Homeಚಳವಳಿಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಏಳು ಸುತ್ತಿನ ಮಾತುಕತೆ ವಿಫಲ. ಆದರೆ ಎಲ್ಲ ಮಾತುಕತೆ ಸಂದರ್ಭದಲ್ಲೂ ಸರ್ಕಾರದ ಊಟ ಮತ್ತು ನೀರನ್ನು ನಿರಾಕರಿಸುವ ಮೂಲಕ ರೈತರು ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ.

- Advertisement -
- Advertisement -

ಸರ್ಕಾರ ಆಟವಾಡುತ್ತಿದೆ. ಮಾತುಕತೆ ಎಂಬ ನಾಟಕ ಆಡುತ್ತಿದೆ. ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳು ಮಾತುಕತೆಗೆ ಹೋಗದಿದ್ದರೆ, ರೈತ ನಾಯಕರಿಗೆ ಸಮಸ್ಯೆ ಇತ್ಯರ್ಥವಾಗುವುದೇ ಬೇಕಿಲ್ಲ ಎಂದು ತನ್ನ ಬಾಲಂಗೋಚಿ ಮಾಧ್ಯಮಗಳ ಮೂಲಕ ಅಪಪ್ರಚಾರ ನಡೆಸುವ ಹುನ್ನಾರವನ್ನೂ ಸರ್ಕಾರ ಮಾಡುತ್ತಿದೆ.
ಆದರೆ ಮಾತುಕತೆಯ ಮಾರ್ಗವನ್ನು ಮುಕ್ತವಾಗಿ ಇಡುವ ಮೂಲಕ ರೈತ ಸಂಘಟನೆಗಳು ಪ್ರಜ್ಞಾವಂತಿಕೆ ಮೆರೆದಿವೆ. ಮಾತುಕತೆ ಹೆಸರಲ್ಲಿ ಪ್ರಭುತ್ವ ಎಂದಿನಂತೆ ರಮಿಸುವ ನಾಟಕ ಆಡುತ್ತಿದೆ. ಆದರೆ ರೈತರು ಇದಕ್ಕೆ ಬಗ್ಗುತ್ತಿಲ್ಲ. ಇನ್ನೊಂದು ಕಡೆ ಸರ್ಕಾರ ನಡೆಸುವ ಪಕ್ಷದ ವಿಕೃತ ಹಿಂಬಾಲಕ ಸಂಸ್ಥೆಗಳು ರೈತರನ್ನು, ಈ ಹೋರಾಟವನ್ನು ಸುಳ್ಳುಗಳ ಮೂಲಕ ಅವಹೇಳನ ಮಾಡುವುದು, ಪ್ರತಿಭಟನೆಗೆ ಕಳಂಕ ತರುವುದರಲ್ಲಿ ತುಂಬ ಕ್ರಿಯಾಶೀಲವಾಗಿವೆ. ಬಹುಪಾಲು ಮಾಧ್ಯಮಗಳು ಕೂಡ ಈ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ಮಾಡುವ ಮೂಲಕ ವೃತ್ತಿದ್ರೋಹ ಎಸಗುತ್ತಿವೆ.

ಪ್ರತಿ ಮಾತುಕತೆಯಲ್ಲೂ ಸರ್ಕಾರ ಏರ್ಪಡಿಸುವ ಭೋಜನ ನಿರಾಕರಿಸುತ್ತಿರುವ ರೈತ ಸಂಘಟನೆಗಳ ಮುಖಂಡರು, 6ನೆ ಸುತ್ತಿನ ಮಾತುಕತೆಯಲ್ಲಿ ಊಟ ಬೇಡಿದ ಕೇಂದ್ರ ಸಚಿವರಿಗೆ ರೊಟ್ಟಿ ನೀಡುವ ಮೂಲಕ ರೈತಾಪಿ ಸಮೂಹದ ನೀಡುವ ಪರಂಪರೆಗೆ ಸಾಂಕೇತಿಕ ಸಾಕ್ಷಿ ಒದಗಿಸಿದ್ದಾರೆ.

ಇತ್ತೀಚೆಗೆ ಮಾಜಿ ಹಣಕಾಸು ಸಚಿವ ಪಿ. ಚಿದಮಬರಂ ಈ ರೈತ ಹೋರಾಟದ ಬಗ್ಗೆ ಬರೆಯುತ್ತ, ‘ಇದು ನಮಗೆ 1942ರ ಅಗಸ್ಟ್ ತಿಂಗಳನ್ನು ನೆನಪಿಸುತ್ತಿದೆ. 1942 ಅಗಸ್ಟ್ 7-8 ರಂದು ಮುಂಬೈನ (ಆಗಿನ ಬಾಂಬೆ) ಗೋವಾಲಿಯಾ ಟ್ಯಾಂಕ್ ಮೈದಾನದಲ್ಲಿ ನಡೆದ ಐತಿಹಾಸಿಕ ಸಭೆಯಲ್ಲಿ, ಮಹಾತ್ಮ ಗಾಂಧಿ ‘ಮಾಡು ಇಲ್ಲವೇ ಮಡಿ’ ಘೋಷಣೆಯ ಮೂಲಕ ಭಾರತದಿಂದ ತೊಲಗಿ ಎಂದು ಬ್ರಿಟಿಷರನ್ನು ಎಚ್ಚರಿಸಿದ್ದರು. ಈಗಿನ ರೈತ ಹೋರಾಟದಲ್ಲಿ ಮಹಾತ್ಮ ಇಲ್ಲ, ಆದರೆ ರೈತರ ಮನಸ್ಸುಗಳ ತುಂಬ ಅಹಿಂಸಾತ್ಮಕ ಪ್ರತಿಭಟನೆಯ ಉತ್ಸಾಹವೇ ತುಂಬಿದೆ’ ಎಂದು ಉಲ್ಲೇಖಿಸಿದ್ದಾರೆ.

‘ಈ ರೈತ ಪ್ರತಿಭಟನೆಯು ಸರ್ಕಾರಗಳಿಗೆ (ಈಗಿನ ಮತ್ತು ಭವಿಷ್ಯದ ಸರ್ಕಾರಗಳಿಗೆ) ‘ಆಡಳಿತದಲ್ಲಿ ವಿನಮ್ರತೆ’ಯ ಅಗತ್ಯದ ಪಾಠಗಳನ್ನು ಕಲಿಸಲಿದೆ, ಸಂಸತ್ತಿನಲ್ಲಿ ಮಸೂದೆಗಳನ್ನು ಹೇಗೆ ಅಂಗೀಕಾರ ಮಾಡಬೇಕು, ಜನರ ಬಯಕೆಗಳ ಅನುಸಾರ ಹೇಗೆ ಆಡಳಿತ ನಡೆಸಬೇಕು ಎಂಬುದನ್ನೂ ಈ ಹೋರಾಟ ಕಲಿಸಲಿದೆ’ ಎಂದು ಚಿದಂಬರಂ ಬರೆದಿದ್ದಾರೆ.

ಇದಿರಲಿ, ಈ ಮಾತುಕತೆಯ ಆಟವನ್ನು ರೈತರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರತಿಭಟನೆಯ ಸ್ಥಳದಲ್ಲಿ ಸಂಭವಿಸಿದ ಸಾವುಗಳು ಮತ್ತು ಆತ್ಮಹತ್ಯೆಗಳ ಕುರಿತು ದೇಶದ ನಂಬರ್ 1 ಟ್ವಿಟರಿಸ್ಟ್ ಮೋದಿ ಏನನ್ನೂ ಟ್ವೀಟ್ ಮಾಡಿಲ್ಲ. ವಲಸೆ ಕಾರ್ಮಿಕರ ಸಾವುಗಳಿಗೂ ಅವರು ಸ್ಪಂದಿಸಲೇ ಇಲ್ಲವಲ್ಲ? ಆದರೆ ಸೌರವ್ ಗಂಗೂಲಿಗೆ ಅನಾರೋಗ್ಯವಾದಾಗ ಅವರು ಟ್ವೀಟ್ ಮಾಡುವುದನ್ನು ಮರೆಯಲಿಲ್ಲ.

ಈಗ ಮಾತುಕತೆ ಸಂದರ್ಭದಲ್ಲಿ ರೈತ ಹೋರಾಟಗಾರರು ಸರ್ಕಾರದ ಒಂದು ತುತ್ತನ್ನೂ ಮುಟ್ಟದೇ, ಹನಿ ನೀರನ್ನೂ ಕುಡಿಯದೇ ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ. ಇದು ನಮ್ಮೆಲ್ಲ ಪ್ರಗತಿಪರ ಸಂಘಟನೆಗಳಿಗೆ ಆದರ್ಶವಾಗಬೇಕಿದೆ.

ಏಳು ಸುತ್ತಿನ ಮಾತುಕತೆ ವಿಫಲವಾಗಿವೆ. ಕೊರೆವ ಚಳಿ, ಆಗಾಗ ಉದುರುತ್ತಿರುವ ಮಳೆಯನ್ನು ಎದುರಿಸುತ್ತಲೇ ರೈತರು ಸಂಯಮವನ್ನು ಕಾಪಾಡಿಕೊಂಡಿದ್ದಾರೆ. ಪ್ರೊ. ಅಮಿತ್ ಬಾಧುರಿ ಬರೆದಂತೆ, ಸಮುದ್ರದ ಅಲೆ ರಾಜಾಜ್ಞೆಗೆ ಕಾಯುವುದಿಲ್ಲ. ಈ ಸಲ ಅಲೆ ತನ್ನ ಶಕ್ತಿ ತೋರಿಸಬೇಕೆಂದರೆ ರೈತರೊಂದಿಗೆ ನಾವೆಲ್ಲ ಕೈ ಜೋಡಿಸಲೇಬೇಕು.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...