Homeಮುಖಪುಟಜನರ ಸಂಕಷ್ಟಗಳನ್ನೆ ಲಾಭ ಮಾಡಿಕೊಳ್ಳುತ್ತಿರುವ ಸರ್ಕಾರ: ಪ್ರಧಾನಿಗೆ ಸೋನಿಯಾ ತೀಕ್ಷ್ಣ ಪತ್ರ

ಜನರ ಸಂಕಷ್ಟಗಳನ್ನೆ ಲಾಭ ಮಾಡಿಕೊಳ್ಳುತ್ತಿರುವ ಸರ್ಕಾರ: ಪ್ರಧಾನಿಗೆ ಸೋನಿಯಾ ತೀಕ್ಷ್ಣ ಪತ್ರ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಜನರ ದುಃಖ ಮತ್ತು ಸಂಕಟಗಳಿಂದ” ಲಾಭ ಪಡೆಯಲು ಸರ್ಕಾರ ಹವಣಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಪತ್ರವನ್ನು ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಟ್ವಿಟರ್‌ನಲ್ಲಿ ಪ್ರಕಟಿಸಿದೆ. “ಇಂಧನ ಬೆಲೆಗಳು ಐತಿಹಾಸಿಕ ಮತ್ತು ಸಮರ್ಥನೀಯವಲ್ಲದ ಗರಿಷ್ಠ ಮಟ್ಟದಲ್ಲಿವೆ. ವಾಸ್ತವವಾಗಿ, ಪೆಟ್ರೋಲ್ ದೇಶದ ಅನೇಕ ಭಾಗಗಳಲ್ಲಿ ಲೀಟರ್‌ಗೆ 100 ರೂ. ಗಡಿಯನ್ನು ದಾಟಿದೆ. ಡೀಸೆಲ್‌ನ ಏರುತ್ತಿರುವ ಬೆಲೆ ಲಕ್ಷಾಂತರ ರೈತರ ಸಂಕಷ್ಟವನ್ನು ಹೆಚ್ಚಿಸಿದೆ” ಎಂದು ಸೋನಿಯಾ ತಿಳಿಸಿದ್ದು, ಅಂತರರಾಷ್ಟ್ರೀಯ ಕಚ್ಚಾ ತೈಲದ ಮಧ್ಯಂತರ ಬೆಲೆಗಳ ಹೊರತಾಗಿಯೂ ಈ ಬೆಲೆಗಳನ್ನು ಹೆಚ್ಚಿಸಲಾಗಿದೆ ಎಂದು ಅಪಾದಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್ – ಕ್ರಾಂತಿಕಾರಿ ತೆಲುಗು ಕವಿ ವರವರ ರಾವ್‌ಗೆ ಆರು ತಿಂಗಳ ಜಾಮೀನು

ಕಚ್ಚಾ ತೈಲ ಬೆಲೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಇದ್ದದ್ದಕ್ಕಿಂತ ಈಗ ಅರ್ಧದಷ್ಟಿದೆ ಎಂದು ಅವರು ನೆನಪಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸತತ 12 ದಿನಗಳವರೆಗೆ ಹೆಚ್ಚಿಸಲಾಗಿದ್ದು, ಮಹಾರಾಷ್ಟ್ರದ ಮುಂಬೈಯಲ್ಲಿ ಪೆಟ್ರೋಲ್‌ಗೆ ಸಾರ್ವಕಾಲಿಕ ಗರಿಷ್ಠ 97 ರೂ ಮತ್ತು ಡೀಸೆಲ್‌ಗೆ 88 ರೂ ಕ್ಕಿಂತಲೂ ಹೆಚ್ಚಾಗಿದೆ.

ಅಂತರರಾಷ್ಟ್ರೀಯ ತೈಲ ಬೆಲೆಗಳು ಎರಡು ದಶಕಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿದಿದ್ದರಿಂದ ಉಂಟಾದ ಲಾಭವನ್ನು ಪಡೆದುಕೊಳ್ಳಲು ಕೇಂದ್ರ ಸರ್ಕಾರವು, ಕಳೆದ ವರ್ಷ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ದಾಖಲೆಯ ಮಟ್ಟದಲ್ಲಿ ಹೆಚ್ಚಿಸಿತ್ತು.

ಉದ್ಯೋಗ ನಷ್ಟ, ವೇತನ ಮತ್ತು ಮನೆಯ ಆದಾಯದ ವ್ಯವಸ್ಥಿತ ಕುಸಿತಕ್ಕೆ ಭಾರತ ಸಾಕ್ಷಿಯಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿರುವ ಸೋನಿಯಾ ಗಾಂಧಿ, “ಮಧ್ಯಮ ವರ್ಗ ಮತ್ತು ಅಂಚಿನಲ್ಲಿರುವವರು ಕಷ್ಟ ಡುತ್ತಿದ್ದಾರೆ” ಎಂಬುದನ್ನು ಪ್ರಧಾನಿಯ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: ನನ್ನ ಬಂಧನದಲ್ಲಿ ಬಿಜೆಪಿಯ ಪಿತೂರಿಯಿದೆ ಎಂದ ಬಿಜೆಪಿ ನಾಯಕಿ ಪಮೇಲಾ ಗೋಸ್ವಾಮಿ

“ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅತಿಯಾದ ಅಬಕಾರಿ ಸುಂಕವನ್ನು ವಿಧಿಸುವಲ್ಲಿ ನಿಮ್ಮ ಸರ್ಕಾರ ಅಸಮಂಜಸ ನಿಲುವು ತೆಗೆದುಕೊಂಡಿದೆ. ಅಂದರೆ ಪ್ರತಿ ಲೀಟರ್ ಪೆಟ್ರೋಲ್‌ಗೆ ರೂ 33 ಮತ್ತು ಪ್ರತಿ ಲೀಟರ್ ಡೀಸೆಲ್‌ಗೆ ರೂ. 32 ಅಬಕಾರಿ ಸುಂಕ ವಸೂಲಿ ಮಾಡಲಾಗುತ್ತಿದೆ. ಇದು ಈ ಇಂಧನಗಳ ಮೂಲ ಬೆಲೆಗಿಂತ ಹೆಚ್ಚಾಗಿದೆ. ಸರ್ಕಾರದ ಆರ್ಥಿಕ ನಿರ್ವಹಣೆಯ ವಿಫಲತೆ ಮತ್ತು ದುರುಪಯೋಗವನ್ನು ಮುಚ್ಚಿಹಾಕಲು ಈ ಸುಲಿಗೆ ನಡೆದಿದೆ’’ ಎಂದು ಸೋನಿಯಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಯಾವುದೇ ಸರ್ಕಾರವು ಇಂತಹ ಯೋಚನಾರಹಿತ ಮತ್ತು ಅಸೂಕ್ಷ್ಮ ಕ್ರಮಗಳನ್ನು ನೇರವಾಗಿ ನಮ್ಮ ಜನರ ವೆಚ್ಚದಲ್ಲಿ ಹೇಗೆ ಸಮರ್ಥಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾನು ವಿಫಲವಾಗಿದ್ದೇನೆ” ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅಬಕಾರಿ ಸುಂಕವನ್ನು ಭಾಗಶಃ ಹಿಂತೆಗೆದುಕೊಳ್ಳುವ ಮೂಲಕ ಇಂಧನ ಬೆಲೆಯನ್ನು ಕಡಿಮೆ ಮಾಡಿ ಎಂದು ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ. “ಇಂಧನ ಬೆಲೆ ಹೆಚ್ಚಳವನ್ನು ವಾಪಾಸು ಪಡೆಯಿರಿ ಮತ್ತು ನಮ್ಮ ಮಧ್ಯಮ ಮತ್ತು ಸಂಬಳ ಪಡೆಯುವ ವರ್ಗಗಳು, ರೈತರು ಮತ್ತು ಬಡವರಿಗೆ ಲಾಭವನ್ನು ನೀಡಿ. ಈ ಜನರು ಎಂದೂ ಕಂಡರಿಯದ ಆರ್ಥಿಕ ಕುಸಿತ, ವ್ಯಾಪಕ ನಿರುದ್ಯೋಗ, ವೇತನ ಕಡಿತ ಮತ್ತು ಉದ್ಯೋಗ ನಷ್ಟಗಳೊಂದಿಗೆ ಹೋರಾಡುತ್ತಿದ್ದಾರೆ’’ ಎಂದು ಅವರು ಪ್ರಧಾನಿಯ ಗಮನ ಸೆಳೆದಿದ್ದಾರೆ.

“ನಿಮ್ಮ ಸರ್ಕಾರವು ಈಗ ನೆಪಗಳನ್ನು ಹೇಳುವ ಬದಲು ಪರಿಹಾರಗಳತ್ತ ಗಮನ ಹರಿಸುವ ಸಮಯ ಬಂದಿದೆ” ಎಂದು ಸೋನಿಯಾ ಗಾಂಧಿ ಬರೆದಿದ್ದಾರೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...