Homeಮುಖಪುಟಕೊರೊನಾ ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ : ಮುರುಳೀಧರ ಹಾಲಪ್ಪ

ಕೊರೊನಾ ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ : ಮುರುಳೀಧರ ಹಾಲಪ್ಪ

- Advertisement -
- Advertisement -

ದೇಶದಲ್ಲಿ ಕೊರೋನಾ ಸೃಷ್ಟಿಸಿರುವ ಆತಂಕವನ್ನು ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಲಾಕ್‍ಡೌನ್‍ನಿಂದ ಹಿರಿಯ ನಾಗರೀಕರು, ಕೂಲಿ ಕಾರ್ಮಿಕರು ಹಾಗೂ ಹಮಾಲಿಗಳು ಸಂಕಷ್ಟದಲ್ಲಿ ಸಿಲುಕಿದ್ದು ಸೂಕ್ತ ನೆರವು ಕಲ್ಪಿಸಬೇಕೆಂದು ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ ಒತ್ತಾಯಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು, ಹಮಾಲಿಗಳು ಸಂಕಷ್ಟದಲ್ಲಿದ್ದಾರೆ. ಅವರ ಸಂಕಟವನ್ನು ನಿವಾರಿಸುವಂತಹ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು. ಆಸ್ಪತ್ರೆ ಸಿಬ್ಬಂದಿಗೆ ವಿಮೆ ಹಾಗೂ ಸುರಕ್ಷ ಸಾಧನ ನೀಡಬೇಕು ಎಂದು ಆಗ್ರಹಿಸಿದರು.

ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ಮಹೇಶ್ ಮಾತನಾಡಿ ಕೊರೋನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಅವಶ್ಯಕತೆ ಇದೆ, ಆದರೆ ಮಾಸ್ಕ್ ಸಿಗದಿದ್ದರೆ ಬಟ್ಟೆ ಬಳಸಬೇಕು, ರೋಗ ಹರಡದಂತೆ ಸಹಕರಿಸಬೇಕು ಎಂದು ತಿಳಿಸಿದರು.

ಖಾಸಗಿ ಕ್ಲಿನಿಕ್‍ಗಳ ತುರ್ತು ಚಿಕಿತ್ಸೆ ಹೊರತುಪಡಿಸಿ ಉಳಿದ ಸೇವೆ ಸ್ಥಗಿತಗೊಳಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ, ಖಾಸಗಿ ಕ್ಲಿನಿಕ್ ಪ್ರಪಂಚದಲ್ಲೆಡೆ ಸ್ಥಗಿತಗೊಳಿಸಲಾಗಿದೆ. ವೈದ್ಯರಿಗೆ ಸೋಂಕು ತಗುಲಿದರೆ ಕಷ್ಟವಾಗಲಿದೆ, ಇಪ್ಪತ್ತು ಲಕ್ಷ ಜನರಿಗೆ ಒಂದು ಸಾವಿರ ವೈದ್ಯರಿದ್ದು, ಟೆಲಿ ಮೆಡಿಸನ್ ಮೂಲಕ ಚಿಕಿತ್ಸೆ ನೀಡಲಾಗುವುದು ಎಂದ ಅವರು, ಜನರಿಗೆ ತೊಂದರೆಯಾಗಬಾರದು ಎಂದು ಕ್ಲಿನಿಕ್ ಮುಚ್ಚುವ ನಿರ್ಧಾರ ಮಾಡಲಾಗಿದೆ ಎಂದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ ಜನರು ಭೀತಿಯಿಂದ ಹೊರಬರುವಂತೆ ನೋಡಿಕೊಳ್ಳಬೇಕು. ಕಾಯಿಲೆಯು ವೈಜ್ಞಾನಿಕವಾಗಿ ಗುಣವಾಗುತ್ತದೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು. ಆದರೆ ಜನರಲ್ಲಿ ವಿಶ್ವಾಸ ತುಂಬಬೇಕಾಗಿರುವ ಜನಪ್ರತಿನಿಧಿಗಳು ಮತ್ತು ವೈದ್ಯರು ಅಡಗುತಾಣಗಳಲ್ಲಿ ಹುದುಗಿಕೊಂಡಿದ್ದಾರೆ. ಅವರು ಹೊರಬಂದು ಜನರಲ್ಲಿ ಆತ್ಮವಿಶ್ವಾಸ ತುಂಬಿದರೆ ಜನರು ಭಯದಿಂದ ಹೊರಬರಲು ಸಾಧ್ಯ ಎಂದು ಸಲಹೆ ಮಾಡಿದರು.

ಜಿಲ್ಲಾಡಳಿತ ಜನರ ಅಗತ್ಯಗಳೇನೆಂಬುದನ್ನು ಕಂಡುಕೊಳ್ಳಬೇಕು. ಈ ಮೂಲಕ ವಿಕೇಂದ್ರೀಕರಣದ ನೀರು, ಆಹಾರ  ಮತ್ತು ಔಷಧಿಯಂತಹ ಅಗತ್ಯವಸ್ತುಗಳನ್ನು ವಿತರಣೆ ಮಾಡಿದರೆ ಜನರು ಗುಂಪುಗೂಡುವುದು ತಪ್ಪಿಸಬಹುದು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬಹುದು. ಕೊರೊನ ಸೋಂಕನ್ನು ನಿಯಂತ್ರಿಸಬಹುದು. ಎಂದು ಹೇಳಿದರು.

ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಕೊರೋನಾದಿಂದ ಬೀಡಿ ಕಾರ್ಮಿಕ ಉದ್ಯಮ ಸಂಕಷ್ಟದಲ್ಲಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಅವರೇ ಸುರಕ್ಷಿತವಲ್ಲ. ಹಾಗಾಗಿ ಇಲಾಖೆ ಮೂಲಕ ಗ್ರಾಮಮಟ್ಟದಲ್ಲಿ ಹೊರಗಿನಿಂದ ಬಂದವರು ಯಾರು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ, ದುಡಿಯುವ ವರ್ಗ ಸಂಕಷ್ಟದಲ್ಲಿ ಸಿಲುಕಿದೆ. ಜನರು ಮನೆಯಿಂದ ಹೊರ ಬಾರದಂತೆ ಅಗತ್ಯವಾದ ಆಹಾರ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ರೆಡ್‍ಕ್ರಾಸ್ ಸೊಸೈಟಿಯ ಚಂದ್ರ, ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ,   ಟೂಡಾ ಮಾಜಿ ಅಧ್ಯಕ್ಷ ರೆಡ್ಡಿಚಿನ್ನಯಲ್ಲಪ್ಪ, ಗಾಂಧಿವಾದಿ ಎನ್.ಬಸವಯ್ಯ,    ರೈತ ಸಂಘದ ಜಿಲ್ಲಾಧ್ಯಕ್ಷ  ಗೋವಿಂದರಾಜು, ಮುಖಂಡ ಬೆಳ್ಳಿಲೊಕೇಶ್, ಸಿದ್ಧಗಂಗಾ ಆಸ್ಪತ್ರೆ ವ್ಯವಸ್ಥಾಪಕ ಡಾ.ಪರಮೇಶ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...