Homeಚಳವಳಿಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಏಳು ಸುತ್ತಿನ ಮಾತುಕತೆ ವಿಫಲ. ಆದರೆ ಎಲ್ಲ ಮಾತುಕತೆ ಸಂದರ್ಭದಲ್ಲೂ ಸರ್ಕಾರದ ಊಟ ಮತ್ತು ನೀರನ್ನು ನಿರಾಕರಿಸುವ ಮೂಲಕ ರೈತರು ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ.

- Advertisement -
- Advertisement -

ಸರ್ಕಾರ ಆಟವಾಡುತ್ತಿದೆ. ಮಾತುಕತೆ ಎಂಬ ನಾಟಕ ಆಡುತ್ತಿದೆ. ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳು ಮಾತುಕತೆಗೆ ಹೋಗದಿದ್ದರೆ, ರೈತ ನಾಯಕರಿಗೆ ಸಮಸ್ಯೆ ಇತ್ಯರ್ಥವಾಗುವುದೇ ಬೇಕಿಲ್ಲ ಎಂದು ತನ್ನ ಬಾಲಂಗೋಚಿ ಮಾಧ್ಯಮಗಳ ಮೂಲಕ ಅಪಪ್ರಚಾರ ನಡೆಸುವ ಹುನ್ನಾರವನ್ನೂ ಸರ್ಕಾರ ಮಾಡುತ್ತಿದೆ.
ಆದರೆ ಮಾತುಕತೆಯ ಮಾರ್ಗವನ್ನು ಮುಕ್ತವಾಗಿ ಇಡುವ ಮೂಲಕ ರೈತ ಸಂಘಟನೆಗಳು ಪ್ರಜ್ಞಾವಂತಿಕೆ ಮೆರೆದಿವೆ. ಮಾತುಕತೆ ಹೆಸರಲ್ಲಿ ಪ್ರಭುತ್ವ ಎಂದಿನಂತೆ ರಮಿಸುವ ನಾಟಕ ಆಡುತ್ತಿದೆ. ಆದರೆ ರೈತರು ಇದಕ್ಕೆ ಬಗ್ಗುತ್ತಿಲ್ಲ. ಇನ್ನೊಂದು ಕಡೆ ಸರ್ಕಾರ ನಡೆಸುವ ಪಕ್ಷದ ವಿಕೃತ ಹಿಂಬಾಲಕ ಸಂಸ್ಥೆಗಳು ರೈತರನ್ನು, ಈ ಹೋರಾಟವನ್ನು ಸುಳ್ಳುಗಳ ಮೂಲಕ ಅವಹೇಳನ ಮಾಡುವುದು, ಪ್ರತಿಭಟನೆಗೆ ಕಳಂಕ ತರುವುದರಲ್ಲಿ ತುಂಬ ಕ್ರಿಯಾಶೀಲವಾಗಿವೆ. ಬಹುಪಾಲು ಮಾಧ್ಯಮಗಳು ಕೂಡ ಈ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ಮಾಡುವ ಮೂಲಕ ವೃತ್ತಿದ್ರೋಹ ಎಸಗುತ್ತಿವೆ.

ಪ್ರತಿ ಮಾತುಕತೆಯಲ್ಲೂ ಸರ್ಕಾರ ಏರ್ಪಡಿಸುವ ಭೋಜನ ನಿರಾಕರಿಸುತ್ತಿರುವ ರೈತ ಸಂಘಟನೆಗಳ ಮುಖಂಡರು, 6ನೆ ಸುತ್ತಿನ ಮಾತುಕತೆಯಲ್ಲಿ ಊಟ ಬೇಡಿದ ಕೇಂದ್ರ ಸಚಿವರಿಗೆ ರೊಟ್ಟಿ ನೀಡುವ ಮೂಲಕ ರೈತಾಪಿ ಸಮೂಹದ ನೀಡುವ ಪರಂಪರೆಗೆ ಸಾಂಕೇತಿಕ ಸಾಕ್ಷಿ ಒದಗಿಸಿದ್ದಾರೆ.

ಇತ್ತೀಚೆಗೆ ಮಾಜಿ ಹಣಕಾಸು ಸಚಿವ ಪಿ. ಚಿದಮಬರಂ ಈ ರೈತ ಹೋರಾಟದ ಬಗ್ಗೆ ಬರೆಯುತ್ತ, ‘ಇದು ನಮಗೆ 1942ರ ಅಗಸ್ಟ್ ತಿಂಗಳನ್ನು ನೆನಪಿಸುತ್ತಿದೆ. 1942 ಅಗಸ್ಟ್ 7-8 ರಂದು ಮುಂಬೈನ (ಆಗಿನ ಬಾಂಬೆ) ಗೋವಾಲಿಯಾ ಟ್ಯಾಂಕ್ ಮೈದಾನದಲ್ಲಿ ನಡೆದ ಐತಿಹಾಸಿಕ ಸಭೆಯಲ್ಲಿ, ಮಹಾತ್ಮ ಗಾಂಧಿ ‘ಮಾಡು ಇಲ್ಲವೇ ಮಡಿ’ ಘೋಷಣೆಯ ಮೂಲಕ ಭಾರತದಿಂದ ತೊಲಗಿ ಎಂದು ಬ್ರಿಟಿಷರನ್ನು ಎಚ್ಚರಿಸಿದ್ದರು. ಈಗಿನ ರೈತ ಹೋರಾಟದಲ್ಲಿ ಮಹಾತ್ಮ ಇಲ್ಲ, ಆದರೆ ರೈತರ ಮನಸ್ಸುಗಳ ತುಂಬ ಅಹಿಂಸಾತ್ಮಕ ಪ್ರತಿಭಟನೆಯ ಉತ್ಸಾಹವೇ ತುಂಬಿದೆ’ ಎಂದು ಉಲ್ಲೇಖಿಸಿದ್ದಾರೆ.

‘ಈ ರೈತ ಪ್ರತಿಭಟನೆಯು ಸರ್ಕಾರಗಳಿಗೆ (ಈಗಿನ ಮತ್ತು ಭವಿಷ್ಯದ ಸರ್ಕಾರಗಳಿಗೆ) ‘ಆಡಳಿತದಲ್ಲಿ ವಿನಮ್ರತೆ’ಯ ಅಗತ್ಯದ ಪಾಠಗಳನ್ನು ಕಲಿಸಲಿದೆ, ಸಂಸತ್ತಿನಲ್ಲಿ ಮಸೂದೆಗಳನ್ನು ಹೇಗೆ ಅಂಗೀಕಾರ ಮಾಡಬೇಕು, ಜನರ ಬಯಕೆಗಳ ಅನುಸಾರ ಹೇಗೆ ಆಡಳಿತ ನಡೆಸಬೇಕು ಎಂಬುದನ್ನೂ ಈ ಹೋರಾಟ ಕಲಿಸಲಿದೆ’ ಎಂದು ಚಿದಂಬರಂ ಬರೆದಿದ್ದಾರೆ.

ಇದಿರಲಿ, ಈ ಮಾತುಕತೆಯ ಆಟವನ್ನು ರೈತರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರತಿಭಟನೆಯ ಸ್ಥಳದಲ್ಲಿ ಸಂಭವಿಸಿದ ಸಾವುಗಳು ಮತ್ತು ಆತ್ಮಹತ್ಯೆಗಳ ಕುರಿತು ದೇಶದ ನಂಬರ್ 1 ಟ್ವಿಟರಿಸ್ಟ್ ಮೋದಿ ಏನನ್ನೂ ಟ್ವೀಟ್ ಮಾಡಿಲ್ಲ. ವಲಸೆ ಕಾರ್ಮಿಕರ ಸಾವುಗಳಿಗೂ ಅವರು ಸ್ಪಂದಿಸಲೇ ಇಲ್ಲವಲ್ಲ? ಆದರೆ ಸೌರವ್ ಗಂಗೂಲಿಗೆ ಅನಾರೋಗ್ಯವಾದಾಗ ಅವರು ಟ್ವೀಟ್ ಮಾಡುವುದನ್ನು ಮರೆಯಲಿಲ್ಲ.

ಈಗ ಮಾತುಕತೆ ಸಂದರ್ಭದಲ್ಲಿ ರೈತ ಹೋರಾಟಗಾರರು ಸರ್ಕಾರದ ಒಂದು ತುತ್ತನ್ನೂ ಮುಟ್ಟದೇ, ಹನಿ ನೀರನ್ನೂ ಕುಡಿಯದೇ ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ. ಇದು ನಮ್ಮೆಲ್ಲ ಪ್ರಗತಿಪರ ಸಂಘಟನೆಗಳಿಗೆ ಆದರ್ಶವಾಗಬೇಕಿದೆ.

ಏಳು ಸುತ್ತಿನ ಮಾತುಕತೆ ವಿಫಲವಾಗಿವೆ. ಕೊರೆವ ಚಳಿ, ಆಗಾಗ ಉದುರುತ್ತಿರುವ ಮಳೆಯನ್ನು ಎದುರಿಸುತ್ತಲೇ ರೈತರು ಸಂಯಮವನ್ನು ಕಾಪಾಡಿಕೊಂಡಿದ್ದಾರೆ. ಪ್ರೊ. ಅಮಿತ್ ಬಾಧುರಿ ಬರೆದಂತೆ, ಸಮುದ್ರದ ಅಲೆ ರಾಜಾಜ್ಞೆಗೆ ಕಾಯುವುದಿಲ್ಲ. ಈ ಸಲ ಅಲೆ ತನ್ನ ಶಕ್ತಿ ತೋರಿಸಬೇಕೆಂದರೆ ರೈತರೊಂದಿಗೆ ನಾವೆಲ್ಲ ಕೈ ಜೋಡಿಸಲೇಬೇಕು.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...