Homeಚಳವಳಿಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಏಳು ಸುತ್ತಿನ ಮಾತುಕತೆ ವಿಫಲ. ಆದರೆ ಎಲ್ಲ ಮಾತುಕತೆ ಸಂದರ್ಭದಲ್ಲೂ ಸರ್ಕಾರದ ಊಟ ಮತ್ತು ನೀರನ್ನು ನಿರಾಕರಿಸುವ ಮೂಲಕ ರೈತರು ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ.

- Advertisement -
- Advertisement -

ಸರ್ಕಾರ ಆಟವಾಡುತ್ತಿದೆ. ಮಾತುಕತೆ ಎಂಬ ನಾಟಕ ಆಡುತ್ತಿದೆ. ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳು ಮಾತುಕತೆಗೆ ಹೋಗದಿದ್ದರೆ, ರೈತ ನಾಯಕರಿಗೆ ಸಮಸ್ಯೆ ಇತ್ಯರ್ಥವಾಗುವುದೇ ಬೇಕಿಲ್ಲ ಎಂದು ತನ್ನ ಬಾಲಂಗೋಚಿ ಮಾಧ್ಯಮಗಳ ಮೂಲಕ ಅಪಪ್ರಚಾರ ನಡೆಸುವ ಹುನ್ನಾರವನ್ನೂ ಸರ್ಕಾರ ಮಾಡುತ್ತಿದೆ.
ಆದರೆ ಮಾತುಕತೆಯ ಮಾರ್ಗವನ್ನು ಮುಕ್ತವಾಗಿ ಇಡುವ ಮೂಲಕ ರೈತ ಸಂಘಟನೆಗಳು ಪ್ರಜ್ಞಾವಂತಿಕೆ ಮೆರೆದಿವೆ. ಮಾತುಕತೆ ಹೆಸರಲ್ಲಿ ಪ್ರಭುತ್ವ ಎಂದಿನಂತೆ ರಮಿಸುವ ನಾಟಕ ಆಡುತ್ತಿದೆ. ಆದರೆ ರೈತರು ಇದಕ್ಕೆ ಬಗ್ಗುತ್ತಿಲ್ಲ. ಇನ್ನೊಂದು ಕಡೆ ಸರ್ಕಾರ ನಡೆಸುವ ಪಕ್ಷದ ವಿಕೃತ ಹಿಂಬಾಲಕ ಸಂಸ್ಥೆಗಳು ರೈತರನ್ನು, ಈ ಹೋರಾಟವನ್ನು ಸುಳ್ಳುಗಳ ಮೂಲಕ ಅವಹೇಳನ ಮಾಡುವುದು, ಪ್ರತಿಭಟನೆಗೆ ಕಳಂಕ ತರುವುದರಲ್ಲಿ ತುಂಬ ಕ್ರಿಯಾಶೀಲವಾಗಿವೆ. ಬಹುಪಾಲು ಮಾಧ್ಯಮಗಳು ಕೂಡ ಈ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ಮಾಡುವ ಮೂಲಕ ವೃತ್ತಿದ್ರೋಹ ಎಸಗುತ್ತಿವೆ.

ಪ್ರತಿ ಮಾತುಕತೆಯಲ್ಲೂ ಸರ್ಕಾರ ಏರ್ಪಡಿಸುವ ಭೋಜನ ನಿರಾಕರಿಸುತ್ತಿರುವ ರೈತ ಸಂಘಟನೆಗಳ ಮುಖಂಡರು, 6ನೆ ಸುತ್ತಿನ ಮಾತುಕತೆಯಲ್ಲಿ ಊಟ ಬೇಡಿದ ಕೇಂದ್ರ ಸಚಿವರಿಗೆ ರೊಟ್ಟಿ ನೀಡುವ ಮೂಲಕ ರೈತಾಪಿ ಸಮೂಹದ ನೀಡುವ ಪರಂಪರೆಗೆ ಸಾಂಕೇತಿಕ ಸಾಕ್ಷಿ ಒದಗಿಸಿದ್ದಾರೆ.

ಇತ್ತೀಚೆಗೆ ಮಾಜಿ ಹಣಕಾಸು ಸಚಿವ ಪಿ. ಚಿದಮಬರಂ ಈ ರೈತ ಹೋರಾಟದ ಬಗ್ಗೆ ಬರೆಯುತ್ತ, ‘ಇದು ನಮಗೆ 1942ರ ಅಗಸ್ಟ್ ತಿಂಗಳನ್ನು ನೆನಪಿಸುತ್ತಿದೆ. 1942 ಅಗಸ್ಟ್ 7-8 ರಂದು ಮುಂಬೈನ (ಆಗಿನ ಬಾಂಬೆ) ಗೋವಾಲಿಯಾ ಟ್ಯಾಂಕ್ ಮೈದಾನದಲ್ಲಿ ನಡೆದ ಐತಿಹಾಸಿಕ ಸಭೆಯಲ್ಲಿ, ಮಹಾತ್ಮ ಗಾಂಧಿ ‘ಮಾಡು ಇಲ್ಲವೇ ಮಡಿ’ ಘೋಷಣೆಯ ಮೂಲಕ ಭಾರತದಿಂದ ತೊಲಗಿ ಎಂದು ಬ್ರಿಟಿಷರನ್ನು ಎಚ್ಚರಿಸಿದ್ದರು. ಈಗಿನ ರೈತ ಹೋರಾಟದಲ್ಲಿ ಮಹಾತ್ಮ ಇಲ್ಲ, ಆದರೆ ರೈತರ ಮನಸ್ಸುಗಳ ತುಂಬ ಅಹಿಂಸಾತ್ಮಕ ಪ್ರತಿಭಟನೆಯ ಉತ್ಸಾಹವೇ ತುಂಬಿದೆ’ ಎಂದು ಉಲ್ಲೇಖಿಸಿದ್ದಾರೆ.

‘ಈ ರೈತ ಪ್ರತಿಭಟನೆಯು ಸರ್ಕಾರಗಳಿಗೆ (ಈಗಿನ ಮತ್ತು ಭವಿಷ್ಯದ ಸರ್ಕಾರಗಳಿಗೆ) ‘ಆಡಳಿತದಲ್ಲಿ ವಿನಮ್ರತೆ’ಯ ಅಗತ್ಯದ ಪಾಠಗಳನ್ನು ಕಲಿಸಲಿದೆ, ಸಂಸತ್ತಿನಲ್ಲಿ ಮಸೂದೆಗಳನ್ನು ಹೇಗೆ ಅಂಗೀಕಾರ ಮಾಡಬೇಕು, ಜನರ ಬಯಕೆಗಳ ಅನುಸಾರ ಹೇಗೆ ಆಡಳಿತ ನಡೆಸಬೇಕು ಎಂಬುದನ್ನೂ ಈ ಹೋರಾಟ ಕಲಿಸಲಿದೆ’ ಎಂದು ಚಿದಂಬರಂ ಬರೆದಿದ್ದಾರೆ.

ಇದಿರಲಿ, ಈ ಮಾತುಕತೆಯ ಆಟವನ್ನು ರೈತರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರತಿಭಟನೆಯ ಸ್ಥಳದಲ್ಲಿ ಸಂಭವಿಸಿದ ಸಾವುಗಳು ಮತ್ತು ಆತ್ಮಹತ್ಯೆಗಳ ಕುರಿತು ದೇಶದ ನಂಬರ್ 1 ಟ್ವಿಟರಿಸ್ಟ್ ಮೋದಿ ಏನನ್ನೂ ಟ್ವೀಟ್ ಮಾಡಿಲ್ಲ. ವಲಸೆ ಕಾರ್ಮಿಕರ ಸಾವುಗಳಿಗೂ ಅವರು ಸ್ಪಂದಿಸಲೇ ಇಲ್ಲವಲ್ಲ? ಆದರೆ ಸೌರವ್ ಗಂಗೂಲಿಗೆ ಅನಾರೋಗ್ಯವಾದಾಗ ಅವರು ಟ್ವೀಟ್ ಮಾಡುವುದನ್ನು ಮರೆಯಲಿಲ್ಲ.

ಈಗ ಮಾತುಕತೆ ಸಂದರ್ಭದಲ್ಲಿ ರೈತ ಹೋರಾಟಗಾರರು ಸರ್ಕಾರದ ಒಂದು ತುತ್ತನ್ನೂ ಮುಟ್ಟದೇ, ಹನಿ ನೀರನ್ನೂ ಕುಡಿಯದೇ ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ. ಇದು ನಮ್ಮೆಲ್ಲ ಪ್ರಗತಿಪರ ಸಂಘಟನೆಗಳಿಗೆ ಆದರ್ಶವಾಗಬೇಕಿದೆ.

ಏಳು ಸುತ್ತಿನ ಮಾತುಕತೆ ವಿಫಲವಾಗಿವೆ. ಕೊರೆವ ಚಳಿ, ಆಗಾಗ ಉದುರುತ್ತಿರುವ ಮಳೆಯನ್ನು ಎದುರಿಸುತ್ತಲೇ ರೈತರು ಸಂಯಮವನ್ನು ಕಾಪಾಡಿಕೊಂಡಿದ್ದಾರೆ. ಪ್ರೊ. ಅಮಿತ್ ಬಾಧುರಿ ಬರೆದಂತೆ, ಸಮುದ್ರದ ಅಲೆ ರಾಜಾಜ್ಞೆಗೆ ಕಾಯುವುದಿಲ್ಲ. ಈ ಸಲ ಅಲೆ ತನ್ನ ಶಕ್ತಿ ತೋರಿಸಬೇಕೆಂದರೆ ರೈತರೊಂದಿಗೆ ನಾವೆಲ್ಲ ಕೈ ಜೋಡಿಸಲೇಬೇಕು.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...