HomeಮುಖಪುಟSC/ST Reservation |'ಕೆನೆಪದರ' ಕುರಿತು ಶಾಸಕಾಂಗ, ಕಾರ್ಯಾಂಗ ನಿರ್ಧರಿಸಲಿ : ಸುಪ್ರೀಂ ಕೋರ್ಟ್

SC/ST Reservation |’ಕೆನೆಪದರ’ ಕುರಿತು ಶಾಸಕಾಂಗ, ಕಾರ್ಯಾಂಗ ನಿರ್ಧರಿಸಲಿ : ಸುಪ್ರೀಂ ಕೋರ್ಟ್

- Advertisement -
- Advertisement -

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯಲ್ಲಿ ‘ಕೆನೆಪದರ’ (ಕ್ರೀಮಿಲೇಯರ್) ತತ್ವ ಅಳವಡಿಸುವ ಕುರಿತು ಶಾಸಕಾಂಗ ಮತ್ತು ಕಾರ್ಯಾಂಗ ನಿರ್ಧರಿಸಲಿ. ಚೆಂಡು ಈಗ ಸರ್ಕಾರದ ಅಂಗಳದಲ್ಲಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ಜ.9) ಹೇಳಿದೆ.

ಮೀಸಲಾತಿಯ ಪ್ರಯೋಜನ ಪಡೆದು ಇತರರೊಂದಿಗೆ ಸ್ಪರ್ಧಿಸುವ ಸ್ಥಿತಿಯಲ್ಲಿ ಇರುವವರನ್ನು ಮೀಸಲಾತಿಯಿಂದ ಹೊರಗಿಡಬೇಕು ಎಂದು ಕೋರಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್‌ ಅವರಿದ್ದ ನ್ಯಾಯಪೀಠ ಮೇಲಿನ ಹೇಳಿಕೆ ನೀಡಿದೆ.

ಏಳು ಸದಸ್ಯರಿದ್ದ ಸಂವಿಧಾನ ಪೀಠವು ಕಳೆದ ವರ್ಷ ಆಗಸ್ಟ್‌ನಲ್ಲಿ ನೀಡಿದ್ದ ತೀರ್ಪಿಗೆ ಸಂಬಂಧಿಸಿ ಸಂತೋಷ್ ಮಾಳವೀಯ ಎಂಬವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿದೆ.

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ರಾಜ್ಯಗಳಿಗೆ ಅವಕಾಶ ನೀಡಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ 7 ನ್ಯಾಯಾಧೀಶರ ಪೀಠವು 6:1ರ ಬಹುಮತದೊಂದಿಗೆ 2024ರ ಆಗಸ್ಟ್‌ 1ರಂದು ತೀರ್ಪು ನೀಡಿತ್ತು. ಇ.ವಿ ಚಿನ್ನಯ್ಯ ಪ್ರಕರಣದಲ್ಲಿ ನೀಡಲಾಗಿದ್ದ ಒಳಮೀಸಲಾತಿ ಸಾಧ್ಯವಿಲ್ಲ ಎಂಬ ತೀರ್ಪನ್ನು ಪೀಠ ರದ್ದುಗೊಳಿಸಿತ್ತು.

ಈ ಪೀಠದಲ್ಲಿ ನ್ಯಾಯಮೂರ್ತಿ ಬಿ.ಆರ್‌. ಗವಾಯಿ ಕೂಡ ಇದ್ದರು. ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿನ ‘ಕೆನೆಪದರ’ ಗುರುತಿಸಿ, ಅವರಿಗೆ ಮೀಸಲಾತಿ ಸೌಲಭ್ಯ ನಿರಾಕರಿಸುವುದಕ್ಕಾಗಿ ರಾಜ್ಯಗಳು ನೀತಿಯೊಂದನ್ನು ರೂಪಿಸಬೇಕು ಎಂಬುದಾಗಿ ಪ್ರತ್ಯೇಕ ತೀರ್ಪು ಬರೆದಿದ್ದರು.

“ಮೀಸಲಾತಿಯ ಪ್ರಯೋಜನ ಪಡೆದವರು, ಇತರರೊಂದಿಗೆ ಸ್ಪರ್ಧಿಸುವ ಸ್ಥಿತಿಯಲ್ಲಿ ಇದ್ದಾಗ ಅವರನ್ನು ಮೀಸಲಾತಿ ಸೌಲಭ್ಯದಿಂದ ಹೊರಗಿಡಬೇಕು. ಕಳೆದ 75 ವರ್ಷಗಳ ವಿದ್ಯಮಾನಗಳನ್ನು ಪರಿಗಣನೆಗೆ ತೆಗೆದುಕೊಂಡೇ ನಾವು ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಆದರೆ, ಈ ಕುರಿತು ಶಾಸಕಾಂಗ ಮತ್ತು ಕಾರ್ಯಾಂಗ ನಿರ್ಧಾರ ಕೈಗೊಳ್ಳಬೇಕು” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ.

ಇದನ್ನೂ ಓದಿ | ನ್ಯಾಯಾಧೀಶರಿಂದ ಮುಸ್ಲಿಂ ವಿರೋಧಿ ಹೇಳಿಕೆ : ಹೊಸ ವರದಿ ಕೇಳಿದ ಸಿಜೆಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...