HomeಮುಖಪುಟSC/ST Reservation |'ಕೆನೆಪದರ' ಕುರಿತು ಶಾಸಕಾಂಗ, ಕಾರ್ಯಾಂಗ ನಿರ್ಧರಿಸಲಿ : ಸುಪ್ರೀಂ ಕೋರ್ಟ್

SC/ST Reservation |’ಕೆನೆಪದರ’ ಕುರಿತು ಶಾಸಕಾಂಗ, ಕಾರ್ಯಾಂಗ ನಿರ್ಧರಿಸಲಿ : ಸುಪ್ರೀಂ ಕೋರ್ಟ್

- Advertisement -
- Advertisement -

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯಲ್ಲಿ ‘ಕೆನೆಪದರ’ (ಕ್ರೀಮಿಲೇಯರ್) ತತ್ವ ಅಳವಡಿಸುವ ಕುರಿತು ಶಾಸಕಾಂಗ ಮತ್ತು ಕಾರ್ಯಾಂಗ ನಿರ್ಧರಿಸಲಿ. ಚೆಂಡು ಈಗ ಸರ್ಕಾರದ ಅಂಗಳದಲ್ಲಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ಜ.9) ಹೇಳಿದೆ.

ಮೀಸಲಾತಿಯ ಪ್ರಯೋಜನ ಪಡೆದು ಇತರರೊಂದಿಗೆ ಸ್ಪರ್ಧಿಸುವ ಸ್ಥಿತಿಯಲ್ಲಿ ಇರುವವರನ್ನು ಮೀಸಲಾತಿಯಿಂದ ಹೊರಗಿಡಬೇಕು ಎಂದು ಕೋರಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್‌ ಅವರಿದ್ದ ನ್ಯಾಯಪೀಠ ಮೇಲಿನ ಹೇಳಿಕೆ ನೀಡಿದೆ.

ಏಳು ಸದಸ್ಯರಿದ್ದ ಸಂವಿಧಾನ ಪೀಠವು ಕಳೆದ ವರ್ಷ ಆಗಸ್ಟ್‌ನಲ್ಲಿ ನೀಡಿದ್ದ ತೀರ್ಪಿಗೆ ಸಂಬಂಧಿಸಿ ಸಂತೋಷ್ ಮಾಳವೀಯ ಎಂಬವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿದೆ.

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ರಾಜ್ಯಗಳಿಗೆ ಅವಕಾಶ ನೀಡಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ 7 ನ್ಯಾಯಾಧೀಶರ ಪೀಠವು 6:1ರ ಬಹುಮತದೊಂದಿಗೆ 2024ರ ಆಗಸ್ಟ್‌ 1ರಂದು ತೀರ್ಪು ನೀಡಿತ್ತು. ಇ.ವಿ ಚಿನ್ನಯ್ಯ ಪ್ರಕರಣದಲ್ಲಿ ನೀಡಲಾಗಿದ್ದ ಒಳಮೀಸಲಾತಿ ಸಾಧ್ಯವಿಲ್ಲ ಎಂಬ ತೀರ್ಪನ್ನು ಪೀಠ ರದ್ದುಗೊಳಿಸಿತ್ತು.

ಈ ಪೀಠದಲ್ಲಿ ನ್ಯಾಯಮೂರ್ತಿ ಬಿ.ಆರ್‌. ಗವಾಯಿ ಕೂಡ ಇದ್ದರು. ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿನ ‘ಕೆನೆಪದರ’ ಗುರುತಿಸಿ, ಅವರಿಗೆ ಮೀಸಲಾತಿ ಸೌಲಭ್ಯ ನಿರಾಕರಿಸುವುದಕ್ಕಾಗಿ ರಾಜ್ಯಗಳು ನೀತಿಯೊಂದನ್ನು ರೂಪಿಸಬೇಕು ಎಂಬುದಾಗಿ ಪ್ರತ್ಯೇಕ ತೀರ್ಪು ಬರೆದಿದ್ದರು.

“ಮೀಸಲಾತಿಯ ಪ್ರಯೋಜನ ಪಡೆದವರು, ಇತರರೊಂದಿಗೆ ಸ್ಪರ್ಧಿಸುವ ಸ್ಥಿತಿಯಲ್ಲಿ ಇದ್ದಾಗ ಅವರನ್ನು ಮೀಸಲಾತಿ ಸೌಲಭ್ಯದಿಂದ ಹೊರಗಿಡಬೇಕು. ಕಳೆದ 75 ವರ್ಷಗಳ ವಿದ್ಯಮಾನಗಳನ್ನು ಪರಿಗಣನೆಗೆ ತೆಗೆದುಕೊಂಡೇ ನಾವು ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಆದರೆ, ಈ ಕುರಿತು ಶಾಸಕಾಂಗ ಮತ್ತು ಕಾರ್ಯಾಂಗ ನಿರ್ಧಾರ ಕೈಗೊಳ್ಳಬೇಕು” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ.

ಇದನ್ನೂ ಓದಿ | ನ್ಯಾಯಾಧೀಶರಿಂದ ಮುಸ್ಲಿಂ ವಿರೋಧಿ ಹೇಳಿಕೆ : ಹೊಸ ವರದಿ ಕೇಳಿದ ಸಿಜೆಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...