Homeರಾಜಕೀಯರಾಹುಲ್ ಗಾಂಧಿಗೆ ಭದ್ರತೆ ಒದಗಿಸುವುದು ಸರ್ಕಾರದ ಜವಾಬ್ದಾರಿ: ಮಧ್ಯಪ್ರದೇಶ ಗೃಹ ಸಚಿವ

ರಾಹುಲ್ ಗಾಂಧಿಗೆ ಭದ್ರತೆ ಒದಗಿಸುವುದು ಸರ್ಕಾರದ ಜವಾಬ್ದಾರಿ: ಮಧ್ಯಪ್ರದೇಶ ಗೃಹ ಸಚಿವ

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಶನಿವಾರ ಹೇಳಿದ್ದಾರೆ. ಯಾತ್ರೆಯ ವೇಳೆ ರಾಹುಲ್ ಗಾಂಧಿ ಅವರಿಗೆ ಇಂದೋರ್‌ನಲ್ಲಿ ಬಾಂಬ್ ಸ್ಫೋಟದ ಬೆದರಿಕೆಯ ಅನಾಮಧೇಯ ಪತ್ರ ಬಂದ ದಿನದ ಗೃಹ ಸಚಿವ ಈ ಹೇಳಿಕೆ ನೀಡಿದ್ದಾರೆ.

ನವೆಂಬರ್ 28 ರಂದು ಖಾಲ್ಸಾ ಸ್ಟೇಡಿಯಂನಲ್ಲಿ ನಡೆಯುವ ಭಾರತ್ ಜೋಡೋ ಯಾತ್ರೆಯನ್ನು ನಿಗದಿತ ರಾತ್ರಿ ಸ್ಥಗಿತಗೊಳಿಸದಿದ್ದರೆ ಇಂದೋರ್‌ನಲ್ಲಿ ಬಾಂಬ್ ಸ್ಫೋಟಗಳನ್ನು ನಡೆಸಲಾಗುವುದು ಎಂದು ಅನಾಮಧೇಯ ಪತ್ರವು ಬೆದರಿಕೆ ಹಾಕಿದೆ. 1984 ರ ಸಿಖ್ ವಿರೋಧಿ ದಂಗೆಯನ್ನು ಉಲ್ಲೇಖಿಸಿರುವ ಪತ್ರವು ರಾಹುಲ್ ಗಾಂಧಿ ಮತ್ತು ಮಧ್ಯಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರ ಹತ್ಯೆಯ ಬೆದರಿಕೆಯನ್ನೂ ಹಾಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಧ್ಯಪ್ರದೇಶದ ಭಾರತ್‌ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರಿಗೆ ದೋಷಾತೀತ ಭದ್ರತೆ ನೀಡುವುದು ಸರ್ಕಾರವು ಜವಾಬ್ದಾರವಾಗಿದೆ. ಅವರಿಗೆ ಭದ್ರತೆಯನ್ನು ಒದಗಿಸುವುದು ನಮ್ಮ ಬದ್ಧತೆಯಾಗಿದೆ ಎಂದು ನಾನು ಅವರಿಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಬೆದರಿಕೆ ಪತ್ರದ ಬಗ್ಗೆ ಕೇಳಿದ್ದ ಪ್ರಶ್ನೆಗೆ ಗೃಹ ಸಚಿವ ನರೋತ್ತಮ್ ಮಿಶ್ರಾ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ: ದಲಿತರನ್ನು ಪ್ರಭಾವಿಸಲು ಭಾರತ್‌ ಜೋಡೋ ಯಾತ್ರೆ ಯತ್ನಿಸಿದ್ದು ಹೀಗೆ…

ಈ ತಿಂಗಳ ಆರಂಭದಲ್ಲಿ ಖಾಲ್ಸಾ ಕ್ರೀಡಾಂಗಣಕ್ಕೆ ಹೋಗುವ ಮೂಲಕ 1984 ರ ಸಿಖ್ ವಿರೋಧಿ ದಂಗೆ ಸಂತ್ರಸ್ತರ ಗಾಯಗಳಿಗೆ ಕಮಲ್ ನಾಥ್ ಅವರು ಗಾಯಗಳಿಗೆ ಉಪ್ಪು ಸವರಿದ್ದಾರೆ ಎಂದು ಸಚಿವರು ಆರೋಪಿಸಿದ್ದರು. ಬಹುಶಃ ರಾಹುಲ್ ಗಾಂಧಿ ಅವರ ಯಾತ್ರೆ ರಾಜ್ಯಕ್ಕೆ ಬರುವುದು ಕಮಲ್ ನಾಥ್ ಅವರಿಗೆ ಇಷ್ಟವಿಲ್ಲ ಎಂದು ನರೋತ್ತಮ್‌ ಮಿಶ್ರಾ ಹೇಳಿದ್ದಾರೆ.

ಗುರುವಾರ ಸಂಜೆ ನಗರದ ಜುನಿ ಪ್ರದೇಶದಲ್ಲಿನ ಸಿಹಿತಿಂಡಿ ಅಂಗಡಿಯೊಂದಕ್ಕೆ ಅನಾಮಧೇಯ ಬೆದರಿಕೆ ಪತ್ರ ಬಂದಿದೆ ಎಂದು ಇಂದೋರ್ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಈ ಬಗ್ಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507 (ಅಪರಿಚಿತ ವ್ಯಕ್ತಿಯಿಂದ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಶುಕ್ರವಾರ ಎಫ್‌ಐಆರ್‌ ದಾಖಲಿಸಲಾಗಿದೆ.

ನವೆಂಬರ್ 8 ರಂದು ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ ಕಮಲ್‌ ನಾಥ್ ಅವರನ್ನು ಸನ್ಮಾನಿಸುವುದರ ಕುರಿತು ವಿವಾದ ಉಂಟಾದ ನಂತರ ಇಂದೋರ್‌ನ ಖಾಲ್ಸಾ ಕ್ರೀಡಾಂಗಣವು ಈ ತಿಂಗಳ ಆರಂಭದಲ್ಲಿ ಸುದ್ದಿಯಲ್ಲಿದೆ.

ಇದನ್ನೂ ಓದಿ: ವಿಶ್ಲೇಷಣೆ: ಭಾರತ್‌ ಜೋಡೋ ನಂತರ ಕರ್ನಾಟಕ ಬಿಜೆಪಿಯ ಪ್ರತಿಕ್ರಿಯೆಗಳು

ಕೀರ್ತನ್ ಗಾಯಕ ಮನ್‌ಪ್ರೀತ್ ಸಿಂಗ್ ಕಾನ್ಪುರಿ ಅವರು 1984 ರ ಸಿಖ್ ವಿರೋಧಿ ಗಲಭೆಗಳನ್ನು ಉಲ್ಲೇಖಿಸಿ, ಗಲಭೆಯ ಆರೋಪ ಎದುರಿಸಿದ್ದ ಕಮಲ್‌ ನಾಥ್ ಅವರನ್ನು ಅಭಿನಂದಿಸಿದ್ದಕ್ಕಾಗಿ ಸಂಘಟಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಭಾರತ್ ಜೋಡೋ ಯಾತ್ರೆಯ ವೇಳೆ ಕಮಲ್‌ ನಾಥ್ ಕ್ರೀಡಾಂಗಣಕ್ಕೆ ಪ್ರವೇಶಿಸಿದರೆ ಕಪ್ಪು ಬಾವುಟ ತೋರಿಸಲಾಗುವುದು ಎಂದು ಬಿಜೆಪಿ ಈಗಾಗಲೇ ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...