Homeಮುಖಪುಟ‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

“ಎಸ್‌ಸಿ, ಎಸ್‌ಟಿ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿಯ ಸುಮಾರು 70 ಕೋಟಿ ಹಣವನ್ನು ಉಳಿಸಿದ್ದೇವೆ” ಎಂದು ಹೋರಾಟಗಾರ ಹ.ರಾ.ಮಹೇಶ್‌ ತಿಳಿಸಿದ್ದಾರೆ.

- Advertisement -
- Advertisement -

ದಲಿತ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಯನ್ನು ರೂಪಿಸಿದ್ದ ಸರ್ಕಾರ, ತೀವ್ರ ವಿರೋಧದ ಬಳಿಕ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಹೀಗಾಗಿ ದಲಿತರಿಗೆ ಮೀಸಲಾಗಿದ್ದ ಕೋಟ್ಯಂತರ ಹಣ ದುರುಪಯೋಗ ಆಗುವುದು ತಪ್ಪಿದೆ.

ವೇದಗಣಿತ ನೆಪದಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತು ದೂರುಗಳು ಬಂದಿದ್ದವು. ದಲಿತ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ದಲಿತರಿಗೆ ಮೀಸಲಾದ ಹಣವನ್ನು ಖಾಸಗಿ ಸಂಸ್ಥೆಗಳು ದುರುಪಯೋಗ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ‘ನಾನುಗೌರಿ.ಕಾಂ’ ಸರಣಿಯಾಗಿ ವರದಿ ಮಾಡಿತ್ತು. ವೇದಗಣಿತದಿಂದ ದಲಿತ ಮಕ್ಕಳ ಮೇಲೆ ಬೀರುವ ದೂರಗಾಮಿ ಪರಿಣಾಮಗಳ ಕುರಿತು ಬೆಳಕು ಚೆಲ್ಲಲಾಗಿತ್ತು. ಶಿಕ್ಷಣ ಇಲಾಖೆ ವ್ಯಾಪ್ತಿಯ ಕೆಲಸವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಡುತ್ತಿರುವುದು ಕೂಡ ಅನುಮಾನಗಳಿಗೆ ಆಸ್ಪದ ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಾ.ಬಿ.ಆರ್‌.ಅಂಬೇಡ್ಕರ್‌ ಸಂವಿಧಾನ ಹಕ್ಕುಗಳ ಸಂರಕ್ಷಣಾ ಪರಿಷತ್ ಈ ಕುರಿತು ಸರ್ಕಾರದ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ದೂರು ಸಲ್ಲಿಸಿತ್ತು. ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯನ್ನು ಉಲ್ಲಂಘಿಸಿ ವೇದಗಣಿತ ಯೋಜನೆಗೆ ಆದೇಶವನ್ನು ಹೊರಡಿಸಲಾಗಿದೆ. ಸದರಿ ಆದೇಶವು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಕ್ರಿಯಾ ಯೋಜನೆ ಅನುಮೋದನೆಗೊಂಡಿರುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಅನಧಿಕೃತ ಟಿಪ್ಪಣಿ ಉಲ್ಲೇಖಿಸಿತ್ತು.

ಆ ನಂತರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯ ಅಪರ ಮುಖ್ಯನಿರ್ದೇಶಕರು ತಮ್ಮ ನಿರ್ದೇಶನಗಳನ್ನು ಹಿಂಪಡೆದಿರುವುದಾಗಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ತಿಳಿಸಿದ್ದಾರೆ.

“ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ ಶೇ. 25ರ ಅನುದಾನದಲ್ಲಿ 5ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೂಕ್ತ ಸಮವಸ್ತ್ರ ಸಹಿತ ವೇದಗಣಿತ ತರಬೇತಿ ನೀಡಲು ಎವಿಎಂ ಅಕಾಡೆಮಿಗೆ (ಹಿರಿಯೂರು) ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ನಿಯಮಾನುಸಾರ ಮಾರ್ಗಸೂಚಿಗಳನ್ವಯ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಲ್ಲೇಖಿತ ಪತ್ರದಲ್ಲಿ ನಿರ್ದೇಶನ ನೀಡಲಾಗಿತ್ತು. ಪ್ರಸ್ತುತ ಸದರಿ ವಿಷಯದ ಕುರಿತು ಪುನರ್‌ ಪರಿಶೀಲಿಸಲಾಗಿದ್ದು, ಶಾಲೆಗಳಿಗೆ ಬೋಧಿಸುವ ವಿಷಯಗಳ ಪಠ್ಯಕ್ರಮದ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ನಿರ್ಧರಿಸಬೇಕಾಗಿರುತ್ತದೆ. ಆದರೆ ಈ ಕುರಿತು  ಸದರಿ ಇಲಾಖೆಯೊಂದಿಗೆ ಸಮಾಲೋಚಿಸದೆ ನಿರ್ದೇಶನ ನೀಡಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಉಲ್ಲೇಖಿತ ಸರ್ಕಾರದ ಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ದಲಿತರ 70 ಕೋಟಿ ರೂ. ಉಳಿಸಿದ್ದೇವೆ: ಹ.ರಾ.ಮಹೇಶ್‌

“ಎಸ್‌ಸಿ, ಎಸ್‌ಟಿ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿಯ ಸುಮಾರು 70 ಕೋಟಿ ಹಣವನ್ನು ಉಳಿಸಿದ್ದೇವೆ” ಎಂದು  ಡಾ.ಬಿ.ಆರ್‌.ಅಂಬೇಡ್ಕರ್‌ ಸಂವಿಧಾನ ಹಕ್ಕುಗಳ ಸಂರಕ್ಷಣಾ ಪರಿಷತ್‌ನ ಹ.ರಾ.ಮಹೇಶ್‌ ತಿಳಿಸಿದ್ದಾರೆ.

“ವೇದ ಗಣಿತದ ನೆಪದಲ್ಲಿ ನಾಡಿನ ಸುಮಾರು ಒಂದೂವರೆ ಲಕ್ಷ ಮುಗ್ದ ಎಸ್‌ಸಿಎಸ್‌ಟಿ ವಿದ್ಯಾರ್ಥಿಗಳು ಅನರ್ಥ ವೇದೀಕರಣಗೊಳ್ಳುವುದನ್ನು ತಪ್ಪಿಸಿದ್ದೇವೆ. ಈ ಹೋರಾಟಕ್ಕೆ ನಮ್ಮೊಡನೆ ನೇರವಾಗಿ ಭಾಗವಹಿಸಿದ ಚಳವಳಿಯ ಒಡನಾಡಿಗಳಿಗೆ, ಎಸ್‌ಸಿಎಸ್‌ಪಿ/ ಟಿಎಸ್‌ಪಿ ಪರಿಣಿತ ಹೋರಾಟಗಾರರಿಗೆ, ವಕೀಲ ಬಂಧುಗಳಿಗೆ, ಕೆಲ ಪತ್ರಕರ್ತ ಮಿತ್ರರಿಗೆ ಹಾಗೂ ದೂರದಿಂದಲೇ ನೈತಿಕ ಬೆಂಬಲ ಸೂಚಿಸಿದ ನಾಡಿನ ಎಲ್ಲಾ ಪ್ರಜ್ಞಾವಂತ ಬಂಧುಗಳಿಗೆ ಭೀಮನಮನಗಳನ್ನು ಸಲ್ಲಿಸುತ್ತೇವೆ” ಎಂದಿದ್ದಾರೆ.

ಇವುಗಳನ್ನು ಓದಿರಿ: ‘ವೇದಗಣಿತ’ ಕುರಿತು ‘ನಾನುಗೌರಿ.ಕಾಂ’ ಮಾಡಿರುವ ಸರಣಿ ವರದಿಗಳನ್ನು ಓದಲು ‘ಇಲ್ಲಿ ಕ್ಲಿಕ್‌ ಮಾಡಿ’

“ಆದರೆ, ಇದು ನಮ್ಮ ಸಂಪೂರ್ಣ ಗೆಲುವಲ್ಲ. ಈ ಕೆಟ್ಟ ಐಡಿಯಾವನ್ನು ಕೊಟ್ಟವರು, ಎಸ್‌ಸಿಎಸ್‌ಟಿ ಹಣವನ್ನು ದುರ್ಬಳಕೆಗೆ ಮುಂದಾಗಿ ಏಕಾಏಕಿ ಸುತ್ತೋಲೆ ಕಳಿಸಿದ ಸರ್ಕಾರದ ಅಧಿಕಾರಿಗಳುಮತ್ತು ನಮ್ಮ ಹಣವನ್ನು ಅನೀತಿ ಹಾಗೂ ಅನ್ಯಾಯವಾಗಿ ಕಬಳಿಸಲು ಸಜ್ಜಾಗಿದ್ದ ಎವಿಎಂ ಎಂಬ ಮನುವಾದಿ ಖಾಸಗಿಸಂಸ್ಥೆ ವಿರುದ್ಧ ಕ್ರಮ ಜರುಗಿಸಬೇಕಾಗಿದೆ. ಇವರೆಲ್ಲರ ಮೇಲೂ ಕಾನೂನಿನ ಕ್ರಮ ಜರುಗಿಸುವವರೆಗೂ ಹೋರಾಟ ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...