Homeಕರ್ನಾಟಕ‘ಶಿಕ್ಷಣ, ಸಂಸ್ಕೃತಿ ಮೇಲಿನ ಅಸಂವಿಧಾನಿಕ ದಬ್ಬಾಳಿಕೆಗೆ ಸರ್ಕಾರ ಮೌನ’: ‘ರಾಷ್ಟ್ರಕವಿ ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷರು ಮತ್ತು...

‘ಶಿಕ್ಷಣ, ಸಂಸ್ಕೃತಿ ಮೇಲಿನ ಅಸಂವಿಧಾನಿಕ ದಬ್ಬಾಳಿಕೆಗೆ ಸರ್ಕಾರ ಮೌನ’: ‘ರಾಷ್ಟ್ರಕವಿ ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷರು ಮತ್ತು ಸದಸ್ಯರು ರಾಜೀನಾಮೆ

- Advertisement -
- Advertisement -

ಶಿಕ್ಷಣ, ಸಂಸ್ಕೃತಿ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳ ಮೇಲೆ ನಡೆಯುತ್ತಿರುವ ಅಸಂವಿಧಾನಿಕ ದಬ್ಬಾಳಿಕೆಗಳನ್ನು ಪ್ರತಿಭಟಿಸಿ ‘ರಾಷ್ಟ್ರಕವಿ ಡಾ. ಜಿಎಸ್‌ ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷರು ಮತ್ತು ಮೂವರು ಸದಸ್ಯರು ಸೋಮವಾರ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ‘ಕೋಮುದ್ವೇಷವನ್ನು ರಾಜಾರೋಷವಾಗಿ ಮಾತನಾಡುತ್ತಾ, ಆಟಾಟೋಪ ಮರೆಯುತ್ತಾ ಪ್ರಜಾಪ್ರಭುತ್ವದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೆ ಸರ್ಕಾರ ಮೌನ ವಹಿಸಿರುವುದು ಆತಂಕ ಭಯ ಉಂಟು ಮಾಡುತ್ತಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಪ್ರೊಫೆಸರ್‌ ಎಸ್‌.ಜಿ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಪ್ರತಿಷ್ಠಾನದ ಸದಸ್ಯರುಗಳಾದ ಡಾ. ಎಚ್‌.ಎಸ್‌. ರಾಘವೇಂದ್ರ ರಾವ್‌, ಡಾ. ಚಂದ್ರ ಶೇಖರ ನಂಗಲಿ, ಡಾ. ನಟರಾಜ ಬೂದಾಳು ಅವರು ಕೂಡಾ ರಾಜೀನಾಮೆಗೆ ನೀಡುವುದಾಗಿ ಪತ್ರದಲ್ಲಿ ಹೇಳಿದ್ದಾರೆ.

“ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಶಿಕ್ಷಣ, ಸಂಸ್ಕೃತಿ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳ ಮೇಲೆ ನಡೆಯುತ್ತಿರುವ ಅಸಂವಿಧಾನಿಕ ದಬ್ಬಾಳಿಕೆಗಳನ್ನು ಕಂಡು ಆತಂಕ ಭಯ ಉಂಟಾಗಿದೆ. ಕೋಮುದ್ವೇಷವನ್ನು ರಾಜಾರೋಷವಾಗಿ ಮಾತನಾಡುತ್ತಾ ಆಟಾಟೋಪ ಮರೆಯುತ್ತಾ ಪ್ರಜಾಪ್ರಭುತ್ವದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೆ ಸರ್ಕಾರ ಮೌನ ವಹಿಸಿರುವುದು ಇನ್ನೂ ಹೆಚ್ಚಿನ ಆತಂಕ ಭಯ ಉಂಟು ಮಾಡುತ್ತಿದೆ” ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ‘ಕುವೆಂಪು & ನಾಡಗೀತೆಗೆ ಮಾಡುವ ಅಪಮಾನ ನೋಡಿ ತೆಪ್ಪಗಿರಲು ನನಗೆ ಕಷ್ಟ’: ಪ್ರತಿಷ್ಠಾನಕ್ಕೆ ‘ಹಂಪನಾ’ ರಾಜೀನಾಮೆ

ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಬೇಸೆತ್ತು ‘ರಾಷ್ಟ್ರಕವಿ ಡಾ.ಜಿ.ಎಸ್‌. ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸದಸ್ಯ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಅವರು ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದು, ರಾಜೀನಾಮೆ ಒಪ್ಪಿಕೊಂಡು ಈ ಕೂಡಲೇ ಕಾರ್ಯ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕೆಂದು ವಿನಂತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....