Homeಮುಖಪುಟಕೊರೊನಾ ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ : ಮುರುಳೀಧರ ಹಾಲಪ್ಪ

ಕೊರೊನಾ ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ : ಮುರುಳೀಧರ ಹಾಲಪ್ಪ

- Advertisement -
- Advertisement -

ದೇಶದಲ್ಲಿ ಕೊರೋನಾ ಸೃಷ್ಟಿಸಿರುವ ಆತಂಕವನ್ನು ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಲಾಕ್‍ಡೌನ್‍ನಿಂದ ಹಿರಿಯ ನಾಗರೀಕರು, ಕೂಲಿ ಕಾರ್ಮಿಕರು ಹಾಗೂ ಹಮಾಲಿಗಳು ಸಂಕಷ್ಟದಲ್ಲಿ ಸಿಲುಕಿದ್ದು ಸೂಕ್ತ ನೆರವು ಕಲ್ಪಿಸಬೇಕೆಂದು ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ ಒತ್ತಾಯಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು, ಹಮಾಲಿಗಳು ಸಂಕಷ್ಟದಲ್ಲಿದ್ದಾರೆ. ಅವರ ಸಂಕಟವನ್ನು ನಿವಾರಿಸುವಂತಹ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು. ಆಸ್ಪತ್ರೆ ಸಿಬ್ಬಂದಿಗೆ ವಿಮೆ ಹಾಗೂ ಸುರಕ್ಷ ಸಾಧನ ನೀಡಬೇಕು ಎಂದು ಆಗ್ರಹಿಸಿದರು.

ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ಮಹೇಶ್ ಮಾತನಾಡಿ ಕೊರೋನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಅವಶ್ಯಕತೆ ಇದೆ, ಆದರೆ ಮಾಸ್ಕ್ ಸಿಗದಿದ್ದರೆ ಬಟ್ಟೆ ಬಳಸಬೇಕು, ರೋಗ ಹರಡದಂತೆ ಸಹಕರಿಸಬೇಕು ಎಂದು ತಿಳಿಸಿದರು.

ಖಾಸಗಿ ಕ್ಲಿನಿಕ್‍ಗಳ ತುರ್ತು ಚಿಕಿತ್ಸೆ ಹೊರತುಪಡಿಸಿ ಉಳಿದ ಸೇವೆ ಸ್ಥಗಿತಗೊಳಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ, ಖಾಸಗಿ ಕ್ಲಿನಿಕ್ ಪ್ರಪಂಚದಲ್ಲೆಡೆ ಸ್ಥಗಿತಗೊಳಿಸಲಾಗಿದೆ. ವೈದ್ಯರಿಗೆ ಸೋಂಕು ತಗುಲಿದರೆ ಕಷ್ಟವಾಗಲಿದೆ, ಇಪ್ಪತ್ತು ಲಕ್ಷ ಜನರಿಗೆ ಒಂದು ಸಾವಿರ ವೈದ್ಯರಿದ್ದು, ಟೆಲಿ ಮೆಡಿಸನ್ ಮೂಲಕ ಚಿಕಿತ್ಸೆ ನೀಡಲಾಗುವುದು ಎಂದ ಅವರು, ಜನರಿಗೆ ತೊಂದರೆಯಾಗಬಾರದು ಎಂದು ಕ್ಲಿನಿಕ್ ಮುಚ್ಚುವ ನಿರ್ಧಾರ ಮಾಡಲಾಗಿದೆ ಎಂದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ ಜನರು ಭೀತಿಯಿಂದ ಹೊರಬರುವಂತೆ ನೋಡಿಕೊಳ್ಳಬೇಕು. ಕಾಯಿಲೆಯು ವೈಜ್ಞಾನಿಕವಾಗಿ ಗುಣವಾಗುತ್ತದೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು. ಆದರೆ ಜನರಲ್ಲಿ ವಿಶ್ವಾಸ ತುಂಬಬೇಕಾಗಿರುವ ಜನಪ್ರತಿನಿಧಿಗಳು ಮತ್ತು ವೈದ್ಯರು ಅಡಗುತಾಣಗಳಲ್ಲಿ ಹುದುಗಿಕೊಂಡಿದ್ದಾರೆ. ಅವರು ಹೊರಬಂದು ಜನರಲ್ಲಿ ಆತ್ಮವಿಶ್ವಾಸ ತುಂಬಿದರೆ ಜನರು ಭಯದಿಂದ ಹೊರಬರಲು ಸಾಧ್ಯ ಎಂದು ಸಲಹೆ ಮಾಡಿದರು.

ಜಿಲ್ಲಾಡಳಿತ ಜನರ ಅಗತ್ಯಗಳೇನೆಂಬುದನ್ನು ಕಂಡುಕೊಳ್ಳಬೇಕು. ಈ ಮೂಲಕ ವಿಕೇಂದ್ರೀಕರಣದ ನೀರು, ಆಹಾರ  ಮತ್ತು ಔಷಧಿಯಂತಹ ಅಗತ್ಯವಸ್ತುಗಳನ್ನು ವಿತರಣೆ ಮಾಡಿದರೆ ಜನರು ಗುಂಪುಗೂಡುವುದು ತಪ್ಪಿಸಬಹುದು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬಹುದು. ಕೊರೊನ ಸೋಂಕನ್ನು ನಿಯಂತ್ರಿಸಬಹುದು. ಎಂದು ಹೇಳಿದರು.

ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಕೊರೋನಾದಿಂದ ಬೀಡಿ ಕಾರ್ಮಿಕ ಉದ್ಯಮ ಸಂಕಷ್ಟದಲ್ಲಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಅವರೇ ಸುರಕ್ಷಿತವಲ್ಲ. ಹಾಗಾಗಿ ಇಲಾಖೆ ಮೂಲಕ ಗ್ರಾಮಮಟ್ಟದಲ್ಲಿ ಹೊರಗಿನಿಂದ ಬಂದವರು ಯಾರು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ, ದುಡಿಯುವ ವರ್ಗ ಸಂಕಷ್ಟದಲ್ಲಿ ಸಿಲುಕಿದೆ. ಜನರು ಮನೆಯಿಂದ ಹೊರ ಬಾರದಂತೆ ಅಗತ್ಯವಾದ ಆಹಾರ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ರೆಡ್‍ಕ್ರಾಸ್ ಸೊಸೈಟಿಯ ಚಂದ್ರ, ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ,   ಟೂಡಾ ಮಾಜಿ ಅಧ್ಯಕ್ಷ ರೆಡ್ಡಿಚಿನ್ನಯಲ್ಲಪ್ಪ, ಗಾಂಧಿವಾದಿ ಎನ್.ಬಸವಯ್ಯ,    ರೈತ ಸಂಘದ ಜಿಲ್ಲಾಧ್ಯಕ್ಷ  ಗೋವಿಂದರಾಜು, ಮುಖಂಡ ಬೆಳ್ಳಿಲೊಕೇಶ್, ಸಿದ್ಧಗಂಗಾ ಆಸ್ಪತ್ರೆ ವ್ಯವಸ್ಥಾಪಕ ಡಾ.ಪರಮೇಶ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...