Homeಮುಖಪುಟಕೊರೊನಾ ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ : ಮುರುಳೀಧರ ಹಾಲಪ್ಪ

ಕೊರೊನಾ ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ : ಮುರುಳೀಧರ ಹಾಲಪ್ಪ

- Advertisement -
- Advertisement -

ದೇಶದಲ್ಲಿ ಕೊರೋನಾ ಸೃಷ್ಟಿಸಿರುವ ಆತಂಕವನ್ನು ನಿಭಾಯಿಸುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಲಾಕ್‍ಡೌನ್‍ನಿಂದ ಹಿರಿಯ ನಾಗರೀಕರು, ಕೂಲಿ ಕಾರ್ಮಿಕರು ಹಾಗೂ ಹಮಾಲಿಗಳು ಸಂಕಷ್ಟದಲ್ಲಿ ಸಿಲುಕಿದ್ದು ಸೂಕ್ತ ನೆರವು ಕಲ್ಪಿಸಬೇಕೆಂದು ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ ಒತ್ತಾಯಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು, ಹಮಾಲಿಗಳು ಸಂಕಷ್ಟದಲ್ಲಿದ್ದಾರೆ. ಅವರ ಸಂಕಟವನ್ನು ನಿವಾರಿಸುವಂತಹ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬೇಕು. ಆಸ್ಪತ್ರೆ ಸಿಬ್ಬಂದಿಗೆ ವಿಮೆ ಹಾಗೂ ಸುರಕ್ಷ ಸಾಧನ ನೀಡಬೇಕು ಎಂದು ಆಗ್ರಹಿಸಿದರು.

ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ಮಹೇಶ್ ಮಾತನಾಡಿ ಕೊರೋನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಅವಶ್ಯಕತೆ ಇದೆ, ಆದರೆ ಮಾಸ್ಕ್ ಸಿಗದಿದ್ದರೆ ಬಟ್ಟೆ ಬಳಸಬೇಕು, ರೋಗ ಹರಡದಂತೆ ಸಹಕರಿಸಬೇಕು ಎಂದು ತಿಳಿಸಿದರು.

ಖಾಸಗಿ ಕ್ಲಿನಿಕ್‍ಗಳ ತುರ್ತು ಚಿಕಿತ್ಸೆ ಹೊರತುಪಡಿಸಿ ಉಳಿದ ಸೇವೆ ಸ್ಥಗಿತಗೊಳಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ, ಖಾಸಗಿ ಕ್ಲಿನಿಕ್ ಪ್ರಪಂಚದಲ್ಲೆಡೆ ಸ್ಥಗಿತಗೊಳಿಸಲಾಗಿದೆ. ವೈದ್ಯರಿಗೆ ಸೋಂಕು ತಗುಲಿದರೆ ಕಷ್ಟವಾಗಲಿದೆ, ಇಪ್ಪತ್ತು ಲಕ್ಷ ಜನರಿಗೆ ಒಂದು ಸಾವಿರ ವೈದ್ಯರಿದ್ದು, ಟೆಲಿ ಮೆಡಿಸನ್ ಮೂಲಕ ಚಿಕಿತ್ಸೆ ನೀಡಲಾಗುವುದು ಎಂದ ಅವರು, ಜನರಿಗೆ ತೊಂದರೆಯಾಗಬಾರದು ಎಂದು ಕ್ಲಿನಿಕ್ ಮುಚ್ಚುವ ನಿರ್ಧಾರ ಮಾಡಲಾಗಿದೆ ಎಂದರು.

ಜನಪರ ಚಿಂತಕ ಕೆ.ದೊರೈರಾಜ್ ಮಾತನಾಡಿ ಜನರು ಭೀತಿಯಿಂದ ಹೊರಬರುವಂತೆ ನೋಡಿಕೊಳ್ಳಬೇಕು. ಕಾಯಿಲೆಯು ವೈಜ್ಞಾನಿಕವಾಗಿ ಗುಣವಾಗುತ್ತದೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು. ಆದರೆ ಜನರಲ್ಲಿ ವಿಶ್ವಾಸ ತುಂಬಬೇಕಾಗಿರುವ ಜನಪ್ರತಿನಿಧಿಗಳು ಮತ್ತು ವೈದ್ಯರು ಅಡಗುತಾಣಗಳಲ್ಲಿ ಹುದುಗಿಕೊಂಡಿದ್ದಾರೆ. ಅವರು ಹೊರಬಂದು ಜನರಲ್ಲಿ ಆತ್ಮವಿಶ್ವಾಸ ತುಂಬಿದರೆ ಜನರು ಭಯದಿಂದ ಹೊರಬರಲು ಸಾಧ್ಯ ಎಂದು ಸಲಹೆ ಮಾಡಿದರು.

ಜಿಲ್ಲಾಡಳಿತ ಜನರ ಅಗತ್ಯಗಳೇನೆಂಬುದನ್ನು ಕಂಡುಕೊಳ್ಳಬೇಕು. ಈ ಮೂಲಕ ವಿಕೇಂದ್ರೀಕರಣದ ನೀರು, ಆಹಾರ  ಮತ್ತು ಔಷಧಿಯಂತಹ ಅಗತ್ಯವಸ್ತುಗಳನ್ನು ವಿತರಣೆ ಮಾಡಿದರೆ ಜನರು ಗುಂಪುಗೂಡುವುದು ತಪ್ಪಿಸಬಹುದು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬಹುದು. ಕೊರೊನ ಸೋಂಕನ್ನು ನಿಯಂತ್ರಿಸಬಹುದು. ಎಂದು ಹೇಳಿದರು.

ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಕೊರೋನಾದಿಂದ ಬೀಡಿ ಕಾರ್ಮಿಕ ಉದ್ಯಮ ಸಂಕಷ್ಟದಲ್ಲಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಅವರೇ ಸುರಕ್ಷಿತವಲ್ಲ. ಹಾಗಾಗಿ ಇಲಾಖೆ ಮೂಲಕ ಗ್ರಾಮಮಟ್ಟದಲ್ಲಿ ಹೊರಗಿನಿಂದ ಬಂದವರು ಯಾರು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ, ದುಡಿಯುವ ವರ್ಗ ಸಂಕಷ್ಟದಲ್ಲಿ ಸಿಲುಕಿದೆ. ಜನರು ಮನೆಯಿಂದ ಹೊರ ಬಾರದಂತೆ ಅಗತ್ಯವಾದ ಆಹಾರ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ರೆಡ್‍ಕ್ರಾಸ್ ಸೊಸೈಟಿಯ ಚಂದ್ರ, ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ,   ಟೂಡಾ ಮಾಜಿ ಅಧ್ಯಕ್ಷ ರೆಡ್ಡಿಚಿನ್ನಯಲ್ಲಪ್ಪ, ಗಾಂಧಿವಾದಿ ಎನ್.ಬಸವಯ್ಯ,    ರೈತ ಸಂಘದ ಜಿಲ್ಲಾಧ್ಯಕ್ಷ  ಗೋವಿಂದರಾಜು, ಮುಖಂಡ ಬೆಳ್ಳಿಲೊಕೇಶ್, ಸಿದ್ಧಗಂಗಾ ಆಸ್ಪತ್ರೆ ವ್ಯವಸ್ಥಾಪಕ ಡಾ.ಪರಮೇಶ್ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...