Homeಮುಖಪುಟಕೊರೊನಾ ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ : ಮುರುಳೀಧರ ಹಾಲಪ್ಪ

ಕೊರೊನಾ ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ : ಮುರುಳೀಧರ ಹಾಲಪ್ಪ

- Advertisement -
- Advertisement -

ದೇಶದಲ್ಲಿ ಕೊರೋನಾ ಸೃಷ್ಟಿಸಿರುವ ಆತಂಕವನ್ನು ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಲಾಕ್‍ಡೌನ್‍ನಿಂದ ಹಿರಿಯ ನಾಗರೀಕರು, ಕೂಲಿ ಕಾರ್ಮಿಕರು ಹಾಗೂ ಹಮಾಲಿಗಳು ಸಂಕಷ್ಟದಲ್ಲಿ ಸಿಲುಕಿದ್ದು ಸೂಕ್ತ ನೆರವು ಕಲ್ಪಿಸಬೇಕೆಂದು ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ ಒತ್ತಾಯಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು, ಹಮಾಲಿಗಳು ಸಂಕಷ್ಟದಲ್ಲಿದ್ದಾರೆ. ಅವರ ಸಂಕಟವನ್ನು ನಿವಾರಿಸುವಂತಹ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು. ಆಸ್ಪತ್ರೆ ಸಿಬ್ಬಂದಿಗೆ ವಿಮೆ ಹಾಗೂ ಸುರಕ್ಷ ಸಾಧನ ನೀಡಬೇಕು ಎಂದು ಆಗ್ರಹಿಸಿದರು.

ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ಮಹೇಶ್ ಮಾತನಾಡಿ ಕೊರೋನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಅವಶ್ಯಕತೆ ಇದೆ, ಆದರೆ ಮಾಸ್ಕ್ ಸಿಗದಿದ್ದರೆ ಬಟ್ಟೆ ಬಳಸಬೇಕು, ರೋಗ ಹರಡದಂತೆ ಸಹಕರಿಸಬೇಕು ಎಂದು ತಿಳಿಸಿದರು.

ಖಾಸಗಿ ಕ್ಲಿನಿಕ್‍ಗಳ ತುರ್ತು ಚಿಕಿತ್ಸೆ ಹೊರತುಪಡಿಸಿ ಉಳಿದ ಸೇವೆ ಸ್ಥಗಿತಗೊಳಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ, ಖಾಸಗಿ ಕ್ಲಿನಿಕ್ ಪ್ರಪಂಚದಲ್ಲೆಡೆ ಸ್ಥಗಿತಗೊಳಿಸಲಾಗಿದೆ. ವೈದ್ಯರಿಗೆ ಸೋಂಕು ತಗುಲಿದರೆ ಕಷ್ಟವಾಗಲಿದೆ, ಇಪ್ಪತ್ತು ಲಕ್ಷ ಜನರಿಗೆ ಒಂದು ಸಾವಿರ ವೈದ್ಯರಿದ್ದು, ಟೆಲಿ ಮೆಡಿಸನ್ ಮೂಲಕ ಚಿಕಿತ್ಸೆ ನೀಡಲಾಗುವುದು ಎಂದ ಅವರು, ಜನರಿಗೆ ತೊಂದರೆಯಾಗಬಾರದು ಎಂದು ಕ್ಲಿನಿಕ್ ಮುಚ್ಚುವ ನಿರ್ಧಾರ ಮಾಡಲಾಗಿದೆ ಎಂದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ ಜನರು ಭೀತಿಯಿಂದ ಹೊರಬರುವಂತೆ ನೋಡಿಕೊಳ್ಳಬೇಕು. ಕಾಯಿಲೆಯು ವೈಜ್ಞಾನಿಕವಾಗಿ ಗುಣವಾಗುತ್ತದೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು. ಆದರೆ ಜನರಲ್ಲಿ ವಿಶ್ವಾಸ ತುಂಬಬೇಕಾಗಿರುವ ಜನಪ್ರತಿನಿಧಿಗಳು ಮತ್ತು ವೈದ್ಯರು ಅಡಗುತಾಣಗಳಲ್ಲಿ ಹುದುಗಿಕೊಂಡಿದ್ದಾರೆ. ಅವರು ಹೊರಬಂದು ಜನರಲ್ಲಿ ಆತ್ಮವಿಶ್ವಾಸ ತುಂಬಿದರೆ ಜನರು ಭಯದಿಂದ ಹೊರಬರಲು ಸಾಧ್ಯ ಎಂದು ಸಲಹೆ ಮಾಡಿದರು.

ಜಿಲ್ಲಾಡಳಿತ ಜನರ ಅಗತ್ಯಗಳೇನೆಂಬುದನ್ನು ಕಂಡುಕೊಳ್ಳಬೇಕು. ಈ ಮೂಲಕ ವಿಕೇಂದ್ರೀಕರಣದ ನೀರು, ಆಹಾರ  ಮತ್ತು ಔಷಧಿಯಂತಹ ಅಗತ್ಯವಸ್ತುಗಳನ್ನು ವಿತರಣೆ ಮಾಡಿದರೆ ಜನರು ಗುಂಪುಗೂಡುವುದು ತಪ್ಪಿಸಬಹುದು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬಹುದು. ಕೊರೊನ ಸೋಂಕನ್ನು ನಿಯಂತ್ರಿಸಬಹುದು. ಎಂದು ಹೇಳಿದರು.

ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಕೊರೋನಾದಿಂದ ಬೀಡಿ ಕಾರ್ಮಿಕ ಉದ್ಯಮ ಸಂಕಷ್ಟದಲ್ಲಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಅವರೇ ಸುರಕ್ಷಿತವಲ್ಲ. ಹಾಗಾಗಿ ಇಲಾಖೆ ಮೂಲಕ ಗ್ರಾಮಮಟ್ಟದಲ್ಲಿ ಹೊರಗಿನಿಂದ ಬಂದವರು ಯಾರು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ, ದುಡಿಯುವ ವರ್ಗ ಸಂಕಷ್ಟದಲ್ಲಿ ಸಿಲುಕಿದೆ. ಜನರು ಮನೆಯಿಂದ ಹೊರ ಬಾರದಂತೆ ಅಗತ್ಯವಾದ ಆಹಾರ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ರೆಡ್‍ಕ್ರಾಸ್ ಸೊಸೈಟಿಯ ಚಂದ್ರ, ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ,   ಟೂಡಾ ಮಾಜಿ ಅಧ್ಯಕ್ಷ ರೆಡ್ಡಿಚಿನ್ನಯಲ್ಲಪ್ಪ, ಗಾಂಧಿವಾದಿ ಎನ್.ಬಸವಯ್ಯ,    ರೈತ ಸಂಘದ ಜಿಲ್ಲಾಧ್ಯಕ್ಷ  ಗೋವಿಂದರಾಜು, ಮುಖಂಡ ಬೆಳ್ಳಿಲೊಕೇಶ್, ಸಿದ್ಧಗಂಗಾ ಆಸ್ಪತ್ರೆ ವ್ಯವಸ್ಥಾಪಕ ಡಾ.ಪರಮೇಶ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...