Homeಮುಖಪುಟದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ಮುಂದಾದ ಸರ್ಕಾರ?

ದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ಮುಂದಾದ ಸರ್ಕಾರ?

ಎನ್‌ಪಿಆರ್ ಹಿಂದಿದೆಯಾ ಎನ್ಅರ್‌ಸಿ ಹುನ್ನಾರ? ಸರ್ಕಾರದ ಮುಂದೆ ಗಂಭೀರ ಪ್ರಶ್ನೆ ಎತ್ತಿದ ಟಿಎಂಸಿ ಸಂಸದ

- Advertisement -
- Advertisement -

ಜನವರಿ 8, 2019ರಂದು ಲೋಕಸಭೆಯಲ್ಲಿ ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ಇತ್ತೀಚೆಗೆ ಕೇಂದ್ರ ಸರ್ಕಾರ ಪ್ರಕಟಿಸಿದೆ. ಆ ಬಳಿಕ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ಧ ಮತ್ತು ಪಾರ್ಸಿ ಧರ್ಮೀಯರಿಗೆ ಭಾರತೀಯ ಪೌರತ್ವ ಕೊಡುವ ಪ್ರಕ್ರಿಯೆ ನಡೆಯುತ್ತಿದೆ.

ಮುಸ್ಲಿಮರನ್ನು ಕೈ ಬಿಟ್ಟು ಕಾಯ್ದೆಗೆ ತಿದ್ದುಪಡಿ ತಂದಿರುವುದರ ವಿರುದ್ಧ ಕೇರಳ ರಾಜ್ಯ ಸರ್ಕಾರ, ಮುಸ್ಲಿಂ ಲೀಗ್ ಸೇರಿದಂತೆ ನೂರಾರು ಮಂದಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ಕೈಗೆತ್ತಿಕೊಂಡಿರುವ ಕೋರ್ಟ್ ಕೇಂದ್ರದ ಪ್ರತಿಕ್ರಿಯೆ ಕೇಳಿದೆ.

ಸಿಎಎ ಮಸೂದೆ ಲೋಕಸಭೆಯಲ್ಲಿ ಪರಿಚಯಿಸಿದ್ದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ ಸಿಎಎ ಬಳಿಕ ದೇಶದಾದ್ಯಂತ ಎನ್‌ಆರ್‌ಸಿ (ರಾಷ್ಟ್ರೀಯ ಪೌರತ್ವ ನೋಂದಣಿ) ಜಾರಿಗೊಳಿಸುವುದಾಗಿ ಹೇಳಿದ್ದರು. ಆ ಮಾತು ಈಗ ನಿಜವಾಗುವ ಆತಂಕ ಎದುರಾಗಿದೆ.

ಸಿಎಎ ಜಾರಿಗೊಳಿಸುವಾಗ, ಇದು ಯಾವುದೇ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಈಗಲೂ ಅದನ್ನೇ ಹೇಳುತ್ತಿದೆ. ಆದರೆ, ಈಗ ಸಿಎಎ ಬಳಿಕ ಸರ್ಕಾರ ಎನ್‌ಆರ್‌ಸಿ ಜಾರಿಗೊಳಿಸುವ ಸಾಧ್ಯತೆಯಿದ್ದು, ಒಂದು ವೇಳೆ ಎನ್‌ಆರ್‌ಸಿ ಜಾರಿಯಾದರೆ ಕೋಟ್ಯಾಂತರ ಭಾರತೀಯ ಪೌರತ್ವಕ್ಕೆ ಕುತ್ತು ಬರುವುದರಲ್ಲಿ ಅನುಮಾನವಿಲ್ಲ.

ಈ ಕುರಿತು ತೃಣಮೂಲ ಕಾಂಗ್ರೆಸ್‌ ಪಕ್ಷ (ಟಿಎಂಸಿ)ಯ ರಾಜ್ಯಸಭೆ ಸಂಸದ ಸಾಕೇತ್ ಗೋಖಲೆ ಕೆಲವೊಂದು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಗಂಭೀರ ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಸಾಕೇತ್ ಗೋಖಲೆ ಪ್ರಕಾರ, ಭಾರತದಲ್ಲಿ 10 ವರ್ಷಗಳಿಗೊಮ್ಮೆ ಜನ ಗಣತಿ ನಡೆಯುತ್ತದೆ. ಕೊನೆಯದಾಗಿ 2011ರಲ್ಲಿ ಗಣತಿ ನಡೆದಿದೆ. ಆ ಬಳಿಕ 2021ರಲ್ಲಿ ಗಣತಿ ನಡೆಯಬೇಕಿತ್ತು. ಆದರೆ, ಕೋವಿಡ್ ನೆಪ ಹೇಳಿ ಸರ್ಕಾರ ಗಣತಿ ನಡೆಸಿಲ್ಲ.

ಪ್ರಸ್ತುತ ಲೋಕಸಭೆ ಚುನಾವಣೆಗೆ ದೇಶ ಸಿದ್ದವಾಗಿ ನಿಂತಿದೆ. ಚುನಾವಣೆ ಮುಗಿದ ಬಳಿಕ ಮತ್ತೊಮ್ಮೆ ಬಿಜೆಪಿ ಸರ್ಕಾರ ಬಂದರೆ ಎನ್‌ಆರ್‌ಸಿ ಮೂಲಕವೇ ಜನಗಣತಿ ನಡೆಸುವುದು ಸರ್ಕಾರದ ಹುನ್ನಾರ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಗೋಖಲೆ ಪ್ರಕಾರ, ಗೃಹ ಇಲಾಖೆಯ ಅಧೀನದ ಕೇಂದ್ರ ಸರ್ಕಾರದ ಜನಗಣತಿಯ ವೆಬ್‌ಸೈಟ್‌ ತೆರೆದರೆ ಅಲ್ಲಿ ‘National Population Register’ (NPR) ಎಂದು ಕಾಣುತ್ತದೆ. ಈ ಎನ್‌ಪಿಆರ್ ಅನ್ನು ‘ಪೌರತ್ವದ ನಿಯಮ 3 (ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಗುರುತಿನ ಚೀಟಿಗಳ ವಿತರಣೆ) ನಿಯಮಗಳು-2003’ ಅಡಿಯಲ್ಲಿ ಮಾಡಲಾಗಿದೆ. ನಿಯಮಗಳ ಪ್ರಕಾರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಗೆ ವ್ಯತ್ಯಾಸವಿಲ್ಲ.

ಹಾಗಾಗಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾದರೆ ದೇಶದಾದ್ಯಂತ ಎನ್‌ಆರ್‌ಸಿ ಜಾರಿಯಾಗುವುದು ಖಂಡಿತ. ಇಲ್ಲದಿದ್ದರೆ ವೆಬ್‌ಸೈಟ್‌ನಲ್ಲಿರುವ ಎನ್‌ಪಿಆರ್ ಎಂಬುವುದನ್ನು ಯಾಕೆ ಸರ್ಕಾರ ತೆಗೆದು ಹಾಕಿಲ್ಲ?. ಮುಂದಿನ ಗಣತಿಯನ್ನು ಎನ್‌ಪಿಆರ್ ಮೂಲಕ ಮಾಡುತ್ತೇವೆ ಎಂದು ಪ್ರಧಾನಿ ಮೋದಿಯಾಗಲಿ, ಗೃಹ ಸಚಿವ ಅಮಿತ್ ಶಾ ಆಗಲಿ ಯಾಕೆ ಯಾವುದೇ ಮಾಹಿತಿ ನೀಡಿಲ್ಲ? ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಸಿಎಎ ಕಾಯ್ದೆ ಅಂಗೀಕಾರಗೊಂಡಾಗ ದೇಶದಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಪೌರತ್ವಕ್ಕೆ ಕುತ್ತು ಬರುವ ಆತಂಕ ವ್ಯಕ್ತಪಡಿಸಿದ ಕೋಟ್ಯಾಂತರ ಮುಸ್ಲಿಮರು ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಹಾಗಾಗಿ, ತಕ್ಷಣಕ್ಕೆ ಕಾಯ್ದೆ ಜಾರಿಗೊಳಿಸದ ಕೇಂದ್ರ ಸರ್ಕಾರ, ಚುನಾವಣೆ ಹತ್ತಿರ ಬರುವಾಗ ಕಾಯ್ದೆಯ ನಿಯಮಗಳನ್ನು ಪ್ರಕಟಿಸಿದೆ.

ಎನ್‌ಪಿಆರ್ ಅಂದರೆ ಏನು? 

ಜನಗಣತಿಯ ವೆಬ್‌ಸೈಟ್‌ನಲ್ಲಿ ಹೇಳಿದಂತೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಸಾಮಾನ್ಯವಾಗಿ ಹಳ್ಳಿ ಅಥವಾ ಗ್ರಾಮೀಣ ಪ್ರದೇಶ, ಪಟ್ಟಣ ಅಥವಾ ವಾರ್ಡ್, ಪಟ್ಟಣ ಅಥವಾ ನಗರ ಪ್ರದೇಶದ ವಾರ್ಡ್‌ನೊಳಗೆ ಗುರುತಿಸಲಾದ ಪ್ರದೇಶದಲ್ಲಿ ವಾಸಿಸುವ ವ್ಯಕ್ತಿಗಳ ವಿವರಗಳನ್ನು ಒಳಗೊಂಡಿರುವ ನೋಂದಣಿಯಾಗಿದೆ. ಎನ್‌ಪಿಆರ್ ಅನ್ನು ಮೊದಲ ಬಾರಿಗೆ 2010 ರಲ್ಲಿ ಸಿದ್ಧಪಡಿಸಲಾಯಿತು. ಇದನ್ನು 1995ರ ಪೌರತ್ವ ಕಾಯ್ದೆಯಡಿ ಬರುವ ನಿಯಮ 3 ರ ಪೌರತ್ವ (ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಗುರುತಿನ ಚೀಟಿಗಳ ವಿತರಣೆ) ನಿಯಮಗಳು- 2003, ಉಪ ನಿಯಮ (4) ಅಡಿ 2015ರಲ್ಲಿ ನವೀಕರಿಸಲಾಗಿದೆ. ನವೀಕರಣದಡಿ ಮುಂದಿನ ಗಣತಿಯಲ್ಲಿ ಜನನ, ಮರಣ, ವಲಸೆಯ ಬದಲಾವಣೆಗಳನ್ನು ಅಪ್ಡೇಟ್ ಮಾಡಲಾಗುತ್ತದೆ. ದೇಶದ ಸಾಮಾನ್ಯ ನಿವಾಸಿಗಳ ಸಮಗ್ರ ಡೇಟಾಬೇಸ್ ಅನ್ನು ರಚಿಸುವುದು ಎನ್‌ಪಿಆರ್‌ನ ಉದ್ದೇಶವಾಗಿದೆ. ಎನ್‌ಪಿಆರ್ ಅಡಿ ಗಣತಿ ಮಾಡುವಾಗ ಯಾವುದೇ ದಾಖಲೆ ಸಂಗ್ರಹಿಸುವುದಿಲ್ಲ.

ಇದನ್ನೂ ಓದಿ : ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...