Homeಕರೋನಾ ತಲ್ಲಣಹಸಿರು ಪಟಾಕಿ ಬಗ್ಗೆ ಗೊತ್ತಿಲ್ಲ ಎಂದ ಆರೋಗ್ಯ ಸಚಿವ ಸುಧಾಕರ್‌ !

ಹಸಿರು ಪಟಾಕಿ ಬಗ್ಗೆ ಗೊತ್ತಿಲ್ಲ ಎಂದ ಆರೋಗ್ಯ ಸಚಿವ ಸುಧಾಕರ್‌ !

‘ಹಸಿರು ಪಟಾಕಿ ಎಂದರೇನು ಎಂಬುದು ನನಗೂ ಗೊತ್ತಿಲ್ಲ. ಈ ಬಗ್ಗೆ ತಿಳಿದುಕೊಂಡು ಹೇಳುತ್ತೇನೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ದೀಪಾವಳಿ ಸಂದರ್ಭದಲ್ಲಿ ಬಳಸಲಾಗುವ ಪಟಾಕಿಗಳಿಂದ ವಾಯಮಾಲಿನ್ಯ ಹೆಚ್ಚಾಗುವ ಕಾರಣ ಈ ಬಾರಿ ಪಟಾಕಿ ನಿಷೇಧಿಸಲಾಗಿದೆ. ಕರ್ನಾಟಕ ಸರ್ಕಾರ ಸಾಂಪ್ರದಾಯಿಕ ಪಟಾಕಿಗೆ ನಿಷೇಧ ಹೇರಿ, ಹಸಿರು ಪಟಾಕಿಗೆ  ಅಸ್ತು ಎಂದಿದೆ. ನವೆಂಬರ್ 16ರ ವರೆಗೆ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ಕೂಡ ನೀಡಿದೆ. ಆದರೆ ಸಚಿವ ಸುಧಾಕರ್‌ ಮಾತ್ರ ಗೊಂದಲದ ಹೇಳಿಕೆ ನೀಡಿದ್ದಾರೆ.

ಆದರೆ, ರಾಜ್ಯ ಸರ್ಕಾರದ ಆರೋಗ್ಯ ಸಚಿವ ಸುಧಾಕರ್‌ ಅವರಿಗೆ ಹಸಿರು ಪಟಾಕಿ ಎಂದರೇನು ಎಂದು ತಿಳಿದಿಲ್ಲವಂತೆ. ‍‘ಹಸಿರು ಪಟಾಕಿ ಎಂದರೇನು ಎಂಬುದು ನನಗೂ ಗೊತ್ತಿಲ್ಲ. ಈ ಬಗ್ಗೆ ತಿಳಿದುಕೊಂಡು ಹೇಳುತ್ತೇನೆ’ ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

‘ದೀಪಾವಳಿಯಲ್ಲಿ ಪಟಾಕಿ‌ ನಿಷೇಧದ ಬಗ್ಗೆ ನಮ್ಮ ಇಲಾಖೆಯಿಂದ ಮಾರ್ಗಸೂಚಿ ವರದಿ ಬಂದಿತ್ತು. ಅದನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ಸರ್ಕಾರಕ್ಕೆ ಸಲ್ಲಿಸಿದ್ದೆ. ಆ ನಂತರ ಮುಖ್ಯಮಂತ್ರಿ, ಹಸಿರು ಪಟಾಕಿ ಸಿಡಿಸಲು ಮಾತ್ರ ಅನುಮತಿ ನೀಡಿದ್ದಾರೆ. ಸಮಯ ಕೂಡ ನಿಗದಿ ಮಾಡಿದ್ದಾರೆ. ಆದರೆ, ಹಸಿರು ಪಟಾಕಿ ಎಂದರೇನು ಎಂಬುದು ನನಗೂ ಗೊತ್ತಿಲ್ಲ, ಆ ಬಗ್ಗೆ ನಾನು ತಿಳಿದುಕೊಂಡು ಹೇಳುತ್ತೆನೆ’ ಎಂದಿದ್ದಾರೆ.

ಸರ್ಕಾರ ಮೊದಲು ಪಟಾಕಿ ನಿಷೇಧದ ಬಗ್ಗೆ ಆದೇಶ ಹೊರಡಿಸಿ ನಂತರ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡಿದೆ. ಆದರೆ ಆರೋಗ್ಯ ಸಚಿವರೇ ನನಗೆ ಇದರ ಬಗ್ಗೆ ಗೊತ್ತಿಲ್ಲ ಎಂಬ ಗೊಂದಲದ ಹೇಳಿಕೆ ನೀಡಿದ್ದಾರೆ.

ಹಸಿರು ಪಟಾಕಿಯು ಸಾಮಾನ್ಯ ಪಟಾಕಿಯಂತೆಯೇ ಕಾಣುವ ಪರಿಸರ ಸ್ನೇಹಿ ಪಟಾಕಿಯಾಗಿದೆ. ಕೌನ್ಸಿಲ್​ ಆಫ್ ಸೈಂಟಿಫಿಕ್​ ಅಂಡ್​ ಇಂಡಸ್ಟ್ರಿಯಲ್​ ರಿಸರ್ಚ್​ (ಸಿಎಸ್​ಐಆರ್​) ಮತ್ತು ನ್ಯಾಷನಲ್ ಎನ್ವಿರಾನ್ಮೆಂಟ್ ಇಂಜಿನಿಯರಿಂಗ್ ರಿಸರ್ಚ್ ಇನ್ಸ್ ಟಿಟ್ಯೂಟ್‌ (ಎನ್‌ಇಇಆರ್‌ಐ)ನ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವ ಈ ಪಟಾಕಿಗಳು ಕೇವಲ ಶೇಕಡಾ 30ರಷ್ಟು ಪ್ರಮಾಣದ ಹೊಗೆಯನ್ನು ಹೊರಹಾಕುತ್ತದೆ.


ಇದನ್ನೂ ಓದಿ: ಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...