Homeಮುಖಪುಟ‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

“ಎಸ್‌ಸಿ, ಎಸ್‌ಟಿ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿಯ ಸುಮಾರು 70 ಕೋಟಿ ಹಣವನ್ನು ಉಳಿಸಿದ್ದೇವೆ” ಎಂದು ಹೋರಾಟಗಾರ ಹ.ರಾ.ಮಹೇಶ್‌ ತಿಳಿಸಿದ್ದಾರೆ.

- Advertisement -
- Advertisement -

ದಲಿತ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಯನ್ನು ರೂಪಿಸಿದ್ದ ಸರ್ಕಾರ, ತೀವ್ರ ವಿರೋಧದ ಬಳಿಕ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಹೀಗಾಗಿ ದಲಿತರಿಗೆ ಮೀಸಲಾಗಿದ್ದ ಕೋಟ್ಯಂತರ ಹಣ ದುರುಪಯೋಗ ಆಗುವುದು ತಪ್ಪಿದೆ.

ವೇದಗಣಿತ ನೆಪದಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತು ದೂರುಗಳು ಬಂದಿದ್ದವು. ದಲಿತ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ದಲಿತರಿಗೆ ಮೀಸಲಾದ ಹಣವನ್ನು ಖಾಸಗಿ ಸಂಸ್ಥೆಗಳು ದುರುಪಯೋಗ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ‘ನಾನುಗೌರಿ.ಕಾಂ’ ಸರಣಿಯಾಗಿ ವರದಿ ಮಾಡಿತ್ತು. ವೇದಗಣಿತದಿಂದ ದಲಿತ ಮಕ್ಕಳ ಮೇಲೆ ಬೀರುವ ದೂರಗಾಮಿ ಪರಿಣಾಮಗಳ ಕುರಿತು ಬೆಳಕು ಚೆಲ್ಲಲಾಗಿತ್ತು. ಶಿಕ್ಷಣ ಇಲಾಖೆ ವ್ಯಾಪ್ತಿಯ ಕೆಲಸವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಡುತ್ತಿರುವುದು ಕೂಡ ಅನುಮಾನಗಳಿಗೆ ಆಸ್ಪದ ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಾ.ಬಿ.ಆರ್‌.ಅಂಬೇಡ್ಕರ್‌ ಸಂವಿಧಾನ ಹಕ್ಕುಗಳ ಸಂರಕ್ಷಣಾ ಪರಿಷತ್ ಈ ಕುರಿತು ಸರ್ಕಾರದ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ದೂರು ಸಲ್ಲಿಸಿತ್ತು. ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯನ್ನು ಉಲ್ಲಂಘಿಸಿ ವೇದಗಣಿತ ಯೋಜನೆಗೆ ಆದೇಶವನ್ನು ಹೊರಡಿಸಲಾಗಿದೆ. ಸದರಿ ಆದೇಶವು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಕ್ರಿಯಾ ಯೋಜನೆ ಅನುಮೋದನೆಗೊಂಡಿರುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಅನಧಿಕೃತ ಟಿಪ್ಪಣಿ ಉಲ್ಲೇಖಿಸಿತ್ತು.

ಆ ನಂತರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯ ಅಪರ ಮುಖ್ಯನಿರ್ದೇಶಕರು ತಮ್ಮ ನಿರ್ದೇಶನಗಳನ್ನು ಹಿಂಪಡೆದಿರುವುದಾಗಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ತಿಳಿಸಿದ್ದಾರೆ.

“ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ ಶೇ. 25ರ ಅನುದಾನದಲ್ಲಿ 5ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೂಕ್ತ ಸಮವಸ್ತ್ರ ಸಹಿತ ವೇದಗಣಿತ ತರಬೇತಿ ನೀಡಲು ಎವಿಎಂ ಅಕಾಡೆಮಿಗೆ (ಹಿರಿಯೂರು) ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ನಿಯಮಾನುಸಾರ ಮಾರ್ಗಸೂಚಿಗಳನ್ವಯ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಲ್ಲೇಖಿತ ಪತ್ರದಲ್ಲಿ ನಿರ್ದೇಶನ ನೀಡಲಾಗಿತ್ತು. ಪ್ರಸ್ತುತ ಸದರಿ ವಿಷಯದ ಕುರಿತು ಪುನರ್‌ ಪರಿಶೀಲಿಸಲಾಗಿದ್ದು, ಶಾಲೆಗಳಿಗೆ ಬೋಧಿಸುವ ವಿಷಯಗಳ ಪಠ್ಯಕ್ರಮದ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ನಿರ್ಧರಿಸಬೇಕಾಗಿರುತ್ತದೆ. ಆದರೆ ಈ ಕುರಿತು  ಸದರಿ ಇಲಾಖೆಯೊಂದಿಗೆ ಸಮಾಲೋಚಿಸದೆ ನಿರ್ದೇಶನ ನೀಡಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಉಲ್ಲೇಖಿತ ಸರ್ಕಾರದ ಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ದಲಿತರ 70 ಕೋಟಿ ರೂ. ಉಳಿಸಿದ್ದೇವೆ: ಹ.ರಾ.ಮಹೇಶ್‌

“ಎಸ್‌ಸಿ, ಎಸ್‌ಟಿ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿಯ ಸುಮಾರು 70 ಕೋಟಿ ಹಣವನ್ನು ಉಳಿಸಿದ್ದೇವೆ” ಎಂದು  ಡಾ.ಬಿ.ಆರ್‌.ಅಂಬೇಡ್ಕರ್‌ ಸಂವಿಧಾನ ಹಕ್ಕುಗಳ ಸಂರಕ್ಷಣಾ ಪರಿಷತ್‌ನ ಹ.ರಾ.ಮಹೇಶ್‌ ತಿಳಿಸಿದ್ದಾರೆ.

“ವೇದ ಗಣಿತದ ನೆಪದಲ್ಲಿ ನಾಡಿನ ಸುಮಾರು ಒಂದೂವರೆ ಲಕ್ಷ ಮುಗ್ದ ಎಸ್‌ಸಿಎಸ್‌ಟಿ ವಿದ್ಯಾರ್ಥಿಗಳು ಅನರ್ಥ ವೇದೀಕರಣಗೊಳ್ಳುವುದನ್ನು ತಪ್ಪಿಸಿದ್ದೇವೆ. ಈ ಹೋರಾಟಕ್ಕೆ ನಮ್ಮೊಡನೆ ನೇರವಾಗಿ ಭಾಗವಹಿಸಿದ ಚಳವಳಿಯ ಒಡನಾಡಿಗಳಿಗೆ, ಎಸ್‌ಸಿಎಸ್‌ಪಿ/ ಟಿಎಸ್‌ಪಿ ಪರಿಣಿತ ಹೋರಾಟಗಾರರಿಗೆ, ವಕೀಲ ಬಂಧುಗಳಿಗೆ, ಕೆಲ ಪತ್ರಕರ್ತ ಮಿತ್ರರಿಗೆ ಹಾಗೂ ದೂರದಿಂದಲೇ ನೈತಿಕ ಬೆಂಬಲ ಸೂಚಿಸಿದ ನಾಡಿನ ಎಲ್ಲಾ ಪ್ರಜ್ಞಾವಂತ ಬಂಧುಗಳಿಗೆ ಭೀಮನಮನಗಳನ್ನು ಸಲ್ಲಿಸುತ್ತೇವೆ” ಎಂದಿದ್ದಾರೆ.

ಇವುಗಳನ್ನು ಓದಿರಿ: ‘ವೇದಗಣಿತ’ ಕುರಿತು ‘ನಾನುಗೌರಿ.ಕಾಂ’ ಮಾಡಿರುವ ಸರಣಿ ವರದಿಗಳನ್ನು ಓದಲು ‘ಇಲ್ಲಿ ಕ್ಲಿಕ್‌ ಮಾಡಿ’

“ಆದರೆ, ಇದು ನಮ್ಮ ಸಂಪೂರ್ಣ ಗೆಲುವಲ್ಲ. ಈ ಕೆಟ್ಟ ಐಡಿಯಾವನ್ನು ಕೊಟ್ಟವರು, ಎಸ್‌ಸಿಎಸ್‌ಟಿ ಹಣವನ್ನು ದುರ್ಬಳಕೆಗೆ ಮುಂದಾಗಿ ಏಕಾಏಕಿ ಸುತ್ತೋಲೆ ಕಳಿಸಿದ ಸರ್ಕಾರದ ಅಧಿಕಾರಿಗಳುಮತ್ತು ನಮ್ಮ ಹಣವನ್ನು ಅನೀತಿ ಹಾಗೂ ಅನ್ಯಾಯವಾಗಿ ಕಬಳಿಸಲು ಸಜ್ಜಾಗಿದ್ದ ಎವಿಎಂ ಎಂಬ ಮನುವಾದಿ ಖಾಸಗಿಸಂಸ್ಥೆ ವಿರುದ್ಧ ಕ್ರಮ ಜರುಗಿಸಬೇಕಾಗಿದೆ. ಇವರೆಲ್ಲರ ಮೇಲೂ ಕಾನೂನಿನ ಕ್ರಮ ಜರುಗಿಸುವವರೆಗೂ ಹೋರಾಟ ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....