Homeಚಳವಳಿಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಏಳು ಸುತ್ತಿನ ಮಾತುಕತೆ ವಿಫಲ. ಆದರೆ ಎಲ್ಲ ಮಾತುಕತೆ ಸಂದರ್ಭದಲ್ಲೂ ಸರ್ಕಾರದ ಊಟ ಮತ್ತು ನೀರನ್ನು ನಿರಾಕರಿಸುವ ಮೂಲಕ ರೈತರು ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ.

- Advertisement -
- Advertisement -

ಸರ್ಕಾರ ಆಟವಾಡುತ್ತಿದೆ. ಮಾತುಕತೆ ಎಂಬ ನಾಟಕ ಆಡುತ್ತಿದೆ. ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳು ಮಾತುಕತೆಗೆ ಹೋಗದಿದ್ದರೆ, ರೈತ ನಾಯಕರಿಗೆ ಸಮಸ್ಯೆ ಇತ್ಯರ್ಥವಾಗುವುದೇ ಬೇಕಿಲ್ಲ ಎಂದು ತನ್ನ ಬಾಲಂಗೋಚಿ ಮಾಧ್ಯಮಗಳ ಮೂಲಕ ಅಪಪ್ರಚಾರ ನಡೆಸುವ ಹುನ್ನಾರವನ್ನೂ ಸರ್ಕಾರ ಮಾಡುತ್ತಿದೆ.
ಆದರೆ ಮಾತುಕತೆಯ ಮಾರ್ಗವನ್ನು ಮುಕ್ತವಾಗಿ ಇಡುವ ಮೂಲಕ ರೈತ ಸಂಘಟನೆಗಳು ಪ್ರಜ್ಞಾವಂತಿಕೆ ಮೆರೆದಿವೆ. ಮಾತುಕತೆ ಹೆಸರಲ್ಲಿ ಪ್ರಭುತ್ವ ಎಂದಿನಂತೆ ರಮಿಸುವ ನಾಟಕ ಆಡುತ್ತಿದೆ. ಆದರೆ ರೈತರು ಇದಕ್ಕೆ ಬಗ್ಗುತ್ತಿಲ್ಲ. ಇನ್ನೊಂದು ಕಡೆ ಸರ್ಕಾರ ನಡೆಸುವ ಪಕ್ಷದ ವಿಕೃತ ಹಿಂಬಾಲಕ ಸಂಸ್ಥೆಗಳು ರೈತರನ್ನು, ಈ ಹೋರಾಟವನ್ನು ಸುಳ್ಳುಗಳ ಮೂಲಕ ಅವಹೇಳನ ಮಾಡುವುದು, ಪ್ರತಿಭಟನೆಗೆ ಕಳಂಕ ತರುವುದರಲ್ಲಿ ತುಂಬ ಕ್ರಿಯಾಶೀಲವಾಗಿವೆ. ಬಹುಪಾಲು ಮಾಧ್ಯಮಗಳು ಕೂಡ ಈ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ಮಾಡುವ ಮೂಲಕ ವೃತ್ತಿದ್ರೋಹ ಎಸಗುತ್ತಿವೆ.

ಪ್ರತಿ ಮಾತುಕತೆಯಲ್ಲೂ ಸರ್ಕಾರ ಏರ್ಪಡಿಸುವ ಭೋಜನ ನಿರಾಕರಿಸುತ್ತಿರುವ ರೈತ ಸಂಘಟನೆಗಳ ಮುಖಂಡರು, 6ನೆ ಸುತ್ತಿನ ಮಾತುಕತೆಯಲ್ಲಿ ಊಟ ಬೇಡಿದ ಕೇಂದ್ರ ಸಚಿವರಿಗೆ ರೊಟ್ಟಿ ನೀಡುವ ಮೂಲಕ ರೈತಾಪಿ ಸಮೂಹದ ನೀಡುವ ಪರಂಪರೆಗೆ ಸಾಂಕೇತಿಕ ಸಾಕ್ಷಿ ಒದಗಿಸಿದ್ದಾರೆ.

ಇತ್ತೀಚೆಗೆ ಮಾಜಿ ಹಣಕಾಸು ಸಚಿವ ಪಿ. ಚಿದಮಬರಂ ಈ ರೈತ ಹೋರಾಟದ ಬಗ್ಗೆ ಬರೆಯುತ್ತ, ‘ಇದು ನಮಗೆ 1942ರ ಅಗಸ್ಟ್ ತಿಂಗಳನ್ನು ನೆನಪಿಸುತ್ತಿದೆ. 1942 ಅಗಸ್ಟ್ 7-8 ರಂದು ಮುಂಬೈನ (ಆಗಿನ ಬಾಂಬೆ) ಗೋವಾಲಿಯಾ ಟ್ಯಾಂಕ್ ಮೈದಾನದಲ್ಲಿ ನಡೆದ ಐತಿಹಾಸಿಕ ಸಭೆಯಲ್ಲಿ, ಮಹಾತ್ಮ ಗಾಂಧಿ ‘ಮಾಡು ಇಲ್ಲವೇ ಮಡಿ’ ಘೋಷಣೆಯ ಮೂಲಕ ಭಾರತದಿಂದ ತೊಲಗಿ ಎಂದು ಬ್ರಿಟಿಷರನ್ನು ಎಚ್ಚರಿಸಿದ್ದರು. ಈಗಿನ ರೈತ ಹೋರಾಟದಲ್ಲಿ ಮಹಾತ್ಮ ಇಲ್ಲ, ಆದರೆ ರೈತರ ಮನಸ್ಸುಗಳ ತುಂಬ ಅಹಿಂಸಾತ್ಮಕ ಪ್ರತಿಭಟನೆಯ ಉತ್ಸಾಹವೇ ತುಂಬಿದೆ’ ಎಂದು ಉಲ್ಲೇಖಿಸಿದ್ದಾರೆ.

‘ಈ ರೈತ ಪ್ರತಿಭಟನೆಯು ಸರ್ಕಾರಗಳಿಗೆ (ಈಗಿನ ಮತ್ತು ಭವಿಷ್ಯದ ಸರ್ಕಾರಗಳಿಗೆ) ‘ಆಡಳಿತದಲ್ಲಿ ವಿನಮ್ರತೆ’ಯ ಅಗತ್ಯದ ಪಾಠಗಳನ್ನು ಕಲಿಸಲಿದೆ, ಸಂಸತ್ತಿನಲ್ಲಿ ಮಸೂದೆಗಳನ್ನು ಹೇಗೆ ಅಂಗೀಕಾರ ಮಾಡಬೇಕು, ಜನರ ಬಯಕೆಗಳ ಅನುಸಾರ ಹೇಗೆ ಆಡಳಿತ ನಡೆಸಬೇಕು ಎಂಬುದನ್ನೂ ಈ ಹೋರಾಟ ಕಲಿಸಲಿದೆ’ ಎಂದು ಚಿದಂಬರಂ ಬರೆದಿದ್ದಾರೆ.

ಇದಿರಲಿ, ಈ ಮಾತುಕತೆಯ ಆಟವನ್ನು ರೈತರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರತಿಭಟನೆಯ ಸ್ಥಳದಲ್ಲಿ ಸಂಭವಿಸಿದ ಸಾವುಗಳು ಮತ್ತು ಆತ್ಮಹತ್ಯೆಗಳ ಕುರಿತು ದೇಶದ ನಂಬರ್ 1 ಟ್ವಿಟರಿಸ್ಟ್ ಮೋದಿ ಏನನ್ನೂ ಟ್ವೀಟ್ ಮಾಡಿಲ್ಲ. ವಲಸೆ ಕಾರ್ಮಿಕರ ಸಾವುಗಳಿಗೂ ಅವರು ಸ್ಪಂದಿಸಲೇ ಇಲ್ಲವಲ್ಲ? ಆದರೆ ಸೌರವ್ ಗಂಗೂಲಿಗೆ ಅನಾರೋಗ್ಯವಾದಾಗ ಅವರು ಟ್ವೀಟ್ ಮಾಡುವುದನ್ನು ಮರೆಯಲಿಲ್ಲ.

ಈಗ ಮಾತುಕತೆ ಸಂದರ್ಭದಲ್ಲಿ ರೈತ ಹೋರಾಟಗಾರರು ಸರ್ಕಾರದ ಒಂದು ತುತ್ತನ್ನೂ ಮುಟ್ಟದೇ, ಹನಿ ನೀರನ್ನೂ ಕುಡಿಯದೇ ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ. ಇದು ನಮ್ಮೆಲ್ಲ ಪ್ರಗತಿಪರ ಸಂಘಟನೆಗಳಿಗೆ ಆದರ್ಶವಾಗಬೇಕಿದೆ.

ಏಳು ಸುತ್ತಿನ ಮಾತುಕತೆ ವಿಫಲವಾಗಿವೆ. ಕೊರೆವ ಚಳಿ, ಆಗಾಗ ಉದುರುತ್ತಿರುವ ಮಳೆಯನ್ನು ಎದುರಿಸುತ್ತಲೇ ರೈತರು ಸಂಯಮವನ್ನು ಕಾಪಾಡಿಕೊಂಡಿದ್ದಾರೆ. ಪ್ರೊ. ಅಮಿತ್ ಬಾಧುರಿ ಬರೆದಂತೆ, ಸಮುದ್ರದ ಅಲೆ ರಾಜಾಜ್ಞೆಗೆ ಕಾಯುವುದಿಲ್ಲ. ಈ ಸಲ ಅಲೆ ತನ್ನ ಶಕ್ತಿ ತೋರಿಸಬೇಕೆಂದರೆ ರೈತರೊಂದಿಗೆ ನಾವೆಲ್ಲ ಕೈ ಜೋಡಿಸಲೇಬೇಕು.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....