Homeಮುಖಪುಟಜನರ ಸಂಕಷ್ಟಗಳನ್ನೆ ಲಾಭ ಮಾಡಿಕೊಳ್ಳುತ್ತಿರುವ ಸರ್ಕಾರ: ಪ್ರಧಾನಿಗೆ ಸೋನಿಯಾ ತೀಕ್ಷ್ಣ ಪತ್ರ

ಜನರ ಸಂಕಷ್ಟಗಳನ್ನೆ ಲಾಭ ಮಾಡಿಕೊಳ್ಳುತ್ತಿರುವ ಸರ್ಕಾರ: ಪ್ರಧಾನಿಗೆ ಸೋನಿಯಾ ತೀಕ್ಷ್ಣ ಪತ್ರ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಜನರ ದುಃಖ ಮತ್ತು ಸಂಕಟಗಳಿಂದ” ಲಾಭ ಪಡೆಯಲು ಸರ್ಕಾರ ಹವಣಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಪತ್ರವನ್ನು ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಟ್ವಿಟರ್‌ನಲ್ಲಿ ಪ್ರಕಟಿಸಿದೆ. “ಇಂಧನ ಬೆಲೆಗಳು ಐತಿಹಾಸಿಕ ಮತ್ತು ಸಮರ್ಥನೀಯವಲ್ಲದ ಗರಿಷ್ಠ ಮಟ್ಟದಲ್ಲಿವೆ. ವಾಸ್ತವವಾಗಿ, ಪೆಟ್ರೋಲ್ ದೇಶದ ಅನೇಕ ಭಾಗಗಳಲ್ಲಿ ಲೀಟರ್‌ಗೆ 100 ರೂ. ಗಡಿಯನ್ನು ದಾಟಿದೆ. ಡೀಸೆಲ್‌ನ ಏರುತ್ತಿರುವ ಬೆಲೆ ಲಕ್ಷಾಂತರ ರೈತರ ಸಂಕಷ್ಟವನ್ನು ಹೆಚ್ಚಿಸಿದೆ” ಎಂದು ಸೋನಿಯಾ ತಿಳಿಸಿದ್ದು, ಅಂತರರಾಷ್ಟ್ರೀಯ ಕಚ್ಚಾ ತೈಲದ ಮಧ್ಯಂತರ ಬೆಲೆಗಳ ಹೊರತಾಗಿಯೂ ಈ ಬೆಲೆಗಳನ್ನು ಹೆಚ್ಚಿಸಲಾಗಿದೆ ಎಂದು ಅಪಾದಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್ – ಕ್ರಾಂತಿಕಾರಿ ತೆಲುಗು ಕವಿ ವರವರ ರಾವ್‌ಗೆ ಆರು ತಿಂಗಳ ಜಾಮೀನು

ಕಚ್ಚಾ ತೈಲ ಬೆಲೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಇದ್ದದ್ದಕ್ಕಿಂತ ಈಗ ಅರ್ಧದಷ್ಟಿದೆ ಎಂದು ಅವರು ನೆನಪಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸತತ 12 ದಿನಗಳವರೆಗೆ ಹೆಚ್ಚಿಸಲಾಗಿದ್ದು, ಮಹಾರಾಷ್ಟ್ರದ ಮುಂಬೈಯಲ್ಲಿ ಪೆಟ್ರೋಲ್‌ಗೆ ಸಾರ್ವಕಾಲಿಕ ಗರಿಷ್ಠ 97 ರೂ ಮತ್ತು ಡೀಸೆಲ್‌ಗೆ 88 ರೂ ಕ್ಕಿಂತಲೂ ಹೆಚ್ಚಾಗಿದೆ.

ಅಂತರರಾಷ್ಟ್ರೀಯ ತೈಲ ಬೆಲೆಗಳು ಎರಡು ದಶಕಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿದಿದ್ದರಿಂದ ಉಂಟಾದ ಲಾಭವನ್ನು ಪಡೆದುಕೊಳ್ಳಲು ಕೇಂದ್ರ ಸರ್ಕಾರವು, ಕಳೆದ ವರ್ಷ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ದಾಖಲೆಯ ಮಟ್ಟದಲ್ಲಿ ಹೆಚ್ಚಿಸಿತ್ತು.

ಉದ್ಯೋಗ ನಷ್ಟ, ವೇತನ ಮತ್ತು ಮನೆಯ ಆದಾಯದ ವ್ಯವಸ್ಥಿತ ಕುಸಿತಕ್ಕೆ ಭಾರತ ಸಾಕ್ಷಿಯಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿರುವ ಸೋನಿಯಾ ಗಾಂಧಿ, “ಮಧ್ಯಮ ವರ್ಗ ಮತ್ತು ಅಂಚಿನಲ್ಲಿರುವವರು ಕಷ್ಟ ಡುತ್ತಿದ್ದಾರೆ” ಎಂಬುದನ್ನು ಪ್ರಧಾನಿಯ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: ನನ್ನ ಬಂಧನದಲ್ಲಿ ಬಿಜೆಪಿಯ ಪಿತೂರಿಯಿದೆ ಎಂದ ಬಿಜೆಪಿ ನಾಯಕಿ ಪಮೇಲಾ ಗೋಸ್ವಾಮಿ

“ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅತಿಯಾದ ಅಬಕಾರಿ ಸುಂಕವನ್ನು ವಿಧಿಸುವಲ್ಲಿ ನಿಮ್ಮ ಸರ್ಕಾರ ಅಸಮಂಜಸ ನಿಲುವು ತೆಗೆದುಕೊಂಡಿದೆ. ಅಂದರೆ ಪ್ರತಿ ಲೀಟರ್ ಪೆಟ್ರೋಲ್‌ಗೆ ರೂ 33 ಮತ್ತು ಪ್ರತಿ ಲೀಟರ್ ಡೀಸೆಲ್‌ಗೆ ರೂ. 32 ಅಬಕಾರಿ ಸುಂಕ ವಸೂಲಿ ಮಾಡಲಾಗುತ್ತಿದೆ. ಇದು ಈ ಇಂಧನಗಳ ಮೂಲ ಬೆಲೆಗಿಂತ ಹೆಚ್ಚಾಗಿದೆ. ಸರ್ಕಾರದ ಆರ್ಥಿಕ ನಿರ್ವಹಣೆಯ ವಿಫಲತೆ ಮತ್ತು ದುರುಪಯೋಗವನ್ನು ಮುಚ್ಚಿಹಾಕಲು ಈ ಸುಲಿಗೆ ನಡೆದಿದೆ’’ ಎಂದು ಸೋನಿಯಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಯಾವುದೇ ಸರ್ಕಾರವು ಇಂತಹ ಯೋಚನಾರಹಿತ ಮತ್ತು ಅಸೂಕ್ಷ್ಮ ಕ್ರಮಗಳನ್ನು ನೇರವಾಗಿ ನಮ್ಮ ಜನರ ವೆಚ್ಚದಲ್ಲಿ ಹೇಗೆ ಸಮರ್ಥಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾನು ವಿಫಲವಾಗಿದ್ದೇನೆ” ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅಬಕಾರಿ ಸುಂಕವನ್ನು ಭಾಗಶಃ ಹಿಂತೆಗೆದುಕೊಳ್ಳುವ ಮೂಲಕ ಇಂಧನ ಬೆಲೆಯನ್ನು ಕಡಿಮೆ ಮಾಡಿ ಎಂದು ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ. “ಇಂಧನ ಬೆಲೆ ಹೆಚ್ಚಳವನ್ನು ವಾಪಾಸು ಪಡೆಯಿರಿ ಮತ್ತು ನಮ್ಮ ಮಧ್ಯಮ ಮತ್ತು ಸಂಬಳ ಪಡೆಯುವ ವರ್ಗಗಳು, ರೈತರು ಮತ್ತು ಬಡವರಿಗೆ ಲಾಭವನ್ನು ನೀಡಿ. ಈ ಜನರು ಎಂದೂ ಕಂಡರಿಯದ ಆರ್ಥಿಕ ಕುಸಿತ, ವ್ಯಾಪಕ ನಿರುದ್ಯೋಗ, ವೇತನ ಕಡಿತ ಮತ್ತು ಉದ್ಯೋಗ ನಷ್ಟಗಳೊಂದಿಗೆ ಹೋರಾಡುತ್ತಿದ್ದಾರೆ’’ ಎಂದು ಅವರು ಪ್ರಧಾನಿಯ ಗಮನ ಸೆಳೆದಿದ್ದಾರೆ.

“ನಿಮ್ಮ ಸರ್ಕಾರವು ಈಗ ನೆಪಗಳನ್ನು ಹೇಳುವ ಬದಲು ಪರಿಹಾರಗಳತ್ತ ಗಮನ ಹರಿಸುವ ಸಮಯ ಬಂದಿದೆ” ಎಂದು ಸೋನಿಯಾ ಗಾಂಧಿ ಬರೆದಿದ್ದಾರೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...