Homeಕರ್ನಾಟಕಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

- Advertisement -
- Advertisement -

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ.

ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ ಮಂಗಳವಾರ (ಡಿಸೆಂಬರ್ 9) ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಅತ್ಯಂತ ಮಹತ್ವದ ಈ ಪ್ರಕರಣವನ್ನು ವಿಸ್ತೃತವಾಗಿ ವಿಚಾರಣೆ ನಡೆಸಬೇಕಿದೆ ಎಂದು ಅಭಿಪ್ರಾಯಪಟ್ಟಿರುವ ಕೋರ್ಟ್, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿದೆ.

ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ, ಅವಿರತ ಡಿಫೆನ್ಸ್ ಸಿಸ್ಟಮ್, ಫೆಸಿಲ್ ಏರೋಸ್ಪೇಸ್ ಟೆಕ್ನಾಲಜೀಸ್ ಲಿಮಿಟೆಡ್, ಸ್ಯಾಮೋಸ್ ಟೆಕ್ನಾಲಜೀಸ್ ಲಿಮಿಟೆಡ್‌ಗಳ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ (ಡಿಸೆಂಬರ್ 9) ವಿಚಾರಣೆ ನಡೆಸಿತು.

ಬೆಂಗಳೂರು ಹೋಟೆಲ್‌ಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಮಂಗಳವಾರ ಬೆಳಿಗ್ಗೆ ಸರ್ಕಾರದ ಅಧಿಸೂಚನೆಗೆ ಮಧ್ಯಂತರ ತಡೆ ನೀಡಿತ್ತು.

ಇದಾಗಿ ಕೆಲವು ಗಂಟೆಗಳ ನಂತರ, ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ನ್ಯಾಯಾಲಯಕ್ಕೆ ಹಾಜರಾಗಿ ತನ್ನ ಮಧ್ಯಂತರ ತಡೆಯಾಜ್ಞೆಯನ್ನು ಮರುಪರಿಶೀಲಿಸುವಂತೆ ಕೋರಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯ ತನ್ನ ತಡೆಯಾಜ್ಞೆಯನ್ನು ಹಿಂತೆಗೆದುಕೊಂಡಿತ್ತು. ನಂತರ ನ್ಯಾಯಾಲಯವು ವಿಷಯವನ್ನು ಇಂದು ಮತ್ತಷ್ಟು ಆಲಿಸಲು ಒಪ್ಪಿಕೊಂಡಿತ್ತು.

ಇಂದು ವಿಚಾರಣೆ ವೇಳೆ ಎಜಿ, ಸರ್ಕಾರದ ಹೊಸ ನೀತಿಯು ಸಂಪೂರ್ಣ ಪ್ರಗತಿಪರವಾಗಿದೆ. ಸೂಕ್ತ ಪರಿಗಣನೆಯ ನಂತರ ಅದನ್ನು ಪರಿಚಯಿಸಲಾಗಿದೆ. ಕೆಲಸದ ಸ್ಥಳದಲ್ಲಿ ಮಾನವೀಯ ಪರಿಸ್ಥಿತಿಗಳನ್ನು ಖಚಿತಪಡಿಸಿಕೊಳ್ಳಲು ಅಂತಹ ನೀತಿಗೆ ಸಾಂವಿಧಾನಿಕ ಆಧಾರವಿದೆ ಎಂದು ವಾದಿಸಿದರು.

ಮಹಿಳೆಯರ ಹಿತದೃಷ್ಟಿಯಿಂದ ದೇಶದ ಬೇರಾವುದೇ ರಾಜ್ಯದಲ್ಲಿ ಜಾರಿಗೊಳಿಸದ ಪ್ರಗತಿಪರ ಕಾನೂನನ್ನು ಸರ್ಕಾರ ಜಾರಿಗೊಳಿಸಿದೆ. 72 ಆಕ್ಷೇಪಗಳು ಬಂದಿದ್ದು, ಎಲ್ಲವನ್ನೂ ಆಲಿಸಲಾಗಿದೆ. ಸಂವಿಧಾನದ 42ನೇ ಪರಿಚ್ಛೇದದ ಅಡಿ ನೀತಿ ರೂಪಿಸಲು ಸರ್ಕಾರಕ್ಕೆ ಅವಕಾಶವಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನಿರ್ದೇಶನವೂ ಇದೆ. ಕಾನೂನು ಆಯೋಗವೂ ಈ ಕುರಿತು ಶಿಫಾರಸು ಮಾಡಿದೆ. ಇದೆಲ್ಲವನ್ನೂ ಆಕ್ಷೇಪದಲ್ಲಿ ವಿವರಿಸಲಾಗಿದೆ ಎಂದು ಸರ್ಕಾರದ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು.

ಸರ್ಕಾರದ ಅಧಿಸೂಚನೆ ಎಲ್ಲಾ ಕ್ಷೇತ್ರಗಳಿಗೂ ಅನ್ವಯಿಸಲಿದೆಯೇ? ಎಂಬ ನ್ಯಾಯಪೀಠದ ಪ್ರಶ್ನೆಗೆ ಅಡ್ವೊಕೇಟ್ ಜನರಲ್ ಹೌದು ಎಂದು ಉತ್ತರಿಸಿದರು. ಇದನ್ನು ಆಲಿಸಿದ ನ್ಯಾಯಪೀಠ, ಪ್ರಕರಣವನ್ನು ವಿಸ್ತೃತವಾಗಿ ವಿಚಾರಣೆ ನಡೆಸಬೇಕಿದ್ದು, ಜನವರಿಯಲ್ಲಿ ನಡೆಸಲಾಗುವುದು. ಅಷ್ಟರಲ್ಲಿ ಸರ್ಕಾರ ಸಲ್ಲಿಸಿರುವ ಆಕ್ಷೇಪಗಳಿಗೆ ಪ್ರತಿಕ್ರಿಯೆಗಳಿದ್ದರೆ ಅರ್ಜಿದಾರರು ಸಲ್ಲಿಸಬಹುದು ಎಂದು ಹೇಳಿತು.

ಅರ್ಜಿದಾರರ ಪರ ವಕೀಲ ಬಿ.ಕೆ ಪ್ರಶಾಂತ್ ವಾದ ಮಂಡಿಸಿ, ಅಲ್ಲಿಯವರೆಗೆ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೋಕೇಟ್ ಜನರಲ್, ಈ ಆದೇಶವನ್ನು ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲಿಯೂ ಜಾರಿಗೊಳಿಸಿಯಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಅರ್ಜಿಯ ಮುಂದಿನ ವಿಚಾರಣೆಯೊಳಗೆ ಏನೂ ಆಗುವುದಿಲ್ಲ. ಇದು ಸಾರ್ವಜನಿಕ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ ಪ್ರಕರಣವಾಗಿದೆ. ಈ ಸಂಬಂಧ ವಿಸ್ತೃತವಾಗಿ ವಾದ ಆಲಿಸಿದ ಬಳಿಕವೇ ಆದೇಶ ಹೊರಡಿಸಲಾಗುವುದು, ವಿಚಾರಣೆಗೆ ದಿನ ನಿಗದಿಪಡಿಸಲಾಗುವುದು ಎಂದರು.

ಅಂತಿಮವಾಗಿ ನ್ಯಾಯಪೀಠ, ಸರ್ಕಾರದ ಆಕ್ಷೇಪಕ್ಕೆ ಪ್ರತ್ಯುತ್ತರ ದಾಖಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿತು. ಜೊತೆಗೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವವರು ರಿಜಿಸ್ಟ್ರಾರ್ ಕಚೇರಿಯಲ್ಲಿ ಸಲ್ಲಿಸಿ, ಅರ್ಜಿಯ ಪ್ರತಿಯನ್ನು ಸರ್ಕಾರದ ಪರ ವಕೀಲರಿಗೆ ಒದಗಿಸಬೇಕು ಎಂದು ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...