Homeಮುಖಪುಟಮಹಾರಾಷ್ಟ್ರದಲ್ಲಿ ನಿರ್ಣಾಯಕ ಹಂತ ತಲುಪಿದ ಸರ್ಕಾರ ರಚನೆ ಗುದ್ದಾಟ: ಸೇನಾಗೆ ಕಾಂಗ್ರೆಸ್‌ ಬೆಂಬಲ..!

ಮಹಾರಾಷ್ಟ್ರದಲ್ಲಿ ನಿರ್ಣಾಯಕ ಹಂತ ತಲುಪಿದ ಸರ್ಕಾರ ರಚನೆ ಗುದ್ದಾಟ: ಸೇನಾಗೆ ಕಾಂಗ್ರೆಸ್‌ ಬೆಂಬಲ..!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಹಗ್ಗ-ಜಗ್ಗಾಟ ಕೊನೆಯ ಹಂತಕ್ಕೆ ಬಂದು ತಲುಪಿದೆ. ಶಿವಸೇನೆ ಜತೆ ಕಾಂಗ್ರೆಸ್‌ ಮತ್ತು ಎನ್‌ಸಿಪಿ, ಮೈತ್ರಿ ನಿರ್ಣಾಯಕ ಹಂತ ತಲುಪಿದೆ. ಇದೇ ಮೊದಲ ಬಾರಿಗೆ ಕಾಂಗ್ರೆಸ್‌, ಸೇನಾ ನಾಯಕತ್ವದ ಸರ್ಕಾರ ರಚನೆಗೆ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ನವದೆಹಲಿಯಲ್ಲಿ ಸಿಡಬ್ಲ್ಯುಸಿ ಸಭೆ ನಡೆಯುತ್ತಿದೆ. ಕಾಂಗ್ರೆಸ್‌ ನಾಯಕರು ಮತ್ತು ಪ್ರಮುಖರು ನಿರ್ಣಾಯಕ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೆ.ಸಿ.ವೇಣುಗೋಪಾಲ್, ಅಧೀರ್ ರಂಜನ್ ಚೌಧರಿ, ಅಂಬಿಕಾ ಸೋನಿ, ಅಹ್ಮದ್ ಪಟೇಲ್, ಎ.ಕೆ.ಆಂಟನಿ ಮತ್ತು ಇತರೆ ಕಾಂಗ್ರೆಸ್ ಮುಖಂಡರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ 10 ಜನಪಾತ್ ನಿವಾಸದಲ್ಲಿ ಸಭೆ ಸೇರಿದ್ದಾರೆ.

ದೇಶಾದ್ಯಂತ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಚುನಾವಣಾ ಬಾಂಡ್‌ ವಿಷಯದ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಇನ್ನು ಶಿವಸೇನೆ ನೇತೃತ್ವದ ಸರ್ಕಾರ ರಚನೆಗೆ ಕಾಂಗ್ರೆಸ್‌ ಮತ್ತು  ಎನ್‌ಸಿಪಿಯ ಶರದ್‌ ಪವಾರ್‌ ಒಪ್ಪಿಕೊಂಡ ನಂತರ ಸಿಡಬ್ಲ್ಯುಸಿ ಸಭೆ ಕರೆಯಲಾಗಿದೆ.

ಇದನ್ನೂ ಓದಿ: ಅರಸು ಪ್ರಶಸ್ತಿ ನಿಲ್ಲಿಸಿದ್ದೇಕೆ? ಬಿ.ಚಂದ್ರೇಗೌಡರ ಪ್ರಶ್ನೆ..

ಕಾಂಗ್ರೆಸ್ ಹಿರಿಯ ಮುಖಂಡ ಪೃಥ್ವಿರಾಜ್ ಚವಾಣ್ ಮಾತನಾಡಿ, ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಸ್ಥಿರ ಮತ್ತು ಜನಪರ ಸರ್ಕಾರ ಬರಲಿದೆ ಎಂದು ನಮಗೆ ಖಾತ್ರಿಯಿದೆ ಎಂದು ಹೇಳಿದರು. ನವದೆಹಲಿಯಲ್ಲಿ ಕಾಂಗ್ರೆಸ್‌ ಮತ್ತು ಎನ್‌ಸಿಪಿ ನಾಯಕರು ಐದು ಗಂಟೆಗಳ ಕಾಲ ಸಭೆ ನಡೆಸಿದ ನಂತರ ಪೃಥ್ವಿರಾಜ್‌ ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ನಾಳೆ ( ಗುರುವಾರ) ಮತ್ತೆ ಉಭಯ ಪಕ್ಷಗಳು ಜಂಟಿ ಸಭೆ ನಡೆಸಲಿವೆ. ಇದಾದ ನಂತರ ಕಾಂಗ್ರೆಸ್‌ ಹಾಗೂ ಎನ್‌ಸಿಪಿ ನಾಯಕರು ಮುಂಬೈನಲ್ಲಿ ಶುಕ್ರವಾರ ಶಿವಸೇನೆ ನಾಯಕತ್ವದೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಸರ್ಕಾರ ರಚನೆಗೆ ಸಂಬಂಧಿಸಿದ ಪ್ರಕಟಣೆಗಳನ್ನು ನೀಡುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳ ಸರ್ಕಾರ ರಚನೆಯಾಗಲಿದೆ ಎಂದು ಕಾಂಗ್ರೆಸ್ ಸ್ಪಷ್ಟವಾಗಿ ಸೂಚಿಸಿದೆ. ಇದೇ ಮೊದಲ ಬಾರಿಗೆ ಸ್ಪಷ್ಟ ಮಾಹಿತಿ ನೀಡಿದೆ.

ನವೆಂಬರ್‌ ಅಂತ್ಯದ ವೇಳೆಗೆ ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚಿಸಲಾಗುವುದು. ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವೆ ನಡೆದ ಸಭೆಯ ಬಳಿಕ ಸೋನಿಯಾ ಗಾಂಧಿ ಅವರು ಸೇನಾ ನೇತೃತ್ವದ ಸರ್ಕಾರ ರಚಿಸಲು ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎನ್‌ಸಿಪಿ ಮುಖಂಡರ ಜತೆ ನಡೆದ ಸಭೆಗೂ ಮೊದಲು ಕಾಂಗ್ರೆಸ್ ಮುಖಂಡರು ಮತ್ತು ರಾಜ್ಯದ ಮುಖಂಡರು ಅರ್ಧಗಂಟೆಗಳ ಕಾಲ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸರ್ಕಾರ ರಚಿಸುವ ಔಪಚಾರಿಕ ಅನುಮೋದನೆ, ಅಧಿಕಾರ ಹಂಚಿಕೆ ಯೋಜನೆ ಮತ್ತು ಮೂರು ಪಕ್ಷಗಳ ಮಧ್ಯೆ ಸಿದ್ಧಗೊಂಡಿರುವ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ಕರಡಿಗೂ ಸೋನಿಯಾ ಗಾಂಧಿ ಅವರು ಅನುಮೋದನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...