Homeಚಳವಳಿಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಸರ್ಕಾರದ ಮಾತುಕತೆ ನಾಟಕ: ರೈತರಿಂದ ಹೊಸ ‘ಅಸಹಕಾರ’ ಚಳವಳಿ

ಏಳು ಸುತ್ತಿನ ಮಾತುಕತೆ ವಿಫಲ. ಆದರೆ ಎಲ್ಲ ಮಾತುಕತೆ ಸಂದರ್ಭದಲ್ಲೂ ಸರ್ಕಾರದ ಊಟ ಮತ್ತು ನೀರನ್ನು ನಿರಾಕರಿಸುವ ಮೂಲಕ ರೈತರು ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ.

- Advertisement -
- Advertisement -

ಸರ್ಕಾರ ಆಟವಾಡುತ್ತಿದೆ. ಮಾತುಕತೆ ಎಂಬ ನಾಟಕ ಆಡುತ್ತಿದೆ. ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳು ಮಾತುಕತೆಗೆ ಹೋಗದಿದ್ದರೆ, ರೈತ ನಾಯಕರಿಗೆ ಸಮಸ್ಯೆ ಇತ್ಯರ್ಥವಾಗುವುದೇ ಬೇಕಿಲ್ಲ ಎಂದು ತನ್ನ ಬಾಲಂಗೋಚಿ ಮಾಧ್ಯಮಗಳ ಮೂಲಕ ಅಪಪ್ರಚಾರ ನಡೆಸುವ ಹುನ್ನಾರವನ್ನೂ ಸರ್ಕಾರ ಮಾಡುತ್ತಿದೆ.
ಆದರೆ ಮಾತುಕತೆಯ ಮಾರ್ಗವನ್ನು ಮುಕ್ತವಾಗಿ ಇಡುವ ಮೂಲಕ ರೈತ ಸಂಘಟನೆಗಳು ಪ್ರಜ್ಞಾವಂತಿಕೆ ಮೆರೆದಿವೆ. ಮಾತುಕತೆ ಹೆಸರಲ್ಲಿ ಪ್ರಭುತ್ವ ಎಂದಿನಂತೆ ರಮಿಸುವ ನಾಟಕ ಆಡುತ್ತಿದೆ. ಆದರೆ ರೈತರು ಇದಕ್ಕೆ ಬಗ್ಗುತ್ತಿಲ್ಲ. ಇನ್ನೊಂದು ಕಡೆ ಸರ್ಕಾರ ನಡೆಸುವ ಪಕ್ಷದ ವಿಕೃತ ಹಿಂಬಾಲಕ ಸಂಸ್ಥೆಗಳು ರೈತರನ್ನು, ಈ ಹೋರಾಟವನ್ನು ಸುಳ್ಳುಗಳ ಮೂಲಕ ಅವಹೇಳನ ಮಾಡುವುದು, ಪ್ರತಿಭಟನೆಗೆ ಕಳಂಕ ತರುವುದರಲ್ಲಿ ತುಂಬ ಕ್ರಿಯಾಶೀಲವಾಗಿವೆ. ಬಹುಪಾಲು ಮಾಧ್ಯಮಗಳು ಕೂಡ ಈ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ಮಾಡುವ ಮೂಲಕ ವೃತ್ತಿದ್ರೋಹ ಎಸಗುತ್ತಿವೆ.

ಪ್ರತಿ ಮಾತುಕತೆಯಲ್ಲೂ ಸರ್ಕಾರ ಏರ್ಪಡಿಸುವ ಭೋಜನ ನಿರಾಕರಿಸುತ್ತಿರುವ ರೈತ ಸಂಘಟನೆಗಳ ಮುಖಂಡರು, 6ನೆ ಸುತ್ತಿನ ಮಾತುಕತೆಯಲ್ಲಿ ಊಟ ಬೇಡಿದ ಕೇಂದ್ರ ಸಚಿವರಿಗೆ ರೊಟ್ಟಿ ನೀಡುವ ಮೂಲಕ ರೈತಾಪಿ ಸಮೂಹದ ನೀಡುವ ಪರಂಪರೆಗೆ ಸಾಂಕೇತಿಕ ಸಾಕ್ಷಿ ಒದಗಿಸಿದ್ದಾರೆ.

ಇತ್ತೀಚೆಗೆ ಮಾಜಿ ಹಣಕಾಸು ಸಚಿವ ಪಿ. ಚಿದಮಬರಂ ಈ ರೈತ ಹೋರಾಟದ ಬಗ್ಗೆ ಬರೆಯುತ್ತ, ‘ಇದು ನಮಗೆ 1942ರ ಅಗಸ್ಟ್ ತಿಂಗಳನ್ನು ನೆನಪಿಸುತ್ತಿದೆ. 1942 ಅಗಸ್ಟ್ 7-8 ರಂದು ಮುಂಬೈನ (ಆಗಿನ ಬಾಂಬೆ) ಗೋವಾಲಿಯಾ ಟ್ಯಾಂಕ್ ಮೈದಾನದಲ್ಲಿ ನಡೆದ ಐತಿಹಾಸಿಕ ಸಭೆಯಲ್ಲಿ, ಮಹಾತ್ಮ ಗಾಂಧಿ ‘ಮಾಡು ಇಲ್ಲವೇ ಮಡಿ’ ಘೋಷಣೆಯ ಮೂಲಕ ಭಾರತದಿಂದ ತೊಲಗಿ ಎಂದು ಬ್ರಿಟಿಷರನ್ನು ಎಚ್ಚರಿಸಿದ್ದರು. ಈಗಿನ ರೈತ ಹೋರಾಟದಲ್ಲಿ ಮಹಾತ್ಮ ಇಲ್ಲ, ಆದರೆ ರೈತರ ಮನಸ್ಸುಗಳ ತುಂಬ ಅಹಿಂಸಾತ್ಮಕ ಪ್ರತಿಭಟನೆಯ ಉತ್ಸಾಹವೇ ತುಂಬಿದೆ’ ಎಂದು ಉಲ್ಲೇಖಿಸಿದ್ದಾರೆ.

‘ಈ ರೈತ ಪ್ರತಿಭಟನೆಯು ಸರ್ಕಾರಗಳಿಗೆ (ಈಗಿನ ಮತ್ತು ಭವಿಷ್ಯದ ಸರ್ಕಾರಗಳಿಗೆ) ‘ಆಡಳಿತದಲ್ಲಿ ವಿನಮ್ರತೆ’ಯ ಅಗತ್ಯದ ಪಾಠಗಳನ್ನು ಕಲಿಸಲಿದೆ, ಸಂಸತ್ತಿನಲ್ಲಿ ಮಸೂದೆಗಳನ್ನು ಹೇಗೆ ಅಂಗೀಕಾರ ಮಾಡಬೇಕು, ಜನರ ಬಯಕೆಗಳ ಅನುಸಾರ ಹೇಗೆ ಆಡಳಿತ ನಡೆಸಬೇಕು ಎಂಬುದನ್ನೂ ಈ ಹೋರಾಟ ಕಲಿಸಲಿದೆ’ ಎಂದು ಚಿದಂಬರಂ ಬರೆದಿದ್ದಾರೆ.

ಇದಿರಲಿ, ಈ ಮಾತುಕತೆಯ ಆಟವನ್ನು ರೈತರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರತಿಭಟನೆಯ ಸ್ಥಳದಲ್ಲಿ ಸಂಭವಿಸಿದ ಸಾವುಗಳು ಮತ್ತು ಆತ್ಮಹತ್ಯೆಗಳ ಕುರಿತು ದೇಶದ ನಂಬರ್ 1 ಟ್ವಿಟರಿಸ್ಟ್ ಮೋದಿ ಏನನ್ನೂ ಟ್ವೀಟ್ ಮಾಡಿಲ್ಲ. ವಲಸೆ ಕಾರ್ಮಿಕರ ಸಾವುಗಳಿಗೂ ಅವರು ಸ್ಪಂದಿಸಲೇ ಇಲ್ಲವಲ್ಲ? ಆದರೆ ಸೌರವ್ ಗಂಗೂಲಿಗೆ ಅನಾರೋಗ್ಯವಾದಾಗ ಅವರು ಟ್ವೀಟ್ ಮಾಡುವುದನ್ನು ಮರೆಯಲಿಲ್ಲ.

ಈಗ ಮಾತುಕತೆ ಸಂದರ್ಭದಲ್ಲಿ ರೈತ ಹೋರಾಟಗಾರರು ಸರ್ಕಾರದ ಒಂದು ತುತ್ತನ್ನೂ ಮುಟ್ಟದೇ, ಹನಿ ನೀರನ್ನೂ ಕುಡಿಯದೇ ಹೊಸ ಬಗೆಯ ಅಸಹಕಾರ ಚಳವಳಿಗೆ ನಾಂದಿ ಹಾಡಿದ್ದಾರೆ. ಇದು ನಮ್ಮೆಲ್ಲ ಪ್ರಗತಿಪರ ಸಂಘಟನೆಗಳಿಗೆ ಆದರ್ಶವಾಗಬೇಕಿದೆ.

ಏಳು ಸುತ್ತಿನ ಮಾತುಕತೆ ವಿಫಲವಾಗಿವೆ. ಕೊರೆವ ಚಳಿ, ಆಗಾಗ ಉದುರುತ್ತಿರುವ ಮಳೆಯನ್ನು ಎದುರಿಸುತ್ತಲೇ ರೈತರು ಸಂಯಮವನ್ನು ಕಾಪಾಡಿಕೊಂಡಿದ್ದಾರೆ. ಪ್ರೊ. ಅಮಿತ್ ಬಾಧುರಿ ಬರೆದಂತೆ, ಸಮುದ್ರದ ಅಲೆ ರಾಜಾಜ್ಞೆಗೆ ಕಾಯುವುದಿಲ್ಲ. ಈ ಸಲ ಅಲೆ ತನ್ನ ಶಕ್ತಿ ತೋರಿಸಬೇಕೆಂದರೆ ರೈತರೊಂದಿಗೆ ನಾವೆಲ್ಲ ಕೈ ಜೋಡಿಸಲೇಬೇಕು.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....