Homeಮುಖಪುಟ‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

“ಎಸ್‌ಸಿ, ಎಸ್‌ಟಿ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿಯ ಸುಮಾರು 70 ಕೋಟಿ ಹಣವನ್ನು ಉಳಿಸಿದ್ದೇವೆ” ಎಂದು ಹೋರಾಟಗಾರ ಹ.ರಾ.ಮಹೇಶ್‌ ತಿಳಿಸಿದ್ದಾರೆ.

- Advertisement -
- Advertisement -

ದಲಿತ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಯನ್ನು ರೂಪಿಸಿದ್ದ ಸರ್ಕಾರ, ತೀವ್ರ ವಿರೋಧದ ಬಳಿಕ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಹೀಗಾಗಿ ದಲಿತರಿಗೆ ಮೀಸಲಾಗಿದ್ದ ಕೋಟ್ಯಂತರ ಹಣ ದುರುಪಯೋಗ ಆಗುವುದು ತಪ್ಪಿದೆ.

ವೇದಗಣಿತ ನೆಪದಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತು ದೂರುಗಳು ಬಂದಿದ್ದವು. ದಲಿತ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ದಲಿತರಿಗೆ ಮೀಸಲಾದ ಹಣವನ್ನು ಖಾಸಗಿ ಸಂಸ್ಥೆಗಳು ದುರುಪಯೋಗ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ‘ನಾನುಗೌರಿ.ಕಾಂ’ ಸರಣಿಯಾಗಿ ವರದಿ ಮಾಡಿತ್ತು. ವೇದಗಣಿತದಿಂದ ದಲಿತ ಮಕ್ಕಳ ಮೇಲೆ ಬೀರುವ ದೂರಗಾಮಿ ಪರಿಣಾಮಗಳ ಕುರಿತು ಬೆಳಕು ಚೆಲ್ಲಲಾಗಿತ್ತು. ಶಿಕ್ಷಣ ಇಲಾಖೆ ವ್ಯಾಪ್ತಿಯ ಕೆಲಸವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಡುತ್ತಿರುವುದು ಕೂಡ ಅನುಮಾನಗಳಿಗೆ ಆಸ್ಪದ ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಾ.ಬಿ.ಆರ್‌.ಅಂಬೇಡ್ಕರ್‌ ಸಂವಿಧಾನ ಹಕ್ಕುಗಳ ಸಂರಕ್ಷಣಾ ಪರಿಷತ್ ಈ ಕುರಿತು ಸರ್ಕಾರದ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ದೂರು ಸಲ್ಲಿಸಿತ್ತು. ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯನ್ನು ಉಲ್ಲಂಘಿಸಿ ವೇದಗಣಿತ ಯೋಜನೆಗೆ ಆದೇಶವನ್ನು ಹೊರಡಿಸಲಾಗಿದೆ. ಸದರಿ ಆದೇಶವು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಕ್ರಿಯಾ ಯೋಜನೆ ಅನುಮೋದನೆಗೊಂಡಿರುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಅನಧಿಕೃತ ಟಿಪ್ಪಣಿ ಉಲ್ಲೇಖಿಸಿತ್ತು.

ಆ ನಂತರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯ ಅಪರ ಮುಖ್ಯನಿರ್ದೇಶಕರು ತಮ್ಮ ನಿರ್ದೇಶನಗಳನ್ನು ಹಿಂಪಡೆದಿರುವುದಾಗಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ತಿಳಿಸಿದ್ದಾರೆ.

“ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ ಶೇ. 25ರ ಅನುದಾನದಲ್ಲಿ 5ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೂಕ್ತ ಸಮವಸ್ತ್ರ ಸಹಿತ ವೇದಗಣಿತ ತರಬೇತಿ ನೀಡಲು ಎವಿಎಂ ಅಕಾಡೆಮಿಗೆ (ಹಿರಿಯೂರು) ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ನಿಯಮಾನುಸಾರ ಮಾರ್ಗಸೂಚಿಗಳನ್ವಯ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಲ್ಲೇಖಿತ ಪತ್ರದಲ್ಲಿ ನಿರ್ದೇಶನ ನೀಡಲಾಗಿತ್ತು. ಪ್ರಸ್ತುತ ಸದರಿ ವಿಷಯದ ಕುರಿತು ಪುನರ್‌ ಪರಿಶೀಲಿಸಲಾಗಿದ್ದು, ಶಾಲೆಗಳಿಗೆ ಬೋಧಿಸುವ ವಿಷಯಗಳ ಪಠ್ಯಕ್ರಮದ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ನಿರ್ಧರಿಸಬೇಕಾಗಿರುತ್ತದೆ. ಆದರೆ ಈ ಕುರಿತು  ಸದರಿ ಇಲಾಖೆಯೊಂದಿಗೆ ಸಮಾಲೋಚಿಸದೆ ನಿರ್ದೇಶನ ನೀಡಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಉಲ್ಲೇಖಿತ ಸರ್ಕಾರದ ಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ದಲಿತರ 70 ಕೋಟಿ ರೂ. ಉಳಿಸಿದ್ದೇವೆ: ಹ.ರಾ.ಮಹೇಶ್‌

“ಎಸ್‌ಸಿ, ಎಸ್‌ಟಿ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿಯ ಸುಮಾರು 70 ಕೋಟಿ ಹಣವನ್ನು ಉಳಿಸಿದ್ದೇವೆ” ಎಂದು  ಡಾ.ಬಿ.ಆರ್‌.ಅಂಬೇಡ್ಕರ್‌ ಸಂವಿಧಾನ ಹಕ್ಕುಗಳ ಸಂರಕ್ಷಣಾ ಪರಿಷತ್‌ನ ಹ.ರಾ.ಮಹೇಶ್‌ ತಿಳಿಸಿದ್ದಾರೆ.

“ವೇದ ಗಣಿತದ ನೆಪದಲ್ಲಿ ನಾಡಿನ ಸುಮಾರು ಒಂದೂವರೆ ಲಕ್ಷ ಮುಗ್ದ ಎಸ್‌ಸಿಎಸ್‌ಟಿ ವಿದ್ಯಾರ್ಥಿಗಳು ಅನರ್ಥ ವೇದೀಕರಣಗೊಳ್ಳುವುದನ್ನು ತಪ್ಪಿಸಿದ್ದೇವೆ. ಈ ಹೋರಾಟಕ್ಕೆ ನಮ್ಮೊಡನೆ ನೇರವಾಗಿ ಭಾಗವಹಿಸಿದ ಚಳವಳಿಯ ಒಡನಾಡಿಗಳಿಗೆ, ಎಸ್‌ಸಿಎಸ್‌ಪಿ/ ಟಿಎಸ್‌ಪಿ ಪರಿಣಿತ ಹೋರಾಟಗಾರರಿಗೆ, ವಕೀಲ ಬಂಧುಗಳಿಗೆ, ಕೆಲ ಪತ್ರಕರ್ತ ಮಿತ್ರರಿಗೆ ಹಾಗೂ ದೂರದಿಂದಲೇ ನೈತಿಕ ಬೆಂಬಲ ಸೂಚಿಸಿದ ನಾಡಿನ ಎಲ್ಲಾ ಪ್ರಜ್ಞಾವಂತ ಬಂಧುಗಳಿಗೆ ಭೀಮನಮನಗಳನ್ನು ಸಲ್ಲಿಸುತ್ತೇವೆ” ಎಂದಿದ್ದಾರೆ.

ಇವುಗಳನ್ನು ಓದಿರಿ: ‘ವೇದಗಣಿತ’ ಕುರಿತು ‘ನಾನುಗೌರಿ.ಕಾಂ’ ಮಾಡಿರುವ ಸರಣಿ ವರದಿಗಳನ್ನು ಓದಲು ‘ಇಲ್ಲಿ ಕ್ಲಿಕ್‌ ಮಾಡಿ’

“ಆದರೆ, ಇದು ನಮ್ಮ ಸಂಪೂರ್ಣ ಗೆಲುವಲ್ಲ. ಈ ಕೆಟ್ಟ ಐಡಿಯಾವನ್ನು ಕೊಟ್ಟವರು, ಎಸ್‌ಸಿಎಸ್‌ಟಿ ಹಣವನ್ನು ದುರ್ಬಳಕೆಗೆ ಮುಂದಾಗಿ ಏಕಾಏಕಿ ಸುತ್ತೋಲೆ ಕಳಿಸಿದ ಸರ್ಕಾರದ ಅಧಿಕಾರಿಗಳುಮತ್ತು ನಮ್ಮ ಹಣವನ್ನು ಅನೀತಿ ಹಾಗೂ ಅನ್ಯಾಯವಾಗಿ ಕಬಳಿಸಲು ಸಜ್ಜಾಗಿದ್ದ ಎವಿಎಂ ಎಂಬ ಮನುವಾದಿ ಖಾಸಗಿಸಂಸ್ಥೆ ವಿರುದ್ಧ ಕ್ರಮ ಜರುಗಿಸಬೇಕಾಗಿದೆ. ಇವರೆಲ್ಲರ ಮೇಲೂ ಕಾನೂನಿನ ಕ್ರಮ ಜರುಗಿಸುವವರೆಗೂ ಹೋರಾಟ ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...