Homeಚಳವಳಿಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಏಳು ಸುತ್ತಿನ ಮಾತುಕತೆ ವಿಫಲ. ಆದರೆ ಎಲ್ಲ ಮಾತುಕತೆ ಸಂದರ್ಭದಲ್ಲೂ ಸರ್ಕಾರದ ಊಟ ಮತ್ತು ನೀರನ್ನು ನಿರಾಕರಿಸುವ ಮೂಲಕ ರೈತರು ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ.

- Advertisement -
- Advertisement -

ಸರ್ಕಾರ ಆಟವಾಡುತ್ತಿದೆ. ಮಾತುಕತೆ ಎಂಬ ನಾಟಕ ಆಡುತ್ತಿದೆ. ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳು ಮಾತುಕತೆಗೆ ಹೋಗದಿದ್ದರೆ, ರೈತ ನಾಯಕರಿಗೆ ಸಮಸ್ಯೆ ಇತ್ಯರ್ಥವಾಗುವುದೇ ಬೇಕಿಲ್ಲ ಎಂದು ತನ್ನ ಬಾಲಂಗೋಚಿ ಮಾಧ್ಯಮಗಳ ಮೂಲಕ ಅಪಪ್ರಚಾರ ನಡೆಸುವ ಹುನ್ನಾರವನ್ನೂ ಸರ್ಕಾರ ಮಾಡುತ್ತಿದೆ.
ಆದರೆ ಮಾತುಕತೆಯ ಮಾರ್ಗವನ್ನು ಮುಕ್ತವಾಗಿ ಇಡುವ ಮೂಲಕ ರೈತ ಸಂಘಟನೆಗಳು ಪ್ರಜ್ಞಾವಂತಿಕೆ ಮೆರೆದಿವೆ. ಮಾತುಕತೆ ಹೆಸರಲ್ಲಿ ಪ್ರಭುತ್ವ ಎಂದಿನಂತೆ ರಮಿಸುವ ನಾಟಕ ಆಡುತ್ತಿದೆ. ಆದರೆ ರೈತರು ಇದಕ್ಕೆ ಬಗ್ಗುತ್ತಿಲ್ಲ. ಇನ್ನೊಂದು ಕಡೆ ಸರ್ಕಾರ ನಡೆಸುವ ಪಕ್ಷದ ವಿಕೃತ ಹಿಂಬಾಲಕ ಸಂಸ್ಥೆಗಳು ರೈತರನ್ನು, ಈ ಹೋರಾಟವನ್ನು ಸುಳ್ಳುಗಳ ಮೂಲಕ ಅವಹೇಳನ ಮಾಡುವುದು, ಪ್ರತಿಭಟನೆಗೆ ಕಳಂಕ ತರುವುದರಲ್ಲಿ ತುಂಬ ಕ್ರಿಯಾಶೀಲವಾಗಿವೆ. ಬಹುಪಾಲು ಮಾಧ್ಯಮಗಳು ಕೂಡ ಈ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ಮಾಡುವ ಮೂಲಕ ವೃತ್ತಿದ್ರೋಹ ಎಸಗುತ್ತಿವೆ.

ಪ್ರತಿ ಮಾತುಕತೆಯಲ್ಲೂ ಸರ್ಕಾರ ಏರ್ಪಡಿಸುವ ಭೋಜನ ನಿರಾಕರಿಸುತ್ತಿರುವ ರೈತ ಸಂಘಟನೆಗಳ ಮುಖಂಡರು, 6ನೆ ಸುತ್ತಿನ ಮಾತುಕತೆಯಲ್ಲಿ ಊಟ ಬೇಡಿದ ಕೇಂದ್ರ ಸಚಿವರಿಗೆ ರೊಟ್ಟಿ ನೀಡುವ ಮೂಲಕ ರೈತಾಪಿ ಸಮೂಹದ ನೀಡುವ ಪರಂಪರೆಗೆ ಸಾಂಕೇತಿಕ ಸಾಕ್ಷಿ ಒದಗಿಸಿದ್ದಾರೆ.

ಇತ್ತೀಚೆಗೆ ಮಾಜಿ ಹಣಕಾಸು ಸಚಿವ ಪಿ. ಚಿದಮಬರಂ ಈ ರೈತ ಹೋರಾಟದ ಬಗ್ಗೆ ಬರೆಯುತ್ತ, ‘ಇದು ನಮಗೆ 1942ರ ಅಗಸ್ಟ್ ತಿಂಗಳನ್ನು ನೆನಪಿಸುತ್ತಿದೆ. 1942 ಅಗಸ್ಟ್ 7-8 ರಂದು ಮುಂಬೈನ (ಆಗಿನ ಬಾಂಬೆ) ಗೋವಾಲಿಯಾ ಟ್ಯಾಂಕ್ ಮೈದಾನದಲ್ಲಿ ನಡೆದ ಐತಿಹಾಸಿಕ ಸಭೆಯಲ್ಲಿ, ಮಹಾತ್ಮ ಗಾಂಧಿ ‘ಮಾಡು ಇಲ್ಲವೇ ಮಡಿ’ ಘೋಷಣೆಯ ಮೂಲಕ ಭಾರತದಿಂದ ತೊಲಗಿ ಎಂದು ಬ್ರಿಟಿಷರನ್ನು ಎಚ್ಚರಿಸಿದ್ದರು. ಈಗಿನ ರೈತ ಹೋರಾಟದಲ್ಲಿ ಮಹಾತ್ಮ ಇಲ್ಲ, ಆದರೆ ರೈತರ ಮನಸ್ಸುಗಳ ತುಂಬ ಅಹಿಂಸಾತ್ಮಕ ಪ್ರತಿಭಟನೆಯ ಉತ್ಸಾಹವೇ ತುಂಬಿದೆ’ ಎಂದು ಉಲ್ಲೇಖಿಸಿದ್ದಾರೆ.

‘ಈ ರೈತ ಪ್ರತಿಭಟನೆಯು ಸರ್ಕಾರಗಳಿಗೆ (ಈಗಿನ ಮತ್ತು ಭವಿಷ್ಯದ ಸರ್ಕಾರಗಳಿಗೆ) ‘ಆಡಳಿತದಲ್ಲಿ ವಿನಮ್ರತೆ’ಯ ಅಗತ್ಯದ ಪಾಠಗಳನ್ನು ಕಲಿಸಲಿದೆ, ಸಂಸತ್ತಿನಲ್ಲಿ ಮಸೂದೆಗಳನ್ನು ಹೇಗೆ ಅಂಗೀಕಾರ ಮಾಡಬೇಕು, ಜನರ ಬಯಕೆಗಳ ಅನುಸಾರ ಹೇಗೆ ಆಡಳಿತ ನಡೆಸಬೇಕು ಎಂಬುದನ್ನೂ ಈ ಹೋರಾಟ ಕಲಿಸಲಿದೆ’ ಎಂದು ಚಿದಂಬರಂ ಬರೆದಿದ್ದಾರೆ.

ಇದಿರಲಿ, ಈ ಮಾತುಕತೆಯ ಆಟವನ್ನು ರೈತರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರತಿಭಟನೆಯ ಸ್ಥಳದಲ್ಲಿ ಸಂಭವಿಸಿದ ಸಾವುಗಳು ಮತ್ತು ಆತ್ಮಹತ್ಯೆಗಳ ಕುರಿತು ದೇಶದ ನಂಬರ್ 1 ಟ್ವಿಟರಿಸ್ಟ್ ಮೋದಿ ಏನನ್ನೂ ಟ್ವೀಟ್ ಮಾಡಿಲ್ಲ. ವಲಸೆ ಕಾರ್ಮಿಕರ ಸಾವುಗಳಿಗೂ ಅವರು ಸ್ಪಂದಿಸಲೇ ಇಲ್ಲವಲ್ಲ? ಆದರೆ ಸೌರವ್ ಗಂಗೂಲಿಗೆ ಅನಾರೋಗ್ಯವಾದಾಗ ಅವರು ಟ್ವೀಟ್ ಮಾಡುವುದನ್ನು ಮರೆಯಲಿಲ್ಲ.

ಈಗ ಮಾತುಕತೆ ಸಂದರ್ಭದಲ್ಲಿ ರೈತ ಹೋರಾಟಗಾರರು ಸರ್ಕಾರದ ಒಂದು ತುತ್ತನ್ನೂ ಮುಟ್ಟದೇ, ಹನಿ ನೀರನ್ನೂ ಕುಡಿಯದೇ ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ. ಇದು ನಮ್ಮೆಲ್ಲ ಪ್ರಗತಿಪರ ಸಂಘಟನೆಗಳಿಗೆ ಆದರ್ಶವಾಗಬೇಕಿದೆ.

ಏಳು ಸುತ್ತಿನ ಮಾತುಕತೆ ವಿಫಲವಾಗಿವೆ. ಕೊರೆವ ಚಳಿ, ಆಗಾಗ ಉದುರುತ್ತಿರುವ ಮಳೆಯನ್ನು ಎದುರಿಸುತ್ತಲೇ ರೈತರು ಸಂಯಮವನ್ನು ಕಾಪಾಡಿಕೊಂಡಿದ್ದಾರೆ. ಪ್ರೊ. ಅಮಿತ್ ಬಾಧುರಿ ಬರೆದಂತೆ, ಸಮುದ್ರದ ಅಲೆ ರಾಜಾಜ್ಞೆಗೆ ಕಾಯುವುದಿಲ್ಲ. ಈ ಸಲ ಅಲೆ ತನ್ನ ಶಕ್ತಿ ತೋರಿಸಬೇಕೆಂದರೆ ರೈತರೊಂದಿಗೆ ನಾವೆಲ್ಲ ಕೈ ಜೋಡಿಸಲೇಬೇಕು.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...