Homeಕರ್ನಾಟಕಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

- Advertisement -
- Advertisement -

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ.

ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ ಮಂಗಳವಾರ (ಡಿಸೆಂಬರ್ 9) ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಅತ್ಯಂತ ಮಹತ್ವದ ಈ ಪ್ರಕರಣವನ್ನು ವಿಸ್ತೃತವಾಗಿ ವಿಚಾರಣೆ ನಡೆಸಬೇಕಿದೆ ಎಂದು ಅಭಿಪ್ರಾಯಪಟ್ಟಿರುವ ಕೋರ್ಟ್, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿದೆ.

ರಾಜ್ಯ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ, ಅವಿರತ ಡಿಫೆನ್ಸ್ ಸಿಸ್ಟಮ್, ಫೆಸಿಲ್ ಏರೋಸ್ಪೇಸ್ ಟೆಕ್ನಾಲಜೀಸ್ ಲಿಮಿಟೆಡ್, ಸ್ಯಾಮೋಸ್ ಟೆಕ್ನಾಲಜೀಸ್ ಲಿಮಿಟೆಡ್‌ಗಳ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ (ಡಿಸೆಂಬರ್ 9) ವಿಚಾರಣೆ ನಡೆಸಿತು.

ಬೆಂಗಳೂರು ಹೋಟೆಲ್‌ಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಮಂಗಳವಾರ ಬೆಳಿಗ್ಗೆ ಸರ್ಕಾರದ ಅಧಿಸೂಚನೆಗೆ ಮಧ್ಯಂತರ ತಡೆ ನೀಡಿತ್ತು.

ಇದಾಗಿ ಕೆಲವು ಗಂಟೆಗಳ ನಂತರ, ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ನ್ಯಾಯಾಲಯಕ್ಕೆ ಹಾಜರಾಗಿ ತನ್ನ ಮಧ್ಯಂತರ ತಡೆಯಾಜ್ಞೆಯನ್ನು ಮರುಪರಿಶೀಲಿಸುವಂತೆ ಕೋರಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯ ತನ್ನ ತಡೆಯಾಜ್ಞೆಯನ್ನು ಹಿಂತೆಗೆದುಕೊಂಡಿತ್ತು. ನಂತರ ನ್ಯಾಯಾಲಯವು ವಿಷಯವನ್ನು ಇಂದು ಮತ್ತಷ್ಟು ಆಲಿಸಲು ಒಪ್ಪಿಕೊಂಡಿತ್ತು.

ಇಂದು ವಿಚಾರಣೆ ವೇಳೆ ಎಜಿ, ಸರ್ಕಾರದ ಹೊಸ ನೀತಿಯು ಸಂಪೂರ್ಣ ಪ್ರಗತಿಪರವಾಗಿದೆ. ಸೂಕ್ತ ಪರಿಗಣನೆಯ ನಂತರ ಅದನ್ನು ಪರಿಚಯಿಸಲಾಗಿದೆ. ಕೆಲಸದ ಸ್ಥಳದಲ್ಲಿ ಮಾನವೀಯ ಪರಿಸ್ಥಿತಿಗಳನ್ನು ಖಚಿತಪಡಿಸಿಕೊಳ್ಳಲು ಅಂತಹ ನೀತಿಗೆ ಸಾಂವಿಧಾನಿಕ ಆಧಾರವಿದೆ ಎಂದು ವಾದಿಸಿದರು.

ಮಹಿಳೆಯರ ಹಿತದೃಷ್ಟಿಯಿಂದ ದೇಶದ ಬೇರಾವುದೇ ರಾಜ್ಯದಲ್ಲಿ ಜಾರಿಗೊಳಿಸದ ಪ್ರಗತಿಪರ ಕಾನೂನನ್ನು ಸರ್ಕಾರ ಜಾರಿಗೊಳಿಸಿದೆ. 72 ಆಕ್ಷೇಪಗಳು ಬಂದಿದ್ದು, ಎಲ್ಲವನ್ನೂ ಆಲಿಸಲಾಗಿದೆ. ಸಂವಿಧಾನದ 42ನೇ ಪರಿಚ್ಛೇದದ ಅಡಿ ನೀತಿ ರೂಪಿಸಲು ಸರ್ಕಾರಕ್ಕೆ ಅವಕಾಶವಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನಿರ್ದೇಶನವೂ ಇದೆ. ಕಾನೂನು ಆಯೋಗವೂ ಈ ಕುರಿತು ಶಿಫಾರಸು ಮಾಡಿದೆ. ಇದೆಲ್ಲವನ್ನೂ ಆಕ್ಷೇಪದಲ್ಲಿ ವಿವರಿಸಲಾಗಿದೆ ಎಂದು ಸರ್ಕಾರದ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು.

ಸರ್ಕಾರದ ಅಧಿಸೂಚನೆ ಎಲ್ಲಾ ಕ್ಷೇತ್ರಗಳಿಗೂ ಅನ್ವಯಿಸಲಿದೆಯೇ? ಎಂಬ ನ್ಯಾಯಪೀಠದ ಪ್ರಶ್ನೆಗೆ ಅಡ್ವೊಕೇಟ್ ಜನರಲ್ ಹೌದು ಎಂದು ಉತ್ತರಿಸಿದರು. ಇದನ್ನು ಆಲಿಸಿದ ನ್ಯಾಯಪೀಠ, ಪ್ರಕರಣವನ್ನು ವಿಸ್ತೃತವಾಗಿ ವಿಚಾರಣೆ ನಡೆಸಬೇಕಿದ್ದು, ಜನವರಿಯಲ್ಲಿ ನಡೆಸಲಾಗುವುದು. ಅಷ್ಟರಲ್ಲಿ ಸರ್ಕಾರ ಸಲ್ಲಿಸಿರುವ ಆಕ್ಷೇಪಗಳಿಗೆ ಪ್ರತಿಕ್ರಿಯೆಗಳಿದ್ದರೆ ಅರ್ಜಿದಾರರು ಸಲ್ಲಿಸಬಹುದು ಎಂದು ಹೇಳಿತು.

ಅರ್ಜಿದಾರರ ಪರ ವಕೀಲ ಬಿ.ಕೆ ಪ್ರಶಾಂತ್ ವಾದ ಮಂಡಿಸಿ, ಅಲ್ಲಿಯವರೆಗೆ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೋಕೇಟ್ ಜನರಲ್, ಈ ಆದೇಶವನ್ನು ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲಿಯೂ ಜಾರಿಗೊಳಿಸಿಯಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಅರ್ಜಿಯ ಮುಂದಿನ ವಿಚಾರಣೆಯೊಳಗೆ ಏನೂ ಆಗುವುದಿಲ್ಲ. ಇದು ಸಾರ್ವಜನಿಕ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ ಪ್ರಕರಣವಾಗಿದೆ. ಈ ಸಂಬಂಧ ವಿಸ್ತೃತವಾಗಿ ವಾದ ಆಲಿಸಿದ ಬಳಿಕವೇ ಆದೇಶ ಹೊರಡಿಸಲಾಗುವುದು, ವಿಚಾರಣೆಗೆ ದಿನ ನಿಗದಿಪಡಿಸಲಾಗುವುದು ಎಂದರು.

ಅಂತಿಮವಾಗಿ ನ್ಯಾಯಪೀಠ, ಸರ್ಕಾರದ ಆಕ್ಷೇಪಕ್ಕೆ ಪ್ರತ್ಯುತ್ತರ ದಾಖಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿತು. ಜೊತೆಗೆ, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವವರು ರಿಜಿಸ್ಟ್ರಾರ್ ಕಚೇರಿಯಲ್ಲಿ ಸಲ್ಲಿಸಿ, ಅರ್ಜಿಯ ಪ್ರತಿಯನ್ನು ಸರ್ಕಾರದ ಪರ ವಕೀಲರಿಗೆ ಒದಗಿಸಬೇಕು ಎಂದು ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...