Homeಮುಖಪುಟಜನರ ಸಂಕಷ್ಟಗಳನ್ನೆ ಲಾಭ ಮಾಡಿಕೊಳ್ಳುತ್ತಿರುವ ಸರ್ಕಾರ: ಪ್ರಧಾನಿಗೆ ಸೋನಿಯಾ ತೀಕ್ಷ್ಣ ಪತ್ರ

ಜನರ ಸಂಕಷ್ಟಗಳನ್ನೆ ಲಾಭ ಮಾಡಿಕೊಳ್ಳುತ್ತಿರುವ ಸರ್ಕಾರ: ಪ್ರಧಾನಿಗೆ ಸೋನಿಯಾ ತೀಕ್ಷ್ಣ ಪತ್ರ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಜನರ ದುಃಖ ಮತ್ತು ಸಂಕಟಗಳಿಂದ” ಲಾಭ ಪಡೆಯಲು ಸರ್ಕಾರ ಹವಣಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಪತ್ರವನ್ನು ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಟ್ವಿಟರ್‌ನಲ್ಲಿ ಪ್ರಕಟಿಸಿದೆ. “ಇಂಧನ ಬೆಲೆಗಳು ಐತಿಹಾಸಿಕ ಮತ್ತು ಸಮರ್ಥನೀಯವಲ್ಲದ ಗರಿಷ್ಠ ಮಟ್ಟದಲ್ಲಿವೆ. ವಾಸ್ತವವಾಗಿ, ಪೆಟ್ರೋಲ್ ದೇಶದ ಅನೇಕ ಭಾಗಗಳಲ್ಲಿ ಲೀಟರ್‌ಗೆ 100 ರೂ. ಗಡಿಯನ್ನು ದಾಟಿದೆ. ಡೀಸೆಲ್‌ನ ಏರುತ್ತಿರುವ ಬೆಲೆ ಲಕ್ಷಾಂತರ ರೈತರ ಸಂಕಷ್ಟವನ್ನು ಹೆಚ್ಚಿಸಿದೆ” ಎಂದು ಸೋನಿಯಾ ತಿಳಿಸಿದ್ದು, ಅಂತರರಾಷ್ಟ್ರೀಯ ಕಚ್ಚಾ ತೈಲದ ಮಧ್ಯಂತರ ಬೆಲೆಗಳ ಹೊರತಾಗಿಯೂ ಈ ಬೆಲೆಗಳನ್ನು ಹೆಚ್ಚಿಸಲಾಗಿದೆ ಎಂದು ಅಪಾದಿಸಿದ್ದಾರೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್ – ಕ್ರಾಂತಿಕಾರಿ ತೆಲುಗು ಕವಿ ವರವರ ರಾವ್‌ಗೆ ಆರು ತಿಂಗಳ ಜಾಮೀನು

ಕಚ್ಚಾ ತೈಲ ಬೆಲೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಇದ್ದದ್ದಕ್ಕಿಂತ ಈಗ ಅರ್ಧದಷ್ಟಿದೆ ಎಂದು ಅವರು ನೆನಪಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸತತ 12 ದಿನಗಳವರೆಗೆ ಹೆಚ್ಚಿಸಲಾಗಿದ್ದು, ಮಹಾರಾಷ್ಟ್ರದ ಮುಂಬೈಯಲ್ಲಿ ಪೆಟ್ರೋಲ್‌ಗೆ ಸಾರ್ವಕಾಲಿಕ ಗರಿಷ್ಠ 97 ರೂ ಮತ್ತು ಡೀಸೆಲ್‌ಗೆ 88 ರೂ ಕ್ಕಿಂತಲೂ ಹೆಚ್ಚಾಗಿದೆ.

ಅಂತರರಾಷ್ಟ್ರೀಯ ತೈಲ ಬೆಲೆಗಳು ಎರಡು ದಶಕಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿದಿದ್ದರಿಂದ ಉಂಟಾದ ಲಾಭವನ್ನು ಪಡೆದುಕೊಳ್ಳಲು ಕೇಂದ್ರ ಸರ್ಕಾರವು, ಕಳೆದ ವರ್ಷ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ದಾಖಲೆಯ ಮಟ್ಟದಲ್ಲಿ ಹೆಚ್ಚಿಸಿತ್ತು.

ಉದ್ಯೋಗ ನಷ್ಟ, ವೇತನ ಮತ್ತು ಮನೆಯ ಆದಾಯದ ವ್ಯವಸ್ಥಿತ ಕುಸಿತಕ್ಕೆ ಭಾರತ ಸಾಕ್ಷಿಯಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ತಿಳಿಸಿರುವ ಸೋನಿಯಾ ಗಾಂಧಿ, “ಮಧ್ಯಮ ವರ್ಗ ಮತ್ತು ಅಂಚಿನಲ್ಲಿರುವವರು ಕಷ್ಟ ಡುತ್ತಿದ್ದಾರೆ” ಎಂಬುದನ್ನು ಪ್ರಧಾನಿಯ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: ನನ್ನ ಬಂಧನದಲ್ಲಿ ಬಿಜೆಪಿಯ ಪಿತೂರಿಯಿದೆ ಎಂದ ಬಿಜೆಪಿ ನಾಯಕಿ ಪಮೇಲಾ ಗೋಸ್ವಾಮಿ

“ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅತಿಯಾದ ಅಬಕಾರಿ ಸುಂಕವನ್ನು ವಿಧಿಸುವಲ್ಲಿ ನಿಮ್ಮ ಸರ್ಕಾರ ಅಸಮಂಜಸ ನಿಲುವು ತೆಗೆದುಕೊಂಡಿದೆ. ಅಂದರೆ ಪ್ರತಿ ಲೀಟರ್ ಪೆಟ್ರೋಲ್‌ಗೆ ರೂ 33 ಮತ್ತು ಪ್ರತಿ ಲೀಟರ್ ಡೀಸೆಲ್‌ಗೆ ರೂ. 32 ಅಬಕಾರಿ ಸುಂಕ ವಸೂಲಿ ಮಾಡಲಾಗುತ್ತಿದೆ. ಇದು ಈ ಇಂಧನಗಳ ಮೂಲ ಬೆಲೆಗಿಂತ ಹೆಚ್ಚಾಗಿದೆ. ಸರ್ಕಾರದ ಆರ್ಥಿಕ ನಿರ್ವಹಣೆಯ ವಿಫಲತೆ ಮತ್ತು ದುರುಪಯೋಗವನ್ನು ಮುಚ್ಚಿಹಾಕಲು ಈ ಸುಲಿಗೆ ನಡೆದಿದೆ’’ ಎಂದು ಸೋನಿಯಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಯಾವುದೇ ಸರ್ಕಾರವು ಇಂತಹ ಯೋಚನಾರಹಿತ ಮತ್ತು ಅಸೂಕ್ಷ್ಮ ಕ್ರಮಗಳನ್ನು ನೇರವಾಗಿ ನಮ್ಮ ಜನರ ವೆಚ್ಚದಲ್ಲಿ ಹೇಗೆ ಸಮರ್ಥಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾನು ವಿಫಲವಾಗಿದ್ದೇನೆ” ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅಬಕಾರಿ ಸುಂಕವನ್ನು ಭಾಗಶಃ ಹಿಂತೆಗೆದುಕೊಳ್ಳುವ ಮೂಲಕ ಇಂಧನ ಬೆಲೆಯನ್ನು ಕಡಿಮೆ ಮಾಡಿ ಎಂದು ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ. “ಇಂಧನ ಬೆಲೆ ಹೆಚ್ಚಳವನ್ನು ವಾಪಾಸು ಪಡೆಯಿರಿ ಮತ್ತು ನಮ್ಮ ಮಧ್ಯಮ ಮತ್ತು ಸಂಬಳ ಪಡೆಯುವ ವರ್ಗಗಳು, ರೈತರು ಮತ್ತು ಬಡವರಿಗೆ ಲಾಭವನ್ನು ನೀಡಿ. ಈ ಜನರು ಎಂದೂ ಕಂಡರಿಯದ ಆರ್ಥಿಕ ಕುಸಿತ, ವ್ಯಾಪಕ ನಿರುದ್ಯೋಗ, ವೇತನ ಕಡಿತ ಮತ್ತು ಉದ್ಯೋಗ ನಷ್ಟಗಳೊಂದಿಗೆ ಹೋರಾಡುತ್ತಿದ್ದಾರೆ’’ ಎಂದು ಅವರು ಪ್ರಧಾನಿಯ ಗಮನ ಸೆಳೆದಿದ್ದಾರೆ.

“ನಿಮ್ಮ ಸರ್ಕಾರವು ಈಗ ನೆಪಗಳನ್ನು ಹೇಳುವ ಬದಲು ಪರಿಹಾರಗಳತ್ತ ಗಮನ ಹರಿಸುವ ಸಮಯ ಬಂದಿದೆ” ಎಂದು ಸೋನಿಯಾ ಗಾಂಧಿ ಬರೆದಿದ್ದಾರೆ.

ಇದನ್ನೂ ಓದಿ: ‘ಮಂತ್ರಾಲಯದ ಸ್ವಾಮೀಜಿ ಕರೆ ಮಾಡಿದ್ದರು’ – ಪಠ್ಯ ಕಡಿತಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...