Homeಮುಖಪುಟದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ಮುಂದಾದ ಸರ್ಕಾರ?

ದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ಮುಂದಾದ ಸರ್ಕಾರ?

ಎನ್‌ಪಿಆರ್ ಹಿಂದಿದೆಯಾ ಎನ್ಅರ್‌ಸಿ ಹುನ್ನಾರ? ಸರ್ಕಾರದ ಮುಂದೆ ಗಂಭೀರ ಪ್ರಶ್ನೆ ಎತ್ತಿದ ಟಿಎಂಸಿ ಸಂಸದ

- Advertisement -
- Advertisement -

ಜನವರಿ 8, 2019ರಂದು ಲೋಕಸಭೆಯಲ್ಲಿ ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ಇತ್ತೀಚೆಗೆ ಕೇಂದ್ರ ಸರ್ಕಾರ ಪ್ರಕಟಿಸಿದೆ. ಆ ಬಳಿಕ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ಧ ಮತ್ತು ಪಾರ್ಸಿ ಧರ್ಮೀಯರಿಗೆ ಭಾರತೀಯ ಪೌರತ್ವ ಕೊಡುವ ಪ್ರಕ್ರಿಯೆ ನಡೆಯುತ್ತಿದೆ.

ಮುಸ್ಲಿಮರನ್ನು ಕೈ ಬಿಟ್ಟು ಕಾಯ್ದೆಗೆ ತಿದ್ದುಪಡಿ ತಂದಿರುವುದರ ವಿರುದ್ಧ ಕೇರಳ ರಾಜ್ಯ ಸರ್ಕಾರ, ಮುಸ್ಲಿಂ ಲೀಗ್ ಸೇರಿದಂತೆ ನೂರಾರು ಮಂದಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ಕೈಗೆತ್ತಿಕೊಂಡಿರುವ ಕೋರ್ಟ್ ಕೇಂದ್ರದ ಪ್ರತಿಕ್ರಿಯೆ ಕೇಳಿದೆ.

ಸಿಎಎ ಮಸೂದೆ ಲೋಕಸಭೆಯಲ್ಲಿ ಪರಿಚಯಿಸಿದ್ದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ ಸಿಎಎ ಬಳಿಕ ದೇಶದಾದ್ಯಂತ ಎನ್‌ಆರ್‌ಸಿ (ರಾಷ್ಟ್ರೀಯ ಪೌರತ್ವ ನೋಂದಣಿ) ಜಾರಿಗೊಳಿಸುವುದಾಗಿ ಹೇಳಿದ್ದರು. ಆ ಮಾತು ಈಗ ನಿಜವಾಗುವ ಆತಂಕ ಎದುರಾಗಿದೆ.

ಸಿಎಎ ಜಾರಿಗೊಳಿಸುವಾಗ, ಇದು ಯಾವುದೇ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಈಗಲೂ ಅದನ್ನೇ ಹೇಳುತ್ತಿದೆ. ಆದರೆ, ಈಗ ಸಿಎಎ ಬಳಿಕ ಸರ್ಕಾರ ಎನ್‌ಆರ್‌ಸಿ ಜಾರಿಗೊಳಿಸುವ ಸಾಧ್ಯತೆಯಿದ್ದು, ಒಂದು ವೇಳೆ ಎನ್‌ಆರ್‌ಸಿ ಜಾರಿಯಾದರೆ ಕೋಟ್ಯಾಂತರ ಭಾರತೀಯ ಪೌರತ್ವಕ್ಕೆ ಕುತ್ತು ಬರುವುದರಲ್ಲಿ ಅನುಮಾನವಿಲ್ಲ.

ಈ ಕುರಿತು ತೃಣಮೂಲ ಕಾಂಗ್ರೆಸ್‌ ಪಕ್ಷ (ಟಿಎಂಸಿ)ಯ ರಾಜ್ಯಸಭೆ ಸಂಸದ ಸಾಕೇತ್ ಗೋಖಲೆ ಕೆಲವೊಂದು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಗಂಭೀರ ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಸಾಕೇತ್ ಗೋಖಲೆ ಪ್ರಕಾರ, ಭಾರತದಲ್ಲಿ 10 ವರ್ಷಗಳಿಗೊಮ್ಮೆ ಜನ ಗಣತಿ ನಡೆಯುತ್ತದೆ. ಕೊನೆಯದಾಗಿ 2011ರಲ್ಲಿ ಗಣತಿ ನಡೆದಿದೆ. ಆ ಬಳಿಕ 2021ರಲ್ಲಿ ಗಣತಿ ನಡೆಯಬೇಕಿತ್ತು. ಆದರೆ, ಕೋವಿಡ್ ನೆಪ ಹೇಳಿ ಸರ್ಕಾರ ಗಣತಿ ನಡೆಸಿಲ್ಲ.

ಪ್ರಸ್ತುತ ಲೋಕಸಭೆ ಚುನಾವಣೆಗೆ ದೇಶ ಸಿದ್ದವಾಗಿ ನಿಂತಿದೆ. ಚುನಾವಣೆ ಮುಗಿದ ಬಳಿಕ ಮತ್ತೊಮ್ಮೆ ಬಿಜೆಪಿ ಸರ್ಕಾರ ಬಂದರೆ ಎನ್‌ಆರ್‌ಸಿ ಮೂಲಕವೇ ಜನಗಣತಿ ನಡೆಸುವುದು ಸರ್ಕಾರದ ಹುನ್ನಾರ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಗೋಖಲೆ ಪ್ರಕಾರ, ಗೃಹ ಇಲಾಖೆಯ ಅಧೀನದ ಕೇಂದ್ರ ಸರ್ಕಾರದ ಜನಗಣತಿಯ ವೆಬ್‌ಸೈಟ್‌ ತೆರೆದರೆ ಅಲ್ಲಿ ‘National Population Register’ (NPR) ಎಂದು ಕಾಣುತ್ತದೆ. ಈ ಎನ್‌ಪಿಆರ್ ಅನ್ನು ‘ಪೌರತ್ವದ ನಿಯಮ 3 (ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಗುರುತಿನ ಚೀಟಿಗಳ ವಿತರಣೆ) ನಿಯಮಗಳು-2003’ ಅಡಿಯಲ್ಲಿ ಮಾಡಲಾಗಿದೆ. ನಿಯಮಗಳ ಪ್ರಕಾರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಗೆ ವ್ಯತ್ಯಾಸವಿಲ್ಲ.

ಹಾಗಾಗಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾದರೆ ದೇಶದಾದ್ಯಂತ ಎನ್‌ಆರ್‌ಸಿ ಜಾರಿಯಾಗುವುದು ಖಂಡಿತ. ಇಲ್ಲದಿದ್ದರೆ ವೆಬ್‌ಸೈಟ್‌ನಲ್ಲಿರುವ ಎನ್‌ಪಿಆರ್ ಎಂಬುವುದನ್ನು ಯಾಕೆ ಸರ್ಕಾರ ತೆಗೆದು ಹಾಕಿಲ್ಲ?. ಮುಂದಿನ ಗಣತಿಯನ್ನು ಎನ್‌ಪಿಆರ್ ಮೂಲಕ ಮಾಡುತ್ತೇವೆ ಎಂದು ಪ್ರಧಾನಿ ಮೋದಿಯಾಗಲಿ, ಗೃಹ ಸಚಿವ ಅಮಿತ್ ಶಾ ಆಗಲಿ ಯಾಕೆ ಯಾವುದೇ ಮಾಹಿತಿ ನೀಡಿಲ್ಲ? ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಸಿಎಎ ಕಾಯ್ದೆ ಅಂಗೀಕಾರಗೊಂಡಾಗ ದೇಶದಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಪೌರತ್ವಕ್ಕೆ ಕುತ್ತು ಬರುವ ಆತಂಕ ವ್ಯಕ್ತಪಡಿಸಿದ ಕೋಟ್ಯಾಂತರ ಮುಸ್ಲಿಮರು ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಹಾಗಾಗಿ, ತಕ್ಷಣಕ್ಕೆ ಕಾಯ್ದೆ ಜಾರಿಗೊಳಿಸದ ಕೇಂದ್ರ ಸರ್ಕಾರ, ಚುನಾವಣೆ ಹತ್ತಿರ ಬರುವಾಗ ಕಾಯ್ದೆಯ ನಿಯಮಗಳನ್ನು ಪ್ರಕಟಿಸಿದೆ.

ಎನ್‌ಪಿಆರ್ ಅಂದರೆ ಏನು? 

ಜನಗಣತಿಯ ವೆಬ್‌ಸೈಟ್‌ನಲ್ಲಿ ಹೇಳಿದಂತೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಸಾಮಾನ್ಯವಾಗಿ ಹಳ್ಳಿ ಅಥವಾ ಗ್ರಾಮೀಣ ಪ್ರದೇಶ, ಪಟ್ಟಣ ಅಥವಾ ವಾರ್ಡ್, ಪಟ್ಟಣ ಅಥವಾ ನಗರ ಪ್ರದೇಶದ ವಾರ್ಡ್‌ನೊಳಗೆ ಗುರುತಿಸಲಾದ ಪ್ರದೇಶದಲ್ಲಿ ವಾಸಿಸುವ ವ್ಯಕ್ತಿಗಳ ವಿವರಗಳನ್ನು ಒಳಗೊಂಡಿರುವ ನೋಂದಣಿಯಾಗಿದೆ. ಎನ್‌ಪಿಆರ್ ಅನ್ನು ಮೊದಲ ಬಾರಿಗೆ 2010 ರಲ್ಲಿ ಸಿದ್ಧಪಡಿಸಲಾಯಿತು. ಇದನ್ನು 1995ರ ಪೌರತ್ವ ಕಾಯ್ದೆಯಡಿ ಬರುವ ನಿಯಮ 3 ರ ಪೌರತ್ವ (ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಗುರುತಿನ ಚೀಟಿಗಳ ವಿತರಣೆ) ನಿಯಮಗಳು- 2003, ಉಪ ನಿಯಮ (4) ಅಡಿ 2015ರಲ್ಲಿ ನವೀಕರಿಸಲಾಗಿದೆ. ನವೀಕರಣದಡಿ ಮುಂದಿನ ಗಣತಿಯಲ್ಲಿ ಜನನ, ಮರಣ, ವಲಸೆಯ ಬದಲಾವಣೆಗಳನ್ನು ಅಪ್ಡೇಟ್ ಮಾಡಲಾಗುತ್ತದೆ. ದೇಶದ ಸಾಮಾನ್ಯ ನಿವಾಸಿಗಳ ಸಮಗ್ರ ಡೇಟಾಬೇಸ್ ಅನ್ನು ರಚಿಸುವುದು ಎನ್‌ಪಿಆರ್‌ನ ಉದ್ದೇಶವಾಗಿದೆ. ಎನ್‌ಪಿಆರ್ ಅಡಿ ಗಣತಿ ಮಾಡುವಾಗ ಯಾವುದೇ ದಾಖಲೆ ಸಂಗ್ರಹಿಸುವುದಿಲ್ಲ.

ಇದನ್ನೂ ಓದಿ : ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...