Homeಮುಖಪುಟಜನರ ಸಂಕಷ್ಟಗಳನ್ನೆ ಲಾಭ ಮಾಡಿಕೊಳ್ಳುತ್ತಿರುವ ಸರ್ಕಾರ: ಪ್ರಧಾನಿಗೆ ಸೋನಿಯಾ ತೀಕ್ಷ್ಣ ಪತ್ರ

ಜನರ ಸಂಕಷ್ಟಗಳನ್ನೆ ಲಾಭ ಮಾಡಿಕೊಳ್ಳುತ್ತಿರುವ ಸರ್ಕಾರ: ಪ್ರಧಾನಿಗೆ ಸೋನಿಯಾ ತೀಕ್ಷ್ಣ ಪತ್ರ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಜನರ ದುಃಖ ಮತ್ತು ಸಂಕಟಗಳಿಂದ” ಲಾಭ ಪಡೆಯಲು ಸರ್ಕಾರ ಹವಣಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಪತ್ರವನ್ನು ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಟ್ವಿಟರ್‌ನಲ್ಲಿ ಪ್ರಕಟಿಸಿದೆ. “ಇಂಧನ ಬೆಲೆಗಳು ಐತಿಹಾಸಿಕ ಮತ್ತು ಸಮರ್ಥನೀಯವಲ್ಲದ ಗರಿಷ್ಠ ಮಟ್ಟದಲ್ಲಿವೆ. ವಾಸ್ತವವಾಗಿ, ಪೆಟ್ರೋಲ್ ದೇಶದ ಅನೇಕ ಭಾಗಗಳಲ್ಲಿ ಲೀಟರ್‌ಗೆ 100 ರೂ. ಗಡಿಯನ್ನು ದಾಟಿದೆ. ಡೀಸೆಲ್‌ನ ಏರುತ್ತಿರುವ ಬೆಲೆ ಲಕ್ಷಾಂತರ ರೈತರ ಸಂಕಷ್ಟವನ್ನು ಹೆಚ್ಚಿಸಿದೆ” ಎಂದು ಸೋನಿಯಾ ತಿಳಿಸಿದ್ದು, ಅಂತರರಾಷ್ಟ್ರೀಯ ಕಚ್ಚಾ ತೈಲದ ಮಧ್ಯಂತರ ಬೆಲೆಗಳ ಹೊರತಾಗಿಯೂ ಈ ಬೆಲೆಗಳನ್ನು ಹೆಚ್ಚಿಸಲಾಗಿದೆ ಎಂದು ಅಪಾದಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್ – ಕ್ರಾಂತಿಕಾರಿ ತೆಲುಗು ಕವಿ ವರವರ ರಾವ್‌ಗೆ ಆರು ತಿಂಗಳ ಜಾಮೀನು

ಕಚ್ಚಾ ತೈಲ ಬೆಲೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಇದ್ದದ್ದಕ್ಕಿಂತ ಈಗ ಅರ್ಧದಷ್ಟಿದೆ ಎಂದು ಅವರು ನೆನಪಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸತತ 12 ದಿನಗಳವರೆಗೆ ಹೆಚ್ಚಿಸಲಾಗಿದ್ದು, ಮಹಾರಾಷ್ಟ್ರದ ಮುಂಬೈಯಲ್ಲಿ ಪೆಟ್ರೋಲ್‌ಗೆ ಸಾರ್ವಕಾಲಿಕ ಗರಿಷ್ಠ 97 ರೂ ಮತ್ತು ಡೀಸೆಲ್‌ಗೆ 88 ರೂ ಕ್ಕಿಂತಲೂ ಹೆಚ್ಚಾಗಿದೆ.

ಅಂತರರಾಷ್ಟ್ರೀಯ ತೈಲ ಬೆಲೆಗಳು ಎರಡು ದಶಕಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿದಿದ್ದರಿಂದ ಉಂಟಾದ ಲಾಭವನ್ನು ಪಡೆದುಕೊಳ್ಳಲು ಕೇಂದ್ರ ಸರ್ಕಾರವು, ಕಳೆದ ವರ್ಷ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ದಾಖಲೆಯ ಮಟ್ಟದಲ್ಲಿ ಹೆಚ್ಚಿಸಿತ್ತು.

ಉದ್ಯೋಗ ನಷ್ಟ, ವೇತನ ಮತ್ತು ಮನೆಯ ಆದಾಯದ ವ್ಯವಸ್ಥಿತ ಕುಸಿತಕ್ಕೆ ಭಾರತ ಸಾಕ್ಷಿಯಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿರುವ ಸೋನಿಯಾ ಗಾಂಧಿ, “ಮಧ್ಯಮ ವರ್ಗ ಮತ್ತು ಅಂಚಿನಲ್ಲಿರುವವರು ಕಷ್ಟ ಡುತ್ತಿದ್ದಾರೆ” ಎಂಬುದನ್ನು ಪ್ರಧಾನಿಯ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: ನನ್ನ ಬಂಧನದಲ್ಲಿ ಬಿಜೆಪಿಯ ಪಿತೂರಿಯಿದೆ ಎಂದ ಬಿಜೆಪಿ ನಾಯಕಿ ಪಮೇಲಾ ಗೋಸ್ವಾಮಿ

“ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅತಿಯಾದ ಅಬಕಾರಿ ಸುಂಕವನ್ನು ವಿಧಿಸುವಲ್ಲಿ ನಿಮ್ಮ ಸರ್ಕಾರ ಅಸಮಂಜಸ ನಿಲುವು ತೆಗೆದುಕೊಂಡಿದೆ. ಅಂದರೆ ಪ್ರತಿ ಲೀಟರ್ ಪೆಟ್ರೋಲ್‌ಗೆ ರೂ 33 ಮತ್ತು ಪ್ರತಿ ಲೀಟರ್ ಡೀಸೆಲ್‌ಗೆ ರೂ. 32 ಅಬಕಾರಿ ಸುಂಕ ವಸೂಲಿ ಮಾಡಲಾಗುತ್ತಿದೆ. ಇದು ಈ ಇಂಧನಗಳ ಮೂಲ ಬೆಲೆಗಿಂತ ಹೆಚ್ಚಾಗಿದೆ. ಸರ್ಕಾರದ ಆರ್ಥಿಕ ನಿರ್ವಹಣೆಯ ವಿಫಲತೆ ಮತ್ತು ದುರುಪಯೋಗವನ್ನು ಮುಚ್ಚಿಹಾಕಲು ಈ ಸುಲಿಗೆ ನಡೆದಿದೆ’’ ಎಂದು ಸೋನಿಯಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಯಾವುದೇ ಸರ್ಕಾರವು ಇಂತಹ ಯೋಚನಾರಹಿತ ಮತ್ತು ಅಸೂಕ್ಷ್ಮ ಕ್ರಮಗಳನ್ನು ನೇರವಾಗಿ ನಮ್ಮ ಜನರ ವೆಚ್ಚದಲ್ಲಿ ಹೇಗೆ ಸಮರ್ಥಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾನು ವಿಫಲವಾಗಿದ್ದೇನೆ” ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅಬಕಾರಿ ಸುಂಕವನ್ನು ಭಾಗಶಃ ಹಿಂತೆಗೆದುಕೊಳ್ಳುವ ಮೂಲಕ ಇಂಧನ ಬೆಲೆಯನ್ನು ಕಡಿಮೆ ಮಾಡಿ ಎಂದು ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ. “ಇಂಧನ ಬೆಲೆ ಹೆಚ್ಚಳವನ್ನು ವಾಪಾಸು ಪಡೆಯಿರಿ ಮತ್ತು ನಮ್ಮ ಮಧ್ಯಮ ಮತ್ತು ಸಂಬಳ ಪಡೆಯುವ ವರ್ಗಗಳು, ರೈತರು ಮತ್ತು ಬಡವರಿಗೆ ಲಾಭವನ್ನು ನೀಡಿ. ಈ ಜನರು ಎಂದೂ ಕಂಡರಿಯದ ಆರ್ಥಿಕ ಕುಸಿತ, ವ್ಯಾಪಕ ನಿರುದ್ಯೋಗ, ವೇತನ ಕಡಿತ ಮತ್ತು ಉದ್ಯೋಗ ನಷ್ಟಗಳೊಂದಿಗೆ ಹೋರಾಡುತ್ತಿದ್ದಾರೆ’’ ಎಂದು ಅವರು ಪ್ರಧಾನಿಯ ಗಮನ ಸೆಳೆದಿದ್ದಾರೆ.

“ನಿಮ್ಮ ಸರ್ಕಾರವು ಈಗ ನೆಪಗಳನ್ನು ಹೇಳುವ ಬದಲು ಪರಿಹಾರಗಳತ್ತ ಗಮನ ಹರಿಸುವ ಸಮಯ ಬಂದಿದೆ” ಎಂದು ಸೋನಿಯಾ ಗಾಂಧಿ ಬರೆದಿದ್ದಾರೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...