Homeಕರ್ನಾಟಕಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

- Advertisement -
- Advertisement -

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ.

ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ ಮಂಗಳವಾರ (ಡಿಸೆಂಬರ್ 9) ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಅತ್ಯಂತ ಮಹತ್ವದ ಈ ಪ್ರಕರಣವನ್ನು ವಿಸ್ತೃತವಾಗಿ ವಿಚಾರಣೆ ನಡೆಸಬೇಕಿದೆ ಎಂದು ಅಭಿಪ್ರಾಯಪಟ್ಟಿರುವ ಕೋರ್ಟ್, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿದೆ.

ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ, ಅವಿರತ ಡಿಫೆನ್ಸ್ ಸಿಸ್ಟಮ್, ಫೆಸಿಲ್ ಏರೋಸ್ಪೇಸ್ ಟೆಕ್ನಾಲಜೀಸ್ ಲಿಮಿಟೆಡ್, ಸ್ಯಾಮೋಸ್ ಟೆಕ್ನಾಲಜೀಸ್ ಲಿಮಿಟೆಡ್‌ಗಳ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ (ಡಿಸೆಂಬರ್ 9) ವಿಚಾರಣೆ ನಡೆಸಿತು.

ಬೆಂಗಳೂರು ಹೋಟೆಲ್‌ಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಮಂಗಳವಾರ ಬೆಳಿಗ್ಗೆ ಸರ್ಕಾರದ ಅಧಿಸೂಚನೆಗೆ ಮಧ್ಯಂತರ ತಡೆ ನೀಡಿತ್ತು.

ಇದಾಗಿ ಕೆಲವು ಗಂಟೆಗಳ ನಂತರ, ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ನ್ಯಾಯಾಲಯಕ್ಕೆ ಹಾಜರಾಗಿ ತನ್ನ ಮಧ್ಯಂತರ ತಡೆಯಾಜ್ಞೆಯನ್ನು ಮರುಪರಿಶೀಲಿಸುವಂತೆ ಕೋರಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯ ತನ್ನ ತಡೆಯಾಜ್ಞೆಯನ್ನು ಹಿಂತೆಗೆದುಕೊಂಡಿತ್ತು. ನಂತರ ನ್ಯಾಯಾಲಯವು ವಿಷಯವನ್ನು ಇಂದು ಮತ್ತಷ್ಟು ಆಲಿಸಲು ಒಪ್ಪಿಕೊಂಡಿತ್ತು.

ಇಂದು ವಿಚಾರಣೆ ವೇಳೆ ಎಜಿ, ಸರ್ಕಾರದ ಹೊಸ ನೀತಿಯು ಸಂಪೂರ್ಣ ಪ್ರಗತಿಪರವಾಗಿದೆ. ಸೂಕ್ತ ಪರಿಗಣನೆಯ ನಂತರ ಅದನ್ನು ಪರಿಚಯಿಸಲಾಗಿದೆ. ಕೆಲಸದ ಸ್ಥಳದಲ್ಲಿ ಮಾನವೀಯ ಪರಿಸ್ಥಿತಿಗಳನ್ನು ಖಚಿತಪಡಿಸಿಕೊಳ್ಳಲು ಅಂತಹ ನೀತಿಗೆ ಸಾಂವಿಧಾನಿಕ ಆಧಾರವಿದೆ ಎಂದು ವಾದಿಸಿದರು.

ಮಹಿಳೆಯರ ಹಿತದೃಷ್ಟಿಯಿಂದ ದೇಶದ ಬೇರಾವುದೇ ರಾಜ್ಯದಲ್ಲಿ ಜಾರಿಗೊಳಿಸದ ಪ್ರಗತಿಪರ ಕಾನೂನನ್ನು ಸರ್ಕಾರ ಜಾರಿಗೊಳಿಸಿದೆ. 72 ಆಕ್ಷೇಪಗಳು ಬಂದಿದ್ದು, ಎಲ್ಲವನ್ನೂ ಆಲಿಸಲಾಗಿದೆ. ಸಂವಿಧಾನದ 42ನೇ ಪರಿಚ್ಛೇದದ ಅಡಿ ನೀತಿ ರೂಪಿಸಲು ಸರ್ಕಾರಕ್ಕೆ ಅವಕಾಶವಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನಿರ್ದೇಶನವೂ ಇದೆ. ಕಾನೂನು ಆಯೋಗವೂ ಈ ಕುರಿತು ಶಿಫಾರಸು ಮಾಡಿದೆ. ಇದೆಲ್ಲವನ್ನೂ ಆಕ್ಷೇಪದಲ್ಲಿ ವಿವರಿಸಲಾಗಿದೆ ಎಂದು ಸರ್ಕಾರದ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು.

ಸರ್ಕಾರದ ಅಧಿಸೂಚನೆ ಎಲ್ಲಾ ಕ್ಷೇತ್ರಗಳಿಗೂ ಅನ್ವಯಿಸಲಿದೆಯೇ? ಎಂಬ ನ್ಯಾಯಪೀಠದ ಪ್ರಶ್ನೆಗೆ ಅಡ್ವೊಕೇಟ್ ಜನರಲ್ ಹೌದು ಎಂದು ಉತ್ತರಿಸಿದರು. ಇದನ್ನು ಆಲಿಸಿದ ನ್ಯಾಯಪೀಠ, ಪ್ರಕರಣವನ್ನು ವಿಸ್ತೃತವಾಗಿ ವಿಚಾರಣೆ ನಡೆಸಬೇಕಿದ್ದು, ಜನವರಿಯಲ್ಲಿ ನಡೆಸಲಾಗುವುದು. ಅಷ್ಟರಲ್ಲಿ ಸರ್ಕಾರ ಸಲ್ಲಿಸಿರುವ ಆಕ್ಷೇಪಗಳಿಗೆ ಪ್ರತಿಕ್ರಿಯೆಗಳಿದ್ದರೆ ಅರ್ಜಿದಾರರು ಸಲ್ಲಿಸಬಹುದು ಎಂದು ಹೇಳಿತು.

ಅರ್ಜಿದಾರರ ಪರ ವಕೀಲ ಬಿ.ಕೆ ಪ್ರಶಾಂತ್ ವಾದ ಮಂಡಿಸಿ, ಅಲ್ಲಿಯವರೆಗೆ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೋಕೇಟ್ ಜನರಲ್, ಈ ಆದೇಶವನ್ನು ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲಿಯೂ ಜಾರಿಗೊಳಿಸಿಯಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಅರ್ಜಿಯ ಮುಂದಿನ ವಿಚಾರಣೆಯೊಳಗೆ ಏನೂ ಆಗುವುದಿಲ್ಲ. ಇದು ಸಾರ್ವಜನಿಕ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ ಪ್ರಕರಣವಾಗಿದೆ. ಈ ಸಂಬಂಧ ವಿಸ್ತೃತವಾಗಿ ವಾದ ಆಲಿಸಿದ ಬಳಿಕವೇ ಆದೇಶ ಹೊರಡಿಸಲಾಗುವುದು, ವಿಚಾರಣೆಗೆ ದಿನ ನಿಗದಿಪಡಿಸಲಾಗುವುದು ಎಂದರು.

ಅಂತಿಮವಾಗಿ ನ್ಯಾಯಪೀಠ, ಸರ್ಕಾರದ ಆಕ್ಷೇಪಕ್ಕೆ ಪ್ರತ್ಯುತ್ತರ ದಾಖಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿತು. ಜೊತೆಗೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವವರು ರಿಜಿಸ್ಟ್ರಾರ್ ಕಚೇರಿಯಲ್ಲಿ ಸಲ್ಲಿಸಿ, ಅರ್ಜಿಯ ಪ್ರತಿಯನ್ನು ಸರ್ಕಾರದ ಪರ ವಕೀಲರಿಗೆ ಒದಗಿಸಬೇಕು ಎಂದು ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...

‘ಶಾಶ್ವತ ವಿಪತ್ತು ನಿಧಿಯನ್ನು ಏಕೆ ರಚಿಸಿಲ್ಲ’: ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ರೈತರಿಗೆ 'ದ್ರೋಹ' ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ ಮಂಗಳವಾರ ಆರೋಪಿಸಿದ್ದಾರೆ. ಉತ್ತರ ಕರ್ನಾಟಕವನ್ನು ಕಾಡುತ್ತಿರುವ...