Homeಕರ್ನಾಟಕವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತಿ ಒಡೆದು ಆಳುತ್ತಿರುವ ಸರ್ಕಾರ: SFI ಆಕ್ರೋಶ

ವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತಿ ಒಡೆದು ಆಳುತ್ತಿರುವ ಸರ್ಕಾರ: SFI ಆಕ್ರೋಶ

ಹಾವೇರಿಯಲ್ಲಿ ರಾಷ್ಟ್ರಧ್ವಜ ಹಿಡಿದು ಎಸ್ಎಫ್ಐ ನೇತೃತ್ವದಲ್ಲಿ ವಿಧ್ಯಾರ್ಥಿಗಳ ಪ್ರತಿಭಟನೆ

- Advertisement -
- Advertisement -

ರಾಜ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಒಳ್ಳೆಯ ವಾತಾವರಣ ನಿರ್ಮಾಣ ಮಾಡುವ ಶಿಕ್ಷಣ ಸಂಸ್ಥೆಗಳಂತಹ  ಜಾಗದಲ್ಲಿ ವಿವಾದಗಳನ್ನು ಸೃಷ್ಟಿಸಿ ಶೈಕ್ಷಣಿಕ ವಾತಾವರಣ ಹದಗೆಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕೋಮು ಪ್ರಚೋದನೆಗೆ ಒಳಗಾಗಿ, ತಮ್ಮತನವನ್ನು ಕಳೆದುಕೊಂಡು, ಶೈಕ್ಷಣಿಕ ವಾತಾವರಣ ಹದಗೆಡಲು ಬಿಡಬಾರದು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಹೇಳಿದೆ.

SFI ಹಾವೇರಿ ಜಿಲ್ಲಾ ಸಮಿತಿಯು ಸೋಮವಾರದಂದು ಹಾವೇರಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಿಡಿದು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿದೆ.

ಇದನ್ನೂ ಓದಿ: ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆ

ಈ ಸಂದರ್ಭದಲ್ಲಿ, “ನಮ್ಮಲ್ಲಿಲ್ಲ ಹಿಂದೂ ರಕ್ತ, ನಮ್ಮಲ್ಲಿಲ್ಲ ಮುಸ್ಲಿಂ ರಕ್ತ, ನಲ್ಲಿಲ್ಲ ಕ್ರೈಸ್ತ ರಕ್ತ, ನಮ್ಮಲಿರುವುದು ಒಂದೇ ರಕ್ತ, ಅದುವೇ ಮಾನವ ಕೆಂಪು ರಕ್ತ” ಎಂದು ಘೋಷಣೆ ಕೂಗಿರುವ ವಿದ್ಯಾರ್ಥಿಗಳು, ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡೋಣ. ಶಾಂತಿ, ಸೌಹಾರ್ದತೆ, ಸಂವಿಧಾನದ ಜಾತ್ಯಾತೀತತೆ, ವಿದ್ಯಾರ್ಥಿಗಳ ಐಕ್ಯತೆ ಚಿರಾಯುವಾಗಲಿ. ನಮ್ಮ ದೇಹ ಛಿದ್ರವಾದರೂ, ದೇಶ ಛಿಧ್ರವಾಗಲು ಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.

“ವಿದ್ಯಾರ್ಥಿಗಳು ಕೋಮ ಶಕ್ತಿಗಳ ಪ್ರಚೋದನೆಗೆ ಒಳಗಾಗದೆ, ನಮ್ಮ ದೇಶದ ಹೆಮ್ಮೆಯ ಸಂಕೇತ ತ್ರಿವರ್ಣ ಧ್ವಜವನ್ನು ಹಿಡಿದು ನಾವೆಲ್ಲರೂ ಐಕ್ಯತೆಯಿಂದ ಇರುವುದರ ಮೂಲಕ ಹಿಂದೂ-ಮುಸ್ಲಿಂಮರು ಒಂದೇ ಎಂಬ ಸಂದೇಶವನ್ನು ಸಾರಬೇಕು. ಈ ದೇಶ ಎಲ್ಲರೂ ಸೇರಿ ಕಟ್ಟಿದ್ದಾಗಿದೆ” ಎಂದು SFI ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

“ರಾಜ್ಯದಲ್ಲಿ ಹೆಣ್ಣು ಮಕ್ಕಳು ಹಿಜಾಬ್ ಧರಿಸಿಕೊಂಡು ಬರುತ್ತಿರುವುದು ಇದು ಮೊದಲೇನಲ್ಲ. ಈಗಾಗಲೇ ಸುಮಾರು ವರ್ಷಗಳಿಂದ ಅವರು ಹಿಜಾಬ್ ಹಾಕಿಕೊಂಡು ಬರುತ್ತಿದ್ದಾರೆ. ಕೋಮುವಾದಿ ಶಕ್ತಿಗಳು ತಮ್ಮ ಹಿಡನ್ ಅಜೆಂಡಾವನ್ನು ರಾಜಕೀಯಕ್ಕೆ ಬಳಕೆ ಮಾಡುತ್ತಿದೆ. ಶಿಕ್ಷಣ ಕಲಿಯುವ ಚಿಕ್ಕ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತುವ ಮೂಲಕ ರಾಜ್ಯವನ್ನು ಒಡೆದು ಆಳುವ ಕೆಲಸ ಸರಕಾರವೇ ಮಾಡುತ್ತಿರುವುದು ದುರಂತ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುಂದಾಪುರ: ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ, ಪಾಠವಿಲ್ಲ

“ರಾಜ್ಯದ ಬಹುತೇಕ ಸರಕಾರಿ ಶಾಲಾ-ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳಾದ ಶಿಕ್ಷಕರು-ಉಪನ್ಯಾಸಕರು ಇಲ್ಲ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳಿಲ್ಲ, ಶೌಚಾಲಯಗಳಿಲ್ಲ, ಕುಡಿಯಲು ಶುದ್ಧವಾದ ನೀರು ಇಲ್ಲ, ಗ್ರಂಥಾಲಯಗಳಿಲ್ಲ. ಇವು ಯಾವುದು ಕೂಡ ಇವರಿಗೆ ವಿಷಯವೇ ಅಲ್ಲ. ಮೂಲಭೂತ ಸೌಲಭ್ಯಗಳ ಕೊರತೆಯಿಂದ ಅಲ್ಪಸಂಖ್ಯಾತ, ದಲಿತ, ಹಿಂದುಳಿದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಸಮುದಾಯಕ್ಕೆ ಸಮರ್ಪಕವಾಗಿ ಗುಣಮಟ್ಟದ ಶಿಕ್ಷಣ ಸಿಗದಿದ್ದರೂ ಪರವಾಗಿಲ್ಲ. ಆದರೆ ಮುಸ್ಲಿಂ ಹೆಣ್ಣು ಮಕ್ಕಳು ಹಿಜಬ್ ಹಾಕಿಕೊಂಡರೆ ಅದು ಇವರಿಗೆ ದೊಡ್ಡ ವಿಷಯ ಅಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಇಂತಹ ಮನಸ್ಥಿತಿಯ ವ್ಯಕ್ತಿಗಳಿಂದ ಇಂದು ಶೈಕ್ಷಣಿಕ ವಾತಾವರಣ ಹದಗೆಡಲು ಕಾರಣವಾಗಿದೆ. ಅಂತಹ ಯಾವುದೇ ಶಕ್ತಿಗಳಿಗೆ ವಿದ್ಯಾರ್ಥಿಗಳು ಕಿವಿ ಕೊಡಬಾರದು ಹಾಗೂ ಯಾವುದೇ ರೀತಿಯಿಂದ ಪ್ರಚೋದನೆಗೆ ಒಳಗಾಗದೆ ಅವರನ್ನು ಹಿಮ್ಮೆಟ್ಟಿಸಬೇಕು. ಅದಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್‌ ಸಂಘಟನೆಯು ರಾಷ್ಟ್ರ ಧ್ವಜವನ್ನು ಹಿಡಿದು ಪ್ರತಿಭಟನೆ ಮಾಡುವುದರ ಮೂಲಕ ಕೋಮು ಶಕ್ತಿಗಳಿಗೆ ಎಚ್ಚರಿಕೆ ನೀಡಿದೆ” ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಐಕ್ಯತೆಯಿಂದ ಹೋರಾಡಬೇಕೆಂದು SFI ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದೆ.

ಇದನ್ನೂ ಓದಿ: ಪಿಯು ನಿರ್ದೇಶಕಿ ಸ್ನೇಹಲ್‌ ವರ್ಗಾವಣೆ; ಸಮವಸ್ತ್ರ ಸುತ್ತೋಲೆಯೇ ಕಾರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಾರಂಭ ಗುಲಾಮರು ಮಾಡಿದ್ದಾರೆ ,ಅಂತ್ಯ ಭಕ್ತರು ಮಾಡ್ತಾರೇ ಹಿಜಾಬ್ ವಿಚಾರದಲ್ಲಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...