Homeಮುಖಪುಟದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ಮುಂದಾದ ಸರ್ಕಾರ?

ದೇಶದಾದ್ಯಂತ ಎನ್‌ಆರ್‌ಸಿ ಜಾರಿಗೆ ಮುಂದಾದ ಸರ್ಕಾರ?

ಎನ್‌ಪಿಆರ್ ಹಿಂದಿದೆಯಾ ಎನ್ಅರ್‌ಸಿ ಹುನ್ನಾರ? ಸರ್ಕಾರದ ಮುಂದೆ ಗಂಭೀರ ಪ್ರಶ್ನೆ ಎತ್ತಿದ ಟಿಎಂಸಿ ಸಂಸದ

- Advertisement -
- Advertisement -

ಜನವರಿ 8, 2019ರಂದು ಲೋಕಸಭೆಯಲ್ಲಿ ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ಇತ್ತೀಚೆಗೆ ಕೇಂದ್ರ ಸರ್ಕಾರ ಪ್ರಕಟಿಸಿದೆ. ಆ ಬಳಿಕ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ಧ ಮತ್ತು ಪಾರ್ಸಿ ಧರ್ಮೀಯರಿಗೆ ಭಾರತೀಯ ಪೌರತ್ವ ಕೊಡುವ ಪ್ರಕ್ರಿಯೆ ನಡೆಯುತ್ತಿದೆ.

ಮುಸ್ಲಿಮರನ್ನು ಕೈ ಬಿಟ್ಟು ಕಾಯ್ದೆಗೆ ತಿದ್ದುಪಡಿ ತಂದಿರುವುದರ ವಿರುದ್ಧ ಕೇರಳ ರಾಜ್ಯ ಸರ್ಕಾರ, ಮುಸ್ಲಿಂ ಲೀಗ್ ಸೇರಿದಂತೆ ನೂರಾರು ಮಂದಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ಕೈಗೆತ್ತಿಕೊಂಡಿರುವ ಕೋರ್ಟ್ ಕೇಂದ್ರದ ಪ್ರತಿಕ್ರಿಯೆ ಕೇಳಿದೆ.

ಸಿಎಎ ಮಸೂದೆ ಲೋಕಸಭೆಯಲ್ಲಿ ಪರಿಚಯಿಸಿದ್ದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ ಸಿಎಎ ಬಳಿಕ ದೇಶದಾದ್ಯಂತ ಎನ್‌ಆರ್‌ಸಿ (ರಾಷ್ಟ್ರೀಯ ಪೌರತ್ವ ನೋಂದಣಿ) ಜಾರಿಗೊಳಿಸುವುದಾಗಿ ಹೇಳಿದ್ದರು. ಆ ಮಾತು ಈಗ ನಿಜವಾಗುವ ಆತಂಕ ಎದುರಾಗಿದೆ.

ಸಿಎಎ ಜಾರಿಗೊಳಿಸುವಾಗ, ಇದು ಯಾವುದೇ ಭಾರತೀಯರ ಪೌರತ್ವ ಕಿತ್ತುಕೊಳ್ಳುವುದಿಲ್ಲ ಎಂದು ಸರ್ಕಾರ ಹೇಳಿತ್ತು. ಈಗಲೂ ಅದನ್ನೇ ಹೇಳುತ್ತಿದೆ. ಆದರೆ, ಈಗ ಸಿಎಎ ಬಳಿಕ ಸರ್ಕಾರ ಎನ್‌ಆರ್‌ಸಿ ಜಾರಿಗೊಳಿಸುವ ಸಾಧ್ಯತೆಯಿದ್ದು, ಒಂದು ವೇಳೆ ಎನ್‌ಆರ್‌ಸಿ ಜಾರಿಯಾದರೆ ಕೋಟ್ಯಾಂತರ ಭಾರತೀಯ ಪೌರತ್ವಕ್ಕೆ ಕುತ್ತು ಬರುವುದರಲ್ಲಿ ಅನುಮಾನವಿಲ್ಲ.

ಈ ಕುರಿತು ತೃಣಮೂಲ ಕಾಂಗ್ರೆಸ್‌ ಪಕ್ಷ (ಟಿಎಂಸಿ)ಯ ರಾಜ್ಯಸಭೆ ಸಂಸದ ಸಾಕೇತ್ ಗೋಖಲೆ ಕೆಲವೊಂದು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಗಂಭೀರ ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಸಾಕೇತ್ ಗೋಖಲೆ ಪ್ರಕಾರ, ಭಾರತದಲ್ಲಿ 10 ವರ್ಷಗಳಿಗೊಮ್ಮೆ ಜನ ಗಣತಿ ನಡೆಯುತ್ತದೆ. ಕೊನೆಯದಾಗಿ 2011ರಲ್ಲಿ ಗಣತಿ ನಡೆದಿದೆ. ಆ ಬಳಿಕ 2021ರಲ್ಲಿ ಗಣತಿ ನಡೆಯಬೇಕಿತ್ತು. ಆದರೆ, ಕೋವಿಡ್ ನೆಪ ಹೇಳಿ ಸರ್ಕಾರ ಗಣತಿ ನಡೆಸಿಲ್ಲ.

ಪ್ರಸ್ತುತ ಲೋಕಸಭೆ ಚುನಾವಣೆಗೆ ದೇಶ ಸಿದ್ದವಾಗಿ ನಿಂತಿದೆ. ಚುನಾವಣೆ ಮುಗಿದ ಬಳಿಕ ಮತ್ತೊಮ್ಮೆ ಬಿಜೆಪಿ ಸರ್ಕಾರ ಬಂದರೆ ಎನ್‌ಆರ್‌ಸಿ ಮೂಲಕವೇ ಜನಗಣತಿ ನಡೆಸುವುದು ಸರ್ಕಾರದ ಹುನ್ನಾರ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಗೋಖಲೆ ಪ್ರಕಾರ, ಗೃಹ ಇಲಾಖೆಯ ಅಧೀನದ ಕೇಂದ್ರ ಸರ್ಕಾರದ ಜನಗಣತಿಯ ವೆಬ್‌ಸೈಟ್‌ ತೆರೆದರೆ ಅಲ್ಲಿ ‘National Population Register’ (NPR) ಎಂದು ಕಾಣುತ್ತದೆ. ಈ ಎನ್‌ಪಿಆರ್ ಅನ್ನು ‘ಪೌರತ್ವದ ನಿಯಮ 3 (ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಗುರುತಿನ ಚೀಟಿಗಳ ವಿತರಣೆ) ನಿಯಮಗಳು-2003’ ಅಡಿಯಲ್ಲಿ ಮಾಡಲಾಗಿದೆ. ನಿಯಮಗಳ ಪ್ರಕಾರ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿಗೆ ವ್ಯತ್ಯಾಸವಿಲ್ಲ.

ಹಾಗಾಗಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾದರೆ ದೇಶದಾದ್ಯಂತ ಎನ್‌ಆರ್‌ಸಿ ಜಾರಿಯಾಗುವುದು ಖಂಡಿತ. ಇಲ್ಲದಿದ್ದರೆ ವೆಬ್‌ಸೈಟ್‌ನಲ್ಲಿರುವ ಎನ್‌ಪಿಆರ್ ಎಂಬುವುದನ್ನು ಯಾಕೆ ಸರ್ಕಾರ ತೆಗೆದು ಹಾಕಿಲ್ಲ?. ಮುಂದಿನ ಗಣತಿಯನ್ನು ಎನ್‌ಪಿಆರ್ ಮೂಲಕ ಮಾಡುತ್ತೇವೆ ಎಂದು ಪ್ರಧಾನಿ ಮೋದಿಯಾಗಲಿ, ಗೃಹ ಸಚಿವ ಅಮಿತ್ ಶಾ ಆಗಲಿ ಯಾಕೆ ಯಾವುದೇ ಮಾಹಿತಿ ನೀಡಿಲ್ಲ? ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಸಿಎಎ ಕಾಯ್ದೆ ಅಂಗೀಕಾರಗೊಂಡಾಗ ದೇಶದಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಪೌರತ್ವಕ್ಕೆ ಕುತ್ತು ಬರುವ ಆತಂಕ ವ್ಯಕ್ತಪಡಿಸಿದ ಕೋಟ್ಯಾಂತರ ಮುಸ್ಲಿಮರು ದೇಶದ ನಾನಾ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಹಾಗಾಗಿ, ತಕ್ಷಣಕ್ಕೆ ಕಾಯ್ದೆ ಜಾರಿಗೊಳಿಸದ ಕೇಂದ್ರ ಸರ್ಕಾರ, ಚುನಾವಣೆ ಹತ್ತಿರ ಬರುವಾಗ ಕಾಯ್ದೆಯ ನಿಯಮಗಳನ್ನು ಪ್ರಕಟಿಸಿದೆ.

ಎನ್‌ಪಿಆರ್ ಅಂದರೆ ಏನು? 

ಜನಗಣತಿಯ ವೆಬ್‌ಸೈಟ್‌ನಲ್ಲಿ ಹೇಳಿದಂತೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಸಾಮಾನ್ಯವಾಗಿ ಹಳ್ಳಿ ಅಥವಾ ಗ್ರಾಮೀಣ ಪ್ರದೇಶ, ಪಟ್ಟಣ ಅಥವಾ ವಾರ್ಡ್, ಪಟ್ಟಣ ಅಥವಾ ನಗರ ಪ್ರದೇಶದ ವಾರ್ಡ್‌ನೊಳಗೆ ಗುರುತಿಸಲಾದ ಪ್ರದೇಶದಲ್ಲಿ ವಾಸಿಸುವ ವ್ಯಕ್ತಿಗಳ ವಿವರಗಳನ್ನು ಒಳಗೊಂಡಿರುವ ನೋಂದಣಿಯಾಗಿದೆ. ಎನ್‌ಪಿಆರ್ ಅನ್ನು ಮೊದಲ ಬಾರಿಗೆ 2010 ರಲ್ಲಿ ಸಿದ್ಧಪಡಿಸಲಾಯಿತು. ಇದನ್ನು 1995ರ ಪೌರತ್ವ ಕಾಯ್ದೆಯಡಿ ಬರುವ ನಿಯಮ 3 ರ ಪೌರತ್ವ (ನಾಗರಿಕರ ನೋಂದಣಿ ಮತ್ತು ರಾಷ್ಟ್ರೀಯ ಗುರುತಿನ ಚೀಟಿಗಳ ವಿತರಣೆ) ನಿಯಮಗಳು- 2003, ಉಪ ನಿಯಮ (4) ಅಡಿ 2015ರಲ್ಲಿ ನವೀಕರಿಸಲಾಗಿದೆ. ನವೀಕರಣದಡಿ ಮುಂದಿನ ಗಣತಿಯಲ್ಲಿ ಜನನ, ಮರಣ, ವಲಸೆಯ ಬದಲಾವಣೆಗಳನ್ನು ಅಪ್ಡೇಟ್ ಮಾಡಲಾಗುತ್ತದೆ. ದೇಶದ ಸಾಮಾನ್ಯ ನಿವಾಸಿಗಳ ಸಮಗ್ರ ಡೇಟಾಬೇಸ್ ಅನ್ನು ರಚಿಸುವುದು ಎನ್‌ಪಿಆರ್‌ನ ಉದ್ದೇಶವಾಗಿದೆ. ಎನ್‌ಪಿಆರ್ ಅಡಿ ಗಣತಿ ಮಾಡುವಾಗ ಯಾವುದೇ ದಾಖಲೆ ಸಂಗ್ರಹಿಸುವುದಿಲ್ಲ.

ಇದನ್ನೂ ಓದಿ : ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...