರ್ಮಿಕರನ್ನು ಬೀದಿಗೆ ತಳ್ಳಿದೆ. ನಮ್ಮ ನೆಲ, ಜಲ, ಗಾಳಿ, ಸೌಕರ್ಯ ಬಳಸಿಕೊಂಡು ನಡೆಯುತ್ತಿರುವ ಸಂಸ್ಥೆಗಳೂ ನಮ್ಮವರ ವಿಷಯದಲ್ಲಿ ಇಷ್ಟು ಕ್ರೂರವಾಗಿರುವುದು ಸರಿಯಲ್ಲ. ಸಂಸ್ಥೆ ಮುಖ್ಯಸ್ಥರು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯವಾಗಿ ವರ್ತಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಕಾರ್ಮಿಕರ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಸ್ವತಃ ನಾನೇ ಹಲವು ಸಭೆಗಳನ್ನು ನಡೆಸಿದ್ದೇನೆ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವೆ ಇರುವ ವ್ಯವಸ್ಥಾಪಕ ವರ್ಗ ಗೊಂದಲ ಸೃಷ್ಟಿ ಮಾಡುತ್ತಿರುವುದು ನನಗೆ ಮೇಲ್ನೋಟಕ್ಕೆ ಗೊತ್ತಾಗಿದೆ. ಈ ವ್ಯವಸ್ಥಾಪಕ ವರ್ಗ ಸಾಮಾನ್ಯವಾಗಿ ಈ ಪ್ರದೇಶ, ಪ್ರಾಂತ್ಯದವರಾಗಲಿ, ರಾಜ್ಯದವರಾಗಲಿ ಅಲ್ಲ ಎಂಬುದು ಗಮನಾರ್ಹ” ಎಂದುಅವರು ಹೇಳಿದ್ದಾರೆ.

“ಕೋಲಾರದ ‘ವಿಸ್ಟ್ರಾನ್‌’ ಘಟನೆಗೆ ಸಂಸ್ಥೆಯ ವ್ಯವಸ್ಥಾಪನೆಯಲ್ಲಿ ಆಗಿದ್ದ ಲೋಪವೇ ಕಾರಣ ಎಂದೂ, ಕಾರ್ಮಿಕರು, ನೌಕರರನ್ನು ಘನತೆಯಿಂದ ಕಾಣುವುದಾಗಿಯೂ ಆಪಲ್‌ ಸಂಸ್ಥೆ ಹೇಳಿದೆ. ವಿಸ್ಟ್ರಾನ್‌ ಕಂಪನಿಯೂ ತನ್ನ ಉಪಾಧ್ಯಕ್ಷನನ್ನು ಇದೇ ಉದ್ದೇಶಕ್ಕೆ ಕಿತ್ತು ಹಾಕಿದೆ. ಟೊಯೋಟಾ ಕೂಡ ತನ್ನ ಆಂತರಿಕ ವಿಚಾರಗಳ ಬಗ್ಗೆ ಒಮ್ಮೆ ಪಾರಾಮರ್ಶೆ ಮಾಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದರ್ಪ ಮುಂದುವರೆಸಿದ ಟೊಯೋಟಾ ಕಿರ್ಲೋಸ್ಕರ್; ಮತ್ತೇ 20 ಕಾರ್ಮಿಕರ ಅಮಾನತು

“ಸಮಸ್ಯೆಯನ್ನು ಸರ್ಕಾರವೂ ಆದ್ಯತೆ ಮೇಲೆ ಬಗೆಹರಿಸಲು ಮುಂದಾಗಬೇಕು. ಅದರಿಂದ ರಾಜ್ಯಕ್ಕೂ ಲಾಭವಿದೆ ಎಂಬುದನ್ನು ಸರ್ಕಾರ ಗಮನಿಸಬೇಕು. ಕಾರ್ಮಿಕರ ಪ್ರತಿಭಟನೆ, ದಾಂಧಲೆ, ಮುಷ್ಕರಗಳಂಥ ಘಟನೆಗಳು ಹೂಡಿಕೆದಾರರಲ್ಲಿ ಅಪನಂಬಿಕೆ ಹುಟ್ಟು ಹಾಕಲು ಕಾರಣವಾಗುತ್ತದೆ. ರಾಜ್ಯದಲ್ಲಿ ಸುಲಲಿತ ಉದ್ದಿಮೆ ನಡೆಸಲು ಅವಕಾಶಗಳಿಲ್ಲ ಎಂಬ ಭಾವನೆ ಮೂಡಿಸುತ್ತವೆ” ಎಂದಿದ್ದಾರೆ.

“ಈ ಎಲ್ಲ ಕಾರಣಗಳಿಂದಾಗಿ ಸರ್ಕಾರವೂ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ನಾನು ಒತ್ತಾಯಿಸುತ್ತೇನೆ. ಸಂಸ್ಥೆಯ ಪ್ರತಿಭಟನಾ ನಿರತ ಕಾರ್ಮಿಕರು, ಸಂಸ್ಥೆಯ ಮುಖ್ಯಸ್ಥರನ್ನು ನೇರಾನೇರವಾಗಿ ಸಂಧಾನಕ್ಕೆ ಕೂರಿಸಬೇಕು. ಈ ವಿಚಾರದಲ್ಲಿ ಸರ್ಕಾರ ಸಂಪರ್ಕ ಸೇತುವಾಗಿ ನಡೆದುಕೊಳ್ಳಬೇಕು. ರಾಜ್ಯದ ಔದ್ಯಮಿಕ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಕೂಡ” ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಲಾಕೌಟ್‌ ಹಿಂಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ: ಟೊಯೋಟಾ ಕಾರ್ಮಿಕರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...