Homeಮುಖಪುಟಜನರ ಸಂಕಷ್ಟಗಳನ್ನೆ ಲಾಭ ಮಾಡಿಕೊಳ್ಳುತ್ತಿರುವ ಸರ್ಕಾರ: ಪ್ರಧಾನಿಗೆ ಸೋನಿಯಾ ತೀಕ್ಷ್ಣ ಪತ್ರ

ಜನರ ಸಂಕಷ್ಟಗಳನ್ನೆ ಲಾಭ ಮಾಡಿಕೊಳ್ಳುತ್ತಿರುವ ಸರ್ಕಾರ: ಪ್ರಧಾನಿಗೆ ಸೋನಿಯಾ ತೀಕ್ಷ್ಣ ಪತ್ರ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಜನರ ದುಃಖ ಮತ್ತು ಸಂಕಟಗಳಿಂದ” ಲಾಭ ಪಡೆಯಲು ಸರ್ಕಾರ ಹವಣಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಪತ್ರವನ್ನು ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಟ್ವಿಟರ್‌ನಲ್ಲಿ ಪ್ರಕಟಿಸಿದೆ. “ಇಂಧನ ಬೆಲೆಗಳು ಐತಿಹಾಸಿಕ ಮತ್ತು ಸಮರ್ಥನೀಯವಲ್ಲದ ಗರಿಷ್ಠ ಮಟ್ಟದಲ್ಲಿವೆ. ವಾಸ್ತವವಾಗಿ, ಪೆಟ್ರೋಲ್ ದೇಶದ ಅನೇಕ ಭಾಗಗಳಲ್ಲಿ ಲೀಟರ್‌ಗೆ 100 ರೂ. ಗಡಿಯನ್ನು ದಾಟಿದೆ. ಡೀಸೆಲ್‌ನ ಏರುತ್ತಿರುವ ಬೆಲೆ ಲಕ್ಷಾಂತರ ರೈತರ ಸಂಕಷ್ಟವನ್ನು ಹೆಚ್ಚಿಸಿದೆ” ಎಂದು ಸೋನಿಯಾ ತಿಳಿಸಿದ್ದು, ಅಂತರರಾಷ್ಟ್ರೀಯ ಕಚ್ಚಾ ತೈಲದ ಮಧ್ಯಂತರ ಬೆಲೆಗಳ ಹೊರತಾಗಿಯೂ ಈ ಬೆಲೆಗಳನ್ನು ಹೆಚ್ಚಿಸಲಾಗಿದೆ ಎಂದು ಅಪಾದಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್ – ಕ್ರಾಂತಿಕಾರಿ ತೆಲುಗು ಕವಿ ವರವರ ರಾವ್‌ಗೆ ಆರು ತಿಂಗಳ ಜಾಮೀನು

ಕಚ್ಚಾ ತೈಲ ಬೆಲೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಇದ್ದದ್ದಕ್ಕಿಂತ ಈಗ ಅರ್ಧದಷ್ಟಿದೆ ಎಂದು ಅವರು ನೆನಪಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸತತ 12 ದಿನಗಳವರೆಗೆ ಹೆಚ್ಚಿಸಲಾಗಿದ್ದು, ಮಹಾರಾಷ್ಟ್ರದ ಮುಂಬೈಯಲ್ಲಿ ಪೆಟ್ರೋಲ್‌ಗೆ ಸಾರ್ವಕಾಲಿಕ ಗರಿಷ್ಠ 97 ರೂ ಮತ್ತು ಡೀಸೆಲ್‌ಗೆ 88 ರೂ ಕ್ಕಿಂತಲೂ ಹೆಚ್ಚಾಗಿದೆ.

ಅಂತರರಾಷ್ಟ್ರೀಯ ತೈಲ ಬೆಲೆಗಳು ಎರಡು ದಶಕಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿದಿದ್ದರಿಂದ ಉಂಟಾದ ಲಾಭವನ್ನು ಪಡೆದುಕೊಳ್ಳಲು ಕೇಂದ್ರ ಸರ್ಕಾರವು, ಕಳೆದ ವರ್ಷ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ದಾಖಲೆಯ ಮಟ್ಟದಲ್ಲಿ ಹೆಚ್ಚಿಸಿತ್ತು.

ಉದ್ಯೋಗ ನಷ್ಟ, ವೇತನ ಮತ್ತು ಮನೆಯ ಆದಾಯದ ವ್ಯವಸ್ಥಿತ ಕುಸಿತಕ್ಕೆ ಭಾರತ ಸಾಕ್ಷಿಯಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿರುವ ಸೋನಿಯಾ ಗಾಂಧಿ, “ಮಧ್ಯಮ ವರ್ಗ ಮತ್ತು ಅಂಚಿನಲ್ಲಿರುವವರು ಕಷ್ಟ ಡುತ್ತಿದ್ದಾರೆ” ಎಂಬುದನ್ನು ಪ್ರಧಾನಿಯ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: ನನ್ನ ಬಂಧನದಲ್ಲಿ ಬಿಜೆಪಿಯ ಪಿತೂರಿಯಿದೆ ಎಂದ ಬಿಜೆಪಿ ನಾಯಕಿ ಪಮೇಲಾ ಗೋಸ್ವಾಮಿ

“ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅತಿಯಾದ ಅಬಕಾರಿ ಸುಂಕವನ್ನು ವಿಧಿಸುವಲ್ಲಿ ನಿಮ್ಮ ಸರ್ಕಾರ ಅಸಮಂಜಸ ನಿಲುವು ತೆಗೆದುಕೊಂಡಿದೆ. ಅಂದರೆ ಪ್ರತಿ ಲೀಟರ್ ಪೆಟ್ರೋಲ್‌ಗೆ ರೂ 33 ಮತ್ತು ಪ್ರತಿ ಲೀಟರ್ ಡೀಸೆಲ್‌ಗೆ ರೂ. 32 ಅಬಕಾರಿ ಸುಂಕ ವಸೂಲಿ ಮಾಡಲಾಗುತ್ತಿದೆ. ಇದು ಈ ಇಂಧನಗಳ ಮೂಲ ಬೆಲೆಗಿಂತ ಹೆಚ್ಚಾಗಿದೆ. ಸರ್ಕಾರದ ಆರ್ಥಿಕ ನಿರ್ವಹಣೆಯ ವಿಫಲತೆ ಮತ್ತು ದುರುಪಯೋಗವನ್ನು ಮುಚ್ಚಿಹಾಕಲು ಈ ಸುಲಿಗೆ ನಡೆದಿದೆ’’ ಎಂದು ಸೋನಿಯಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಯಾವುದೇ ಸರ್ಕಾರವು ಇಂತಹ ಯೋಚನಾರಹಿತ ಮತ್ತು ಅಸೂಕ್ಷ್ಮ ಕ್ರಮಗಳನ್ನು ನೇರವಾಗಿ ನಮ್ಮ ಜನರ ವೆಚ್ಚದಲ್ಲಿ ಹೇಗೆ ಸಮರ್ಥಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾನು ವಿಫಲವಾಗಿದ್ದೇನೆ” ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅಬಕಾರಿ ಸುಂಕವನ್ನು ಭಾಗಶಃ ಹಿಂತೆಗೆದುಕೊಳ್ಳುವ ಮೂಲಕ ಇಂಧನ ಬೆಲೆಯನ್ನು ಕಡಿಮೆ ಮಾಡಿ ಎಂದು ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ. “ಇಂಧನ ಬೆಲೆ ಹೆಚ್ಚಳವನ್ನು ವಾಪಾಸು ಪಡೆಯಿರಿ ಮತ್ತು ನಮ್ಮ ಮಧ್ಯಮ ಮತ್ತು ಸಂಬಳ ಪಡೆಯುವ ವರ್ಗಗಳು, ರೈತರು ಮತ್ತು ಬಡವರಿಗೆ ಲಾಭವನ್ನು ನೀಡಿ. ಈ ಜನರು ಎಂದೂ ಕಂಡರಿಯದ ಆರ್ಥಿಕ ಕುಸಿತ, ವ್ಯಾಪಕ ನಿರುದ್ಯೋಗ, ವೇತನ ಕಡಿತ ಮತ್ತು ಉದ್ಯೋಗ ನಷ್ಟಗಳೊಂದಿಗೆ ಹೋರಾಡುತ್ತಿದ್ದಾರೆ’’ ಎಂದು ಅವರು ಪ್ರಧಾನಿಯ ಗಮನ ಸೆಳೆದಿದ್ದಾರೆ.

“ನಿಮ್ಮ ಸರ್ಕಾರವು ಈಗ ನೆಪಗಳನ್ನು ಹೇಳುವ ಬದಲು ಪರಿಹಾರಗಳತ್ತ ಗಮನ ಹರಿಸುವ ಸಮಯ ಬಂದಿದೆ” ಎಂದು ಸೋನಿಯಾ ಗಾಂಧಿ ಬರೆದಿದ್ದಾರೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...