Homeಚಳವಳಿಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಏಳು ಸುತ್ತಿನ ಮಾತುಕತೆ ವಿಫಲ. ಆದರೆ ಎಲ್ಲ ಮಾತುಕತೆ ಸಂದರ್ಭದಲ್ಲೂ ಸರ್ಕಾರದ ಊಟ ಮತ್ತು ನೀರನ್ನು ನಿರಾಕರಿಸುವ ಮೂಲಕ ರೈತರು ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ.

- Advertisement -
- Advertisement -

ಸರ್ಕಾರ ಆಟವಾಡುತ್ತಿದೆ. ಮಾತುಕತೆ ಎಂಬ ನಾಟಕ ಆಡುತ್ತಿದೆ. ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳು ಮಾತುಕತೆಗೆ ಹೋಗದಿದ್ದರೆ, ರೈತ ನಾಯಕರಿಗೆ ಸಮಸ್ಯೆ ಇತ್ಯರ್ಥವಾಗುವುದೇ ಬೇಕಿಲ್ಲ ಎಂದು ತನ್ನ ಬಾಲಂಗೋಚಿ ಮಾಧ್ಯಮಗಳ ಮೂಲಕ ಅಪಪ್ರಚಾರ ನಡೆಸುವ ಹುನ್ನಾರವನ್ನೂ ಸರ್ಕಾರ ಮಾಡುತ್ತಿದೆ.
ಆದರೆ ಮಾತುಕತೆಯ ಮಾರ್ಗವನ್ನು ಮುಕ್ತವಾಗಿ ಇಡುವ ಮೂಲಕ ರೈತ ಸಂಘಟನೆಗಳು ಪ್ರಜ್ಞಾವಂತಿಕೆ ಮೆರೆದಿವೆ. ಮಾತುಕತೆ ಹೆಸರಲ್ಲಿ ಪ್ರಭುತ್ವ ಎಂದಿನಂತೆ ರಮಿಸುವ ನಾಟಕ ಆಡುತ್ತಿದೆ. ಆದರೆ ರೈತರು ಇದಕ್ಕೆ ಬಗ್ಗುತ್ತಿಲ್ಲ. ಇನ್ನೊಂದು ಕಡೆ ಸರ್ಕಾರ ನಡೆಸುವ ಪಕ್ಷದ ವಿಕೃತ ಹಿಂಬಾಲಕ ಸಂಸ್ಥೆಗಳು ರೈತರನ್ನು, ಈ ಹೋರಾಟವನ್ನು ಸುಳ್ಳುಗಳ ಮೂಲಕ ಅವಹೇಳನ ಮಾಡುವುದು, ಪ್ರತಿಭಟನೆಗೆ ಕಳಂಕ ತರುವುದರಲ್ಲಿ ತುಂಬ ಕ್ರಿಯಾಶೀಲವಾಗಿವೆ. ಬಹುಪಾಲು ಮಾಧ್ಯಮಗಳು ಕೂಡ ಈ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ಮಾಡುವ ಮೂಲಕ ವೃತ್ತಿದ್ರೋಹ ಎಸಗುತ್ತಿವೆ.

ಪ್ರತಿ ಮಾತುಕತೆಯಲ್ಲೂ ಸರ್ಕಾರ ಏರ್ಪಡಿಸುವ ಭೋಜನ ನಿರಾಕರಿಸುತ್ತಿರುವ ರೈತ ಸಂಘಟನೆಗಳ ಮುಖಂಡರು, 6ನೆ ಸುತ್ತಿನ ಮಾತುಕತೆಯಲ್ಲಿ ಊಟ ಬೇಡಿದ ಕೇಂದ್ರ ಸಚಿವರಿಗೆ ರೊಟ್ಟಿ ನೀಡುವ ಮೂಲಕ ರೈತಾಪಿ ಸಮೂಹದ ನೀಡುವ ಪರಂಪರೆಗೆ ಸಾಂಕೇತಿಕ ಸಾಕ್ಷಿ ಒದಗಿಸಿದ್ದಾರೆ.

ಇತ್ತೀಚೆಗೆ ಮಾಜಿ ಹಣಕಾಸು ಸಚಿವ ಪಿ. ಚಿದಮಬರಂ ಈ ರೈತ ಹೋರಾಟದ ಬಗ್ಗೆ ಬರೆಯುತ್ತ, ‘ಇದು ನಮಗೆ 1942ರ ಅಗಸ್ಟ್ ತಿಂಗಳನ್ನು ನೆನಪಿಸುತ್ತಿದೆ. 1942 ಅಗಸ್ಟ್ 7-8 ರಂದು ಮುಂಬೈನ (ಆಗಿನ ಬಾಂಬೆ) ಗೋವಾಲಿಯಾ ಟ್ಯಾಂಕ್ ಮೈದಾನದಲ್ಲಿ ನಡೆದ ಐತಿಹಾಸಿಕ ಸಭೆಯಲ್ಲಿ, ಮಹಾತ್ಮ ಗಾಂಧಿ ‘ಮಾಡು ಇಲ್ಲವೇ ಮಡಿ’ ಘೋಷಣೆಯ ಮೂಲಕ ಭಾರತದಿಂದ ತೊಲಗಿ ಎಂದು ಬ್ರಿಟಿಷರನ್ನು ಎಚ್ಚರಿಸಿದ್ದರು. ಈಗಿನ ರೈತ ಹೋರಾಟದಲ್ಲಿ ಮಹಾತ್ಮ ಇಲ್ಲ, ಆದರೆ ರೈತರ ಮನಸ್ಸುಗಳ ತುಂಬ ಅಹಿಂಸಾತ್ಮಕ ಪ್ರತಿಭಟನೆಯ ಉತ್ಸಾಹವೇ ತುಂಬಿದೆ’ ಎಂದು ಉಲ್ಲೇಖಿಸಿದ್ದಾರೆ.

‘ಈ ರೈತ ಪ್ರತಿಭಟನೆಯು ಸರ್ಕಾರಗಳಿಗೆ (ಈಗಿನ ಮತ್ತು ಭವಿಷ್ಯದ ಸರ್ಕಾರಗಳಿಗೆ) ‘ಆಡಳಿತದಲ್ಲಿ ವಿನಮ್ರತೆ’ಯ ಅಗತ್ಯದ ಪಾಠಗಳನ್ನು ಕಲಿಸಲಿದೆ, ಸಂಸತ್ತಿನಲ್ಲಿ ಮಸೂದೆಗಳನ್ನು ಹೇಗೆ ಅಂಗೀಕಾರ ಮಾಡಬೇಕು, ಜನರ ಬಯಕೆಗಳ ಅನುಸಾರ ಹೇಗೆ ಆಡಳಿತ ನಡೆಸಬೇಕು ಎಂಬುದನ್ನೂ ಈ ಹೋರಾಟ ಕಲಿಸಲಿದೆ’ ಎಂದು ಚಿದಂಬರಂ ಬರೆದಿದ್ದಾರೆ.

ಇದಿರಲಿ, ಈ ಮಾತುಕತೆಯ ಆಟವನ್ನು ರೈತರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರತಿಭಟನೆಯ ಸ್ಥಳದಲ್ಲಿ ಸಂಭವಿಸಿದ ಸಾವುಗಳು ಮತ್ತು ಆತ್ಮಹತ್ಯೆಗಳ ಕುರಿತು ದೇಶದ ನಂಬರ್ 1 ಟ್ವಿಟರಿಸ್ಟ್ ಮೋದಿ ಏನನ್ನೂ ಟ್ವೀಟ್ ಮಾಡಿಲ್ಲ. ವಲಸೆ ಕಾರ್ಮಿಕರ ಸಾವುಗಳಿಗೂ ಅವರು ಸ್ಪಂದಿಸಲೇ ಇಲ್ಲವಲ್ಲ? ಆದರೆ ಸೌರವ್ ಗಂಗೂಲಿಗೆ ಅನಾರೋಗ್ಯವಾದಾಗ ಅವರು ಟ್ವೀಟ್ ಮಾಡುವುದನ್ನು ಮರೆಯಲಿಲ್ಲ.

ಈಗ ಮಾತುಕತೆ ಸಂದರ್ಭದಲ್ಲಿ ರೈತ ಹೋರಾಟಗಾರರು ಸರ್ಕಾರದ ಒಂದು ತುತ್ತನ್ನೂ ಮುಟ್ಟದೇ, ಹನಿ ನೀರನ್ನೂ ಕುಡಿಯದೇ ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ. ಇದು ನಮ್ಮೆಲ್ಲ ಪ್ರಗತಿಪರ ಸಂಘಟನೆಗಳಿಗೆ ಆದರ್ಶವಾಗಬೇಕಿದೆ.

ಏಳು ಸುತ್ತಿನ ಮಾತುಕತೆ ವಿಫಲವಾಗಿವೆ. ಕೊರೆವ ಚಳಿ, ಆಗಾಗ ಉದುರುತ್ತಿರುವ ಮಳೆಯನ್ನು ಎದುರಿಸುತ್ತಲೇ ರೈತರು ಸಂಯಮವನ್ನು ಕಾಪಾಡಿಕೊಂಡಿದ್ದಾರೆ. ಪ್ರೊ. ಅಮಿತ್ ಬಾಧುರಿ ಬರೆದಂತೆ, ಸಮುದ್ರದ ಅಲೆ ರಾಜಾಜ್ಞೆಗೆ ಕಾಯುವುದಿಲ್ಲ. ಈ ಸಲ ಅಲೆ ತನ್ನ ಶಕ್ತಿ ತೋರಿಸಬೇಕೆಂದರೆ ರೈತರೊಂದಿಗೆ ನಾವೆಲ್ಲ ಕೈ ಜೋಡಿಸಲೇಬೇಕು.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...