Homeಕರ್ನಾಟಕಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

- Advertisement -
- Advertisement -

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ.

ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ ಮಂಗಳವಾರ (ಡಿಸೆಂಬರ್ 9) ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಅತ್ಯಂತ ಮಹತ್ವದ ಈ ಪ್ರಕರಣವನ್ನು ವಿಸ್ತೃತವಾಗಿ ವಿಚಾರಣೆ ನಡೆಸಬೇಕಿದೆ ಎಂದು ಅಭಿಪ್ರಾಯಪಟ್ಟಿರುವ ಕೋರ್ಟ್, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿದೆ.

ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ, ಅವಿರತ ಡಿಫೆನ್ಸ್ ಸಿಸ್ಟಮ್, ಫೆಸಿಲ್ ಏರೋಸ್ಪೇಸ್ ಟೆಕ್ನಾಲಜೀಸ್ ಲಿಮಿಟೆಡ್, ಸ್ಯಾಮೋಸ್ ಟೆಕ್ನಾಲಜೀಸ್ ಲಿಮಿಟೆಡ್‌ಗಳ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ (ಡಿಸೆಂಬರ್ 9) ವಿಚಾರಣೆ ನಡೆಸಿತು.

ಬೆಂಗಳೂರು ಹೋಟೆಲ್‌ಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಮಂಗಳವಾರ ಬೆಳಿಗ್ಗೆ ಸರ್ಕಾರದ ಅಧಿಸೂಚನೆಗೆ ಮಧ್ಯಂತರ ತಡೆ ನೀಡಿತ್ತು.

ಇದಾಗಿ ಕೆಲವು ಗಂಟೆಗಳ ನಂತರ, ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ನ್ಯಾಯಾಲಯಕ್ಕೆ ಹಾಜರಾಗಿ ತನ್ನ ಮಧ್ಯಂತರ ತಡೆಯಾಜ್ಞೆಯನ್ನು ಮರುಪರಿಶೀಲಿಸುವಂತೆ ಕೋರಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯ ತನ್ನ ತಡೆಯಾಜ್ಞೆಯನ್ನು ಹಿಂತೆಗೆದುಕೊಂಡಿತ್ತು. ನಂತರ ನ್ಯಾಯಾಲಯವು ವಿಷಯವನ್ನು ಇಂದು ಮತ್ತಷ್ಟು ಆಲಿಸಲು ಒಪ್ಪಿಕೊಂಡಿತ್ತು.

ಇಂದು ವಿಚಾರಣೆ ವೇಳೆ ಎಜಿ, ಸರ್ಕಾರದ ಹೊಸ ನೀತಿಯು ಸಂಪೂರ್ಣ ಪ್ರಗತಿಪರವಾಗಿದೆ. ಸೂಕ್ತ ಪರಿಗಣನೆಯ ನಂತರ ಅದನ್ನು ಪರಿಚಯಿಸಲಾಗಿದೆ. ಕೆಲಸದ ಸ್ಥಳದಲ್ಲಿ ಮಾನವೀಯ ಪರಿಸ್ಥಿತಿಗಳನ್ನು ಖಚಿತಪಡಿಸಿಕೊಳ್ಳಲು ಅಂತಹ ನೀತಿಗೆ ಸಾಂವಿಧಾನಿಕ ಆಧಾರವಿದೆ ಎಂದು ವಾದಿಸಿದರು.

ಮಹಿಳೆಯರ ಹಿತದೃಷ್ಟಿಯಿಂದ ದೇಶದ ಬೇರಾವುದೇ ರಾಜ್ಯದಲ್ಲಿ ಜಾರಿಗೊಳಿಸದ ಪ್ರಗತಿಪರ ಕಾನೂನನ್ನು ಸರ್ಕಾರ ಜಾರಿಗೊಳಿಸಿದೆ. 72 ಆಕ್ಷೇಪಗಳು ಬಂದಿದ್ದು, ಎಲ್ಲವನ್ನೂ ಆಲಿಸಲಾಗಿದೆ. ಸಂವಿಧಾನದ 42ನೇ ಪರಿಚ್ಛೇದದ ಅಡಿ ನೀತಿ ರೂಪಿಸಲು ಸರ್ಕಾರಕ್ಕೆ ಅವಕಾಶವಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನಿರ್ದೇಶನವೂ ಇದೆ. ಕಾನೂನು ಆಯೋಗವೂ ಈ ಕುರಿತು ಶಿಫಾರಸು ಮಾಡಿದೆ. ಇದೆಲ್ಲವನ್ನೂ ಆಕ್ಷೇಪದಲ್ಲಿ ವಿವರಿಸಲಾಗಿದೆ ಎಂದು ಸರ್ಕಾರದ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು.

ಸರ್ಕಾರದ ಅಧಿಸೂಚನೆ ಎಲ್ಲಾ ಕ್ಷೇತ್ರಗಳಿಗೂ ಅನ್ವಯಿಸಲಿದೆಯೇ? ಎಂಬ ನ್ಯಾಯಪೀಠದ ಪ್ರಶ್ನೆಗೆ ಅಡ್ವೊಕೇಟ್ ಜನರಲ್ ಹೌದು ಎಂದು ಉತ್ತರಿಸಿದರು. ಇದನ್ನು ಆಲಿಸಿದ ನ್ಯಾಯಪೀಠ, ಪ್ರಕರಣವನ್ನು ವಿಸ್ತೃತವಾಗಿ ವಿಚಾರಣೆ ನಡೆಸಬೇಕಿದ್ದು, ಜನವರಿಯಲ್ಲಿ ನಡೆಸಲಾಗುವುದು. ಅಷ್ಟರಲ್ಲಿ ಸರ್ಕಾರ ಸಲ್ಲಿಸಿರುವ ಆಕ್ಷೇಪಗಳಿಗೆ ಪ್ರತಿಕ್ರಿಯೆಗಳಿದ್ದರೆ ಅರ್ಜಿದಾರರು ಸಲ್ಲಿಸಬಹುದು ಎಂದು ಹೇಳಿತು.

ಅರ್ಜಿದಾರರ ಪರ ವಕೀಲ ಬಿ.ಕೆ ಪ್ರಶಾಂತ್ ವಾದ ಮಂಡಿಸಿ, ಅಲ್ಲಿಯವರೆಗೆ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೋಕೇಟ್ ಜನರಲ್, ಈ ಆದೇಶವನ್ನು ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲಿಯೂ ಜಾರಿಗೊಳಿಸಿಯಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಅರ್ಜಿಯ ಮುಂದಿನ ವಿಚಾರಣೆಯೊಳಗೆ ಏನೂ ಆಗುವುದಿಲ್ಲ. ಇದು ಸಾರ್ವಜನಿಕ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ ಪ್ರಕರಣವಾಗಿದೆ. ಈ ಸಂಬಂಧ ವಿಸ್ತೃತವಾಗಿ ವಾದ ಆಲಿಸಿದ ಬಳಿಕವೇ ಆದೇಶ ಹೊರಡಿಸಲಾಗುವುದು, ವಿಚಾರಣೆಗೆ ದಿನ ನಿಗದಿಪಡಿಸಲಾಗುವುದು ಎಂದರು.

ಅಂತಿಮವಾಗಿ ನ್ಯಾಯಪೀಠ, ಸರ್ಕಾರದ ಆಕ್ಷೇಪಕ್ಕೆ ಪ್ರತ್ಯುತ್ತರ ದಾಖಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿತು. ಜೊತೆಗೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವವರು ರಿಜಿಸ್ಟ್ರಾರ್ ಕಚೇರಿಯಲ್ಲಿ ಸಲ್ಲಿಸಿ, ಅರ್ಜಿಯ ಪ್ರತಿಯನ್ನು ಸರ್ಕಾರದ ಪರ ವಕೀಲರಿಗೆ ಒದಗಿಸಬೇಕು ಎಂದು ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...