Homeಮುಖಪುಟ‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

“ಎಸ್‌ಸಿ, ಎಸ್‌ಟಿ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿಯ ಸುಮಾರು 70 ಕೋಟಿ ಹಣವನ್ನು ಉಳಿಸಿದ್ದೇವೆ” ಎಂದು ಹೋರಾಟಗಾರ ಹ.ರಾ.ಮಹೇಶ್‌ ತಿಳಿಸಿದ್ದಾರೆ.

- Advertisement -
- Advertisement -

ದಲಿತ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಯನ್ನು ರೂಪಿಸಿದ್ದ ಸರ್ಕಾರ, ತೀವ್ರ ವಿರೋಧದ ಬಳಿಕ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಹೀಗಾಗಿ ದಲಿತರಿಗೆ ಮೀಸಲಾಗಿದ್ದ ಕೋಟ್ಯಂತರ ಹಣ ದುರುಪಯೋಗ ಆಗುವುದು ತಪ್ಪಿದೆ.

ವೇದಗಣಿತ ನೆಪದಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತು ದೂರುಗಳು ಬಂದಿದ್ದವು. ದಲಿತ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ದಲಿತರಿಗೆ ಮೀಸಲಾದ ಹಣವನ್ನು ಖಾಸಗಿ ಸಂಸ್ಥೆಗಳು ದುರುಪಯೋಗ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ‘ನಾನುಗೌರಿ.ಕಾಂ’ ಸರಣಿಯಾಗಿ ವರದಿ ಮಾಡಿತ್ತು. ವೇದಗಣಿತದಿಂದ ದಲಿತ ಮಕ್ಕಳ ಮೇಲೆ ಬೀರುವ ದೂರಗಾಮಿ ಪರಿಣಾಮಗಳ ಕುರಿತು ಬೆಳಕು ಚೆಲ್ಲಲಾಗಿತ್ತು. ಶಿಕ್ಷಣ ಇಲಾಖೆ ವ್ಯಾಪ್ತಿಯ ಕೆಲಸವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಡುತ್ತಿರುವುದು ಕೂಡ ಅನುಮಾನಗಳಿಗೆ ಆಸ್ಪದ ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಾ.ಬಿ.ಆರ್‌.ಅಂಬೇಡ್ಕರ್‌ ಸಂವಿಧಾನ ಹಕ್ಕುಗಳ ಸಂರಕ್ಷಣಾ ಪರಿಷತ್ ಈ ಕುರಿತು ಸರ್ಕಾರದ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ದೂರು ಸಲ್ಲಿಸಿತ್ತು. ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯನ್ನು ಉಲ್ಲಂಘಿಸಿ ವೇದಗಣಿತ ಯೋಜನೆಗೆ ಆದೇಶವನ್ನು ಹೊರಡಿಸಲಾಗಿದೆ. ಸದರಿ ಆದೇಶವು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಕ್ರಿಯಾ ಯೋಜನೆ ಅನುಮೋದನೆಗೊಂಡಿರುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಅನಧಿಕೃತ ಟಿಪ್ಪಣಿ ಉಲ್ಲೇಖಿಸಿತ್ತು.

ಆ ನಂತರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯ ಅಪರ ಮುಖ್ಯನಿರ್ದೇಶಕರು ತಮ್ಮ ನಿರ್ದೇಶನಗಳನ್ನು ಹಿಂಪಡೆದಿರುವುದಾಗಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ತಿಳಿಸಿದ್ದಾರೆ.

“ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ ಶೇ. 25ರ ಅನುದಾನದಲ್ಲಿ 5ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೂಕ್ತ ಸಮವಸ್ತ್ರ ಸಹಿತ ವೇದಗಣಿತ ತರಬೇತಿ ನೀಡಲು ಎವಿಎಂ ಅಕಾಡೆಮಿಗೆ (ಹಿರಿಯೂರು) ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ನಿಯಮಾನುಸಾರ ಮಾರ್ಗಸೂಚಿಗಳನ್ವಯ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಲ್ಲೇಖಿತ ಪತ್ರದಲ್ಲಿ ನಿರ್ದೇಶನ ನೀಡಲಾಗಿತ್ತು. ಪ್ರಸ್ತುತ ಸದರಿ ವಿಷಯದ ಕುರಿತು ಪುನರ್‌ ಪರಿಶೀಲಿಸಲಾಗಿದ್ದು, ಶಾಲೆಗಳಿಗೆ ಬೋಧಿಸುವ ವಿಷಯಗಳ ಪಠ್ಯಕ್ರಮದ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ನಿರ್ಧರಿಸಬೇಕಾಗಿರುತ್ತದೆ. ಆದರೆ ಈ ಕುರಿತು  ಸದರಿ ಇಲಾಖೆಯೊಂದಿಗೆ ಸಮಾಲೋಚಿಸದೆ ನಿರ್ದೇಶನ ನೀಡಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಉಲ್ಲೇಖಿತ ಸರ್ಕಾರದ ಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ದಲಿತರ 70 ಕೋಟಿ ರೂ. ಉಳಿಸಿದ್ದೇವೆ: ಹ.ರಾ.ಮಹೇಶ್‌

“ಎಸ್‌ಸಿ, ಎಸ್‌ಟಿ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿಯ ಸುಮಾರು 70 ಕೋಟಿ ಹಣವನ್ನು ಉಳಿಸಿದ್ದೇವೆ” ಎಂದು  ಡಾ.ಬಿ.ಆರ್‌.ಅಂಬೇಡ್ಕರ್‌ ಸಂವಿಧಾನ ಹಕ್ಕುಗಳ ಸಂರಕ್ಷಣಾ ಪರಿಷತ್‌ನ ಹ.ರಾ.ಮಹೇಶ್‌ ತಿಳಿಸಿದ್ದಾರೆ.

“ವೇದ ಗಣಿತದ ನೆಪದಲ್ಲಿ ನಾಡಿನ ಸುಮಾರು ಒಂದೂವರೆ ಲಕ್ಷ ಮುಗ್ದ ಎಸ್‌ಸಿಎಸ್‌ಟಿ ವಿದ್ಯಾರ್ಥಿಗಳು ಅನರ್ಥ ವೇದೀಕರಣಗೊಳ್ಳುವುದನ್ನು ತಪ್ಪಿಸಿದ್ದೇವೆ. ಈ ಹೋರಾಟಕ್ಕೆ ನಮ್ಮೊಡನೆ ನೇರವಾಗಿ ಭಾಗವಹಿಸಿದ ಚಳವಳಿಯ ಒಡನಾಡಿಗಳಿಗೆ, ಎಸ್‌ಸಿಎಸ್‌ಪಿ/ ಟಿಎಸ್‌ಪಿ ಪರಿಣಿತ ಹೋರಾಟಗಾರರಿಗೆ, ವಕೀಲ ಬಂಧುಗಳಿಗೆ, ಕೆಲ ಪತ್ರಕರ್ತ ಮಿತ್ರರಿಗೆ ಹಾಗೂ ದೂರದಿಂದಲೇ ನೈತಿಕ ಬೆಂಬಲ ಸೂಚಿಸಿದ ನಾಡಿನ ಎಲ್ಲಾ ಪ್ರಜ್ಞಾವಂತ ಬಂಧುಗಳಿಗೆ ಭೀಮನಮನಗಳನ್ನು ಸಲ್ಲಿಸುತ್ತೇವೆ” ಎಂದಿದ್ದಾರೆ.

ಇವುಗಳನ್ನು ಓದಿರಿ: ‘ವೇದಗಣಿತ’ ಕುರಿತು ‘ನಾನುಗೌರಿ.ಕಾಂ’ ಮಾಡಿರುವ ಸರಣಿ ವರದಿಗಳನ್ನು ಓದಲು ‘ಇಲ್ಲಿ ಕ್ಲಿಕ್‌ ಮಾಡಿ’

“ಆದರೆ, ಇದು ನಮ್ಮ ಸಂಪೂರ್ಣ ಗೆಲುವಲ್ಲ. ಈ ಕೆಟ್ಟ ಐಡಿಯಾವನ್ನು ಕೊಟ್ಟವರು, ಎಸ್‌ಸಿಎಸ್‌ಟಿ ಹಣವನ್ನು ದುರ್ಬಳಕೆಗೆ ಮುಂದಾಗಿ ಏಕಾಏಕಿ ಸುತ್ತೋಲೆ ಕಳಿಸಿದ ಸರ್ಕಾರದ ಅಧಿಕಾರಿಗಳುಮತ್ತು ನಮ್ಮ ಹಣವನ್ನು ಅನೀತಿ ಹಾಗೂ ಅನ್ಯಾಯವಾಗಿ ಕಬಳಿಸಲು ಸಜ್ಜಾಗಿದ್ದ ಎವಿಎಂ ಎಂಬ ಮನುವಾದಿ ಖಾಸಗಿಸಂಸ್ಥೆ ವಿರುದ್ಧ ಕ್ರಮ ಜರುಗಿಸಬೇಕಾಗಿದೆ. ಇವರೆಲ್ಲರ ಮೇಲೂ ಕಾನೂನಿನ ಕ್ರಮ ಜರುಗಿಸುವವರೆಗೂ ಹೋರಾಟ ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...