Homeಕರ್ನಾಟಕವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತಿ ಒಡೆದು ಆಳುತ್ತಿರುವ ಸರ್ಕಾರ: SFI ಆಕ್ರೋಶ

ವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತಿ ಒಡೆದು ಆಳುತ್ತಿರುವ ಸರ್ಕಾರ: SFI ಆಕ್ರೋಶ

ಹಾವೇರಿಯಲ್ಲಿ ರಾಷ್ಟ್ರಧ್ವಜ ಹಿಡಿದು ಎಸ್ಎಫ್ಐ ನೇತೃತ್ವದಲ್ಲಿ ವಿಧ್ಯಾರ್ಥಿಗಳ ಪ್ರತಿಭಟನೆ

- Advertisement -
- Advertisement -

ರಾಜ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಒಳ್ಳೆಯ ವಾತಾವರಣ ನಿರ್ಮಾಣ ಮಾಡುವ ಶಿಕ್ಷಣ ಸಂಸ್ಥೆಗಳಂತಹ  ಜಾಗದಲ್ಲಿ ವಿವಾದಗಳನ್ನು ಸೃಷ್ಟಿಸಿ ಶೈಕ್ಷಣಿಕ ವಾತಾವರಣ ಹದಗೆಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕೋಮು ಪ್ರಚೋದನೆಗೆ ಒಳಗಾಗಿ, ತಮ್ಮತನವನ್ನು ಕಳೆದುಕೊಂಡು, ಶೈಕ್ಷಣಿಕ ವಾತಾವರಣ ಹದಗೆಡಲು ಬಿಡಬಾರದು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಹೇಳಿದೆ.

SFI ಹಾವೇರಿ ಜಿಲ್ಲಾ ಸಮಿತಿಯು ಸೋಮವಾರದಂದು ಹಾವೇರಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಿಡಿದು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿದೆ.

ಇದನ್ನೂ ಓದಿ: ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆ

ಈ ಸಂದರ್ಭದಲ್ಲಿ, “ನಮ್ಮಲ್ಲಿಲ್ಲ ಹಿಂದೂ ರಕ್ತ, ನಮ್ಮಲ್ಲಿಲ್ಲ ಮುಸ್ಲಿಂ ರಕ್ತ, ನಲ್ಲಿಲ್ಲ ಕ್ರೈಸ್ತ ರಕ್ತ, ನಮ್ಮಲಿರುವುದು ಒಂದೇ ರಕ್ತ, ಅದುವೇ ಮಾನವ ಕೆಂಪು ರಕ್ತ” ಎಂದು ಘೋಷಣೆ ಕೂಗಿರುವ ವಿದ್ಯಾರ್ಥಿಗಳು, ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡೋಣ. ಶಾಂತಿ, ಸೌಹಾರ್ದತೆ, ಸಂವಿಧಾನದ ಜಾತ್ಯಾತೀತತೆ, ವಿದ್ಯಾರ್ಥಿಗಳ ಐಕ್ಯತೆ ಚಿರಾಯುವಾಗಲಿ. ನಮ್ಮ ದೇಹ ಛಿದ್ರವಾದರೂ, ದೇಶ ಛಿಧ್ರವಾಗಲು ಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.

“ವಿದ್ಯಾರ್ಥಿಗಳು ಕೋಮ ಶಕ್ತಿಗಳ ಪ್ರಚೋದನೆಗೆ ಒಳಗಾಗದೆ, ನಮ್ಮ ದೇಶದ ಹೆಮ್ಮೆಯ ಸಂಕೇತ ತ್ರಿವರ್ಣ ಧ್ವಜವನ್ನು ಹಿಡಿದು ನಾವೆಲ್ಲರೂ ಐಕ್ಯತೆಯಿಂದ ಇರುವುದರ ಮೂಲಕ ಹಿಂದೂ-ಮುಸ್ಲಿಂಮರು ಒಂದೇ ಎಂಬ ಸಂದೇಶವನ್ನು ಸಾರಬೇಕು. ಈ ದೇಶ ಎಲ್ಲರೂ ಸೇರಿ ಕಟ್ಟಿದ್ದಾಗಿದೆ” ಎಂದು SFI ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

“ರಾಜ್ಯದಲ್ಲಿ ಹೆಣ್ಣು ಮಕ್ಕಳು ಹಿಜಾಬ್ ಧರಿಸಿಕೊಂಡು ಬರುತ್ತಿರುವುದು ಇದು ಮೊದಲೇನಲ್ಲ. ಈಗಾಗಲೇ ಸುಮಾರು ವರ್ಷಗಳಿಂದ ಅವರು ಹಿಜಾಬ್ ಹಾಕಿಕೊಂಡು ಬರುತ್ತಿದ್ದಾರೆ. ಕೋಮುವಾದಿ ಶಕ್ತಿಗಳು ತಮ್ಮ ಹಿಡನ್ ಅಜೆಂಡಾವನ್ನು ರಾಜಕೀಯಕ್ಕೆ ಬಳಕೆ ಮಾಡುತ್ತಿದೆ. ಶಿಕ್ಷಣ ಕಲಿಯುವ ಚಿಕ್ಕ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತುವ ಮೂಲಕ ರಾಜ್ಯವನ್ನು ಒಡೆದು ಆಳುವ ಕೆಲಸ ಸರಕಾರವೇ ಮಾಡುತ್ತಿರುವುದು ದುರಂತ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುಂದಾಪುರ: ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ, ಪಾಠವಿಲ್ಲ

“ರಾಜ್ಯದ ಬಹುತೇಕ ಸರಕಾರಿ ಶಾಲಾ-ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳಾದ ಶಿಕ್ಷಕರು-ಉಪನ್ಯಾಸಕರು ಇಲ್ಲ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳಿಲ್ಲ, ಶೌಚಾಲಯಗಳಿಲ್ಲ, ಕುಡಿಯಲು ಶುದ್ಧವಾದ ನೀರು ಇಲ್ಲ, ಗ್ರಂಥಾಲಯಗಳಿಲ್ಲ. ಇವು ಯಾವುದು ಕೂಡ ಇವರಿಗೆ ವಿಷಯವೇ ಅಲ್ಲ. ಮೂಲಭೂತ ಸೌಲಭ್ಯಗಳ ಕೊರತೆಯಿಂದ ಅಲ್ಪಸಂಖ್ಯಾತ, ದಲಿತ, ಹಿಂದುಳಿದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಸಮುದಾಯಕ್ಕೆ ಸಮರ್ಪಕವಾಗಿ ಗುಣಮಟ್ಟದ ಶಿಕ್ಷಣ ಸಿಗದಿದ್ದರೂ ಪರವಾಗಿಲ್ಲ. ಆದರೆ ಮುಸ್ಲಿಂ ಹೆಣ್ಣು ಮಕ್ಕಳು ಹಿಜಬ್ ಹಾಕಿಕೊಂಡರೆ ಅದು ಇವರಿಗೆ ದೊಡ್ಡ ವಿಷಯ ಅಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಇಂತಹ ಮನಸ್ಥಿತಿಯ ವ್ಯಕ್ತಿಗಳಿಂದ ಇಂದು ಶೈಕ್ಷಣಿಕ ವಾತಾವರಣ ಹದಗೆಡಲು ಕಾರಣವಾಗಿದೆ. ಅಂತಹ ಯಾವುದೇ ಶಕ್ತಿಗಳಿಗೆ ವಿದ್ಯಾರ್ಥಿಗಳು ಕಿವಿ ಕೊಡಬಾರದು ಹಾಗೂ ಯಾವುದೇ ರೀತಿಯಿಂದ ಪ್ರಚೋದನೆಗೆ ಒಳಗಾಗದೆ ಅವರನ್ನು ಹಿಮ್ಮೆಟ್ಟಿಸಬೇಕು. ಅದಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್‌ ಸಂಘಟನೆಯು ರಾಷ್ಟ್ರ ಧ್ವಜವನ್ನು ಹಿಡಿದು ಪ್ರತಿಭಟನೆ ಮಾಡುವುದರ ಮೂಲಕ ಕೋಮು ಶಕ್ತಿಗಳಿಗೆ ಎಚ್ಚರಿಕೆ ನೀಡಿದೆ” ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಐಕ್ಯತೆಯಿಂದ ಹೋರಾಡಬೇಕೆಂದು SFI ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದೆ.

ಇದನ್ನೂ ಓದಿ: ಪಿಯು ನಿರ್ದೇಶಕಿ ಸ್ನೇಹಲ್‌ ವರ್ಗಾವಣೆ; ಸಮವಸ್ತ್ರ ಸುತ್ತೋಲೆಯೇ ಕಾರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಾರಂಭ ಗುಲಾಮರು ಮಾಡಿದ್ದಾರೆ ,ಅಂತ್ಯ ಭಕ್ತರು ಮಾಡ್ತಾರೇ ಹಿಜಾಬ್ ವಿಚಾರದಲ್ಲಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...