Homeಮುಖಪುಟದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ಮುಂದಾದ ಸರ್ಕಾರ?

ದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ಮುಂದಾದ ಸರ್ಕಾರ?

ಎನ್‌ಪಿಆರ್ ಹಿಂದಿದೆಯಾ ಎನ್ಅರ್‌ಸಿ ಹುನ್ನಾರ? ಸರ್ಕಾರದ ಮುಂದೆ ಗಂಭೀರ ಪ್ರಶ್ನೆ ಎತ್ತಿದ ಟಿಎಂಸಿ ಸಂಸದ

- Advertisement -
- Advertisement -

ಜನವರಿ 8, 2019ರಂದು ಲೋಕಸಭೆಯಲ್ಲಿ ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ಇತ್ತೀಚೆಗೆ ಕೇಂದ್ರ ಸರ್ಕಾರ ಪ್ರಕಟಿಸಿದೆ. ಆ ಬಳಿಕ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ಧ ಮತ್ತು ಪಾರ್ಸಿ ಧರ್ಮೀಯರಿಗೆ ಭಾರತೀಯ ಪೌರತ್ವ ಕೊಡುವ ಪ್ರಕ್ರಿಯೆ ನಡೆಯುತ್ತಿದೆ.

ಮುಸ್ಲಿಮರನ್ನು ಕೈ ಬಿಟ್ಟು ಕಾಯ್ದೆಗೆ ತಿದ್ದುಪಡಿ ತಂದಿರುವುದರ ವಿರುದ್ಧ ಕೇರಳ ರಾಜ್ಯ ಸರ್ಕಾರ, ಮುಸ್ಲಿಂ ಲೀಗ್ ಸೇರಿದಂತೆ ನೂರಾರು ಮಂದಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ಕೈಗೆತ್ತಿಕೊಂಡಿರುವ ಕೋರ್ಟ್ ಕೇಂದ್ರದ ಪ್ರತಿಕ್ರಿಯೆ ಕೇಳಿದೆ.

ಸಿಎಎ ಮಸೂದೆ ಲೋಕಸಭೆಯಲ್ಲಿ ಪರಿಚಯಿಸಿದ್ದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ ಸಿಎಎ ಬಳಿಕ ದೇಶದಾದ್ಯಂತ ಎನ್‌ಆರ್‌ಸಿ (ರಾಷ್ಟ್ರೀಯ ಪೌರತ್ವ ನೋಂದಣಿ) ಜಾರಿಗೊಳಿಸುವುದಾಗಿ ಹೇಳಿದ್ದರು. ಆ ಮಾತು ಈಗ ನಿಜವಾಗುವ ಆತಂಕ ಎದುರಾಗಿದೆ.

ಸಿಎಎ ಜಾರಿಗೊಳಿಸುವಾಗ, ಇದು ಯಾವುದೇ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಈಗಲೂ ಅದನ್ನೇ ಹೇಳುತ್ತಿದೆ. ಆದರೆ, ಈಗ ಸಿಎಎ ಬಳಿಕ ಸರ್ಕಾರ ಎನ್‌ಆರ್‌ಸಿ ಜಾರಿಗೊಳಿಸುವ ಸಾಧ್ಯತೆಯಿದ್ದು, ಒಂದು ವೇಳೆ ಎನ್‌ಆರ್‌ಸಿ ಜಾರಿಯಾದರೆ ಕೋಟ್ಯಾಂತರ ಭಾರತೀಯ ಪೌರತ್ವಕ್ಕೆ ಕುತ್ತು ಬರುವುದರಲ್ಲಿ ಅನುಮಾನವಿಲ್ಲ.

ಈ ಕುರಿತು ತೃಣಮೂಲ ಕಾಂಗ್ರೆಸ್‌ ಪಕ್ಷ (ಟಿಎಂಸಿ)ಯ ರಾಜ್ಯಸಭೆ ಸಂಸದ ಸಾಕೇತ್ ಗೋಖಲೆ ಕೆಲವೊಂದು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಗಂಭೀರ ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಸಾಕೇತ್ ಗೋಖಲೆ ಪ್ರಕಾರ, ಭಾರತದಲ್ಲಿ 10 ವರ್ಷಗಳಿಗೊಮ್ಮೆ ಜನ ಗಣತಿ ನಡೆಯುತ್ತದೆ. ಕೊನೆಯದಾಗಿ 2011ರಲ್ಲಿ ಗಣತಿ ನಡೆದಿದೆ. ಆ ಬಳಿಕ 2021ರಲ್ಲಿ ಗಣತಿ ನಡೆಯಬೇಕಿತ್ತು. ಆದರೆ, ಕೋವಿಡ್ ನೆಪ ಹೇಳಿ ಸರ್ಕಾರ ಗಣತಿ ನಡೆಸಿಲ್ಲ.

ಪ್ರಸ್ತುತ ಲೋಕಸಭೆ ಚುನಾವಣೆಗೆ ದೇಶ ಸಿದ್ದವಾಗಿ ನಿಂತಿದೆ. ಚುನಾವಣೆ ಮುಗಿದ ಬಳಿಕ ಮತ್ತೊಮ್ಮೆ ಬಿಜೆಪಿ ಸರ್ಕಾರ ಬಂದರೆ ಎನ್‌ಆರ್‌ಸಿ ಮೂಲಕವೇ ಜನಗಣತಿ ನಡೆಸುವುದು ಸರ್ಕಾರದ ಹುನ್ನಾರ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಗೋಖಲೆ ಪ್ರಕಾರ, ಗೃಹ ಇಲಾಖೆಯ ಅಧೀನದ ಕೇಂದ್ರ ಸರ್ಕಾರದ ಜನಗಣತಿಯ ವೆಬ್‌ಸೈಟ್‌ ತೆರೆದರೆ ಅಲ್ಲಿ ‘National Population Register’ (NPR) ಎಂದು ಕಾಣುತ್ತದೆ. ಈ ಎನ್‌ಪಿಆರ್ ಅನ್ನು ‘ಪೌರತ್ವದ ನಿಯಮ 3 (ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಗುರುತಿನ ಚೀಟಿಗಳ ವಿತರಣೆ) ನಿಯಮಗಳು-2003’ ಅಡಿಯಲ್ಲಿ ಮಾಡಲಾಗಿದೆ. ನಿಯಮಗಳ ಪ್ರಕಾರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಗೆ ವ್ಯತ್ಯಾಸವಿಲ್ಲ.

ಹಾಗಾಗಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾದರೆ ದೇಶದಾದ್ಯಂತ ಎನ್‌ಆರ್‌ಸಿ ಜಾರಿಯಾಗುವುದು ಖಂಡಿತ. ಇಲ್ಲದಿದ್ದರೆ ವೆಬ್‌ಸೈಟ್‌ನಲ್ಲಿರುವ ಎನ್‌ಪಿಆರ್ ಎಂಬುವುದನ್ನು ಯಾಕೆ ಸರ್ಕಾರ ತೆಗೆದು ಹಾಕಿಲ್ಲ?. ಮುಂದಿನ ಗಣತಿಯನ್ನು ಎನ್‌ಪಿಆರ್ ಮೂಲಕ ಮಾಡುತ್ತೇವೆ ಎಂದು ಪ್ರಧಾನಿ ಮೋದಿಯಾಗಲಿ, ಗೃಹ ಸಚಿವ ಅಮಿತ್ ಶಾ ಆಗಲಿ ಯಾಕೆ ಯಾವುದೇ ಮಾಹಿತಿ ನೀಡಿಲ್ಲ? ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಸಿಎಎ ಕಾಯ್ದೆ ಅಂಗೀಕಾರಗೊಂಡಾಗ ದೇಶದಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಪೌರತ್ವಕ್ಕೆ ಕುತ್ತು ಬರುವ ಆತಂಕ ವ್ಯಕ್ತಪಡಿಸಿದ ಕೋಟ್ಯಾಂತರ ಮುಸ್ಲಿಮರು ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಹಾಗಾಗಿ, ತಕ್ಷಣಕ್ಕೆ ಕಾಯ್ದೆ ಜಾರಿಗೊಳಿಸದ ಕೇಂದ್ರ ಸರ್ಕಾರ, ಚುನಾವಣೆ ಹತ್ತಿರ ಬರುವಾಗ ಕಾಯ್ದೆಯ ನಿಯಮಗಳನ್ನು ಪ್ರಕಟಿಸಿದೆ.

ಎನ್‌ಪಿಆರ್ ಅಂದರೆ ಏನು? 

ಜನಗಣತಿಯ ವೆಬ್‌ಸೈಟ್‌ನಲ್ಲಿ ಹೇಳಿದಂತೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಸಾಮಾನ್ಯವಾಗಿ ಹಳ್ಳಿ ಅಥವಾ ಗ್ರಾಮೀಣ ಪ್ರದೇಶ, ಪಟ್ಟಣ ಅಥವಾ ವಾರ್ಡ್, ಪಟ್ಟಣ ಅಥವಾ ನಗರ ಪ್ರದೇಶದ ವಾರ್ಡ್‌ನೊಳಗೆ ಗುರುತಿಸಲಾದ ಪ್ರದೇಶದಲ್ಲಿ ವಾಸಿಸುವ ವ್ಯಕ್ತಿಗಳ ವಿವರಗಳನ್ನು ಒಳಗೊಂಡಿರುವ ನೋಂದಣಿಯಾಗಿದೆ. ಎನ್‌ಪಿಆರ್ ಅನ್ನು ಮೊದಲ ಬಾರಿಗೆ 2010 ರಲ್ಲಿ ಸಿದ್ಧಪಡಿಸಲಾಯಿತು. ಇದನ್ನು 1995ರ ಪೌರತ್ವ ಕಾಯ್ದೆಯಡಿ ಬರುವ ನಿಯಮ 3 ರ ಪೌರತ್ವ (ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಗುರುತಿನ ಚೀಟಿಗಳ ವಿತರಣೆ) ನಿಯಮಗಳು- 2003, ಉಪ ನಿಯಮ (4) ಅಡಿ 2015ರಲ್ಲಿ ನವೀಕರಿಸಲಾಗಿದೆ. ನವೀಕರಣದಡಿ ಮುಂದಿನ ಗಣತಿಯಲ್ಲಿ ಜನನ, ಮರಣ, ವಲಸೆಯ ಬದಲಾವಣೆಗಳನ್ನು ಅಪ್ಡೇಟ್ ಮಾಡಲಾಗುತ್ತದೆ. ದೇಶದ ಸಾಮಾನ್ಯ ನಿವಾಸಿಗಳ ಸಮಗ್ರ ಡೇಟಾಬೇಸ್ ಅನ್ನು ರಚಿಸುವುದು ಎನ್‌ಪಿಆರ್‌ನ ಉದ್ದೇಶವಾಗಿದೆ. ಎನ್‌ಪಿಆರ್ ಅಡಿ ಗಣತಿ ಮಾಡುವಾಗ ಯಾವುದೇ ದಾಖಲೆ ಸಂಗ್ರಹಿಸುವುದಿಲ್ಲ.

ಇದನ್ನೂ ಓದಿ : ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...