Homeರಾಜಕೀಯರಾಹುಲ್ ಗಾಂಧಿಗೆ ಭದ್ರತೆ ಒದಗಿಸುವುದು ಸರ್ಕಾರದ ಜವಾಬ್ದಾರಿ: ಮಧ್ಯಪ್ರದೇಶ ಗೃಹ ಸಚಿವ

ರಾಹುಲ್ ಗಾಂಧಿಗೆ ಭದ್ರತೆ ಒದಗಿಸುವುದು ಸರ್ಕಾರದ ಜವಾಬ್ದಾರಿ: ಮಧ್ಯಪ್ರದೇಶ ಗೃಹ ಸಚಿವ

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಶನಿವಾರ ಹೇಳಿದ್ದಾರೆ. ಯಾತ್ರೆಯ ವೇಳೆ ರಾಹುಲ್ ಗಾಂಧಿ ಅವರಿಗೆ ಇಂದೋರ್‌ನಲ್ಲಿ ಬಾಂಬ್ ಸ್ಫೋಟದ ಬೆದರಿಕೆಯ ಅನಾಮಧೇಯ ಪತ್ರ ಬಂದ ದಿನದ ಗೃಹ ಸಚಿವ ಈ ಹೇಳಿಕೆ ನೀಡಿದ್ದಾರೆ.

ನವೆಂಬರ್ 28 ರಂದು ಖಾಲ್ಸಾ ಸ್ಟೇಡಿಯಂನಲ್ಲಿ ನಡೆಯುವ ಭಾರತ್ ಜೋಡೋ ಯಾತ್ರೆಯನ್ನು ನಿಗದಿತ ರಾತ್ರಿ ಸ್ಥಗಿತಗೊಳಿಸದಿದ್ದರೆ ಇಂದೋರ್‌ನಲ್ಲಿ ಬಾಂಬ್ ಸ್ಫೋಟಗಳನ್ನು ನಡೆಸಲಾಗುವುದು ಎಂದು ಅನಾಮಧೇಯ ಪತ್ರವು ಬೆದರಿಕೆ ಹಾಕಿದೆ. 1984 ರ ಸಿಖ್ ವಿರೋಧಿ ದಂಗೆಯನ್ನು ಉಲ್ಲೇಖಿಸಿರುವ ಪತ್ರವು ರಾಹುಲ್ ಗಾಂಧಿ ಮತ್ತು ಮಧ್ಯಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರ ಹತ್ಯೆಯ ಬೆದರಿಕೆಯನ್ನೂ ಹಾಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಧ್ಯಪ್ರದೇಶದ ಭಾರತ್‌ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರಿಗೆ ದೋಷಾತೀತ ಭದ್ರತೆ ನೀಡುವುದು ಸರ್ಕಾರವು ಜವಾಬ್ದಾರವಾಗಿದೆ. ಅವರಿಗೆ ಭದ್ರತೆಯನ್ನು ಒದಗಿಸುವುದು ನಮ್ಮ ಬದ್ಧತೆಯಾಗಿದೆ ಎಂದು ನಾನು ಅವರಿಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಬೆದರಿಕೆ ಪತ್ರದ ಬಗ್ಗೆ ಕೇಳಿದ್ದ ಪ್ರಶ್ನೆಗೆ ಗೃಹ ಸಚಿವ ನರೋತ್ತಮ್ ಮಿಶ್ರಾ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ: ದಲಿತರನ್ನು ಪ್ರಭಾವಿಸಲು ಭಾರತ್‌ ಜೋಡೋ ಯಾತ್ರೆ ಯತ್ನಿಸಿದ್ದು ಹೀಗೆ…

ಈ ತಿಂಗಳ ಆರಂಭದಲ್ಲಿ ಖಾಲ್ಸಾ ಕ್ರೀಡಾಂಗಣಕ್ಕೆ ಹೋಗುವ ಮೂಲಕ 1984 ರ ಸಿಖ್ ವಿರೋಧಿ ದಂಗೆ ಸಂತ್ರಸ್ತರ ಗಾಯಗಳಿಗೆ ಕಮಲ್ ನಾಥ್ ಅವರು ಗಾಯಗಳಿಗೆ ಉಪ್ಪು ಸವರಿದ್ದಾರೆ ಎಂದು ಸಚಿವರು ಆರೋಪಿಸಿದ್ದರು. ಬಹುಶಃ ರಾಹುಲ್ ಗಾಂಧಿ ಅವರ ಯಾತ್ರೆ ರಾಜ್ಯಕ್ಕೆ ಬರುವುದು ಕಮಲ್ ನಾಥ್ ಅವರಿಗೆ ಇಷ್ಟವಿಲ್ಲ ಎಂದು ನರೋತ್ತಮ್‌ ಮಿಶ್ರಾ ಹೇಳಿದ್ದಾರೆ.

ಗುರುವಾರ ಸಂಜೆ ನಗರದ ಜುನಿ ಪ್ರದೇಶದಲ್ಲಿನ ಸಿಹಿತಿಂಡಿ ಅಂಗಡಿಯೊಂದಕ್ಕೆ ಅನಾಮಧೇಯ ಬೆದರಿಕೆ ಪತ್ರ ಬಂದಿದೆ ಎಂದು ಇಂದೋರ್ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಈ ಬಗ್ಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507 (ಅಪರಿಚಿತ ವ್ಯಕ್ತಿಯಿಂದ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಶುಕ್ರವಾರ ಎಫ್‌ಐಆರ್‌ ದಾಖಲಿಸಲಾಗಿದೆ.

ನವೆಂಬರ್ 8 ರಂದು ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ ಕಮಲ್‌ ನಾಥ್ ಅವರನ್ನು ಸನ್ಮಾನಿಸುವುದರ ಕುರಿತು ವಿವಾದ ಉಂಟಾದ ನಂತರ ಇಂದೋರ್‌ನ ಖಾಲ್ಸಾ ಕ್ರೀಡಾಂಗಣವು ಈ ತಿಂಗಳ ಆರಂಭದಲ್ಲಿ ಸುದ್ದಿಯಲ್ಲಿದೆ.

ಇದನ್ನೂ ಓದಿ: ವಿಶ್ಲೇಷಣೆ: ಭಾರತ್‌ ಜೋಡೋ ನಂತರ ಕರ್ನಾಟಕ ಬಿಜೆಪಿಯ ಪ್ರತಿಕ್ರಿಯೆಗಳು

ಕೀರ್ತನ್ ಗಾಯಕ ಮನ್‌ಪ್ರೀತ್ ಸಿಂಗ್ ಕಾನ್ಪುರಿ ಅವರು 1984 ರ ಸಿಖ್ ವಿರೋಧಿ ಗಲಭೆಗಳನ್ನು ಉಲ್ಲೇಖಿಸಿ, ಗಲಭೆಯ ಆರೋಪ ಎದುರಿಸಿದ್ದ ಕಮಲ್‌ ನಾಥ್ ಅವರನ್ನು ಅಭಿನಂದಿಸಿದ್ದಕ್ಕಾಗಿ ಸಂಘಟಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಭಾರತ್ ಜೋಡೋ ಯಾತ್ರೆಯ ವೇಳೆ ಕಮಲ್‌ ನಾಥ್ ಕ್ರೀಡಾಂಗಣಕ್ಕೆ ಪ್ರವೇಶಿಸಿದರೆ ಕಪ್ಪು ಬಾವುಟ ತೋರಿಸಲಾಗುವುದು ಎಂದು ಬಿಜೆಪಿ ಈಗಾಗಲೇ ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...