Homeಕರ್ನಾಟಕಕಾರ್ಮಿಕರನ್ನು ಯಂತ್ರಗಳಂತೆ ನಡೆಸಿಕೊಳ್ಳುತ್ತಿರುವ ಸರ್ಕಾರ: ಎಲ್. ಹನುಮಂತಯ್ಯ ಆತಂಕ

ಕಾರ್ಮಿಕರನ್ನು ಯಂತ್ರಗಳಂತೆ ನಡೆಸಿಕೊಳ್ಳುತ್ತಿರುವ ಸರ್ಕಾರ: ಎಲ್. ಹನುಮಂತಯ್ಯ ಆತಂಕ

ಸಾವಿರಾರು ಕಿಲೋಮೀಟರ್ ನಡೆದು ಹೋಗುವಾಗ ಸುಮಾರು 21 ಗರ್ಭಿಣಿಯರಿಗೆ ಹೆರಿಗೆ ಆಗಿದೆ. ಹರಿಗೆ ಆದ ಮೇಲೆ ಕನಿಷ್ಠ ಆರು ತಿಂಗಳು ನಡೆಯಬಾರದು. ಆದರೆ ಅವರು ನಡೆದೇ ಮನೆ ಸೇರುವಂತಹ ಪರಿಸ್ಥಿತಿಯವನ್ನು ಸರ್ಕಾರಗಳು ತಂದೊಡ್ಡಿವೆ ಎಂದು ಹೇಳಿದರು.

- Advertisement -
- Advertisement -

ದೇಶದಲ್ಲಿ ವಲಸೆ ಕಾರ್ಮಿರನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಮಾನವೀಯವಾಗಿ ಯಂತ್ರಗಳಂತೆ ನಡೆಸಿಕೊಳ್ಳುತ್ತಿವೆ ಎಂದು ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕ ಕಾನೂನುಗಳ ಸಡಿಲಿಕೆ ಮತ್ತು ಕಾರ್ಮಿಕ ವರ್ಗ ಎದುರಿಸುತ್ತಿರುವ ಸವಾಲುಗಳ ಕುರಿತು ಸಿಐಟಿಯು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಲಸೆ ಕಾರ್ಮಿಕರನ್ನು ನಮ್ಮಲ್ಲಿ ಮನುಷ್ಯರಂತೆ ಭಾವಿಸುತ್ತಿಲ್ಲ. ಕೋವಿಡ್ ಬಂದ ಮೇಲೆ ನಮ್ಮ ಜನರಿಗೆ ಪರಿಸ್ಥಿತಿಯ ಮನವಿರಕೆ ಆಗುತ್ತಿದೆ ಎಂದರು.

ವಲಸೆ ಕಾರ್ಮಿಕರು ಇನ್ನು ಊರುಗಳಿಗೆ ತೆರಳಲು ಪರದಾಡುತ್ತಿದ್ದಾರೆ. ಸರ್ಕಾರಗಳು ಅವರನ್ನು ತವರಿಗೆ ಕಳಿಸಲು ಹಿಂದೇಟು ಹಾಕುತ್ತಿವೆ. ನಮ್ಮಲ್ಲಿ ಸಾಕಷ್ಟು ರೈಲುಗಳು ಇವೆ. ಅವುಗಳ ಮೂಲಕ ಎಲ್ಲಾ ವಲಸೆ ಕಾರ್ಮಿಕರನ್ನು ದೈಹಿಕ ಅಂತರ ಕಾಪಾಡಿಕೊಂಡೇ ಕಳಿಸಬಹುದಿತ್ತು. ಆದರೆ ಸರ್ಕಾರಗಳು ಈ ಬಗ್ಗೆ ಗಮನಹರಿಸಲೇ ಇಲ್ಲ ಎಂದರು.

ತಮ್ಮಗ್ರಾಮಗಳಿಗೆ ಹೋಗಲು ವಲಸೆ ಕಾರ್ಮಿಕರು ನಡೆಯುತ್ತಲೇ ಇದ್ದಾರೆ. ಸಾವಿರಾರು ಕಿಲೋಮೀಟರ್ ನಡೆದು ಹೋಗುವಾಗ ಸುಮಾರು 21 ಗರ್ಭಿಣಿಯರಿಗೆ ಹೆರಿಗೆ ಆಗಿದೆ. ಹರಿಗೆ ಆದ ಮೇಲೆ ಕನಿಷ್ಠ ಆರು ತಿಂಗಳು ನಡೆಯಬಾರದೆಂಬ ಮಾತಿದೆ. ಆದರೂ ಹೆರಿಗೆಯಾದ ಗಳಿಗೆಯಿಂದಲೇ ನಡೆದು ಮನೆ ಸೇರುವಂತಹ ಪರಿಸ್ಥಿತಿಯವನ್ನು ಸರ್ಕಾರಗಳು ತಂದೊಡ್ಡಿವೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ವಲಸೆ ಕಾರ್ಮಿಕರನ್ನು ಹೀನಾಯವಾಗಿ ನಡೆಸಿಕೊಂಡಿತು. ಇದರಿಂದ 10 ಲಕ್ಷ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕುವಂತಾಯಿತು. ಉತ್ತರ ಕರ್ನಾಟಕದ ಸಾವಿರಾರು ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ದುಪ್ಪಟ್ಟು ಪ್ರಯಾಣ ದರ ತೆರಬೇಕಾಯಿತು. ಕಾಂಗ್ರೆಸ್ ಪಕ್ಷ ಉಚಿತವಾಗಿ ಕರೆದುಕೊಂಡು ಹೋಗಬೇಕೆಂದು ಕೋಟಿ ರೂಪಾಯಿ ಚೆಕ್ ನೀಡಿದ ಮೇಲೆ ಸರ್ಕಾರ ವಲಸೆ ಕಾರ್ಮಿಕರನ್ನು ಉಚಿತವಾಗಿ ಕರೆದುಕೊಂಡು ಹೋಯಿತು ಎಂದು ವಿವರಿಸಿದರು.


ಓದಿ: ಕಾರ್ಮಿಕರ ದುಡಿಯುವ ಅವಧಿಯನ್ನು 10 ಗಂಟೆಗೆ ಏರಿಸಿದ ರಾಜ್ಯ ಸರ್ಕಾರ: ಕಾರ್ಮಿಕರ ಸಂಘಟನೆಗಳ ವಿರೋಧ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...