Homeಮುಖಪುಟದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ಮುಂದಾದ ಸರ್ಕಾರ?

ದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ಮುಂದಾದ ಸರ್ಕಾರ?

ಎನ್‌ಪಿಆರ್ ಹಿಂದಿದೆಯಾ ಎನ್ಅರ್‌ಸಿ ಹುನ್ನಾರ? ಸರ್ಕಾರದ ಮುಂದೆ ಗಂಭೀರ ಪ್ರಶ್ನೆ ಎತ್ತಿದ ಟಿಎಂಸಿ ಸಂಸದ

- Advertisement -
- Advertisement -

ಜನವರಿ 8, 2019ರಂದು ಲೋಕಸಭೆಯಲ್ಲಿ ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ಇತ್ತೀಚೆಗೆ ಕೇಂದ್ರ ಸರ್ಕಾರ ಪ್ರಕಟಿಸಿದೆ. ಆ ಬಳಿಕ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ಧ ಮತ್ತು ಪಾರ್ಸಿ ಧರ್ಮೀಯರಿಗೆ ಭಾರತೀಯ ಪೌರತ್ವ ಕೊಡುವ ಪ್ರಕ್ರಿಯೆ ನಡೆಯುತ್ತಿದೆ.

ಮುಸ್ಲಿಮರನ್ನು ಕೈ ಬಿಟ್ಟು ಕಾಯ್ದೆಗೆ ತಿದ್ದುಪಡಿ ತಂದಿರುವುದರ ವಿರುದ್ಧ ಕೇರಳ ರಾಜ್ಯ ಸರ್ಕಾರ, ಮುಸ್ಲಿಂ ಲೀಗ್ ಸೇರಿದಂತೆ ನೂರಾರು ಮಂದಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ಕೈಗೆತ್ತಿಕೊಂಡಿರುವ ಕೋರ್ಟ್ ಕೇಂದ್ರದ ಪ್ರತಿಕ್ರಿಯೆ ಕೇಳಿದೆ.

ಸಿಎಎ ಮಸೂದೆ ಲೋಕಸಭೆಯಲ್ಲಿ ಪರಿಚಯಿಸಿದ್ದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ ಸಿಎಎ ಬಳಿಕ ದೇಶದಾದ್ಯಂತ ಎನ್‌ಆರ್‌ಸಿ (ರಾಷ್ಟ್ರೀಯ ಪೌರತ್ವ ನೋಂದಣಿ) ಜಾರಿಗೊಳಿಸುವುದಾಗಿ ಹೇಳಿದ್ದರು. ಆ ಮಾತು ಈಗ ನಿಜವಾಗುವ ಆತಂಕ ಎದುರಾಗಿದೆ.

ಸಿಎಎ ಜಾರಿಗೊಳಿಸುವಾಗ, ಇದು ಯಾವುದೇ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಈಗಲೂ ಅದನ್ನೇ ಹೇಳುತ್ತಿದೆ. ಆದರೆ, ಈಗ ಸಿಎಎ ಬಳಿಕ ಸರ್ಕಾರ ಎನ್‌ಆರ್‌ಸಿ ಜಾರಿಗೊಳಿಸುವ ಸಾಧ್ಯತೆಯಿದ್ದು, ಒಂದು ವೇಳೆ ಎನ್‌ಆರ್‌ಸಿ ಜಾರಿಯಾದರೆ ಕೋಟ್ಯಾಂತರ ಭಾರತೀಯ ಪೌರತ್ವಕ್ಕೆ ಕುತ್ತು ಬರುವುದರಲ್ಲಿ ಅನುಮಾನವಿಲ್ಲ.

ಈ ಕುರಿತು ತೃಣಮೂಲ ಕಾಂಗ್ರೆಸ್‌ ಪಕ್ಷ (ಟಿಎಂಸಿ)ಯ ರಾಜ್ಯಸಭೆ ಸಂಸದ ಸಾಕೇತ್ ಗೋಖಲೆ ಕೆಲವೊಂದು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಗಂಭೀರ ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಸಾಕೇತ್ ಗೋಖಲೆ ಪ್ರಕಾರ, ಭಾರತದಲ್ಲಿ 10 ವರ್ಷಗಳಿಗೊಮ್ಮೆ ಜನ ಗಣತಿ ನಡೆಯುತ್ತದೆ. ಕೊನೆಯದಾಗಿ 2011ರಲ್ಲಿ ಗಣತಿ ನಡೆದಿದೆ. ಆ ಬಳಿಕ 2021ರಲ್ಲಿ ಗಣತಿ ನಡೆಯಬೇಕಿತ್ತು. ಆದರೆ, ಕೋವಿಡ್ ನೆಪ ಹೇಳಿ ಸರ್ಕಾರ ಗಣತಿ ನಡೆಸಿಲ್ಲ.

ಪ್ರಸ್ತುತ ಲೋಕಸಭೆ ಚುನಾವಣೆಗೆ ದೇಶ ಸಿದ್ದವಾಗಿ ನಿಂತಿದೆ. ಚುನಾವಣೆ ಮುಗಿದ ಬಳಿಕ ಮತ್ತೊಮ್ಮೆ ಬಿಜೆಪಿ ಸರ್ಕಾರ ಬಂದರೆ ಎನ್‌ಆರ್‌ಸಿ ಮೂಲಕವೇ ಜನಗಣತಿ ನಡೆಸುವುದು ಸರ್ಕಾರದ ಹುನ್ನಾರ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಗೋಖಲೆ ಪ್ರಕಾರ, ಗೃಹ ಇಲಾಖೆಯ ಅಧೀನದ ಕೇಂದ್ರ ಸರ್ಕಾರದ ಜನಗಣತಿಯ ವೆಬ್‌ಸೈಟ್‌ ತೆರೆದರೆ ಅಲ್ಲಿ ‘National Population Register’ (NPR) ಎಂದು ಕಾಣುತ್ತದೆ. ಈ ಎನ್‌ಪಿಆರ್ ಅನ್ನು ‘ಪೌರತ್ವದ ನಿಯಮ 3 (ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಗುರುತಿನ ಚೀಟಿಗಳ ವಿತರಣೆ) ನಿಯಮಗಳು-2003’ ಅಡಿಯಲ್ಲಿ ಮಾಡಲಾಗಿದೆ. ನಿಯಮಗಳ ಪ್ರಕಾರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಗೆ ವ್ಯತ್ಯಾಸವಿಲ್ಲ.

ಹಾಗಾಗಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾದರೆ ದೇಶದಾದ್ಯಂತ ಎನ್‌ಆರ್‌ಸಿ ಜಾರಿಯಾಗುವುದು ಖಂಡಿತ. ಇಲ್ಲದಿದ್ದರೆ ವೆಬ್‌ಸೈಟ್‌ನಲ್ಲಿರುವ ಎನ್‌ಪಿಆರ್ ಎಂಬುವುದನ್ನು ಯಾಕೆ ಸರ್ಕಾರ ತೆಗೆದು ಹಾಕಿಲ್ಲ?. ಮುಂದಿನ ಗಣತಿಯನ್ನು ಎನ್‌ಪಿಆರ್ ಮೂಲಕ ಮಾಡುತ್ತೇವೆ ಎಂದು ಪ್ರಧಾನಿ ಮೋದಿಯಾಗಲಿ, ಗೃಹ ಸಚಿವ ಅಮಿತ್ ಶಾ ಆಗಲಿ ಯಾಕೆ ಯಾವುದೇ ಮಾಹಿತಿ ನೀಡಿಲ್ಲ? ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಸಿಎಎ ಕಾಯ್ದೆ ಅಂಗೀಕಾರಗೊಂಡಾಗ ದೇಶದಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಪೌರತ್ವಕ್ಕೆ ಕುತ್ತು ಬರುವ ಆತಂಕ ವ್ಯಕ್ತಪಡಿಸಿದ ಕೋಟ್ಯಾಂತರ ಮುಸ್ಲಿಮರು ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಹಾಗಾಗಿ, ತಕ್ಷಣಕ್ಕೆ ಕಾಯ್ದೆ ಜಾರಿಗೊಳಿಸದ ಕೇಂದ್ರ ಸರ್ಕಾರ, ಚುನಾವಣೆ ಹತ್ತಿರ ಬರುವಾಗ ಕಾಯ್ದೆಯ ನಿಯಮಗಳನ್ನು ಪ್ರಕಟಿಸಿದೆ.

ಎನ್‌ಪಿಆರ್ ಅಂದರೆ ಏನು? 

ಜನಗಣತಿಯ ವೆಬ್‌ಸೈಟ್‌ನಲ್ಲಿ ಹೇಳಿದಂತೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಸಾಮಾನ್ಯವಾಗಿ ಹಳ್ಳಿ ಅಥವಾ ಗ್ರಾಮೀಣ ಪ್ರದೇಶ, ಪಟ್ಟಣ ಅಥವಾ ವಾರ್ಡ್, ಪಟ್ಟಣ ಅಥವಾ ನಗರ ಪ್ರದೇಶದ ವಾರ್ಡ್‌ನೊಳಗೆ ಗುರುತಿಸಲಾದ ಪ್ರದೇಶದಲ್ಲಿ ವಾಸಿಸುವ ವ್ಯಕ್ತಿಗಳ ವಿವರಗಳನ್ನು ಒಳಗೊಂಡಿರುವ ನೋಂದಣಿಯಾಗಿದೆ. ಎನ್‌ಪಿಆರ್ ಅನ್ನು ಮೊದಲ ಬಾರಿಗೆ 2010 ರಲ್ಲಿ ಸಿದ್ಧಪಡಿಸಲಾಯಿತು. ಇದನ್ನು 1995ರ ಪೌರತ್ವ ಕಾಯ್ದೆಯಡಿ ಬರುವ ನಿಯಮ 3 ರ ಪೌರತ್ವ (ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಗುರುತಿನ ಚೀಟಿಗಳ ವಿತರಣೆ) ನಿಯಮಗಳು- 2003, ಉಪ ನಿಯಮ (4) ಅಡಿ 2015ರಲ್ಲಿ ನವೀಕರಿಸಲಾಗಿದೆ. ನವೀಕರಣದಡಿ ಮುಂದಿನ ಗಣತಿಯಲ್ಲಿ ಜನನ, ಮರಣ, ವಲಸೆಯ ಬದಲಾವಣೆಗಳನ್ನು ಅಪ್ಡೇಟ್ ಮಾಡಲಾಗುತ್ತದೆ. ದೇಶದ ಸಾಮಾನ್ಯ ನಿವಾಸಿಗಳ ಸಮಗ್ರ ಡೇಟಾಬೇಸ್ ಅನ್ನು ರಚಿಸುವುದು ಎನ್‌ಪಿಆರ್‌ನ ಉದ್ದೇಶವಾಗಿದೆ. ಎನ್‌ಪಿಆರ್ ಅಡಿ ಗಣತಿ ಮಾಡುವಾಗ ಯಾವುದೇ ದಾಖಲೆ ಸಂಗ್ರಹಿಸುವುದಿಲ್ಲ.

ಇದನ್ನೂ ಓದಿ : ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...