Homeಕರ್ನಾಟಕಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

- Advertisement -
- Advertisement -

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ.

ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ ಮಂಗಳವಾರ (ಡಿಸೆಂಬರ್ 9) ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಅತ್ಯಂತ ಮಹತ್ವದ ಈ ಪ್ರಕರಣವನ್ನು ವಿಸ್ತೃತವಾಗಿ ವಿಚಾರಣೆ ನಡೆಸಬೇಕಿದೆ ಎಂದು ಅಭಿಪ್ರಾಯಪಟ್ಟಿರುವ ಕೋರ್ಟ್, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿದೆ.

ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ, ಅವಿರತ ಡಿಫೆನ್ಸ್ ಸಿಸ್ಟಮ್, ಫೆಸಿಲ್ ಏರೋಸ್ಪೇಸ್ ಟೆಕ್ನಾಲಜೀಸ್ ಲಿಮಿಟೆಡ್, ಸ್ಯಾಮೋಸ್ ಟೆಕ್ನಾಲಜೀಸ್ ಲಿಮಿಟೆಡ್‌ಗಳ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ (ಡಿಸೆಂಬರ್ 9) ವಿಚಾರಣೆ ನಡೆಸಿತು.

ಬೆಂಗಳೂರು ಹೋಟೆಲ್‌ಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಮಂಗಳವಾರ ಬೆಳಿಗ್ಗೆ ಸರ್ಕಾರದ ಅಧಿಸೂಚನೆಗೆ ಮಧ್ಯಂತರ ತಡೆ ನೀಡಿತ್ತು.

ಇದಾಗಿ ಕೆಲವು ಗಂಟೆಗಳ ನಂತರ, ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ನ್ಯಾಯಾಲಯಕ್ಕೆ ಹಾಜರಾಗಿ ತನ್ನ ಮಧ್ಯಂತರ ತಡೆಯಾಜ್ಞೆಯನ್ನು ಮರುಪರಿಶೀಲಿಸುವಂತೆ ಕೋರಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯ ತನ್ನ ತಡೆಯಾಜ್ಞೆಯನ್ನು ಹಿಂತೆಗೆದುಕೊಂಡಿತ್ತು. ನಂತರ ನ್ಯಾಯಾಲಯವು ವಿಷಯವನ್ನು ಇಂದು ಮತ್ತಷ್ಟು ಆಲಿಸಲು ಒಪ್ಪಿಕೊಂಡಿತ್ತು.

ಇಂದು ವಿಚಾರಣೆ ವೇಳೆ ಎಜಿ, ಸರ್ಕಾರದ ಹೊಸ ನೀತಿಯು ಸಂಪೂರ್ಣ ಪ್ರಗತಿಪರವಾಗಿದೆ. ಸೂಕ್ತ ಪರಿಗಣನೆಯ ನಂತರ ಅದನ್ನು ಪರಿಚಯಿಸಲಾಗಿದೆ. ಕೆಲಸದ ಸ್ಥಳದಲ್ಲಿ ಮಾನವೀಯ ಪರಿಸ್ಥಿತಿಗಳನ್ನು ಖಚಿತಪಡಿಸಿಕೊಳ್ಳಲು ಅಂತಹ ನೀತಿಗೆ ಸಾಂವಿಧಾನಿಕ ಆಧಾರವಿದೆ ಎಂದು ವಾದಿಸಿದರು.

ಮಹಿಳೆಯರ ಹಿತದೃಷ್ಟಿಯಿಂದ ದೇಶದ ಬೇರಾವುದೇ ರಾಜ್ಯದಲ್ಲಿ ಜಾರಿಗೊಳಿಸದ ಪ್ರಗತಿಪರ ಕಾನೂನನ್ನು ಸರ್ಕಾರ ಜಾರಿಗೊಳಿಸಿದೆ. 72 ಆಕ್ಷೇಪಗಳು ಬಂದಿದ್ದು, ಎಲ್ಲವನ್ನೂ ಆಲಿಸಲಾಗಿದೆ. ಸಂವಿಧಾನದ 42ನೇ ಪರಿಚ್ಛೇದದ ಅಡಿ ನೀತಿ ರೂಪಿಸಲು ಸರ್ಕಾರಕ್ಕೆ ಅವಕಾಶವಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನಿರ್ದೇಶನವೂ ಇದೆ. ಕಾನೂನು ಆಯೋಗವೂ ಈ ಕುರಿತು ಶಿಫಾರಸು ಮಾಡಿದೆ. ಇದೆಲ್ಲವನ್ನೂ ಆಕ್ಷೇಪದಲ್ಲಿ ವಿವರಿಸಲಾಗಿದೆ ಎಂದು ಸರ್ಕಾರದ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು.

ಸರ್ಕಾರದ ಅಧಿಸೂಚನೆ ಎಲ್ಲಾ ಕ್ಷೇತ್ರಗಳಿಗೂ ಅನ್ವಯಿಸಲಿದೆಯೇ? ಎಂಬ ನ್ಯಾಯಪೀಠದ ಪ್ರಶ್ನೆಗೆ ಅಡ್ವೊಕೇಟ್ ಜನರಲ್ ಹೌದು ಎಂದು ಉತ್ತರಿಸಿದರು. ಇದನ್ನು ಆಲಿಸಿದ ನ್ಯಾಯಪೀಠ, ಪ್ರಕರಣವನ್ನು ವಿಸ್ತೃತವಾಗಿ ವಿಚಾರಣೆ ನಡೆಸಬೇಕಿದ್ದು, ಜನವರಿಯಲ್ಲಿ ನಡೆಸಲಾಗುವುದು. ಅಷ್ಟರಲ್ಲಿ ಸರ್ಕಾರ ಸಲ್ಲಿಸಿರುವ ಆಕ್ಷೇಪಗಳಿಗೆ ಪ್ರತಿಕ್ರಿಯೆಗಳಿದ್ದರೆ ಅರ್ಜಿದಾರರು ಸಲ್ಲಿಸಬಹುದು ಎಂದು ಹೇಳಿತು.

ಅರ್ಜಿದಾರರ ಪರ ವಕೀಲ ಬಿ.ಕೆ ಪ್ರಶಾಂತ್ ವಾದ ಮಂಡಿಸಿ, ಅಲ್ಲಿಯವರೆಗೆ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೋಕೇಟ್ ಜನರಲ್, ಈ ಆದೇಶವನ್ನು ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲಿಯೂ ಜಾರಿಗೊಳಿಸಿಯಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಅರ್ಜಿಯ ಮುಂದಿನ ವಿಚಾರಣೆಯೊಳಗೆ ಏನೂ ಆಗುವುದಿಲ್ಲ. ಇದು ಸಾರ್ವಜನಿಕ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ ಪ್ರಕರಣವಾಗಿದೆ. ಈ ಸಂಬಂಧ ವಿಸ್ತೃತವಾಗಿ ವಾದ ಆಲಿಸಿದ ಬಳಿಕವೇ ಆದೇಶ ಹೊರಡಿಸಲಾಗುವುದು, ವಿಚಾರಣೆಗೆ ದಿನ ನಿಗದಿಪಡಿಸಲಾಗುವುದು ಎಂದರು.

ಅಂತಿಮವಾಗಿ ನ್ಯಾಯಪೀಠ, ಸರ್ಕಾರದ ಆಕ್ಷೇಪಕ್ಕೆ ಪ್ರತ್ಯುತ್ತರ ದಾಖಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿತು. ಜೊತೆಗೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವವರು ರಿಜಿಸ್ಟ್ರಾರ್ ಕಚೇರಿಯಲ್ಲಿ ಸಲ್ಲಿಸಿ, ಅರ್ಜಿಯ ಪ್ರತಿಯನ್ನು ಸರ್ಕಾರದ ಪರ ವಕೀಲರಿಗೆ ಒದಗಿಸಬೇಕು ಎಂದು ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....