Homeಕರ್ನಾಟಕರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ - ರೈತ ಮುಖಂಡ ಯು. ಬಸವರಾಜ್

ರೈತರು ಭೂಮಿ ಬಿಟ್ಟು ಬರಲಿ ಎಂದು ಸರ್ಕಾರಗಳು ಬಯಸುತ್ತಿವೆ – ರೈತ ಮುಖಂಡ ಯು. ಬಸವರಾಜ್

- Advertisement -
- Advertisement -

ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಯು. ಬಸವರಾಜ್ ಅವರು ಹೇಳಿದರು. ಕೇಂದ್ರ ಸರ್ಕಾರ ಕಾರ್ಪೋರೇಟ್‌ ಪರವಾದ ಹಿಂದುತ್ವದ ಬಜೆಟ್‌ ಅನ್ನು ಮಂಡಿಸಿದರೆ, ಕರ್ನಾಟಕದಲ್ಲಿ ಕೂಡಾ ಹಿಂದುತ್ವದ ಬಗ್ಗೆ ಮೃದು ಧೋರಣೆ ಇರುವ ಕಂಪೆನಿ ಕೃಷಿಗಳ ಪರವಾದ ಬಜೆಟ್ ಮಂಡಿಸಲಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ರೈತರು ಭೂಮಿ ಬಿಟ್ಟು ಬರಲಿ

‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಕರಾಳ ಕೃಷಿ ಹಾಗೂ ಭೂ ಸ್ವಾಧೀನ ಕಾಯ್ದೆಗಳು’ ಎಂಬ ವಿಚಾರದಲ್ಲಿ ಅವರು ಮಾತನಾಡುತ್ತಿದ್ದರು. ರೈತರು ಭೂಮಿ ಬಿಟ್ಟು ಬರಲಿ

“ರೈತರು ಭೂಮಿ ಬಿಟ್ಟು ಹೊರಗಡೆ ಹೋಗಲಿ ಎಂದು ಬಿಜೆಪಿ ಮತ್ತು ಕೇಂದ್ರ ಸರ್ಕಾರಗಳು ಬಯಸುತ್ತಿದ್ದು, ಕೃಷಿ ಭೂಮಿಯ ಅವಕಾಶವನ್ನು ತೆಗೆದು ಹಾಕಿ ಕಂಪೆನಿ ಕೃಷಿಯನ್ನು ತರುವ ಬಗ್ಗೆ ಚಿಂತನೆ ನಡೆಸುತ್ತಿದೆ. ಅದಕ್ಕಾಗಿ ದೊಡ್ಡ ಎರಡು ಕಾರಿಡಾರ್‌ಗಳನ್ನು ಮಾಡಲು ಹೊರಟಿವೆ. ಅದರ ಬ್ಲೂ ಪ್ರಿಂಟ್ ಸರ್ಕಾರದ ಬಳಿ ಇದೆ” ಎಂದು ಅವರು ಹೇಳಿದರು.

“ದೊಡ್ಡ ದೊಡ್ಡ ಕಂಪೆನಿಗಳಿಗೆ ಸರಕಾರದ ಭೂ ಸ್ವಾಧೀನ ಮಾಡಿ ಅವರಿಗೆ ಕೊಡುತ್ತಾ ಇದೆ. ಎಪಿಎಂಸಿ ಕಾಯ್ದೆಯನ್ನು ಇಲ್ಲದಂತೆ ಮಾಡಿ ಎಲ್ಲಾ ಕೃಷಿಯನ್ನು ನಾಶ ಮಾಡಿದೆ. ಈ ಮೂಲಕ ಕೃಷಿ, ಆಹಾರದ ಮಾರುಕಟ್ಟೆ, ಅದರ ಕೈಗಾರಿಕೆಯನ್ನು ನೇರವಾಗಿ ಕಂಪೆನಿಗಳಿಗೆ ಕೊಡುವುದು ಸರ್ಕಾರದ ಉದ್ದೇಶವಾಗಿದೆ” ಎಂದು ಅವರು ಹೇಳಿದರು.

“ಸ್ಟೀಲ್ ಉದ್ಯಮಕ್ಕೆ ಎಂದು ಭೂ ಸ್ವಾಧೀನ ಮಾಡಿದರೆ ಅಲ್ಲಿನ ಕಂಪೆನಿಗಳು ಉತ್ಪಾದನೆ ಮಾಡದೆ ಸ್ಟೀಲ್‌ಗೆ ಮಾರುಕಟ್ಟೆ ಇಲ್ಲ ಎಂದು ಹಾಗೆಯೇ ಕೂತಿದೆ. ಐದು ಗ್ಯಾರಂಟಿ ಯೋಜನೆಗೆ 54 ಸಾವಿರ ಕೋಟಿ ಕೊಟ್ಟ ಸರ್ಕಾರ, ಎರಡು ಕಂಪೆನಿಗಳಿಗೆ ಮಾತ್ರ ಎರಡು ಲಕ್ಷ ಕೋಟಿ ಸಬ್ಸಿಡಿ ಕೊಡುತ್ತಿದೆ. ಜೊತೆಗೆ, 500 ಎಕರೆ ಜಮೀನನ್ನು ಗಣಿಗಾರಿಕೆಗೆ ಪುಕ್ಕಟೆಯಾಗಿ ಸರ್ಕಾರ ಕೊಡುತ್ತೆ. ಆದರೆ ನಮ್ಮ ರೈತರಿಗೆ, ಕೂಲಿಕಾರರಿಗೆ, ದಲಿತರಿಗೆ, ಒಂಟಿ ಮಹಿಳೆಯರಿಗೆ ಐದು ಎಕರೆ ಜಮೀನು ಕೊಡಿ ಎಂದರೆ ಭೂಮಿ ಇಲ್ಲ ಎಂದು ಹೇಳುತ್ತಿದೆ” ಎಂದು ಅವರು ಹೇಳಿದರು.

ಗೋಮಾಳ ಸೇರಿದಂತೆ ಸರ್ಕಾರಿ ಭೂಮಿಯನ್ನು ಕಂಪನಿಗಳಿಗೆ ಕೊಡುತ್ತಿದೆ. ರೈತರನ್ನು ಬೀದಿಗೆ ತಳ್ಳಿ, ಬೀದಿ ಹೆಣಗಳನ್ನಾಗಿ ಮಾಡುತ್ತಿದೆ ಎಂದ ಬಸವರಾಜ್ ಅವರು, “ಕೃಷಿಯಿಂದ ರಾಜ್ಯದ ಜಿಡಿಪಿಗೆ 11% ಮಾತ್ರ ಕೊಡುಗೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಕಂಪೆನಿಗಳಿಗೆ ನೀಡುವ ಸಬ್ಸಿಡಿ, ತಂತ್ರಜ್ಞಾನವನ್ನು ರೈತರಿಗೆ ಕೊಟ್ಟರೆ ರೈತರು ಕೂಡಾ ಜಿಡಿಪಿಗೆ ಕೊಡುಗೆ ನೀಡಲಿದ್ದೇವೆ. ಆದರೆ ಸರ್ಕಾರ ಮಾತ್ರ ಕಂಪೆನಿ ಕೃಷಿಗೆ ಪ್ರೋತ್ಸಾಹ ನೀಡುತ್ತಿದೆ” ಎಂದು ಹೇಳಿದರು.

ಮೂರು ಲಕ್ಷ ಕೋಟಿ ಸಬ್ಸಿಡಿ ಕೊಡುವ ಸರ್ಕಾರ ದಲಿತ, ಕೂಲಿಕಾರ ಮತ್ತು ಒಂಟಿ ಮಹಿಳೆಯರಿಗೆ ಕೊಡಲು ತಯಾರಿಲ್ಲ. ಸಾವಿರಾರು ಎಕರೆ ಸರ್ಕಾರಿ ಭೂಮಿಯಿದ್ದು ಅದನ್ನು ದಲಿತ, ಕೂಲಿಕಾರರಿಗೆ ಮಹಿಳೆಯರಿಗೆ ಕೊಡಬೇಕು ಎಂದರು.

ಅರ್ಧದಷ್ಟು ಮಹಿಳೆಯರು, 20% ದಲಿತರು, ಹೆಚ್ಚಿನ ಹಿಂದುಳಿದ ವರ್ಗಗಳ ಜನರು ಪರಾವಲಂಬಿಗಳಾಗಿದ್ದಾರೆ. ಇವರಿಗೆ ಭೂಮಿ ನೀಡಿ ಸಹಕಾರಿ ಕೃಷಿಗೆ ಸಹಕಾರ ಕೊಟ್ಟರೆ, ಕಂಪೆನಿಗಳಿಗೆ ಕೊಡುವ 80% ಸಬ್ಸಿಡಿಯನ್ನು ಹಾಗೂ ತಂತ್ರಜ್ಞಾನವನ್ನು ಕೊಟ್ಟರೆ ರೈತರು ಕೂಡಾ 11% ಜಿಡಿಪಿ ಬದಲಿಗೆ 50% ಜಿಡಿಪಿ ಕೊಡುತ್ತಾರೆ ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...